AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಮುಗಿದ ಬೆನ್ನಲ್ಲೇ ‘ಗುಡ್ ಬೈ’ ಹೇಳೋಕೆ ಮುಂಬೈಗೆ ಹಾರಿದ ರಶ್ಮಿಕಾ ಮಂದಣ್ಣ

ಮಹಾರಾಷ್ಟ್ರದಲ್ಲಿ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿದೆ. ಹೀಗಾಗಿ, ಅನ್​ಲಾಕ್​ ಪ್ರಕ್ರಿಯೆ ಆರಂಭವಾಗಿದೆ. ಅಷ್ಟೇ ಅಲ್ಲ, ಶೂಟಿಂಗ್​ಗೂ ಅವಕಾಶ ನೀಡಲಾಗಿದೆ. ಹೀಗಾಗಿ, ಚಿತ್ರತಂಡಗಳು ಶೂಟಿಂಗ್​ನಲ್ಲಿ ಬ್ಯುಸಿ ಆಗಿವೆ.

ಲಾಕ್​ಡೌನ್​ ಮುಗಿದ ಬೆನ್ನಲ್ಲೇ ‘ಗುಡ್ ಬೈ’ ಹೇಳೋಕೆ ಮುಂಬೈಗೆ ಹಾರಿದ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಾಜೇಶ್ ದುಗ್ಗುಮನೆ
| Edited By: |

Updated on: Jun 14, 2021 | 6:22 PM

Share

ನಟಿ ರಶ್ಮಿಕಾ ಮಂದಣ್ಣ ಸಾಕಷ್ಟು ಬ್ಯುಸಿ ಶೆಡ್ಯೂಲ್​ ಹೊಂದಿದ್ದಾರೆ. ಬಾಲಿವುಡ್​ ಹಾಗೂ ಟಾಲಿವುಡ್​ ಎರಡರಲ್ಲೂ ಕೈ ತುಂಬಾ ಆಫರ್​ಗಳನ್ನು ಹೊಂದಿರುವ ಅವರು, ಸದಾ ಶೂಟ್​ನಲ್ಲಿ ಬ್ಯುಸಿ ಇರುತ್ತಿದ್ದರು. ಕೊವಿಡ್​ ನಿಯಂತ್ರಣಕ್ಕೆ ಹೇರಿದ್ದ ಲಾಕ್​ಡೌನ್​ನಿಂದ ರಶ್ಮಿಕಾ ಮನೆಯಲ್ಲೇ ಇದ್ದರು. ಈಗ ಅವರು ಮುಂಬೈಗೆ ಹಾರಾಟ ನಡೆಸಿದ್ದಾರೆ. ಇದಕ್ಕೆ ಕಾರಣ ‘ಗುಡ್ ಬೈ’ ಚಿತ್ರದ ಶೂಟಿಂಗ್​.

ಮಹಾರಾಷ್ಟ್ರದಲ್ಲಿ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿದೆ. ಹೀಗಾಗಿ, ಅನ್​ಲಾಕ್​ ಪ್ರಕ್ರಿಯೆ ಆರಂಭವಾಗಿದೆ. ಅಷ್ಟೇ ಅಲ್ಲ, ಶೂಟಿಂಗ್​ಗೂ ಅವಕಾಶ ನೀಡಲಾಗಿದೆ. ಹೀಗಾಗಿ, ಚಿತ್ರತಂಡಗಳು ಶೂಟಿಂಗ್​ನಲ್ಲಿ ಬ್ಯುಸಿ ಆಗಿವೆ. ಅದೇ ರೀತಿ ‘ಗುಡ್​ ಬೈ’ ಚಿತ್ರೀಕರಣ ಕೂಡ ಆರಂಭವಾಗಿದ್ದು, ರಶ್ಮಿಕಾ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ.

ಈ ಚಿತ್ರ ಸಾಕಷ್ಟು ಮನರಂಜನೆ ನೀಡುವುದರ ಜತೆಗೆ ಭಾವನಾತ್ಮಕವಾಗಿ ಇರಲಿದೆಯಂತೆ. ಅಮಿತಾಭ್​ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡರೆ ಅವರ ಮಗಳಾಗಿ ರಶ್ಮಿಕಾ ನಟಿಸಿಸುತ್ತಿದ್ದಾರೆ. ‘ಸೂಪರ್​ 30’ ಖ್ಯಾತಿಯ ವಿಕಾಸ್​ ಬಹಲ್​​​ ಚಿತ್ರವನ್ನು ನಿರ್ದೇಶನ ಮಾಡಿದರೆ, ಏಕ್ತಾ ಕಪೂರ್​ ಬಂಡವಾಳ ಹೂಡುತ್ತಿದ್ದಾರೆ.

ಕನ್ನಡ ಚಿತ್ರರಂಗದಿಂದ ಬದುಕು ಆರಂಭಿಸಿದ ರಶ್ಮಿಕಾ ಮಂದಣ್ಣ ನಂತರ ಕಾಲಿಟ್ಟಿದ್ದು ಟಾಲಿವುಡ್​ಗೆ. ರಶ್ಮಿಕಾಗೆ ಅಲ್ಲಿ ಅಪಾರ ಖ್ಯಾತಿ ಸಿಕ್ಕಿತ್ತು. ಕಾಲಿವುಡ್​ಗೂ ಎಂಟ್ರಿಕೊಟ್ಟಿದ್ದ ರಶ್ಮಿಕಾ ನಂತರ ಬಾಲಿವುಡ್​ ಆಫರ್​ ಗಿಟ್ಟಿಸಿಕೊಂಡರು. ‘ಮಿಷನ್​ ಮಜ್ನು’ ಚಿತ್ರದಲ್ಲಿ ಸಿದ್ಧಾರ್ಥ್​ ಮಲ್ಹೋತ್ರಗೆ ಜತೆಯಾಗಿ ರಶ್ಮಿಕಾ ಕಾಣಿಸಿಕೊಳ್ಳುತ್ತಿದ್ದಾರೆ. ಇದಾದ ನಂತರದಲ್ಲಿ ಅವರಿಗೆ ಸಿಕ್ಕಿದ್ದು ‘ಗುಡ್​ ಬೈ’ ಚಿತ್ರ.

ಇನ್ನು, ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ರಕ್ತಚಂದನ ಕಳ್ಳಸಾಗಾಣಿಕೆಯ ಕಥೆ ಈ ಸಿನಿಮಾದಲ್ಲಿ ಇರಲಿದೆ. ಈ ಚಿತ್ರದ ಬಗ್ಗೆ ಪ್ರೇಕ್ಷಕರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ:

ದಿ ಫ್ಯಾಮಿಲಿ ಮ್ಯಾನ್​ 2ನಲ್ಲಿ ಸಮಂತಾ ಆ್ಯಕ್ಷನ್​ ನೋಡಿದ ರಶ್ಮಿಕಾ ಮಂದಣ್ಣ ಹೇಳಿದ್ದೇನು?

ರಶ್ಮಿಕಾ ಬಗ್ಗೆ ಕೆಟ್ಟ ಕಮೆಂಟ್​ಗಳ ಸುರಿಮಳೆ; ರಕ್ಷಿತ್​ ಶೆಟ್ಟಿ ಪ್ರತಿಕ್ರಿಯೆಗೆ ಭೇಷ್​ ಎನ್ನಲೇಬೇಕು

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