AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಶ್ಮಿಕಾ ಮಂದಣ್ಣ ಗಂಡ ವಿಜಯ್​ ದೇವರಕೊಂಡ ರೀತಿ ಇರಬೇಕು’: ನಿಜ ಎಂದ ನಟಿ

ತಮ್ಮನ್ನ ಮದುವೆ ಆಗುವ ವ್ಯಕ್ತಿ VD ರೀತಿ ಇರಬೇಕು ಎಂದು ನಟಿ ರಶ್ಮಿಕಾ ಮಂದಣ್ಣ ಅವರು ಒಪ್ಪಿಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಮಾಡಿರುವ ಕಮೆಂಟ್​ ಸಖತ್​ ವೈರಲ್​ ಆಗಿದೆ. ವಿಜಯ್​ ದೇವರಕೊಂಡ ಜೊತೆ ರಶ್ಮಿಕಾ ಮಂದಣ್ಣ ಮದುವೆ ಆಗುವ ಸಾಧ್ಯತೆ ದಟ್ಟವಾಗಿದೆ ಎಂಬುದಕ್ಕೆ ಈ ಕಮೆಂಟ್​ ಸಾಕ್ಷಿ ಎಂದು ಅಭಿಮಾನಿಗಳು ಅಭಿಪ್ರಾಯ ತಿಳಿಸುತ್ತಿದ್ದಾರೆ.

‘ರಶ್ಮಿಕಾ ಮಂದಣ್ಣ ಗಂಡ ವಿಜಯ್​ ದೇವರಕೊಂಡ ರೀತಿ ಇರಬೇಕು’: ನಿಜ ಎಂದ ನಟಿ
ರಶ್ಮಿಕಾ ಮಂದಣ್ಣ, ವಿಜಯ್​ ದೇವರಕೊಂಡ
ಮದನ್​ ಕುಮಾರ್​
|

Updated on: Feb 27, 2024 | 1:17 PM

Share

ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ (Vijay Devarakonda) ನಡುವೆ ಇರುವ ಆಪ್ತತೆ ಎಷ್ಟು ಎಂಬುದು ಎಲ್ಲರಿಗೂ ತಿಳಿದಿದೆ. ಅವರಿಬ್ಬರು ಅನೇಕ ಸಂದರ್ಭಗಳಲ್ಲಿ ಒಟ್ಟಿಗೆ ಕಾಲ ಕಳೆದಿದ್ದಾರೆ. ಆದರೆ ತಮ್ಮ ರಿಲೇಷನ್​ಶಿಪ್​ ಸ್ಟೇಟಸ್​ ಬಗ್ಗೆ ಅವರು ಬಹಿರಂಗವಾಗಿ ಹೇಳಿಕೆ ನೀಡಿಲ್ಲ. ಅಚ್ಚರಿ ಏನೆಂದರೆ, ಈಗ ರಶ್ಮಿಕಾ ಮಂದಣ್ಣ (Rashmika Mandanna) ಅವರು ಒಂದು ದೊಡ್ಡ ಸುಳಿವು ನೀಡುತ್ತಾರೆ. ಇದನ್ನು ನೋಡಿದ ಬಳಿಕ ವಿಜಯ್​ ದೇವರಕೊಂಡ ಅವರನ್ನು ರಶ್ಮಿಕಾ ಮಂದಣ್ಣ ಮದುವೆ (Rashmika Mandanna Marriage) ಆಗುವುದು ಖಚಿತ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ತಮ್ಮ ಭಾವಿ ಪತಿ ಹೇಗಿರಬೇಕು ಎಂಬ ಬಗ್ಗೆ ರಶ್ಮಿಕಾ ಮಾಡಿರುವ ಕಮೆಂಟ್​ ಸಖತ್​ ವೈರಲ್​ ಆಗುತ್ತಿದೆ.

