AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಟ್​ಕೇಸ್​ ತುಂಬ ಹಣದ ಕಂತೆ; ಎಲ್ಲವನ್ನೂ ಹೊತ್ತುಕೊಂಡು ಹೋದ ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ ಅವರ ಅದೃಷ್ಟ ಬದಲಾಗಿದೆ. ಪ್ಯಾನ್​ ಇಂಡಿಯಾ ನಟಿಯಾಗಿ ಮಿಂಚುತ್ತಿರುವ ಅವರಿಗೆ ಕೈತುಂಬ ಸಂಭಾವನೆ ಸಿಗುತ್ತಿದೆ. ದಕ್ಷಿಣ ಭಾರತದಲ್ಲಿ ಮತ್ತು ಬಾಲಿವುಡ್​ನಲ್ಲಿ ಸ್ಟಾರ್​ ನಟರ ಜೊತೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಧನುಷ್​ ಜೊತೆ ರಶ್ಮಿಕಾ ನಟಿಸಿರುವ ‘ಕುಬೇರ’ ಸಿನಿಮಾ ತಂಡದಿಂದ ಫಸ್ಟ್​ ಲುಕ್ ಟೀಸರ್​ ಬಿಡುಗಡೆ ಆಗಿದೆ. ಇದು ಇಂಟರೆಸ್ಟಿಂಗ್​ ಆಗಿದೆ.

ಸೂಟ್​ಕೇಸ್​ ತುಂಬ ಹಣದ ಕಂತೆ; ಎಲ್ಲವನ್ನೂ ಹೊತ್ತುಕೊಂಡು ಹೋದ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
|

Updated on: Jul 05, 2024 | 3:11 PM

Share

ಹಿಂದಿ, ತಮಿಳು, ತೆಲುಗು ಭಾಷೆಯ ಸಿನಿಮಾಗಳಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ಅವರಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ. ನಟ ಧನುಷ್​ ಜೊತೆ ರಶ್ಮಿಕಾ ಮಂದಣ್ಣ ಅವರು ‘ಕುಬೇರ’ (Kubera) ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಶೀರ್ಷಿಕೆಯೇ ಹೇಳುವಂತೆ ಇದು ಹಣದ ಕುರಿತಾದ ಸಿನಿಮಾ. ರಶ್ಮಿಕಾ ಅವರ ಅಭಿಮಾನಿಗಳು ಈ ಚಿತ್ರದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಯನ್ನು ಹೆಚ್ಚು ಮಾಡುವ ರೀತಿಯಲ್ಲಿ ನಟಿಯ ಫಸ್ಟ್​ ಲುಕ್​ (Rashmika Mandanna First Look) ಟೀಸರ್ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ರಶ್ಮಿಕಾ ಮಂದಣ್ಣ ಅವರು ನೋಟಿನ ಕಂತೆಗಳು ತುಂಬಿರುವ ಸೂಟ್​ಕೇಸ್​ ತೆಗೆದುಕೊಂಡು ಹೋಗುತ್ತಿರುವ ದೃಶ್ಯ ಇದೆ.

