AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣ ಮಡಿಲಿಗೆ ಮತ್ತೊಂದು ಬಿಗ್​ ಆಫರ್​; ಸ್ಟಾರ್​ ನಟನ ಚಿತ್ರಕ್ಕೆ ಇವರೇ ಹೀರೋಯಿನ್​?

ಈ ಚಿತ್ರ ತೆಲುಗು ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ನಿರ್ಮಾಣ ಆಗಲಿದೆ. ಅದಕ್ಕೆ ರಶ್ಮಿಕಾ ನಾಯಕಿಯಾದರೆ ಎರಡೂ ಭಾಷೆಯ ಪ್ರೇಕ್ಷಕರನ್ನು ಸೆಳೆಯಬಹುದು ಎಂಬ ಲೆಕ್ಕಾಚಾರದಲ್ಲಿ ನಿರ್ಮಾಪಕರು ಇದ್ದಂತಿದೆ.

ರಶ್ಮಿಕಾ ಮಂದಣ್ಣ ಮಡಿಲಿಗೆ ಮತ್ತೊಂದು ಬಿಗ್​ ಆಫರ್​; ಸ್ಟಾರ್​ ನಟನ ಚಿತ್ರಕ್ಕೆ ಇವರೇ ಹೀರೋಯಿನ್​?
ರಶ್ಮಿಕಾ ಮಂದಣ್ಣ
TV9 Web
| Edited By: |

Updated on: Jul 30, 2021 | 9:31 AM

Share

ಚಿತ್ರರಂಗದಲ್ಲಿ ನಟಿ ರಶ್ಮಿಕಾ ಮಂದಣ್ಣ (Rashmika Mandanna) ನಾಗಾಲೋಟ ಮುಂದುವರಿಸಿದ್ದಾರೆ. ಪ್ರತಿ ಸಿನಿಮಾದಲ್ಲೂ ಅವರ ಚಾರ್ಮ್​ ಹೆಚ್ಚುತ್ತಿದೆ. ದಕ್ಷಿಣ ಭಾರತದಲ್ಲಿ ಈಗ ಎಲ್ಲ ಸ್ಟಾರ್​ ನಟರ ಸಿನಿಮಾಗಳಿಗೂ ರಶ್ಮಿಕಾ ಅವರೇ ನಾಯಕಿ ಆಗಬೇಕು ಎಂಬಷ್ಟು ಬೇಡಿಕೆ ಸೃಷ್ಟಿ ಆಗಿದೆ. ಈ ನಡುವೆ ಅವರು ಹೊಸ ಪ್ರಾಜೆಕ್ಟ್​ಗಳನ್ನು ಅಳೆದು-ತೂಗಿ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಬಾಲಿವುಡ್​ನಲ್ಲೂ ಅವರಿಗೆ ಸಖತ್​ ಬೇಡಿಕೆ ಇರುವ ಕಾರಣ ದಕ್ಷಿಣದಲ್ಲಿ ತುಂಬ ಚ್ಯೂಸಿ ಆಗಿದ್ದಾರೆ. ಅವರ ಮುಂದಿನ ಸಿನಿಮಾ ಬಗ್ಗೆ ಹೊಸ ಗುಸುಗುಸು ಕೇಳಿಬಂದಿದೆ.

ಕನ್ನಡದಲ್ಲಿ ಮಿಂಚಿದ ಬಳಿಕ ರಶ್ಮಿಕಾಗೆ ತೆಲುಗು ಚಿತ್ರರಂಗದಲ್ಲಿ ಭರ್ಜರಿ ಸ್ವಾಗತ ಸಿಕ್ಕಿತು. ಅಲ್ಲಿ​ ಸೂಪರ್​ ಹಿಟ್​ ಸಿನಿಮಾ ನೀಡಿದ ನಂತರ ತಮಿಳಿನಿಂದಲೂ ಆಹ್ವಾನ ಬಂತು. ಕಾಲಿವುಡ್​ನಲ್ಲಿ ಕಾರ್ತಿ ಜೊತೆ ಸುಲ್ತಾನ್​ ಸಿನಿಮಾ ಮಾಡಿದ ಬಳಿಕ ತಮಿಳುನಾಡಿನಲ್ಲಿ ರಶ್ಮಿಕಾ ಹವಾ ಹೆಚ್ಚಾಗಿದೆ. ಹಾಗಾಗಿ ಮತ್ತೊಂದು ಬಹುನಿರೀಕ್ಷಿತ ಕಾಲಿವುಡ್​ ಚಿತ್ರಕ್ಕೆ ರಶ್ಮಿಕಾ ಅವರನ್ನೇ ನಾಯಕಿಯನ್ನಾಗಿ ಆಯ್ಕೆ ಮಾಡಿಕೊಳ್ಳಲು ಮಾತುಕತೆ ನಡೆಯುತ್ತಿದೆ ಎನ್ನಲಾಗಿದೆ.

