AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ. ಎನ್​ಟಿಆರ್​, ಪ್ರಶಾಂತ್ ನೀಲ್ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಐಟಂ ಡ್ಯಾನ್ಸ್?

ಪ್ರಶಾಂತ್ ನೀಲ್ ಅವರ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್​ ನಟಿಸುತ್ತಿದ್ದಾರೆ. ಇದೇ ಸಿನಿಮಾದ ಐಟಂ ಸಾಂಗ್ ಬಗ್ಗೆ ಒಂದು ಸ್ಪೆಷಲ್ ಗಾಸಿಪ್ ಹರಿದಾಡುತ್ತಿದೆ. ರಶ್ಮಿಕಾ ಮಂದಣ್ಣ ಅವರಿಗೆ ಈ ಚಿತ್ರತಂಡದಿಂದ ಆಫರ್​ ನೀಡಲಾಗಿದೆಯಂತೆ. ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿರುವ ಈ ಸಿನಿಮಾಗೆ ಬಿರುಸಿನಿಂದ ಶೂಟಿಂಗ್ ನಡೆಯುತ್ತಿದೆ.

ಜೂ. ಎನ್​ಟಿಆರ್​, ಪ್ರಶಾಂತ್ ನೀಲ್ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಐಟಂ ಡ್ಯಾನ್ಸ್?
Rashmika Mandanna, Prashanth Neel, Jr Ntr
ಮದನ್​ ಕುಮಾರ್​
|

Updated on: May 26, 2025 | 6:23 PM

Share

ಪ್ರಶಾಂತ್ ನೀಲ್ ಮತ್ತು ಜೂನಿಯರ್ ಎನ್​ಟಿಆರ್ (Jr NTR) ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಹೈವೋಲ್ಟೇಜ್ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಇರುವ ನಿರೀಕ್ಷೆ ಅಷ್ಟಿಷ್ಟಲ್ಲ. ಈ ಸಿನಿಮಾಗೆ ಈಗ ಚಿತ್ರೀಕರಣ ನಡೆಯುತ್ತಿದೆ. ‘ಕೆಜಿಎಫ್: ಚಾಪ್ಟರ್ 1’, ‘ಕೆಜಿಎಫ್: ಚಾಪ್ಟರ್ 2’, ‘ಸಲಾರ್’ ಸಿನಿಮಾಗಳ ಯಶಸ್ಸಿನ ಬಳಿಕ ಪ್ರಶಾಂತ್ ನೀಲ್ (Prashanth Neel) ಅವರು ಈ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಸಿನಿಮಾದ ಪಾತ್ರವರ್ಗದ ಬಗ್ಗೆ ಒಂದು ಇಂಟರೆಸ್ಟಿಂಗ್ ಮಾಹಿತಿ ಕೇಳಿಬಂದಿದೆ. ವರದಿಗಳ ಪ್ರಕಾರ, ಈ ಸಿನಿಮಾದಲ್ಲಿ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಕೂಡ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಅದು ಕೂಡ ಐಟಂ ಡ್ಯಾನ್ಸ್​ನಲ್ಲಿ ಎಂಬುದು ವಿಶೇಷ.

ಹೀರೋಯಿನ್​​ಗಳು ಐಟಂ ಡ್ಯಾನ್ಸ್ ಮಾಡುವುದು ಹೊಸದೇನಲ್ಲ. ಆದರೆ ನಟಿ ರಶ್ಮಿಕಾ ಮಂದಣ್ಣ ಅವರು ಈವರೆಗೂ ಅಂಥ ಹಾಡಿನಲ್ಲಿ ಕಾಣಿಸಿಕೊಂಡಿಲ್ಲ. ಜೂನಿಯರ್​ ಎನ್​ಟಿಆರ್ ಮತ್ತು ಪ್ರಶಾಂತ್ ನೀಲ್ ಅವರ ಸಿನಿಮಾದಲ್ಲಿ ಐಟಂ ಡ್ಯಾನ್ಸ್ ಮಾಡಲು ರಶ್ಮಿಕಾ ಮಂದಣ್ಣಗೆ ಆಫರ್ ನೀಡಲಾಗಿದೆ ಎಂದು ‘ಫಿಲ್ಮ್​ ಫೇರ್’ ವರದಿ ಮಾಡಿದೆ.

