AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್’ ಸಿನಿಮಾದ ದೃಶ್ಯ ನೋಡಿ ಟ್ರೋಲ್ ಮಾಡಿದವರಿಗೆ ರಶ್ಮಿಕಾ ತಿರುಗೇಟು

ಕಳೆದ ವರ್ಷ ಡಿಸೆಂಬರ್ 1ರಂದು ರಿಲೀಸ್ ಆದ ‘ಅನಿಮಲ್’ ಸಿನಿಮಾ ಭರ್ಜರಿ ಗಳಿಕೆ ಮಾಡಿದೆ. ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ತುಟಿ ಕಚ್ಚಿಕೊಂಡು ಹೇಳುವ ಡೈಲಾಗ್ ಇದೆ. ಆ ಡೈಲಾಗ್ ಸರಿಯಾಗಿ ಕೇಳಿಲ್ಲ. ಇದನ್ನು ಟ್ರೋಲ್ ಮಾಡಲಾಗಿತ್ತು. ನಾಲ್ಕು ತಿಂಗಳು ಮೌನ ತಾಳಿದ್ದ ಅವರು ಈಗ ಈ ಬಗ್ಗೆ ಮಾತನಾಡಿದ್ದಾರೆ.  

‘ಅನಿಮಲ್’ ಸಿನಿಮಾದ ದೃಶ್ಯ ನೋಡಿ ಟ್ರೋಲ್ ಮಾಡಿದವರಿಗೆ ರಶ್ಮಿಕಾ ತಿರುಗೇಟು
ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Apr 05, 2024 | 7:03 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರಿಗೆ ಇಂದು (ಏಪ್ರಿಲ್ 5) ಜನ್ಮದಿನ. ಅವರಿಗೆ ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ರಶ್ಮಿಕಾ ಅವರನ್ನು ಪ್ರೀತಿಸುವ ವರ್ಗ ಒಂದು ಕಡೆಯಾದರೆ, ಅವರನ್ನು ಟ್ರೋಲ್ ಮಾಡುವ ವರ್ಗ ಮತ್ತೊಂದು ಕಡೆ. ರಶ್ಮಿಕಾ ಅವರು ಟ್ರೋಲ್​ಗೆ ಹೆಚ್ಚು ತಲೆಕೆಡಿಸಿಕೊಂಡವರಲ್ಲ. ಆದರೆ, ಎಲ್ಲೋ ಅಪರೂಪಕ್ಕೊಮ್ಮೆ ಈ ಬಗ್ಗೆ ಮೌನ ಮುರಿಯತ್ತಾರೆ. ಕಳೆದ ವರ್ಷ ಡಿಸೆಂಬರ್ 1ರಂದು ರಿಲೀಸ್ ಆದ ‘ಅನಿಮಲ್’ ಸಿನಿಮಾ ಭರ್ಜರಿ ಗಳಿಕೆ ಮಾಡಿದೆ. ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ತುಟಿ ಕಚ್ಚಿಕೊಂಡು ಹೇಳುವ ಡೈಲಾಗ್ ಇದೆ. ಆ ಡೈಲಾಗ್ ಸರಿಯಾಗಿ ಕೇಳಿಲ್ಲ. ಇದನ್ನು ಟ್ರೋಲ್ ಮಾಡಲಾಗಿತ್ತು. ನಾಲ್ಕು ತಿಂಗಳು ಮೌನ ತಾಳಿದ್ದ ಅವರು ಈಗ ಈ ಬಗ್ಗೆ ಮಾತನಾಡಿದ್ದಾರೆ.

ನೇಹಾ ಧೂಪಿಯಾ ಶೋಗೆ ಅವರು ಇತ್ತೀಚೆಗೆ ಆಗಮಿಸಿದ್ದರು. ಈ ವೇಳೆ ಅವರು ಈ ಬಗ್ಗೆ ಮಾತನಾಡಿದ್ದಾರು. ‘ದೇಹದ ವಿಚಾರ ಇಟ್ಟುಕೊಂಡು ಮಹಿಳೆಯರನ್ನು ಜನರು ಟ್ರೋಲ್ ಮಾಡೋದು ನನಗೆ ಇಷ್ಟ ಆಗುವುದಿಲ್ಲ. ಸಿನಿಮಾದ ಡೈಲಾಗ್ ವಿಚಾರಕ್ಕೆ ನನ್ನನ್ನು ಟ್ರೋಲ್ ಮಾಡುತ್ತಿದ್ದಾರೆ. ನಾನು ಹೇಗೆ ನಟಿಸಿದ್ದೇನೆ ಅನ್ನೋದು ನನಗೆ ತಿಳಿದಿದೆ’ ಎಂದಿದ್ದಾರೆ ರಶ್ಮಿಕಾ.

‘ಕರ್ವಾ ಚೌತ್ ದೃಶ್ಯವು ಒಂಭತ್ತು ನಿಮಿಷ ಇತ್ತು. ಈ ದೃಶ್ಯ ಮಾಡುವಾಗ ಸೆಟ್‌ನಲ್ಲಿರುವ ಜನರು ಅದನ್ನು ಇಷ್ಟಪಟ್ಟಿದ್ದರು. ಅವರು ಚಪ್ಪಾಳೆ ತಟ್ಟಿದರು. ಚೆನ್ನಾಗಿದೆ ಎಂದು ಹೊಗಳಿದರು. ಆದರೆ ಟ್ರೇಲರ್, ಸಿನಿಮಾ ನೋಡಿದ ಜನರು ಆ ದೃಶ್ಯವನ್ನು ಟ್ರೋಲ್ ಮಾಡಿದರು. ಸೆಟ್​ನಲ್ಲಿ ಇಷ್ಟವಾದ ದೃಶ್ಯವನ್ನು ಜನರು ಈಗ ಟ್ರೋಲ್ ಮಾಡುತ್ತಿದ್ದಾರೆ. ಏನು ಶೂಟ್ ಮಾಡಲಾಗಿದೆ, ಹೇಗೆ ಶೂಟ್ ಮಾಡಲಾಗಿದೆ ಎಂಬುದು ನನಗೆ ತಿಳಿದಿದೆ. ಆದರೆ ಜನರಿಗೆ ತಿಳಿದಿಲ್ಲ. ನಾನು ಜನರೊಂದಿಗೆ ಮಾತನಾಡಬೇಕು. ನಿಜವಾಗಿಯೂ ಏನಾಗುತ್ತಿದೆ ಎಂದು ನನಗೆ ತಿಳಿಯಬೇಕು’ ಎಂದು ರಶ್ಮಿಕಾ ಹೇಳಿದ್ದಾರೆ.

ಇದನ್ನೂ ಓದಿ: ಕಡಿಮೆ ಬಜೆಟ್​ನಲ್ಲಿ ಸಿನಿಮಾ ಮಾಡಲಿರುವ ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ

ರಶ್ಮಿಕಾ ಮಂದಣ್ಣ ಅವರು ಸದ್ಯ ‘ಪುಷ್ಪ 2’, ‘ರೇನ್​ಬೋ’ ಮೊದಲಾದ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಧನುಷ್ ನಟನೆಯ ‘ಕುಬೇರ’ ಚಿತ್ರಕ್ಕೆ ಅವರು ನಾಯಕಿ. ವಿಕ್ಕಿ ಕೌಶಲ್ ಜೊತೆ ಅವರು ಸಿನಿಮಾ ಮಾಡುತ್ತಿದ್ದಾರೆ. ಪ್ರತಿ ಸಿನಿಮಾಗಳು ಬೇರೆ ಬೇರೆ ರೀತಿಯಲ್ಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?