ತಮಿಳು ನಟ ಶಿವಕಾರ್ತಿಕೇಯನ್​ ಅವರು ಈಗ ತೆಲುಗಿನಲ್ಲೂ ಒಂದು ಸಿನಿಮಾ ಮಾಡಲಿದ್ದಾರೆ. ಆ ಚಿತ್ರ ತೆಲುಗು ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ನಿರ್ಮಾಣ ಆಗಲಿದೆ. ಅದಕ್ಕೆ ರಶ್ಮಿಕಾ ನಾಯಕಿಯಾದರೆ ಎರಡೂ ಭಾಷೆಯ ಪ್ರೇಕ್ಷಕರನ್ನು ಸೆಳೆಯಬಹುದು ಎಂಬ ಲೆಕ್ಕಾಚಾರದಲ್ಲಿ ನಿರ್ಮಾಪಕರು ಇದ್ದಂತಿದೆ. ಈ ಚಿತ್ರಕ್ಕೆ ‘ಜಾತಿ ರತ್ನಾಲು’ ಖ್ಯಾತಿಯ ಕೆ.ವಿ. ಅನುದೀಪ್ ನಿರ್ದೇಶನ ಮಾಡಲಿದ್ದಾರೆ. ರಶ್ಮಿಕಾ ಹೆಸರು ಕೇಳಿಬಂದಿರುವ ಬಗ್ಗೆ ಚಿತ್ರತಂಡದ ಕಡೆಯಿಂದಲೇ ಈಗ ಸ್ಪಷ್ಟನೆ ಸಿಗಬೇಕಿದೆ.

ಬಾಲಿವುಡ್​ನಲ್ಲಿ ರಶ್ಮಿಕಾ ಬ್ಯುಸಿ ಆಗಿದ್ದಾರೆ. ಸಿದ್ಧಾರ್ಥ್​ ಮಲ್ಹೋತ್ರಾ ಜೊತೆಗೆ ಅವರು ‘ಮಿಷನ್​ ಮಜ್ನು’ ಸಿನಿಮಾ ಮಾಡುತ್ತಿದ್ದಾರೆ. ಅದು ಅವರು ಮೊದಲ ಹಿಂದಿ ಪ್ರಾಜೆಕ್ಟ್​. ಅದರ ಜೊತೆಗೆ ‘ಗುಡ್​ ಬೈ’ ಚಿತ್ರದಲ್ಲಿ ನಟಿಸುತ್ತಿದ್ದು, ಅದರಲ್ಲಿ ಅಮಿತಾಭ್​ ಬಚ್ಚನ್​ ಕೂಡ ಅಭಿನಯಿಸುತ್ತಿರುವುದು ವಿಶೇಷ. ಈ ಎಲ್ಲ ಪ್ರಾಜೆಕ್ಟ್​ಗಳ ಸಲುವಾಗಿ ಪದೇಪದೇ ಮುಂಬೈಗೆ ತೆರಳುವ ರಶ್ಮಿಕಾ ಅವರು ಅಲ್ಲಿಯೇ ಒಂದು ಹೊಸ ಅಪಾರ್ಟ್​ಮೆಂಟ್​ ಖರೀದಿಸಿದ್ದಾರೆ.

ಇದನ್ನೂ ಓದಿ:

‘ಆತ ಯಾರು ದಯವಿಟ್ಟು ಹೇಳಿ’; ಹುಡುಗನ ವಿಚಾರದಲ್ಲಿ ರಶ್ಮಿಕಾ ಮಂದಣ್ಣ ದುಂಬಾಲು ಬಿದ್ದ ಅಭಿಮಾನಿಗಳು

ರಶ್ಮಿಕಾ ಮಂದಣ್ಣ-ಅಮಿತಾಭ್​ ಬಚ್ಚನ್​ ಫೋಟೋ ಲೀಕ್​; ‘ಗುಡ್​ಬೈ’ ತಂಡದಲ್ಲಿ ಏನಾಗ್ತಿದೆ?

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?