ಪ್ರತಿ ಸಿನಿಮಾದಲ್ಲೂ ರಶ್ಮಿಕಾ ಮಂದಣ್ಣ ಅವರ ಪಾತ್ರಕ್ಕೆ ಪ್ರಾಮುಖ್ಯತೆ ಸಿಗುತ್ತಿದೆ. ಈಗ ‘ಕುಬೇರ’ ಸಿನಿಮಾ ಕೂಡ ಅವರ ವೃತ್ತಿಜೀವನಕ್ಕೆ ಪ್ಲಸ್​ ಆಗುವ ಸೂಚನೆ ಸಿಕ್ಕಿದೆ. 48 ಸೆಕೆಂಡ್​ಗಳ ಟೀಸರ್​ನಲ್ಲಿ ರಶ್ಮಿಕಾ ಮಂದಣ್ಣ ಅವರು ನೆಲದ ಒಳಗೆ ಹುಗಿದಿಟ್ಟ ದೊಡ್ಡ ಸೂಟ್​ಕೇಸ್​ ಹೊರಗೆ ತೆಯುತ್ತಾರೆ. ಅದರ ತುಂಬ ಹಣದ ಕಂತೆಗಳೇ ಇವೆ. ದುಡ್ಡು ನೋಡಿ ಖುಷಿ ಆಗುವ ರಶ್ಮಿಕಾ ಅವರು ಎಲ್ಲವನ್ನು ತೆಗೆದುಕೊಂಡು ಹೋಗುತ್ತಾರೆ. ಅಷ್ಟು ದುಡ್ಡು ಯಾರದ್ದು? ನೆಲೆದ ಒಳಗೆ ಹೂತಿಟ್ಟಿದ್ದು ಯಾಕೆ? ಈಗ ಅದನ್ನು ರಶ್ಮಿಕಾ ತೆಗೆದುಕೊಂಡು ಹೋಗುತ್ತಿರುವುದು ಎಲ್ಲಿಗೆ? ಇಂಥ ಹಲವು ಪ್ರಶ್ನೆಗಳು ಸಿನಿಪ್ರಿಯರ ಮನದಲ್ಲಿ ಹುಟ್ಟಿಕೊಂಡಿವೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ-ವಿಜಯ್​ ದೇವರಕೊಂಡ ಬಗ್ಗೆ ಹರಡಿದೆ ಇನ್ನೊಂದು ಹೊಸ ಗಾಸಿಪ್​

‘ಕುಬೇರ’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ, ಧನುಷ್​ ಜೊತೆ ಅಕ್ಕಿನೇನಿ ನಾಗಾರ್ಜುನ ಅವರು ಕೂಡ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಹೈದರಾಬಾದ್​ನಲ್ಲಿ ಈ ಸಿನಿಮಾದ ಶೂಟಿಂಗ್​ ನಡೆಯುತ್ತಿದೆ. ಧನುಷ್ ಮತ್ತು ನಾಗಾರ್ಜುನ ಅವರ ಫಸ್ಟ್​ ಲುಕ್​ಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಬಹುಭಾಷೆಯಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ರಿಲೀಸ್​ ದಿನಾಂಕ ಇನ್ನಷ್ಟೇ ಗೊತಾಗಬೇಕಿದೆ. ಈ ಚಿತ್ರಕ್ಕೆ ಶೇಖರ್​ ಕಮ್ಮುಲ ನಿರ್ದೇಶನ ಮಾಡುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಅವರಿಗೆ ಸಖತ್​ ಬೇಡಿಕೆ ಇದೆ. ಅಲ್ಲು ಅರ್ಜುನ್​ ಜೊತೆ ‘ಪುಷ್ಪ 2’ಸಿನಿಮಾದಲ್ಲಿ ಅವರು ನಟಿಸಿದ್ದು, ಆ ಸಿನಿಮಾ ಡಿಸೆಂಬರ್​ 6ರಂದು ಬಿಡುಗಡೆ ಆಗಲಿದೆ. ಅದಲ್ಲದೇ, ಸಲ್ಮಾನ್​ ಖಾನ್ ಜೊತೆ ‘ಸಿಕಂದರ್​’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ‘ಅನಿಮಲ್​’ ಸಿನಿಮಾದ ದೊಡ್ಡ ಯಶಸ್ಸಿನ ಬಳಿಕ ಬಾಲಿವುಡ್​ನಲ್ಲಿ ರಶ್ಮಿಕಾ ಒಪ್ಪಿಕೊಂಡ ಸಿನಿಮಾ ಇದು. ‘ಸಿಕಂದರ್​’ಗೆ ಎ.ಆರ್​. ಮುರುಗದಾಸ್​ ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