AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣ ಮಡಿಲಿಗೆ ಮತ್ತೊಂದು ಬಿಗ್​ ಆಫರ್​; ಸ್ಟಾರ್​ ನಟನ ಚಿತ್ರಕ್ಕೆ ಇವರೇ ಹೀರೋಯಿನ್​?

ಈ ಚಿತ್ರ ತೆಲುಗು ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ನಿರ್ಮಾಣ ಆಗಲಿದೆ. ಅದಕ್ಕೆ ರಶ್ಮಿಕಾ ನಾಯಕಿಯಾದರೆ ಎರಡೂ ಭಾಷೆಯ ಪ್ರೇಕ್ಷಕರನ್ನು ಸೆಳೆಯಬಹುದು ಎಂಬ ಲೆಕ್ಕಾಚಾರದಲ್ಲಿ ನಿರ್ಮಾಪಕರು ಇದ್ದಂತಿದೆ.

ರಶ್ಮಿಕಾ ಮಂದಣ್ಣ ಮಡಿಲಿಗೆ ಮತ್ತೊಂದು ಬಿಗ್​ ಆಫರ್​; ಸ್ಟಾರ್​ ನಟನ ಚಿತ್ರಕ್ಕೆ ಇವರೇ ಹೀರೋಯಿನ್​?
ರಶ್ಮಿಕಾ ಮಂದಣ್ಣ
TV9 Web
| Edited By: |

Updated on: Jul 30, 2021 | 9:31 AM

Share

ಚಿತ್ರರಂಗದಲ್ಲಿ ನಟಿ ರಶ್ಮಿಕಾ ಮಂದಣ್ಣ (Rashmika Mandanna) ನಾಗಾಲೋಟ ಮುಂದುವರಿಸಿದ್ದಾರೆ. ಪ್ರತಿ ಸಿನಿಮಾದಲ್ಲೂ ಅವರ ಚಾರ್ಮ್​ ಹೆಚ್ಚುತ್ತಿದೆ. ದಕ್ಷಿಣ ಭಾರತದಲ್ಲಿ ಈಗ ಎಲ್ಲ ಸ್ಟಾರ್​ ನಟರ ಸಿನಿಮಾಗಳಿಗೂ ರಶ್ಮಿಕಾ ಅವರೇ ನಾಯಕಿ ಆಗಬೇಕು ಎಂಬಷ್ಟು ಬೇಡಿಕೆ ಸೃಷ್ಟಿ ಆಗಿದೆ. ಈ ನಡುವೆ ಅವರು ಹೊಸ ಪ್ರಾಜೆಕ್ಟ್​ಗಳನ್ನು ಅಳೆದು-ತೂಗಿ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಬಾಲಿವುಡ್​ನಲ್ಲೂ ಅವರಿಗೆ ಸಖತ್​ ಬೇಡಿಕೆ ಇರುವ ಕಾರಣ ದಕ್ಷಿಣದಲ್ಲಿ ತುಂಬ ಚ್ಯೂಸಿ ಆಗಿದ್ದಾರೆ. ಅವರ ಮುಂದಿನ ಸಿನಿಮಾ ಬಗ್ಗೆ ಹೊಸ ಗುಸುಗುಸು ಕೇಳಿಬಂದಿದೆ.

ಕನ್ನಡದಲ್ಲಿ ಮಿಂಚಿದ ಬಳಿಕ ರಶ್ಮಿಕಾಗೆ ತೆಲುಗು ಚಿತ್ರರಂಗದಲ್ಲಿ ಭರ್ಜರಿ ಸ್ವಾಗತ ಸಿಕ್ಕಿತು. ಅಲ್ಲಿ​ ಸೂಪರ್​ ಹಿಟ್​ ಸಿನಿಮಾ ನೀಡಿದ ನಂತರ ತಮಿಳಿನಿಂದಲೂ ಆಹ್ವಾನ ಬಂತು. ಕಾಲಿವುಡ್​ನಲ್ಲಿ ಕಾರ್ತಿ ಜೊತೆ ಸುಲ್ತಾನ್​ ಸಿನಿಮಾ ಮಾಡಿದ ಬಳಿಕ ತಮಿಳುನಾಡಿನಲ್ಲಿ ರಶ್ಮಿಕಾ ಹವಾ ಹೆಚ್ಚಾಗಿದೆ. ಹಾಗಾಗಿ ಮತ್ತೊಂದು ಬಹುನಿರೀಕ್ಷಿತ ಕಾಲಿವುಡ್​ ಚಿತ್ರಕ್ಕೆ ರಶ್ಮಿಕಾ ಅವರನ್ನೇ ನಾಯಕಿಯನ್ನಾಗಿ ಆಯ್ಕೆ ಮಾಡಿಕೊಳ್ಳಲು ಮಾತುಕತೆ ನಡೆಯುತ್ತಿದೆ ಎನ್ನಲಾಗಿದೆ.

