AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಟ್​ಕೇಸ್​ ತುಂಬ ಹಣದ ಕಂತೆ; ಎಲ್ಲವನ್ನೂ ಹೊತ್ತುಕೊಂಡು ಹೋದ ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ ಅವರ ಅದೃಷ್ಟ ಬದಲಾಗಿದೆ. ಪ್ಯಾನ್​ ಇಂಡಿಯಾ ನಟಿಯಾಗಿ ಮಿಂಚುತ್ತಿರುವ ಅವರಿಗೆ ಕೈತುಂಬ ಸಂಭಾವನೆ ಸಿಗುತ್ತಿದೆ. ದಕ್ಷಿಣ ಭಾರತದಲ್ಲಿ ಮತ್ತು ಬಾಲಿವುಡ್​ನಲ್ಲಿ ಸ್ಟಾರ್​ ನಟರ ಜೊತೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಧನುಷ್​ ಜೊತೆ ರಶ್ಮಿಕಾ ನಟಿಸಿರುವ ‘ಕುಬೇರ’ ಸಿನಿಮಾ ತಂಡದಿಂದ ಫಸ್ಟ್​ ಲುಕ್ ಟೀಸರ್​ ಬಿಡುಗಡೆ ಆಗಿದೆ. ಇದು ಇಂಟರೆಸ್ಟಿಂಗ್​ ಆಗಿದೆ.

ಸೂಟ್​ಕೇಸ್​ ತುಂಬ ಹಣದ ಕಂತೆ; ಎಲ್ಲವನ್ನೂ ಹೊತ್ತುಕೊಂಡು ಹೋದ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
|

Updated on: Jul 05, 2024 | 3:11 PM

Share

ಹಿಂದಿ, ತಮಿಳು, ತೆಲುಗು ಭಾಷೆಯ ಸಿನಿಮಾಗಳಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ಅವರಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ. ನಟ ಧನುಷ್​ ಜೊತೆ ರಶ್ಮಿಕಾ ಮಂದಣ್ಣ ಅವರು ‘ಕುಬೇರ’ (Kubera) ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಶೀರ್ಷಿಕೆಯೇ ಹೇಳುವಂತೆ ಇದು ಹಣದ ಕುರಿತಾದ ಸಿನಿಮಾ. ರಶ್ಮಿಕಾ ಅವರ ಅಭಿಮಾನಿಗಳು ಈ ಚಿತ್ರದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಯನ್ನು ಹೆಚ್ಚು ಮಾಡುವ ರೀತಿಯಲ್ಲಿ ನಟಿಯ ಫಸ್ಟ್​ ಲುಕ್​ (Rashmika Mandanna First Look) ಟೀಸರ್ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ರಶ್ಮಿಕಾ ಮಂದಣ್ಣ ಅವರು ನೋಟಿನ ಕಂತೆಗಳು ತುಂಬಿರುವ ಸೂಟ್​ಕೇಸ್​ ತೆಗೆದುಕೊಂಡು ಹೋಗುತ್ತಿರುವ ದೃಶ್ಯ ಇದೆ.

