AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಮುಗಿದ ಬೆನ್ನಲ್ಲೇ ‘ಗುಡ್ ಬೈ’ ಹೇಳೋಕೆ ಮುಂಬೈಗೆ ಹಾರಿದ ರಶ್ಮಿಕಾ ಮಂದಣ್ಣ

ಮಹಾರಾಷ್ಟ್ರದಲ್ಲಿ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿದೆ. ಹೀಗಾಗಿ, ಅನ್​ಲಾಕ್​ ಪ್ರಕ್ರಿಯೆ ಆರಂಭವಾಗಿದೆ. ಅಷ್ಟೇ ಅಲ್ಲ, ಶೂಟಿಂಗ್​ಗೂ ಅವಕಾಶ ನೀಡಲಾಗಿದೆ. ಹೀಗಾಗಿ, ಚಿತ್ರತಂಡಗಳು ಶೂಟಿಂಗ್​ನಲ್ಲಿ ಬ್ಯುಸಿ ಆಗಿವೆ.

ಲಾಕ್​ಡೌನ್​ ಮುಗಿದ ಬೆನ್ನಲ್ಲೇ ‘ಗುಡ್ ಬೈ’ ಹೇಳೋಕೆ ಮುಂಬೈಗೆ ಹಾರಿದ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಾಜೇಶ್ ದುಗ್ಗುಮನೆ
| Edited By: |

Updated on: Jun 14, 2021 | 6:22 PM

Share

ನಟಿ ರಶ್ಮಿಕಾ ಮಂದಣ್ಣ ಸಾಕಷ್ಟು ಬ್ಯುಸಿ ಶೆಡ್ಯೂಲ್​ ಹೊಂದಿದ್ದಾರೆ. ಬಾಲಿವುಡ್​ ಹಾಗೂ ಟಾಲಿವುಡ್​ ಎರಡರಲ್ಲೂ ಕೈ ತುಂಬಾ ಆಫರ್​ಗಳನ್ನು ಹೊಂದಿರುವ ಅವರು, ಸದಾ ಶೂಟ್​ನಲ್ಲಿ ಬ್ಯುಸಿ ಇರುತ್ತಿದ್ದರು. ಕೊವಿಡ್​ ನಿಯಂತ್ರಣಕ್ಕೆ ಹೇರಿದ್ದ ಲಾಕ್​ಡೌನ್​ನಿಂದ ರಶ್ಮಿಕಾ ಮನೆಯಲ್ಲೇ ಇದ್ದರು. ಈಗ ಅವರು ಮುಂಬೈಗೆ ಹಾರಾಟ ನಡೆಸಿದ್ದಾರೆ. ಇದಕ್ಕೆ ಕಾರಣ ‘ಗುಡ್ ಬೈ’ ಚಿತ್ರದ ಶೂಟಿಂಗ್​.

ಮಹಾರಾಷ್ಟ್ರದಲ್ಲಿ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿದೆ. ಹೀಗಾಗಿ, ಅನ್​ಲಾಕ್​ ಪ್ರಕ್ರಿಯೆ ಆರಂಭವಾಗಿದೆ. ಅಷ್ಟೇ ಅಲ್ಲ, ಶೂಟಿಂಗ್​ಗೂ ಅವಕಾಶ ನೀಡಲಾಗಿದೆ. ಹೀಗಾಗಿ, ಚಿತ್ರತಂಡಗಳು ಶೂಟಿಂಗ್​ನಲ್ಲಿ ಬ್ಯುಸಿ ಆಗಿವೆ. ಅದೇ ರೀತಿ ‘ಗುಡ್​ ಬೈ’ ಚಿತ್ರೀಕರಣ ಕೂಡ ಆರಂಭವಾಗಿದ್ದು, ರಶ್ಮಿಕಾ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ.

ಈ ಚಿತ್ರ ಸಾಕಷ್ಟು ಮನರಂಜನೆ ನೀಡುವುದರ ಜತೆಗೆ ಭಾವನಾತ್ಮಕವಾಗಿ ಇರಲಿದೆಯಂತೆ. ಅಮಿತಾಭ್​ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡರೆ ಅವರ ಮಗಳಾಗಿ ರಶ್ಮಿಕಾ ನಟಿಸಿಸುತ್ತಿದ್ದಾರೆ. ‘ಸೂಪರ್​ 30’ ಖ್ಯಾತಿಯ ವಿಕಾಸ್​ ಬಹಲ್​​​ ಚಿತ್ರವನ್ನು ನಿರ್ದೇಶನ ಮಾಡಿದರೆ, ಏಕ್ತಾ ಕಪೂರ್​ ಬಂಡವಾಳ ಹೂಡುತ್ತಿದ್ದಾರೆ.

ಕನ್ನಡ ಚಿತ್ರರಂಗದಿಂದ ಬದುಕು ಆರಂಭಿಸಿದ ರಶ್ಮಿಕಾ ಮಂದಣ್ಣ ನಂತರ ಕಾಲಿಟ್ಟಿದ್ದು ಟಾಲಿವುಡ್​ಗೆ. ರಶ್ಮಿಕಾಗೆ ಅಲ್ಲಿ ಅಪಾರ ಖ್ಯಾತಿ ಸಿಕ್ಕಿತ್ತು. ಕಾಲಿವುಡ್​ಗೂ ಎಂಟ್ರಿಕೊಟ್ಟಿದ್ದ ರಶ್ಮಿಕಾ ನಂತರ ಬಾಲಿವುಡ್​ ಆಫರ್​ ಗಿಟ್ಟಿಸಿಕೊಂಡರು. ‘ಮಿಷನ್​ ಮಜ್ನು’ ಚಿತ್ರದಲ್ಲಿ ಸಿದ್ಧಾರ್ಥ್​ ಮಲ್ಹೋತ್ರಗೆ ಜತೆಯಾಗಿ ರಶ್ಮಿಕಾ ಕಾಣಿಸಿಕೊಳ್ಳುತ್ತಿದ್ದಾರೆ. ಇದಾದ ನಂತರದಲ್ಲಿ ಅವರಿಗೆ ಸಿಕ್ಕಿದ್ದು ‘ಗುಡ್​ ಬೈ’ ಚಿತ್ರ.

ಇನ್ನು, ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ರಕ್ತಚಂದನ ಕಳ್ಳಸಾಗಾಣಿಕೆಯ ಕಥೆ ಈ ಸಿನಿಮಾದಲ್ಲಿ ಇರಲಿದೆ. ಈ ಚಿತ್ರದ ಬಗ್ಗೆ ಪ್ರೇಕ್ಷಕರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ:

ದಿ ಫ್ಯಾಮಿಲಿ ಮ್ಯಾನ್​ 2ನಲ್ಲಿ ಸಮಂತಾ ಆ್ಯಕ್ಷನ್​ ನೋಡಿದ ರಶ್ಮಿಕಾ ಮಂದಣ್ಣ ಹೇಳಿದ್ದೇನು?

ರಶ್ಮಿಕಾ ಬಗ್ಗೆ ಕೆಟ್ಟ ಕಮೆಂಟ್​ಗಳ ಸುರಿಮಳೆ; ರಕ್ಷಿತ್​ ಶೆಟ್ಟಿ ಪ್ರತಿಕ್ರಿಯೆಗೆ ಭೇಷ್​ ಎನ್ನಲೇಬೇಕು

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More