AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ದೇವರಕೊಂಡ ಅಲ್ಲ, ತೆಲುಗಿನ ಈ ನಟನ ಜೊತೆ ರಶ್ಮಿಕಾ ಮಂದಣ್ಣ ಸುತ್ತಾಟ

ಇತ್ತೀಚಿನ ದಿನಗಳಲ್ಲಿ ರಶ್ಮಿಕಾ ಮತ್ತು ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಆಗಾಗ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ರಶ್ಮಿಕಾ ಮತ್ತು ಶ್ರೀನಿವಾಸ್ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ ಎನ್ನುವ ಮಾತಿದೆ.

ವಿಜಯ್ ದೇವರಕೊಂಡ ಅಲ್ಲ, ತೆಲುಗಿನ ಈ ನಟನ ಜೊತೆ ರಶ್ಮಿಕಾ ಮಂದಣ್ಣ ಸುತ್ತಾಟ
ಸಾಯಿ ಶ್ತೀನಿವಾಸ್-ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Apr 01, 2023 | 3:03 PM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಬೇಡಿಕೆಯ ನಟಿ ಆಗಿ ಹೊರಹೊಮ್ಮಿದ್ದಾರೆ. ಅವರಿಗೆ ತೆಲುಗು, ಹಿಂದಿ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ವಿಜಯ್ ದೇವರಕೊಂಡ ಜೊತೆ ಅವರು ಸುತ್ತಾಟ ನಡೆಸುತ್ತಿದ್ದಾರೆ ಎನ್ನಲಾಗಿತ್ತು. ಈಗ ಈ ವಿಚಾರದ ಬಗ್ಗೆ ಹೊಸ ಅಪ್​ಡೇಟ್ ಸಿಕ್ಕಿದೆ. ವಿಜಯ್ ದೇವರಕೊಂಡ ಅಲ್ಲ, ಟಾಲಿವುಡ್ ಹೀರೋ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಜೊತೆ ರಶ್ಮಿಕಾ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇಬ್ಬರೂ ಅನೇಕ ಕಡೆಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದು ಈ ಸುದ್ದಿ ಹುಟ್ಟಲು ಮುಖ್ಯ ಕಾರಣ ಎನ್ನಲಾಗುತ್ತಿದೆ.

ಇತ್ತೀಚಿನ ದಿನಗಳಲ್ಲಿ ರಶ್ಮಿಕಾ ಮತ್ತು ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಆಗಾಗ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ರಶ್ಮಿಕಾ ಮತ್ತು ಶ್ರೀನಿವಾಸ್ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ ಎನ್ನುವ ಮಾತಿದೆ. ಈ ವಿಚಾರ ಕೇಳಿ ಒಂದು ವರ್ಗದ ಫ್ಯಾನ್ಸ್​ಗೆ ಶಾಕ್ ಆಗಿದೆ. ಈ ಸುದ್ದಿ ನಿಜವಾಗದಿರಲಿ ಎಂದು ಕೋರಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ರಶ್ಮಿಕಾ ಹಾಗೂ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಮುಂಬೈ ಏರ್​ಪೋರ್ಟ್​ನಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಈ ವೇಳೆ ಇಬ್ಬರೂ ಪಾಪರಾಜಿಗಳಿಗೆ ಪೋಸ್ ನೀಡಿದ್ದರು. ಅಷ್ಟೇ ಅಲ್ಲ ಅವಾರ್ಡ್ ಫಂಕ್ಷನ್​ನಲ್ಲೂ ಈ ಜೋಡಿ ಜೊತೆಯಾಗಿ ಹಾಜರಿ ಹಾಕಿದೆ.

‘ವಿಜಯ್ ದೇವರಕೊಂಡ ಜೊತೆ ಪ್ರೀತಿ ಇಲ್ಲ. ನಾವಿಬ್ಬರೂ ಬೆಸ್ಟ್​ ಫ್ರೆಂಡ್ಸ್’ ಎಂದು ರಶ್ಮಿಕಾ ಮಂದಣ್ಣ ಅನೇಕ ಬಾರಿ ಹೇಳಿದ್ದಾರೆ. ಅವರು ಹೇಳಿದ್ದರಲ್ಲಿ ನಿಜ ಇರಬಹುದೇ ಎನ್ನುವ ಅನುಮಾನ ಅಭಿಮಾನಿಗಳಲ್ಲಿ ಈಗ ಕಾಡುತ್ತಿದೆ. ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಜೊತೆಗಿನ ಫ್ರೆಂಡ್​ಶಿಪ್ ಬಗ್ಗೆ ರಶ್ಮಿಕಾ ಅವರೇ ಮಾತನಾಡಬೇಕಿದೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ-ನಿತಿನ್​ ನಟನೆಯ ಹೊಸ ಚಿತ್ರಕ್ಕೆ ಚಾಲನೆ; ಮುಹೂರ್ತಕ್ಕೆ ಬಂದು ಹಾರೈಸಿದ ಚಿರಂಜೀವಿ

ರಶ್ಮಿಕಾ ಮಂದಣ್ಣ ಅವರು ಸದ್ಯ ‘ಅನಿಮಲ್​’ ಹಾಗೂ ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆಗೆ ನಿತೀನ್ ಜೊತೆ ಅವರು ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರ ಇತ್ತೀಚೆಗೆ ಸೆಟ್ಟೇರಿದೆ. ಅಂದಹಾಗೆ, ರಶ್ಮಿಕಾ ಹಾಗೂ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಒಟ್ಟಾಗಿ ಯಾವುದೇ ಸಿನಿಮಾ ಮಾಡಿಲ್ಲ. ಆದಾಗ್ಯೂ ಇವರ ಮಧ್ಯೆ ಪರಿಚಯ ಬೆಳೆದಿದ್ದು ಹೇಗೆ ಎನ್ನುವ ಪ್ರಶ್ನೆಗೆ ಕೊಡಗಿನ ಹುಡುಗಿ ಉತ್ತರ ನೀಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ ಇದನ್ನೂ ಓದಿ:

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