ದಿ ಫ್ಯಾಮಿಲಿ ಮ್ಯಾನ್​ 2ನಲ್ಲಿ ಸಮಂತಾ ಆ್ಯಕ್ಷನ್​ ನೋಡಿದ ರಶ್ಮಿಕಾ ಮಂದಣ್ಣ ಹೇಳಿದ್ದೇನು?

ಈಗ ಸಮಂತಾ ಸಾಮಾಜಿಕ ಜಾಲತಾಣದಲ್ಲಿ ದಿ ಫ್ಯಾಮಿಲಿ ಮ್ಯಾನ್​ 2ನಲ್ಲಿ ಬರುವ ದೃಶ್ಯವೊಂದರ ಶೂಟಿಂಗ್​ ತುಣುಕನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಸಮಂತಾ ಆ್ಯಕ್ಷನ್​ ದೃಶ್ಯಗಳಿವೆ.

ದಿ ಫ್ಯಾಮಿಲಿ ಮ್ಯಾನ್​ 2ನಲ್ಲಿ ಸಮಂತಾ ಆ್ಯಕ್ಷನ್​ ನೋಡಿದ ರಶ್ಮಿಕಾ ಮಂದಣ್ಣ ಹೇಳಿದ್ದೇನು?
ದಿ ಫ್ಯಾಮಿಲಿ ಮ್ಯಾನ್ 2 - ಸಮಂತಾ ಅಕ್ಕಿನೇನಿ
Follow us
| Updated By: ಮದನ್​ ಕುಮಾರ್​

Updated on: Jun 08, 2021 | 7:36 AM

ದಿ ಫ್ಯಾಮಿಲಿ ಮ್ಯಾನ್​ 2 ವೆಬ್​ ಸೀರಿಸ್​ ರಿಲೀಸ್​ ಆಗಿ ದೊಡ್ಡ ಮಟ್ಟದ ಹೈಪ್​ ಪಡೆದುಕೊಂಡಿದೆ. ಅದರಲ್ಲೂ ಈ ವೆಬ್​ ಸೀರಿಸ್​ನಲ್ಲಿ ಸಮಂತಾ ನಟನೆ ನೋಡಿ ಸಾಕಷ್ಟು ಮಂದಿ ಫಿದಾ ಆಗಿದ್ದಾರೆ. ಇನ್ನು ಸಮಂತಾ ಈ ಚಿತ್ರಕ್ಕಾಗಿ ಸಾಕಷ್ಟು ವರ್ಕೌಟ್​ ಮಾಡಿದ್ದರು. ಸದ್ಯ, ಸಮಂತಾ ನಟನೆ ನೋಡಿ ಸಾಕಷ್ಟು ಮಂದಿ ಹೊಗಳುತ್ತಿದ್ದಾರೆ.

ಸೀಸನ್​ 2 ರಿಲೀಸ್​ಗೂ ಮೊದಲೇ ಸಮಂತಾ ಅಕ್ಕಿನೇನಿ ಸಾಕಷ್ಟು ಸುದ್ದಿಯಲ್ಲಿದ್ದರು. ಅವರು ರಾಜಲಕ್ಷ್ಮಿ ಚಂದ್ರನ್​ (ರಾಜಿ) ಆಗಿ ಕಾಣಿಸಿಕೊಂಡಿದ್ದಾರೆ. ಪ್ರತಿ ಬಾರಿ ಗ್ಲಾಮರ್​ ಲುಕ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದ ಸಮಂತಾ ಈ ಬಾರಿ ಅವತಾರ ಬದಲಿಸಿದ್ದಾರೆ. ಚೆನ್ನೈನ ಗಾರ್ಮೆಂಟ್​ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ರಾಜಿ (ಸಮಂತಾ) ತುಂಬಾನೇ ಮುಗ್ಧೆ. ನಂತರ ಅವರ ನಿಜವಾದ ಅವತಾರ ಬಯಲಾಗುತ್ತದೆ. ರಾಜಿ ಪಾತ್ರ ನೋಡಿ ಎಲ್ಲರೂ ಅಕ್ಷರಶಃ ದಂಗಾಗಿದ್ದರು.