ಈ ಹಾಡು ತುಂಬ ಚೆನ್ನಾಗಿ ಮೂಡಿಬರಬೇಕು ಎಂಬುದು ಚಿತ್ರತಂಡದ ಉದ್ದೇಶ. ಯಾವುದೇ ಹೀರೋಯಿನ್ ಮೊದಲ ಬಾರಿಗೆ ಐಟಂ ಡ್ಯಾನ್ಸ್ ಮಾಡಿದರೆ ಜನರ ನಿರೀಕ್ಷೆ ಹೆಚ್ಚಿರುತ್ತದೆ. ಅಂಥ ಹಾಡಿಗೆ ರೀಚ್ ಕೂಡ ಜಾಸ್ತಿ ಇರುತ್ತದೆ. ‘ಪುಷ್ಪ’ ಸಿನಿಮಾದಲ್ಲಿ ಸಮಂತಾ ರುತ್ ಪ್ರಭು ಅವರು ಐಟಂ ಡ್ಯಾನ್ಸ್ ಮಾಡಿದ್ದೇ ಈ ಮಾತಿಗೆ ಬೆಸ್ಟ್ ಉದಾಹರಣೆ. ಈಗ ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಕೂಡ ಅಂತಹ ಮ್ಯಾಜಿಕ್ ಮಾಡುತ್ತಾರಾ ಎಂಬುದನ್ನು ಕಾದುನೋಡಬೇಕು.

ಇದನ್ನೂ ಓದಿ
Image
‘ನನ್ನ ತಂಗಿಗೆ ಸವಲತ್ತು ಸಿಗಬಾರದು’; ರಶ್ಮಿಕಾ ಮಂದಣ್ಣ ಹೀಗೆ ಅಂದಿದ್ಯಾಕೆ?
Image
ರಶ್ಮಿಕಾ ಮಂದಣ್ಣ ಹಿಂಗೆಲ್ಲ ಮಾಡಿದರೂ ಕ್ಯೂಟ್ ಅಂತಾರೆ ಅಭಿಮಾನಿಗಳು
Image
‘ನಾನು ಹೈದರಾಬಾದ್​ನವಳು’ ಎಂದು ಹೆಮ್ಮೆಯಿಂದ ಹೇಳಿದ ರಶ್ಮಿಕಾ
Image
‘ಎಲ್ಲರಿಗೂ ಆ ವಿಚಾರ ಗೊತ್ತಿದೆ’; ಮದುವೆ ಬಗ್ಗೆ ನೇರವಾಗಿ ಮಾತನಾಡಿದ ರಶ್ಮಿಕಾ

ಐಟಂ ಡ್ಯಾನ್ಸ್ ಬಗ್ಗೆ ರಶ್ಮಿಕಾ ಮಂದಣ್ಣ ಅವರ ಜೊತೆ ಮಾತುಕಥೆ ಆಗಿದೆಯೋ ಇಲ್ಲವೋ ಎಂದು ಚಿತ್ರತಂಡದವರು ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಆದರೂ ಗಾಸಿಪ್ ಹಬ್ಬಿದೆ. ಬೆಂಕಿ ಇಲ್ಲದೇ ಹೊಗೆ ಆಡುವುದಿಲ್ಲ. ಹಾಗಾಗಿ ಫ್ಯಾನ್ಸ್ ಈ ಗಾಸಿಪ್​ ಕೇಳಿ ಖುಷಿ ಆಗಿದ್ದಾರೆ. ಈ ಸಿನಿಮಾಗೆ ಇನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ಕೆಲವರು ಈ ಸಿನಿಮಾದ ಟೈಟಲ್ ‘ಡ್ರ್ಯಾಗನ್’ ಎಂದು ಹೇಳುತ್ತಿದ್ದಾರೆ.

ಇದನ್ನೂ ಓದಿ: ರಶ್ಮಿಕಾ, ದೀಪಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ

ರಶ್ಮಿಕಾ ಮಂದಣ್ಣ ಅವರಿಗೆ ಕೈ ತುಂಬ ಆಫರ್​ಗಳಿವೆ. ಬ್ಯಾಕ್ ಟು ಬ್ಯಾಕ್ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಅವರು ಲಕ್ಕಿ ಹೀರೋಯಿನ್ ಆಗಿದ್ದಾರೆ. ಹಾಗಾಗಿ ಅವರಿಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಡಿಮ್ಯಾಂಡ್ ಇದೆ. ಈ ಸಂದರ್ಭದಲ್ಲಿ ಅವರು ಐಟಂ ಡ್ಯಾನ್ಸ್ ಮಾಡಲು ಒಪ್ಪಿಕೊಳ್ಳುತ್ತಾರೋ ಇಲ್ಲವೋ ಎಂಬುದನ್ನು ಸದ್ಯದಲ್ಲೇ ತಿಳಿಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