AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pushpa 2: ಶ್ರೀವಲ್ಲಿ ಬಗ್ಗೆ ವಿಶೇಷ ಬೇಡಿಕೆ ಇಟ್ಟ ಅಭಿಮಾನಿಗಳು; ರಶ್ಮಿಕಾಗೂ ಅದೇ ಬೇಕಾಗಿದೆ

Rashmika Mandanna: ‘ಪುಷ್ಪ 2’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಿಭಾಯಿಸುತ್ತಿರುವ ಶ್ರೀವಲ್ಲಿ ಪಾತ್ರ ಚೆನ್ನಾಗಿ ಮೂಡಿಬರಬೇಕು ಎಂಬುದು ಅಭಿಮಾನಿಗಳ ಬಯಕೆ. ಅದಕ್ಕಾಗಿ ಈಗಲೇ ಬೇಡಿಕೆ ಇಡಲಾಗಿದೆ.

Pushpa 2: ಶ್ರೀವಲ್ಲಿ ಬಗ್ಗೆ ವಿಶೇಷ ಬೇಡಿಕೆ ಇಟ್ಟ ಅಭಿಮಾನಿಗಳು; ರಶ್ಮಿಕಾಗೂ ಅದೇ ಬೇಕಾಗಿದೆ
ರಶ್ಮಿಕಾ ಮಂದಣ್ಣ
TV9 Web
| Updated By: ಮದನ್​ ಕುಮಾರ್​|

Updated on: Aug 24, 2022 | 2:53 PM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಈಗ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ದಕ್ಷಿಣ ಭಾರತದ ಭಾಷೆಗಳ ಚಿತ್ರರಂಗ ಮಾತ್ರವಲ್ಲದೇ ಬಾಲಿವುಡ್​ನಲ್ಲೂ ಅವರಿಗೆ ಹೊಸ ಹೊಸ ಆಫರ್​ಗಳು ಬರುತ್ತಿವೆ. ಎಲ್ಲ ಪ್ರಾಜೆಕ್ಟ್​ಗಳ ಪೈಕಿ ಅವರ ಅಭಿಮಾನಿಗಳು ಹೆಚ್ಚು ನಿರೀಕ್ಷೆ ಇಟ್ಟುಕೊಂಡಿರುವುದು ‘ಪುಷ್ಪ 2’ (Pushpa 2) ಸಿನಿಮಾ ಮೇಲೆ. ಹತ್ತು ಹಲವು ಕಾರಣಗಳಿಂದ ರಶ್ಮಿಕಾ ಮಂದಣ್ಣ ಅವರಿಗೆ ಈ ಸಿನಿಮಾ ಸ್ಪೆಷಲ್​ ಎನಿಸಿಕೊಂಡಿದೆ. ‘ಪುಷ್ಪ’ ಸಿನಿಮಾ ಸೂಪರ್​ ಹಿಟ್​ ಆಗಿದ್ದರಿಂದ ಹೆಚ್ಚಿನ ಕಾಳಜಿ ವಹಿಸಿ ಅದರ ಸೀಕ್ವೆಲ್​ ಮಾಡಲಾಗುತ್ತಿದೆ. ನಿರ್ದೇಶಕ ಸುಕುಮಾರ್​ (Sukumar) ಅವರ ಕಥೆಯಲ್ಲಿ ಸಾಕಷ್ಟು ಟ್ವಿಸ್ಟ್​ ನೀಡಲಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರಕ್ಕೆ ಶೂಟಿಂಗ್​ ಆರಂಭ ಆಗಿದೆ. ಅದರ ಬೆನ್ನಲ್ಲೇ ಅಭಿಮಾನಿಗಳು ಕಥಾನಾಯಕಿ ಶ್ರೀವಲ್ಲಿ ಪಾತ್ರದ ಬಗ್ಗೆ ಒಂದು ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಅದಕ್ಕೆ ರಶ್ಮಿಕಾ ಮಂದಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

