AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pushpa 2: ಶ್ರೀವಲ್ಲಿ ಬಗ್ಗೆ ವಿಶೇಷ ಬೇಡಿಕೆ ಇಟ್ಟ ಅಭಿಮಾನಿಗಳು; ರಶ್ಮಿಕಾಗೂ ಅದೇ ಬೇಕಾಗಿದೆ

Rashmika Mandanna: ‘ಪುಷ್ಪ 2’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಿಭಾಯಿಸುತ್ತಿರುವ ಶ್ರೀವಲ್ಲಿ ಪಾತ್ರ ಚೆನ್ನಾಗಿ ಮೂಡಿಬರಬೇಕು ಎಂಬುದು ಅಭಿಮಾನಿಗಳ ಬಯಕೆ. ಅದಕ್ಕಾಗಿ ಈಗಲೇ ಬೇಡಿಕೆ ಇಡಲಾಗಿದೆ.

Pushpa 2: ಶ್ರೀವಲ್ಲಿ ಬಗ್ಗೆ ವಿಶೇಷ ಬೇಡಿಕೆ ಇಟ್ಟ ಅಭಿಮಾನಿಗಳು; ರಶ್ಮಿಕಾಗೂ ಅದೇ ಬೇಕಾಗಿದೆ
ರಶ್ಮಿಕಾ ಮಂದಣ್ಣ
TV9 Web
| Edited By: |

Updated on: Aug 24, 2022 | 2:53 PM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಈಗ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ದಕ್ಷಿಣ ಭಾರತದ ಭಾಷೆಗಳ ಚಿತ್ರರಂಗ ಮಾತ್ರವಲ್ಲದೇ ಬಾಲಿವುಡ್​ನಲ್ಲೂ ಅವರಿಗೆ ಹೊಸ ಹೊಸ ಆಫರ್​ಗಳು ಬರುತ್ತಿವೆ. ಎಲ್ಲ ಪ್ರಾಜೆಕ್ಟ್​ಗಳ ಪೈಕಿ ಅವರ ಅಭಿಮಾನಿಗಳು ಹೆಚ್ಚು ನಿರೀಕ್ಷೆ ಇಟ್ಟುಕೊಂಡಿರುವುದು ‘ಪುಷ್ಪ 2’ (Pushpa 2) ಸಿನಿಮಾ ಮೇಲೆ. ಹತ್ತು ಹಲವು ಕಾರಣಗಳಿಂದ ರಶ್ಮಿಕಾ ಮಂದಣ್ಣ ಅವರಿಗೆ ಈ ಸಿನಿಮಾ ಸ್ಪೆಷಲ್​ ಎನಿಸಿಕೊಂಡಿದೆ. ‘ಪುಷ್ಪ’ ಸಿನಿಮಾ ಸೂಪರ್​ ಹಿಟ್​ ಆಗಿದ್ದರಿಂದ ಹೆಚ್ಚಿನ ಕಾಳಜಿ ವಹಿಸಿ ಅದರ ಸೀಕ್ವೆಲ್​ ಮಾಡಲಾಗುತ್ತಿದೆ. ನಿರ್ದೇಶಕ ಸುಕುಮಾರ್​ (Sukumar) ಅವರ ಕಥೆಯಲ್ಲಿ ಸಾಕಷ್ಟು ಟ್ವಿಸ್ಟ್​ ನೀಡಲಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರಕ್ಕೆ ಶೂಟಿಂಗ್​ ಆರಂಭ ಆಗಿದೆ. ಅದರ ಬೆನ್ನಲ್ಲೇ ಅಭಿಮಾನಿಗಳು ಕಥಾನಾಯಕಿ ಶ್ರೀವಲ್ಲಿ ಪಾತ್ರದ ಬಗ್ಗೆ ಒಂದು ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಅದಕ್ಕೆ ರಶ್ಮಿಕಾ ಮಂದಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

‘ಪುಷ್ಪ 2’ ಚಿತ್ರಕ್ಕೆ ಅಲ್ಲು ಅರ್ಜುನ್​ ನಾಯಕ. ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಅಭಿನಯಿಸುತ್ತಿದ್ದಾರೆ. ರಶ್ಮಿಕಾ ನಿಭಾಯಿಸುತ್ತಿರುವ ಶ್ರೀವಲ್ಲಿ ಪಾತ್ರ ಚೆನ್ನಾಗಿ ಮೂಡಿಬರಬೇಕು ಎಂಬುದು ಅಭಿಮಾನಿಗಳ ಬಯಕೆ. ಅದಕ್ಕಾಗಿ ಈಗಲೇ ಬೇಡಿಕೆ ಇಡಲಾಗಿದೆ. ‘ಶ್ರೀವಲ್ಲಿ ಪಾತ್ರವನ್ನು ಇನ್ನಷ್ಟು ಸ್ಟ್ರಾಂಗ್​ ಆಗಿ ತೋರಿಸಿ’ ಎಂದು ಅನೇಕರು ಸೋಶಿಯಲ್​ ಮೀಡಿಯಾದಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ‘ಹಾಗೆಯೇ ಆಗಬೇಕು ಅಂತ ನಾನು ಕೂಡ ಅಂದುಕೊಂಡಿದ್ದೇನೆ. ನೋಡೋಣ..’ ಎಂದು ರಶ್ಮಿಕಾ ಮಂದಣ್ಣ ಕಮೆಂಟ್​ ಮಾಡಿ​ದಾರೆ.

ಈ ಸಿನಿಮಾ ಬಗ್ಗೆ ಮೊದಲಿನಿಂದಲೂ ಹಲವು ಗಾಸಿಪ್​ಗಳು ಹರಿದಾಡುತ್ತಲೇ ಇವೆ. ಸಿನಿಮಾದ ಆರಂಭದಲ್ಲೇ ಕಥಾನಾಯಕಿ ಶ್ರೀವಲ್ಲಿ ಪಾತ್ರ ಸಾಯಲಿದೆ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ ಅದು ನಿಜವಲ್ಲ ಎಂದು ನಿರ್ಮಾಪಕರು ಒಮ್ಮೆ ಸ್ಪಷ್ಟನೆ ನೀಡಿದ್ದರು. ‘ಪುಷ್ಪ 2’ ಚಿತ್ರವನ್ನು ಜನರ ನಿರೀಕ್ಷೆಗೂ ಮೀರಿ ಕಟ್ಟಿಕೊಡಬೇಕು ಎಂಬ ಆಶಯದೊಂದಿಗೆ ಇಡೀ ತಂಡ ಕೆಲಸ ಮಾಡುತ್ತಿದೆ.

ಇದನ್ನೂ ಓದಿ
Image
Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..
Image
Rashmika Mandanna: ರಶ್ಮಿಕಾ ಮಂದಣ್ಣ ಗುಟ್ಟಾಗಿ ‘777 ಚಾರ್ಲಿ’ ನೋಡಿದ್ರಾ? ಜನರ ಅನುಮಾನಕ್ಕೆ ಕಾರಣ ಆಗಿದೆ ಈ ವಿಡಿಯೋ
Image
ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?
Image
ರಶ್ಮಿಕಾ ಮಂದಣ್ಣ ಹೊಸ ವಿಡಿಯೋ ವೈರಲ್​; ಎನರ್ಜಿ ಕಂಡು ವಾವ್​ ಎಂದ ಅಭಿಮಾನಿಗಳು

ತೆಲುಗು ಮಾತ್ರವಲ್ಲದೇ ಇಡೀ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಪುಷ್ಪ’ ಸಿನಿಮಾ ಯಶಸ್ಸು ಕಂಡಿತು. ಹಿಂದಿ ಪ್ರೇಕ್ಷಕರು ಈ ಚಿತ್ರಕ್ಕೆ ಫುಲ್​ ಮಾರ್ಕ್ಸ್​ ನೀಡಿದರು. ಅದರ ಪರಿಣಾಮವಾಗಿ ಹಿಂದಿ ವರ್ಷನ್​ನಿಂದಲೇ ನೂರು ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದ್ದು ಆ ಚಿತ್ರದ ಹೆಚ್ಚುಗಾರಿಕೆ. ಈಗ ಅದಕ್ಕಿಂತಲೂ ದೊಡ್ಡ ಮಟ್ಟದಲ್ಲಿ ‘ಪುಷ್ಪ 2’ ಹಿಟ್​ ಆಗಬೇಕು ಎಂಬ ಗುರಿ ಇಟ್ಟುಕೊಂಡಿದೆ ಚಿತ್ರತಂಡ. ‘ಮೈತ್ರಿ ಮೂವೀ ಮೇಕರ್ಸ್​’ ಬ್ಯಾನರ್​ನಲ್ಲಿ ಈ ಸಿನಿಮಾ ಮೂಡಿಬರುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?