Rashmika Mandanna: ವಿಜಯ್​ ದೇವರಕೊಂಡ ತಮ್ಮನ ಸಿನಿಮಾ ನೋಡಲು ಹೋಗಿ ಕಣ್ಣೀರು ಹಾಕಿದ ರಶ್ಮಿಕಾ ಮಂದಣ್ಣ

Anand Deverakonda: ಗುರುವಾರ (ಜುಲೈ 13) ರಾತ್ರಿಯೇ ‘ಬೇಬಿ’ ಸಿನಿಮಾದ ಪ್ರೀಮಿಯರ್​ ಶೋ ಏರ್ಪಡಿಸಲಾಗಿತ್ತು. ಅದರಲ್ಲಿ ವಿಜಯ್​ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಭಾಗವಹಿಸಿದ್ದಾರೆ.

Rashmika Mandanna: ವಿಜಯ್​ ದೇವರಕೊಂಡ ತಮ್ಮನ ಸಿನಿಮಾ ನೋಡಲು ಹೋಗಿ ಕಣ್ಣೀರು ಹಾಕಿದ ರಶ್ಮಿಕಾ ಮಂದಣ್ಣ
ಖುಷಿ ಸಿನಿಮಾ ಪೋಸ್ಟರ್​, ರಶ್ಮಿಕಾ ಮಂದಣ್ಣ, ಆನಂದ್​ ದೇವರಕೊಂಡ
Follow us
|

Updated on: Jul 14, 2023 | 4:54 PM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಟಾಲಿವುಡ್​ನಲ್ಲಿ ಭದ್ರವಾಗಿ ನೆಲೆ ಕಂಡುಕೊಂಡಿದ್ದಾರೆ. ಅಲ್ಲಿನ ಅನೇಕ ಸೆಲೆಬ್ರಿಟಿಗಳ ಜೊತೆಗೆ ಅವರು ಉತ್ತಮ ಬಾಂಧವ್ಯ ಹೊಂದಿದ್ದಾರೆ. ಅದರಲ್ಲೂ ವಿಜಯ್​ ದೇವರಕೊಂಡ ಜೊತೆಗಿನ ಅವರ ಸ್ನೇಹ ಗಟ್ಟಿಯಾಗಿದೆ. ಅಷ್ಟೇ ಅಲ್ಲದೇ, ವಿಜಯ್​ ದೇವರಕೊಂಡ (Vijay Deverakonda) ಅವರ ಕುಟುಂಬದವರ ಜೊತೆಗೂ ರಶ್ಮಿಕಾ ಆಪ್ತತೆ ಹೊಂದಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಒಂದು ಘಟನೆ ನಡೆದಿದೆ. ವಿಜಯ್​ ದೇವರಕೊಂಡ ಅವರ ಸಹೋದರ ಆನಂದ್​ ದೇವರಕೊಂಡ (Anand Deverakonda) ನಟಿಸಿದ ‘ಬೇಬಿ’ ಸಿನಿಮಾಗೆ ರಶ್ಮಿಕಾ ಮಂದಣ್ಣ ಬೆಂಬಲ ಸೂಚಿಸಿದ್ದಾರೆ. ಪ್ರೀಮಿಯರ್ ಶೋ ನೋಡಲು ಹೋದ ರಶ್ಮಿಕಾ ಅವರು ಎಮೋಷನಲ್​ ಆಗಿ ಕಣ್ಣೀರು ಹಾಕಿದ್ದಾರೆ.

ವಿಜಯ್​ ದೇವರಕೊಂಡ ರೀತಿಯೇ ಆನಂದ್​ ದೇವರಕೊಂಡ ಕೂಡ ಹೀರೋ ಆಗಿ ಟಾಲಿವುಡ್​ನಲ್ಲಿ ಸಕ್ರಿಯರಾಗಿದ್ದಾರೆ. ಅವರ ವೃತ್ತಿಜೀವನಕ್ಕೆ ವಿಜಯ್​ ದೇವರಕೊಂಡ ಬೆಂಬಲವಾಗಿ ನಿಂತಿದ್ದಾರೆ. ‘ಬೇಬಿ’ ಸಿನಿಮಾ ಇಂದು (ಜುಲೈ 14) ಬಿಡುಗಡೆ ಆಗಿದೆ. ಬಹುತೇಕ ಎಲ್ಲರಿಂದ ಪಾಸಿಟಿವ್​ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗುರುವಾರ (ಜುಲೈ 13) ರಾತ್ರಿಯೇ ಈ ಸಿನಿಮಾದ ಪ್ರೀಮಿಯರ್​ ಶೋ ಏರ್ಪಡಿಸಲಾಗಿತ್ತು. ಅದರಲ್ಲಿ ವಿಜಯ್​ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಭಾಗವಹಿಸಿದ್ದಾರೆ.