ಈಗ ಸಮಂತಾ ಸಾಮಾಜಿಕ ಜಾಲತಾಣದಲ್ಲಿ ದಿ ಫ್ಯಾಮಿಲಿ ಮ್ಯಾನ್​ 2ನಲ್ಲಿ ಬರುವ ದೃಶ್ಯವೊಂದರ ಶೂಟಿಂಗ್​ ತುಣುಕನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಸಮಂತಾ ಆ್ಯಕ್ಷನ್​ ದೃಶ್ಯಗಳಿವೆ. ಈ ವಿಡಿಯೋ ನೋಡಿದ ಸಾಕಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಶ್ಮಿಕಾ ಮಂದಣ್ಣ ಕೂಡ ಈ ವಿಡಿಯೋಗೆ ಕಮೆಂಟ್​ ಮಾಡಿದ್ದಾರೆ. ಈ ವಿಡಿಯೋ ನೋಡಿದ ರಶ್ಮಿಕಾ ಬೆಂಕಿ ಸ್ಮೈಲಿ ಹಾಕಿ ಸಮಂತಾ ಅವರನ್ನು ಹೊಗಳಿದ್ದಾರೆ. ಇನ್ನು, ಈ ವಿಡಿಯೋ ನೋಡಿದ ಅನುಪಮಾ ಪರಮೇಶ್ವರನ್​ ಕೂಡ ವಿಡಿಯೋ ಬಗ್ಗೆ ಅಚ್ಚರಿ ಹೊರ ಹಾಕಿದ್ದಾರೆ.

‘ರಾಜಿ ಪಾತ್ರ ಕಾಲ್ಪನಿಕವೇ ಆಗಿರಬಹುದು. ಆದರೆ ಅಸಮಾನತೆಯ ಯುದ್ಧದಲ್ಲಿ ಮಡಿದ ಹಾಗೂ ಇಂದಿಗೂ ಆ ಯುದ್ಧದ ನೆನಪಿನಲ್ಲಿ ನೋವು ಅನುಭವಿಸುತ್ತಿರುವ ಎಲ್ಲರಿಗೂ ಈ ಪಾತ್ರ ನಮನ ಸಲ್ಲಿಸುತ್ತದೆ ಎಂಬುದು ನನ್ನ ಅಭಿಪ್ರಾಯ. ರಾಜಿ ಪಾತ್ರವನ್ನು ತುಂಬ ಸೂಕ್ಷ್ಮವಾಗಿ ಮತ್ತು ಎಚ್ಚರಿಕೆಯಿಂದ ಬಿಂಬಿಸಬೇಕು ಎಂಬುದು ನನ್ನ ಉದ್ದೇಶವಾಗಿತ್ತು. ಒಂದು ವೇಳೆ ವಿಫಲವಾಗಿದ್ದರೆ, ಅಂತಹ ಅಸಂಖ್ಯಾತ ಜನರು ತಿರಸ್ಕಾರಕ್ಕೆ ಒಳಗಾಗುತ್ತಿದ್ದರು’ ಎಂದು ಸೋಶಿಯಲ್​ ಮೀಡಿಯಾ ಮೂಲಕ ಸಮಂತಾ ಪಾತ್ರದ ಬಗ್ಗೆ ತಿಳಿಸಿದ್ದರು.

ಇದನ್ನೂ ಓದಿ: ಸಮಂತಾ ರಾಜಿ ಆಗಲು ಒಪ್ಪಿಕೊಂಡಿದ್ದು ಏಕೆ? ಭಾರಿ ವಿವಾದದ ಬಳಿಕ ಬಾಯ್ಬಿಟ್ಟ ನಟಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!