ತಮಿಳು ನಟ ಶಿವಕಾರ್ತಿಕೇಯನ್​ ಅವರು ಈಗ ತೆಲುಗಿನಲ್ಲೂ ಒಂದು ಸಿನಿಮಾ ಮಾಡಲಿದ್ದಾರೆ. ಆ ಚಿತ್ರ ತೆಲುಗು ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ನಿರ್ಮಾಣ ಆಗಲಿದೆ. ಅದಕ್ಕೆ ರಶ್ಮಿಕಾ ನಾಯಕಿಯಾದರೆ ಎರಡೂ ಭಾಷೆಯ ಪ್ರೇಕ್ಷಕರನ್ನು ಸೆಳೆಯಬಹುದು ಎಂಬ ಲೆಕ್ಕಾಚಾರದಲ್ಲಿ ನಿರ್ಮಾಪಕರು ಇದ್ದಂತಿದೆ. ಈ ಚಿತ್ರಕ್ಕೆ ‘ಜಾತಿ ರತ್ನಾಲು’ ಖ್ಯಾತಿಯ ಕೆ.ವಿ. ಅನುದೀಪ್ ನಿರ್ದೇಶನ ಮಾಡಲಿದ್ದಾರೆ. ರಶ್ಮಿಕಾ ಹೆಸರು ಕೇಳಿಬಂದಿರುವ ಬಗ್ಗೆ ಚಿತ್ರತಂಡದ ಕಡೆಯಿಂದಲೇ ಈಗ ಸ್ಪಷ್ಟನೆ ಸಿಗಬೇಕಿದೆ.

ಬಾಲಿವುಡ್​ನಲ್ಲಿ ರಶ್ಮಿಕಾ ಬ್ಯುಸಿ ಆಗಿದ್ದಾರೆ. ಸಿದ್ಧಾರ್ಥ್​ ಮಲ್ಹೋತ್ರಾ ಜೊತೆಗೆ ಅವರು ‘ಮಿಷನ್​ ಮಜ್ನು’ ಸಿನಿಮಾ ಮಾಡುತ್ತಿದ್ದಾರೆ. ಅದು ಅವರು ಮೊದಲ ಹಿಂದಿ ಪ್ರಾಜೆಕ್ಟ್​. ಅದರ ಜೊತೆಗೆ ‘ಗುಡ್​ ಬೈ’ ಚಿತ್ರದಲ್ಲಿ ನಟಿಸುತ್ತಿದ್ದು, ಅದರಲ್ಲಿ ಅಮಿತಾಭ್​ ಬಚ್ಚನ್​ ಕೂಡ ಅಭಿನಯಿಸುತ್ತಿರುವುದು ವಿಶೇಷ. ಈ ಎಲ್ಲ ಪ್ರಾಜೆಕ್ಟ್​ಗಳ ಸಲುವಾಗಿ ಪದೇಪದೇ ಮುಂಬೈಗೆ ತೆರಳುವ ರಶ್ಮಿಕಾ ಅವರು ಅಲ್ಲಿಯೇ ಒಂದು ಹೊಸ ಅಪಾರ್ಟ್​ಮೆಂಟ್​ ಖರೀದಿಸಿದ್ದಾರೆ.

ಇದನ್ನೂ ಓದಿ:

‘ಆತ ಯಾರು ದಯವಿಟ್ಟು ಹೇಳಿ’; ಹುಡುಗನ ವಿಚಾರದಲ್ಲಿ ರಶ್ಮಿಕಾ ಮಂದಣ್ಣ ದುಂಬಾಲು ಬಿದ್ದ ಅಭಿಮಾನಿಗಳು

ರಶ್ಮಿಕಾ ಮಂದಣ್ಣ-ಅಮಿತಾಭ್​ ಬಚ್ಚನ್​ ಫೋಟೋ ಲೀಕ್​; ‘ಗುಡ್​ಬೈ’ ತಂಡದಲ್ಲಿ ಏನಾಗ್ತಿದೆ?

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!