AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ದೇವರಕೊಂಡ ಅಲ್ಲ, ತೆಲುಗಿನ ಈ ನಟನ ಜೊತೆ ರಶ್ಮಿಕಾ ಮಂದಣ್ಣ ಸುತ್ತಾಟ

ಇತ್ತೀಚಿನ ದಿನಗಳಲ್ಲಿ ರಶ್ಮಿಕಾ ಮತ್ತು ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಆಗಾಗ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ರಶ್ಮಿಕಾ ಮತ್ತು ಶ್ರೀನಿವಾಸ್ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ ಎನ್ನುವ ಮಾತಿದೆ.

ವಿಜಯ್ ದೇವರಕೊಂಡ ಅಲ್ಲ, ತೆಲುಗಿನ ಈ ನಟನ ಜೊತೆ ರಶ್ಮಿಕಾ ಮಂದಣ್ಣ ಸುತ್ತಾಟ
ಸಾಯಿ ಶ್ತೀನಿವಾಸ್-ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Apr 01, 2023 | 3:03 PM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಬೇಡಿಕೆಯ ನಟಿ ಆಗಿ ಹೊರಹೊಮ್ಮಿದ್ದಾರೆ. ಅವರಿಗೆ ತೆಲುಗು, ಹಿಂದಿ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ವಿಜಯ್ ದೇವರಕೊಂಡ ಜೊತೆ ಅವರು ಸುತ್ತಾಟ ನಡೆಸುತ್ತಿದ್ದಾರೆ ಎನ್ನಲಾಗಿತ್ತು. ಈಗ ಈ ವಿಚಾರದ ಬಗ್ಗೆ ಹೊಸ ಅಪ್​ಡೇಟ್ ಸಿಕ್ಕಿದೆ. ವಿಜಯ್ ದೇವರಕೊಂಡ ಅಲ್ಲ, ಟಾಲಿವುಡ್ ಹೀರೋ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಜೊತೆ ರಶ್ಮಿಕಾ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇಬ್ಬರೂ ಅನೇಕ ಕಡೆಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದು ಈ ಸುದ್ದಿ ಹುಟ್ಟಲು ಮುಖ್ಯ ಕಾರಣ ಎನ್ನಲಾಗುತ್ತಿದೆ.

ಇತ್ತೀಚಿನ ದಿನಗಳಲ್ಲಿ ರಶ್ಮಿಕಾ ಮತ್ತು ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಆಗಾಗ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ರಶ್ಮಿಕಾ ಮತ್ತು ಶ್ರೀನಿವಾಸ್ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ ಎನ್ನುವ ಮಾತಿದೆ. ಈ ವಿಚಾರ ಕೇಳಿ ಒಂದು ವರ್ಗದ ಫ್ಯಾನ್ಸ್​ಗೆ ಶಾಕ್ ಆಗಿದೆ. ಈ ಸುದ್ದಿ ನಿಜವಾಗದಿರಲಿ ಎಂದು ಕೋರಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ರಶ್ಮಿಕಾ ಹಾಗೂ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಮುಂಬೈ ಏರ್​ಪೋರ್ಟ್​ನಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಈ ವೇಳೆ ಇಬ್ಬರೂ ಪಾಪರಾಜಿಗಳಿಗೆ ಪೋಸ್ ನೀಡಿದ್ದರು. ಅಷ್ಟೇ ಅಲ್ಲ ಅವಾರ್ಡ್ ಫಂಕ್ಷನ್​ನಲ್ಲೂ ಈ ಜೋಡಿ ಜೊತೆಯಾಗಿ ಹಾಜರಿ ಹಾಕಿದೆ.

‘ವಿಜಯ್ ದೇವರಕೊಂಡ ಜೊತೆ ಪ್ರೀತಿ ಇಲ್ಲ. ನಾವಿಬ್ಬರೂ ಬೆಸ್ಟ್​ ಫ್ರೆಂಡ್ಸ್’ ಎಂದು ರಶ್ಮಿಕಾ ಮಂದಣ್ಣ ಅನೇಕ ಬಾರಿ ಹೇಳಿದ್ದಾರೆ. ಅವರು ಹೇಳಿದ್ದರಲ್ಲಿ ನಿಜ ಇರಬಹುದೇ ಎನ್ನುವ ಅನುಮಾನ ಅಭಿಮಾನಿಗಳಲ್ಲಿ ಈಗ ಕಾಡುತ್ತಿದೆ. ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಜೊತೆಗಿನ ಫ್ರೆಂಡ್​ಶಿಪ್ ಬಗ್ಗೆ ರಶ್ಮಿಕಾ ಅವರೇ ಮಾತನಾಡಬೇಕಿದೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ-ನಿತಿನ್​ ನಟನೆಯ ಹೊಸ ಚಿತ್ರಕ್ಕೆ ಚಾಲನೆ; ಮುಹೂರ್ತಕ್ಕೆ ಬಂದು ಹಾರೈಸಿದ ಚಿರಂಜೀವಿ

ರಶ್ಮಿಕಾ ಮಂದಣ್ಣ ಅವರು ಸದ್ಯ ‘ಅನಿಮಲ್​’ ಹಾಗೂ ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆಗೆ ನಿತೀನ್ ಜೊತೆ ಅವರು ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರ ಇತ್ತೀಚೆಗೆ ಸೆಟ್ಟೇರಿದೆ. ಅಂದಹಾಗೆ, ರಶ್ಮಿಕಾ ಹಾಗೂ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಒಟ್ಟಾಗಿ ಯಾವುದೇ ಸಿನಿಮಾ ಮಾಡಿಲ್ಲ. ಆದಾಗ್ಯೂ ಇವರ ಮಧ್ಯೆ ಪರಿಚಯ ಬೆಳೆದಿದ್ದು ಹೇಗೆ ಎನ್ನುವ ಪ್ರಶ್ನೆಗೆ ಕೊಡಗಿನ ಹುಡುಗಿ ಉತ್ತರ ನೀಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ ಇದನ್ನೂ ಓದಿ:

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!