‘ಪುಷ್ಪ 2’ ಚಿತ್ರಕ್ಕೆ ಅಲ್ಲು ಅರ್ಜುನ್​ ನಾಯಕ. ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಅಭಿನಯಿಸುತ್ತಿದ್ದಾರೆ. ರಶ್ಮಿಕಾ ನಿಭಾಯಿಸುತ್ತಿರುವ ಶ್ರೀವಲ್ಲಿ ಪಾತ್ರ ಚೆನ್ನಾಗಿ ಮೂಡಿಬರಬೇಕು ಎಂಬುದು ಅಭಿಮಾನಿಗಳ ಬಯಕೆ. ಅದಕ್ಕಾಗಿ ಈಗಲೇ ಬೇಡಿಕೆ ಇಡಲಾಗಿದೆ. ‘ಶ್ರೀವಲ್ಲಿ ಪಾತ್ರವನ್ನು ಇನ್ನಷ್ಟು ಸ್ಟ್ರಾಂಗ್​ ಆಗಿ ತೋರಿಸಿ’ ಎಂದು ಅನೇಕರು ಸೋಶಿಯಲ್​ ಮೀಡಿಯಾದಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ‘ಹಾಗೆಯೇ ಆಗಬೇಕು ಅಂತ ನಾನು ಕೂಡ ಅಂದುಕೊಂಡಿದ್ದೇನೆ. ನೋಡೋಣ..’ ಎಂದು ರಶ್ಮಿಕಾ ಮಂದಣ್ಣ ಕಮೆಂಟ್​ ಮಾಡಿ​ದಾರೆ.

ಈ ಸಿನಿಮಾ ಬಗ್ಗೆ ಮೊದಲಿನಿಂದಲೂ ಹಲವು ಗಾಸಿಪ್​ಗಳು ಹರಿದಾಡುತ್ತಲೇ ಇವೆ. ಸಿನಿಮಾದ ಆರಂಭದಲ್ಲೇ ಕಥಾನಾಯಕಿ ಶ್ರೀವಲ್ಲಿ ಪಾತ್ರ ಸಾಯಲಿದೆ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ ಅದು ನಿಜವಲ್ಲ ಎಂದು ನಿರ್ಮಾಪಕರು ಒಮ್ಮೆ ಸ್ಪಷ್ಟನೆ ನೀಡಿದ್ದರು. ‘ಪುಷ್ಪ 2’ ಚಿತ್ರವನ್ನು ಜನರ ನಿರೀಕ್ಷೆಗೂ ಮೀರಿ ಕಟ್ಟಿಕೊಡಬೇಕು ಎಂಬ ಆಶಯದೊಂದಿಗೆ ಇಡೀ ತಂಡ ಕೆಲಸ ಮಾಡುತ್ತಿದೆ.

ಇದನ್ನೂ ಓದಿ
Image
Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..
Image
Rashmika Mandanna: ರಶ್ಮಿಕಾ ಮಂದಣ್ಣ ಗುಟ್ಟಾಗಿ ‘777 ಚಾರ್ಲಿ’ ನೋಡಿದ್ರಾ? ಜನರ ಅನುಮಾನಕ್ಕೆ ಕಾರಣ ಆಗಿದೆ ಈ ವಿಡಿಯೋ
Image
ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?
Image
ರಶ್ಮಿಕಾ ಮಂದಣ್ಣ ಹೊಸ ವಿಡಿಯೋ ವೈರಲ್​; ಎನರ್ಜಿ ಕಂಡು ವಾವ್​ ಎಂದ ಅಭಿಮಾನಿಗಳು

ತೆಲುಗು ಮಾತ್ರವಲ್ಲದೇ ಇಡೀ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಪುಷ್ಪ’ ಸಿನಿಮಾ ಯಶಸ್ಸು ಕಂಡಿತು. ಹಿಂದಿ ಪ್ರೇಕ್ಷಕರು ಈ ಚಿತ್ರಕ್ಕೆ ಫುಲ್​ ಮಾರ್ಕ್ಸ್​ ನೀಡಿದರು. ಅದರ ಪರಿಣಾಮವಾಗಿ ಹಿಂದಿ ವರ್ಷನ್​ನಿಂದಲೇ ನೂರು ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದ್ದು ಆ ಚಿತ್ರದ ಹೆಚ್ಚುಗಾರಿಕೆ. ಈಗ ಅದಕ್ಕಿಂತಲೂ ದೊಡ್ಡ ಮಟ್ಟದಲ್ಲಿ ‘ಪುಷ್ಪ 2’ ಹಿಟ್​ ಆಗಬೇಕು ಎಂಬ ಗುರಿ ಇಟ್ಟುಕೊಂಡಿದೆ ಚಿತ್ರತಂಡ. ‘ಮೈತ್ರಿ ಮೂವೀ ಮೇಕರ್ಸ್​’ ಬ್ಯಾನರ್​ನಲ್ಲಿ ಈ ಸಿನಿಮಾ ಮೂಡಿಬರುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​