ರಶ್ಮಿಕಾ ಮಂದಣ್ಣ ಅವರ ಹೆಸರಿನಲ್ಲಿ ಅನೇಕ ಫ್ಯಾನ್​ ಪೇಜ್​ಗಳು ಚಾಲ್ತಿಯಲ್ಲಿವೆ. ಆ ಪೈಕಿ ಒಂದು ಪೇಜ್​ನಲ್ಲಿ ವಿಶೇಷವಾದ ಪೋಸ್ಟ್​ ಮಾಡಲಾಗಿದೆ. ‘ರಶ್ಮಿಕಾ ಮಂದಣ್ಣ ಅವರನ್ನು ಮದುವೆ ಆಗುವವರಿಗೆ ಯಾವ ಗುಣಗಳು ಇರಬೇಕು? ರಶ್ಮಿಕಾ ನ್ಯಾಷನಲ್​ ಕ್ರಶ್​ ಆದ್ದರಿಂದ ಅವರ ಗಂಡ ಸ್ಪೆಷಲ್​ ಆಗಿರಬೇಕು. ಅವರ ಗಂಡ VD ರೀತಿ ಇರಬೇಕು. VD ಎಂದರೆ ವೇರಿ ಡೇರಿಂಗ್​. ಅವರನ್ನು ಕಾಪಾಡಬೇಕು. ರಶ್ಮಿಕಾ ಅವರನ್ನು ನಾವು ರಾಣಿ ಎಂದು ಕರೆಯುತ್ತೇವೆ. ಹಾಗಾಗಿ ಅವರನ್ನು ಮದುವೆ ಆಗುವವರು ರಾಜನ ರೀತಿ ಇರಬೇಕು’ ಎಂದು ಫ್ಯಾನ್​ ಪೇಜ್​ನಲ್ಲಿ ಪೋಸ್ಟ್​ ಮಾಡಿದ್ದಕ್ಕೆ ರಶ್ಮಿಕಾ ಮಂದಣ್ಣ ಅವರು ‘ಖಂಡಿತಾ ನಿಜ’ ಎಂದು ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ: ‘ಪುಷ್ಪ 2’ ಚಿತ್ರದ ಶೂಟಿಂಗ್​ ಮಧ್ಯೆ ರಶ್ಮಿಕಾ ಮಂದಣ್ಣ ಮಾಡಿದ ಕೆಲಸ ಇದು

ವಿಜಯ್​ ದೇವರಕೊಂಡ ಅವರನ್ನು ಅಭಿಮಾನಿಗಳು VD ಎಂದು ಕೂಡ ಕರೆಯುತ್ತಾರೆ. ಅದು ಗೊತ್ತಿದ್ದರೂ ಸಹ ರಶ್ಮಿಕಾ ಮಂದಣ್ಣ ಅವರು ಈ ಪೋಸ್ಟ್​ಗೆ ಖುಷಿಯಿಂದ ಕಮೆಂಟ್​ ಮಾಡಿದ್ದಾರೆ ಎಂದರೆ, ಮದುವೆಯ ವಿಚಾರ ಬಹುತೇಕ ಖಚಿತ ಎಂದು ಫ್ಯಾನ್ಸ್​ ಊಹಿಸಿದ್ದಾರೆ. ಕೆಲವೇ ದಿನಗಳ ಹಿಂದೆ ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ ಅವರ ನಿಶ್ಚಿತಾರ್ಥದ ಬಗ್ಗೆ ಗಾಸಿಪ್ ಹಬ್ಬಿತ್ತು. ಅದನ್ನು ವಿಜಯ್​ ದೇವರಕೊಂಡ ಅವರು ತಳ್ಳಿಹಾಕಿದ್ದರು.

ವೈರಲ್​ ಪೋಸ್ಟ್​:

‘ಗೀತ ಗೋವಿಂದಂ’ ಸಿನಿಮಾದಲ್ಲಿ ಮೊದಲ ಬಾರಿಗೆ ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ ನಟಿಸಿದರು. ಆ ಬಳಿಕ ಅವರ ನಡುವೆ ಆಪ್ತತೆ ಬೆಳೆಯಿತು. ನಂತರ ‘ಡಿಯರ್​ ಕಾಮ್ರೇಡ್​’ ಚಿತ್ರದಲ್ಲೂ ಅವರು ಜೋಡಿಯಾಗಿ ಅಭಿನಯಿಸಿದರು. ಅನೇಕ ಸಂದರ್ಭಗಳಲ್ಲಿ ಇಬ್ಬರೂ ಜೊತೆಯಾಗಿ ಓಡಾಡಿದ್ದಾರೆ. ವೃತ್ತಿಜೀವನದಲ್ಲಿ ಒಬ್ಬರಿಗೊಬ್ಬರು ಬೆಂಬಲವಾಗಿ ನಿಂತಿದ್ದಾರೆ. ಅವರಿಬ್ಬರು ರಿಯಲ್​ ಲೈಫ್​ನಲ್ಲಿಯೂ ಜೋಡಿಯಾಗಲಿ ಎಂದು ಫ್ಯಾನ್ಸ್​ ಬಯಸಿದ್ದಾರೆ. ರಶ್ಮಿಕಾ ಮಂದಣ್ಣ ಮಾಡಿರುವ ಕಮೆಂಟ್​ಗೆ ವಿಜಯ್​ ದೇವರಕೊಂಡ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​