ಇದನ್ನೂ ಓದಿ: Rashmika Mandanna: ರಶ್ಮಿಕಾ ಮಂದಣ್ಣ ಕೈಯಿಂದ ಮೊಬೈಲ್​ ಕಿತ್ತುಕೊಂಡ ಯುವಕ; ಹೇಗಿತ್ತು ನಟಿಯ ರಿಯಾಕ್ಷನ್​?

‘ಬೇಬಿ’ ಸಿನಿಮಾದಲ್ಲಿ ಲವ್​ ಸ್ಟೋರಿ ಇದೆ. ಅದು ರಶ್ಮಿಕಾ ಮಂದಣ್ಣ ಅವರಿಗೆ ತುಂಬ ಇಷ್ಟವಾಗಿದೆ. ಸಿನಿಮಾದ ಕೆಲವು ದೃಶ್ಯಗಳ ತುಂಬ ಭಾವುಕವಾಗಿವೆ. ಹಾಗಾಗಿ ಸಿನಿಮಾ ನೋಡುವಾಗ ರಶ್ಮಿಕಾ ಮಂದಣ್ಣ ಅವರು ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ. ಸಿನಿಮಾ ನೋಡಿ ಹೊರಬಂದ ಅವರು ಖುಷಿಯಿಂದ ಮಾತನಾಡಿದ್ದಾರೆ. ಸ್ಟಾರ್​ ನಟಿಯ ಬೆಂಬಲ ಸಿಕ್ಕಿರುವುದರಿಂದ ‘ಬೇಬಿ’ ಸಿನಿಮಾ ತಂಡಕ್ಕೆ ಸಂತೋಷ ಆಗಿದೆ. ಮೊದಲ ದಿನ ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರ ಎಷ್ಟು ಕಲೆಕ್ಷನ್​ ಮಾಡಿದೆ ಎಂಬ ಲೆಕ್ಕ ಶೀಘ್ರದಲ್ಲೇ ಸಿಗಲಿದೆ.

ಇದನ್ನೂ ಓದಿ: Rashmika Mandanna: ರಣಬೀರ್ ಕಪೂರ್ ಜೊತೆ ಆಪ್ತವಾಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ; ಇಲ್ಲಿದೆ ಫೋಟೋ ಆಲ್ಬಂ

ಸಾಯಿ ರಾಜೇಶ್​ ಅವರ ನಿರ್ದೇಶನದಲ್ಲಿ ‘ಬೇಬಿ’ ಸಿನಿಮಾ ಮೂಡಿಬಂದಿದೆ. ಆನಂದ್​ ದೇವರಕೊಂಡ ಮತ್ತು ವೈಷ್ಣವಿ ಚೈತನ್ಯ ಅವರು ಜೋಡಿಯಾಗಿ ಅಭಿನಯಿಸಿದ್ದಾರೆ. ಅವರಿಬ್ಬರ ಅಭಿನಯಕ್ಕೆ ವಿಜಯ್​ ದೇವರಕೊಂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಪ್ರಸಾದ್​ ಮಲ್ಟಿಪ್ಲೆಕ್ಸ್​’ನಲ್ಲಿ ಸಿನಿಮಾ ವೀಕ್ಷಿಸಿದ ಅವರು ಕೂಡ ಎಮೋಷನಲ್​ ಆಗಿದ್ದರು. ‘ಆನಂದ್​ ಮತ್ತು ವೈಷ್ಣವಿ ಚೈತನ್ಯ ಅವರು ನನ್ನನ್ನು ಎಮೋಷನಲ್​ ಆಗಿಸಿದ್ದಾರೆ. ಈ ಚಿತ್ರದ ಕುರಿತು ನಾನು ಮೂರ್ನಾಲ್ಕು ದಿನಗಳ ನಂತರ ಒಂದು ಇವೆಂಟ್​ನಲ್ಲಿ ಮಾತನಾಡುತ್ತೇನೆ’ ಎಂದಿದ್ದಾರೆ ವಿಜಯ್​ ದೇವರಕೊಂಡ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