AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ವಿಜಯ್​ನ ಮದುವೆ ಆಗ್ತೀನಿ’; ಕೊನೆಗೂ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ

Rashmika Mandanna Wedding: ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ವಿಷಯ ಇತ್ತೀಚೆಗೆ ಸಾಕಷ್ಟು ಚರ್ಚೆಯಲ್ಲಿದೆ. ನಿಶ್ಚಿತಾರ್ಥದ ಕುರಿತು ವದಂತಿಗಳು ಹರಿದಾಡುತ್ತಿದ್ದವು. "ದಿ ಗರ್ಲ್‌ಫ್ರೆಂಡ್" ಪ್ರಚಾರದ ವೇಳೆ, ತಾವು ವಿಜಯ್ ಅವರನ್ನು ಮದುವೆ ಆಗುವುದಾಗಿ ರಶ್ಮಿಕಾ ಪರೋಕ್ಷವಾಗಿ ದೃಢಪಡಿಸಿದ್ದಾರೆ.

‘ನಾನು ವಿಜಯ್​ನ ಮದುವೆ ಆಗ್ತೀನಿ’; ಕೊನೆಗೂ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ
ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Nov 08, 2025 | 8:34 AM

Share

ರಶ್ಮಿಕಾ ಮಂದಣ್ಣ (Rashmika Mandanna) ಅವರ ವಿವಾಹ ವಿಷಯ ಇತ್ತೀಚೆಗೆ ಸಾಕಷ್ಟು ಸುದ್ದಿ ಆಗುತ್ತಿದೆ. ಈ ಜೋಡಿ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡಿದೆ ಎಂಬ ಸುದ್ದಿ ಹರಿದಾಡಿದ್ದು, ಇದಕ್ಕೆ ರಶ್ಮಿಕಾ ಮಂದಣ್ಣ ಕಡೆಯಿಂದ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಇದನ್ನು ಅವರು ಪರೋಕ್ಷವಾಗಿ ಅಲ್ಲಗಳೆಯುತ್ತಲೇ ಬರುತ್ತಿದ್ದಾರೆ. ಹೀಗಿರುವಾಗಲೇ ರಶ್ಮಿಕಾ ಮಂದಣ್ಣ ಅವರು ಈ ವಿಚಾರದಲ್ಲಿ ಮೌನ ಮುರಿದಿದ್ದಾರೆ. ತಾವು ವಿಜಯ್​ನ ಮದುವೆ ಆಗೋದಾಗಿ ಅವರು ಹೇಳಿದ್ದಾರೆ.

ರಶ್ಮಿಕಾ ಮಂದಣ್ಣ ನಟನೆಯ ‘ದಿ ಗರ್ಲ್​ಫ್ರೆಂಡ್’ ಸಿನಿಮಾ ನವೆಂಬರ್ 7ರಂದು ರಿಲೀಸ್ ಆಗಿದೆ. ಈ ಚಿತ್ರದ ಪ್ರಚಾರದಲ್ಲಿ ರಶ್ಮಿಕಾ ಭಾಗಿ ಆಗಿದ್ದಾರೆ. ರಶ್ಮಿಕಾ ಜೊತೆ ಸಹ ನಟ ದೀಕ್ಷಿತ್ ಶೆಟ್ಟಿ ಕೂಡ ಇದ್ದರು. ಈ ವೇಳೆ ರಶ್ಮಿಕಾಗೆ ವಿವಿಧ ಪ್ರಶ್ನೆಗಳು ಎದುರಾಗಿವೆ. ಇದರಲ್ಲಿ ಅವರ ಮದುವೆ ವಿಚಾರದ ಬಗ್ಗೆ ಹೆಚ್ಚು ಪ್ರಶ್ನೆಗಳು ಎದುರಾಗಿವೆ.

‘ನಿಮ್ಮ ಬಗ್ಗೆ ಒಂದು ವದಂತಿ ಕೇಳಿ ಬಂದಿರುತ್ತದೆ. ಆದರೆ, ಅದು ನಿಜವಾಗಿರುತ್ತದೆ. ಯಾವುದು ಅದು’ ಎಂದು ರಶ್ಮಿಕಾಗೆ ಪ್ರಶ್ನೆ ಮಾಡಲಾಯಿತು. ಇದಕ್ಕೆ ನಗುತ್ತಾ ಉತ್ತರಿಸಿದ ಅವರು, ‘ಏನು ಹೇಳಬಹುದು? ಅದು ಎಲ್ಲರಿಗೂ ಗೊತ್ತಿದೆ’ ಎಂದರು. ಈ ಮೂಲಕ ವಿಜಯ್ ಜೊತೆಗಿನ ನಿಶ್ಚಿತಾರ್ಥ ವಿಚಾರವನ್ನು ಅವರು ಬಹುತೇಕ ಖಚಿತಪಡಿಸಿದರು.

‘ಯಾರನ್ನು ಮದುವೆ ಆಗುತ್ತೀರಿ’ ಎಂದು ಕೂಡ ಕೇಳಲಾಯಿತು. ಇದಕ್ಕೆ ರಶ್ಮಿಕಾ ಮಂದಣ್ಣ ಅವರು, ಹಿಂದೂ ಮುಂದೂ ಯೋಚಿಸದೆ ‘ವಿಜಯ್ ಅವರನ್ನು ಮದುವೆ ಆಗ್ತೀನಿ’ ಎಂದರು. ಸದ್ಯ ರಶ್ಮಿಕಾ-ವಿಜಯ್ ಸುದ್ದಿ ಎಲ್ಲ ಕಡೆಗಳಲ್ಲಿ ಹರಡಿದೆ. ಇದು ಸುಳ್ಳು ಎಂದಾಗಿದ್ದರೆ ಇದನ್ನು ಅವರು ಅಲ್ಲಗಳೆಯುತ್ತಿದ್ದರು. ಆದರೆ, ರಶ್ಮಿಕಾ ಆ ರೀತಿ ಮಾಡುತ್ತಿಲ್ಲ. ಪರೋಕ್ಷವಾಗಿ ಇದನ್ನು ಅವರು ಒಪ್ಪಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ‘ನಿಮ್ಮ ಬಗ್ಗೆ ಹೆಮ್ಮೆ ಇದೆ’: ಕನ್ನಡಿಗ ದೀಕ್ಷಿತ್ ಶೆಟ್ಟಿ ಬಗ್ಗೆ ರಶ್ಮಿಕಾ ಮಂದಣ್ಣ ಮಾತು

ರಶ್ಮಿಕಾ ಮಂದಣ್ಣ ಅವರು ವೃತ್ತಿ ಜಿವನದಲ್ಲಿ ಸಾಕಷ್ಟು ಏಳ್ಗೆ ಕಾಣುತ್ತಿದ್ದಾರೆ. ಆದರೆ, ವಿಜಯ್ ದೇವರಕೊಂಡ ಅವರ ವೃತ್ತಿ ಜೀವನ ಕುಸಿಯುತ್ತಿದೆ. ಅವರ ಸಿನಿಮಾಗಳು ಸತತ ಫ್ಲಾಪ್ ಆಗುತ್ತಿವೆ. ಅವರಿಗೆ ಇತ್ತೀಚಿನ ವರ್ಷಗಳಲ್ಲಿ ದೊಡ್ಡ ಗೆಲುವು ಎಂಬುದು ಸಿಕ್ಕೇ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್