ವಿಜಯ್ ದೇವರಕೊಂಡ ಅಲ್ಲ, ತೆಲುಗಿನ ಈ ನಟನ ಜೊತೆ ರಶ್ಮಿಕಾ ಮಂದಣ್ಣ ಸುತ್ತಾಟ

ಇತ್ತೀಚಿನ ದಿನಗಳಲ್ಲಿ ರಶ್ಮಿಕಾ ಮತ್ತು ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಆಗಾಗ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ರಶ್ಮಿಕಾ ಮತ್ತು ಶ್ರೀನಿವಾಸ್ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ ಎನ್ನುವ ಮಾತಿದೆ.

ವಿಜಯ್ ದೇವರಕೊಂಡ ಅಲ್ಲ, ತೆಲುಗಿನ ಈ ನಟನ ಜೊತೆ ರಶ್ಮಿಕಾ ಮಂದಣ್ಣ ಸುತ್ತಾಟ
ಸಾಯಿ ಶ್ತೀನಿವಾಸ್-ರಶ್ಮಿಕಾ
Follow us
|

Updated on: Apr 01, 2023 | 3:03 PM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಬೇಡಿಕೆಯ ನಟಿ ಆಗಿ ಹೊರಹೊಮ್ಮಿದ್ದಾರೆ. ಅವರಿಗೆ ತೆಲುಗು, ಹಿಂದಿ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ವಿಜಯ್ ದೇವರಕೊಂಡ ಜೊತೆ ಅವರು ಸುತ್ತಾಟ ನಡೆಸುತ್ತಿದ್ದಾರೆ ಎನ್ನಲಾಗಿತ್ತು. ಈಗ ಈ ವಿಚಾರದ ಬಗ್ಗೆ ಹೊಸ ಅಪ್​ಡೇಟ್ ಸಿಕ್ಕಿದೆ. ವಿಜಯ್ ದೇವರಕೊಂಡ ಅಲ್ಲ, ಟಾಲಿವುಡ್ ಹೀರೋ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಜೊತೆ ರಶ್ಮಿಕಾ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇಬ್ಬರೂ ಅನೇಕ ಕಡೆಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದು ಈ ಸುದ್ದಿ ಹುಟ್ಟಲು ಮುಖ್ಯ ಕಾರಣ ಎನ್ನಲಾಗುತ್ತಿದೆ.

ಇತ್ತೀಚಿನ ದಿನಗಳಲ್ಲಿ ರಶ್ಮಿಕಾ ಮತ್ತು ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಆಗಾಗ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ರಶ್ಮಿಕಾ ಮತ್ತು ಶ್ರೀನಿವಾಸ್ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ ಎನ್ನುವ ಮಾತಿದೆ. ಈ ವಿಚಾರ ಕೇಳಿ ಒಂದು ವರ್ಗದ ಫ್ಯಾನ್ಸ್​ಗೆ ಶಾಕ್ ಆಗಿದೆ. ಈ ಸುದ್ದಿ ನಿಜವಾಗದಿರಲಿ ಎಂದು ಕೋರಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ರಶ್ಮಿಕಾ ಹಾಗೂ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಮುಂಬೈ ಏರ್​ಪೋರ್ಟ್​ನಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಈ ವೇಳೆ ಇಬ್ಬರೂ ಪಾಪರಾಜಿಗಳಿಗೆ ಪೋಸ್ ನೀಡಿದ್ದರು. ಅಷ್ಟೇ ಅಲ್ಲ ಅವಾರ್ಡ್ ಫಂಕ್ಷನ್​ನಲ್ಲೂ ಈ ಜೋಡಿ ಜೊತೆಯಾಗಿ ಹಾಜರಿ ಹಾಕಿದೆ.

‘ವಿಜಯ್ ದೇವರಕೊಂಡ ಜೊತೆ ಪ್ರೀತಿ ಇಲ್ಲ. ನಾವಿಬ್ಬರೂ ಬೆಸ್ಟ್​ ಫ್ರೆಂಡ್ಸ್’ ಎಂದು ರಶ್ಮಿಕಾ ಮಂದಣ್ಣ ಅನೇಕ ಬಾರಿ ಹೇಳಿದ್ದಾರೆ. ಅವರು ಹೇಳಿದ್ದರಲ್ಲಿ ನಿಜ ಇರಬಹುದೇ ಎನ್ನುವ ಅನುಮಾನ ಅಭಿಮಾನಿಗಳಲ್ಲಿ ಈಗ ಕಾಡುತ್ತಿದೆ. ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಜೊತೆಗಿನ ಫ್ರೆಂಡ್​ಶಿಪ್ ಬಗ್ಗೆ ರಶ್ಮಿಕಾ ಅವರೇ ಮಾತನಾಡಬೇಕಿದೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ-ನಿತಿನ್​ ನಟನೆಯ ಹೊಸ ಚಿತ್ರಕ್ಕೆ ಚಾಲನೆ; ಮುಹೂರ್ತಕ್ಕೆ ಬಂದು ಹಾರೈಸಿದ ಚಿರಂಜೀವಿ

ರಶ್ಮಿಕಾ ಮಂದಣ್ಣ ಅವರು ಸದ್ಯ ‘ಅನಿಮಲ್​’ ಹಾಗೂ ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆಗೆ ನಿತೀನ್ ಜೊತೆ ಅವರು ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರ ಇತ್ತೀಚೆಗೆ ಸೆಟ್ಟೇರಿದೆ. ಅಂದಹಾಗೆ, ರಶ್ಮಿಕಾ ಹಾಗೂ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಒಟ್ಟಾಗಿ ಯಾವುದೇ ಸಿನಿಮಾ ಮಾಡಿಲ್ಲ. ಆದಾಗ್ಯೂ ಇವರ ಮಧ್ಯೆ ಪರಿಚಯ ಬೆಳೆದಿದ್ದು ಹೇಗೆ ಎನ್ನುವ ಪ್ರಶ್ನೆಗೆ ಕೊಡಗಿನ ಹುಡುಗಿ ಉತ್ತರ ನೀಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ ಇದನ್ನೂ ಓದಿ:

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