ಪ್ರತಿ ಸಿನಿಮಾದಲ್ಲೂ ರಶ್ಮಿಕಾ ಮಂದಣ್ಣ ಅವರ ಪಾತ್ರಕ್ಕೆ ಪ್ರಾಮುಖ್ಯತೆ ಸಿಗುತ್ತಿದೆ. ಈಗ ‘ಕುಬೇರ’ ಸಿನಿಮಾ ಕೂಡ ಅವರ ವೃತ್ತಿಜೀವನಕ್ಕೆ ಪ್ಲಸ್​ ಆಗುವ ಸೂಚನೆ ಸಿಕ್ಕಿದೆ. 48 ಸೆಕೆಂಡ್​ಗಳ ಟೀಸರ್​ನಲ್ಲಿ ರಶ್ಮಿಕಾ ಮಂದಣ್ಣ ಅವರು ನೆಲದ ಒಳಗೆ ಹುಗಿದಿಟ್ಟ ದೊಡ್ಡ ಸೂಟ್​ಕೇಸ್​ ಹೊರಗೆ ತೆಯುತ್ತಾರೆ. ಅದರ ತುಂಬ ಹಣದ ಕಂತೆಗಳೇ ಇವೆ. ದುಡ್ಡು ನೋಡಿ ಖುಷಿ ಆಗುವ ರಶ್ಮಿಕಾ ಅವರು ಎಲ್ಲವನ್ನು ತೆಗೆದುಕೊಂಡು ಹೋಗುತ್ತಾರೆ. ಅಷ್ಟು ದುಡ್ಡು ಯಾರದ್ದು? ನೆಲೆದ ಒಳಗೆ ಹೂತಿಟ್ಟಿದ್ದು ಯಾಕೆ? ಈಗ ಅದನ್ನು ರಶ್ಮಿಕಾ ತೆಗೆದುಕೊಂಡು ಹೋಗುತ್ತಿರುವುದು ಎಲ್ಲಿಗೆ? ಇಂಥ ಹಲವು ಪ್ರಶ್ನೆಗಳು ಸಿನಿಪ್ರಿಯರ ಮನದಲ್ಲಿ ಹುಟ್ಟಿಕೊಂಡಿವೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ-ವಿಜಯ್​ ದೇವರಕೊಂಡ ಬಗ್ಗೆ ಹರಡಿದೆ ಇನ್ನೊಂದು ಹೊಸ ಗಾಸಿಪ್​

‘ಕುಬೇರ’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ, ಧನುಷ್​ ಜೊತೆ ಅಕ್ಕಿನೇನಿ ನಾಗಾರ್ಜುನ ಅವರು ಕೂಡ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಹೈದರಾಬಾದ್​ನಲ್ಲಿ ಈ ಸಿನಿಮಾದ ಶೂಟಿಂಗ್​ ನಡೆಯುತ್ತಿದೆ. ಧನುಷ್ ಮತ್ತು ನಾಗಾರ್ಜುನ ಅವರ ಫಸ್ಟ್​ ಲುಕ್​ಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಬಹುಭಾಷೆಯಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ರಿಲೀಸ್​ ದಿನಾಂಕ ಇನ್ನಷ್ಟೇ ಗೊತಾಗಬೇಕಿದೆ. ಈ ಚಿತ್ರಕ್ಕೆ ಶೇಖರ್​ ಕಮ್ಮುಲ ನಿರ್ದೇಶನ ಮಾಡುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಅವರಿಗೆ ಸಖತ್​ ಬೇಡಿಕೆ ಇದೆ. ಅಲ್ಲು ಅರ್ಜುನ್​ ಜೊತೆ ‘ಪುಷ್ಪ 2’ಸಿನಿಮಾದಲ್ಲಿ ಅವರು ನಟಿಸಿದ್ದು, ಆ ಸಿನಿಮಾ ಡಿಸೆಂಬರ್​ 6ರಂದು ಬಿಡುಗಡೆ ಆಗಲಿದೆ. ಅದಲ್ಲದೇ, ಸಲ್ಮಾನ್​ ಖಾನ್ ಜೊತೆ ‘ಸಿಕಂದರ್​’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ‘ಅನಿಮಲ್​’ ಸಿನಿಮಾದ ದೊಡ್ಡ ಯಶಸ್ಸಿನ ಬಳಿಕ ಬಾಲಿವುಡ್​ನಲ್ಲಿ ರಶ್ಮಿಕಾ ಒಪ್ಪಿಕೊಂಡ ಸಿನಿಮಾ ಇದು. ‘ಸಿಕಂದರ್​’ಗೆ ಎ.ಆರ್​. ಮುರುಗದಾಸ್​ ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು