AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ವಿಜಯ್​ ದೇವರಕೊಂಡ ತಮ್ಮನ ಸಿನಿಮಾ ನೋಡಲು ಹೋಗಿ ಕಣ್ಣೀರು ಹಾಕಿದ ರಶ್ಮಿಕಾ ಮಂದಣ್ಣ

Anand Deverakonda: ಗುರುವಾರ (ಜುಲೈ 13) ರಾತ್ರಿಯೇ ‘ಬೇಬಿ’ ಸಿನಿಮಾದ ಪ್ರೀಮಿಯರ್​ ಶೋ ಏರ್ಪಡಿಸಲಾಗಿತ್ತು. ಅದರಲ್ಲಿ ವಿಜಯ್​ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಭಾಗವಹಿಸಿದ್ದಾರೆ.

Rashmika Mandanna: ವಿಜಯ್​ ದೇವರಕೊಂಡ ತಮ್ಮನ ಸಿನಿಮಾ ನೋಡಲು ಹೋಗಿ ಕಣ್ಣೀರು ಹಾಕಿದ ರಶ್ಮಿಕಾ ಮಂದಣ್ಣ
ಖುಷಿ ಸಿನಿಮಾ ಪೋಸ್ಟರ್​, ರಶ್ಮಿಕಾ ಮಂದಣ್ಣ, ಆನಂದ್​ ದೇವರಕೊಂಡ
ಮದನ್​ ಕುಮಾರ್​
|

Updated on: Jul 14, 2023 | 4:54 PM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಟಾಲಿವುಡ್​ನಲ್ಲಿ ಭದ್ರವಾಗಿ ನೆಲೆ ಕಂಡುಕೊಂಡಿದ್ದಾರೆ. ಅಲ್ಲಿನ ಅನೇಕ ಸೆಲೆಬ್ರಿಟಿಗಳ ಜೊತೆಗೆ ಅವರು ಉತ್ತಮ ಬಾಂಧವ್ಯ ಹೊಂದಿದ್ದಾರೆ. ಅದರಲ್ಲೂ ವಿಜಯ್​ ದೇವರಕೊಂಡ ಜೊತೆಗಿನ ಅವರ ಸ್ನೇಹ ಗಟ್ಟಿಯಾಗಿದೆ. ಅಷ್ಟೇ ಅಲ್ಲದೇ, ವಿಜಯ್​ ದೇವರಕೊಂಡ (Vijay Deverakonda) ಅವರ ಕುಟುಂಬದವರ ಜೊತೆಗೂ ರಶ್ಮಿಕಾ ಆಪ್ತತೆ ಹೊಂದಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಒಂದು ಘಟನೆ ನಡೆದಿದೆ. ವಿಜಯ್​ ದೇವರಕೊಂಡ ಅವರ ಸಹೋದರ ಆನಂದ್​ ದೇವರಕೊಂಡ (Anand Deverakonda) ನಟಿಸಿದ ‘ಬೇಬಿ’ ಸಿನಿಮಾಗೆ ರಶ್ಮಿಕಾ ಮಂದಣ್ಣ ಬೆಂಬಲ ಸೂಚಿಸಿದ್ದಾರೆ. ಪ್ರೀಮಿಯರ್ ಶೋ ನೋಡಲು ಹೋದ ರಶ್ಮಿಕಾ ಅವರು ಎಮೋಷನಲ್​ ಆಗಿ ಕಣ್ಣೀರು ಹಾಕಿದ್ದಾರೆ.

ವಿಜಯ್​ ದೇವರಕೊಂಡ ರೀತಿಯೇ ಆನಂದ್​ ದೇವರಕೊಂಡ ಕೂಡ ಹೀರೋ ಆಗಿ ಟಾಲಿವುಡ್​ನಲ್ಲಿ ಸಕ್ರಿಯರಾಗಿದ್ದಾರೆ. ಅವರ ವೃತ್ತಿಜೀವನಕ್ಕೆ ವಿಜಯ್​ ದೇವರಕೊಂಡ ಬೆಂಬಲವಾಗಿ ನಿಂತಿದ್ದಾರೆ. ‘ಬೇಬಿ’ ಸಿನಿಮಾ ಇಂದು (ಜುಲೈ 14) ಬಿಡುಗಡೆ ಆಗಿದೆ. ಬಹುತೇಕ ಎಲ್ಲರಿಂದ ಪಾಸಿಟಿವ್​ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗುರುವಾರ (ಜುಲೈ 13) ರಾತ್ರಿಯೇ ಈ ಸಿನಿಮಾದ ಪ್ರೀಮಿಯರ್​ ಶೋ ಏರ್ಪಡಿಸಲಾಗಿತ್ತು. ಅದರಲ್ಲಿ ವಿಜಯ್​ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಭಾಗವಹಿಸಿದ್ದಾರೆ.

ಇದನ್ನೂ ಓದಿ: Rashmika Mandanna: ರಶ್ಮಿಕಾ ಮಂದಣ್ಣ ಕೈಯಿಂದ ಮೊಬೈಲ್​ ಕಿತ್ತುಕೊಂಡ ಯುವಕ; ಹೇಗಿತ್ತು ನಟಿಯ ರಿಯಾಕ್ಷನ್​?

‘ಬೇಬಿ’ ಸಿನಿಮಾದಲ್ಲಿ ಲವ್​ ಸ್ಟೋರಿ ಇದೆ. ಅದು ರಶ್ಮಿಕಾ ಮಂದಣ್ಣ ಅವರಿಗೆ ತುಂಬ ಇಷ್ಟವಾಗಿದೆ. ಸಿನಿಮಾದ ಕೆಲವು ದೃಶ್ಯಗಳ ತುಂಬ ಭಾವುಕವಾಗಿವೆ. ಹಾಗಾಗಿ ಸಿನಿಮಾ ನೋಡುವಾಗ ರಶ್ಮಿಕಾ ಮಂದಣ್ಣ ಅವರು ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ. ಸಿನಿಮಾ ನೋಡಿ ಹೊರಬಂದ ಅವರು ಖುಷಿಯಿಂದ ಮಾತನಾಡಿದ್ದಾರೆ. ಸ್ಟಾರ್​ ನಟಿಯ ಬೆಂಬಲ ಸಿಕ್ಕಿರುವುದರಿಂದ ‘ಬೇಬಿ’ ಸಿನಿಮಾ ತಂಡಕ್ಕೆ ಸಂತೋಷ ಆಗಿದೆ. ಮೊದಲ ದಿನ ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರ ಎಷ್ಟು ಕಲೆಕ್ಷನ್​ ಮಾಡಿದೆ ಎಂಬ ಲೆಕ್ಕ ಶೀಘ್ರದಲ್ಲೇ ಸಿಗಲಿದೆ.

ಇದನ್ನೂ ಓದಿ: Rashmika Mandanna: ರಣಬೀರ್ ಕಪೂರ್ ಜೊತೆ ಆಪ್ತವಾಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ; ಇಲ್ಲಿದೆ ಫೋಟೋ ಆಲ್ಬಂ

ಸಾಯಿ ರಾಜೇಶ್​ ಅವರ ನಿರ್ದೇಶನದಲ್ಲಿ ‘ಬೇಬಿ’ ಸಿನಿಮಾ ಮೂಡಿಬಂದಿದೆ. ಆನಂದ್​ ದೇವರಕೊಂಡ ಮತ್ತು ವೈಷ್ಣವಿ ಚೈತನ್ಯ ಅವರು ಜೋಡಿಯಾಗಿ ಅಭಿನಯಿಸಿದ್ದಾರೆ. ಅವರಿಬ್ಬರ ಅಭಿನಯಕ್ಕೆ ವಿಜಯ್​ ದೇವರಕೊಂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಪ್ರಸಾದ್​ ಮಲ್ಟಿಪ್ಲೆಕ್ಸ್​’ನಲ್ಲಿ ಸಿನಿಮಾ ವೀಕ್ಷಿಸಿದ ಅವರು ಕೂಡ ಎಮೋಷನಲ್​ ಆಗಿದ್ದರು. ‘ಆನಂದ್​ ಮತ್ತು ವೈಷ್ಣವಿ ಚೈತನ್ಯ ಅವರು ನನ್ನನ್ನು ಎಮೋಷನಲ್​ ಆಗಿಸಿದ್ದಾರೆ. ಈ ಚಿತ್ರದ ಕುರಿತು ನಾನು ಮೂರ್ನಾಲ್ಕು ದಿನಗಳ ನಂತರ ಒಂದು ಇವೆಂಟ್​ನಲ್ಲಿ ಮಾತನಾಡುತ್ತೇನೆ’ ಎಂದಿದ್ದಾರೆ ವಿಜಯ್​ ದೇವರಕೊಂಡ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು