ಶ್ವಾನಗಳ ಮೇಲೆ ನಟಿ ರಶ್ಮಿಕಾ ಮಂದಣ್ಣಗೆ ಸಖತ್ ಪ್ರೀತಿ; ಇಲ್ಲಿದೆ ವಿಡಿಯೋ ಸಾಕ್ಷಿ

ರಶ್ಮಿಕಾ ಮಂದಣ್ಣ ಅವರು ಎರಡು ಶ್ವಾನಗಳನ್ನು ಸಾಕಿದ್ದಾರೆ. ಈ ಶ್ವಾನಗಳು ಮರಿ ಇದ್ದಾಗ ಹೇಗೆ ಟ್ರೇನ್ ಮಾಡಲಾಗಿತ್ತು ಎಂಬುದನ್ನು ರಶ್ಮಿಕಾ ಮಂದಣ್ಣ ಅವರು ವಿಡಿಯೋ ಮೂಲಕ ತೋರಿಸಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ

ಶ್ವಾನಗಳ ಮೇಲೆ ನಟಿ ರಶ್ಮಿಕಾ ಮಂದಣ್ಣಗೆ ಸಖತ್ ಪ್ರೀತಿ; ಇಲ್ಲಿದೆ ವಿಡಿಯೋ ಸಾಕ್ಷಿ
ರಶ್ಮಿಕಾ
Follow us
|

Updated on: Apr 12, 2024 | 11:11 AM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ರಶ್ಮಿಕಾಗೆ ಪ್ರಾಣಿಗಳ ಬಗ್ಗೆ ವಿಶೇಷ ಪ್ರೀತಿ ಇದೆ. ಅವರು ಆಗಾಗ ತಮ್ಮ ಶ್ವಾನಗಳ ಜೊತೆ ಇರೋ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಹಂಚಿಕೊಂಡಿರುವ ಹೊಸ ವಿಡಿಯೋ ಸಖತ್ ವೈರಲ್ ಆಗಿದೆ. ಇದರಿಂದ ರಶ್ಮಿಕಾ ಅವರಿಗೆ ಪ್ರಾಣಿಗಳ ಬಗ್ಗೆ ಎಷ್ಟು ಪ್ರೀತಿ ಎಂಬುದು ಗೊತ್ತಾಗಿದೆ.

ರಶ್ಮಿಕಾ ಮಂದಣ್ಣ ಅವರು ಎರಡು ಶ್ವಾನಗಳನ್ನು ಸಾಕಿದ್ದಾರೆ. ಈ ಶ್ವಾನಗಳು ಮರಿ ಇದ್ದಾಗ ಹೇಗೆ ಟ್ರೇನ್ ಮಾಡಲಾಗಿತ್ತು ಎಂಬುದನ್ನು ರಶ್ಮಿಕಾ ಮಂದಣ್ಣ ಅವರು ವಿಡಿಯೋ ಮೂಲಕ ತೋರಿಸಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ. ರಶ್ಮಿಕಾ ಅವರು ಶ್ವಾನಗಳನ್ನು ಪ್ರಿತಿಯಿಂದ ನೋಡಿಕೊಳ್ಳುತ್ತಾರೆ. ಆಗಾಗ ಅವುಗಳ ಫೋಟೋಗಳನ್ನು ರಶ್ಮಿಕಾ ಹಂಚಿಕೊಳ್ಳುತ್ತಾರೆ.

ನಟಿ ರಶ್ಮಿಕಾ ಮಂದಣ್ಣ ಅವರು ತಮ್ಮ ಬಗ್ಗೆ ಏನಾದರೂ ವದಂತಿ ಹುಟ್ಟಿದರೆ ಅದನ್ನು ಸಹಿಸಿಕೊಳ್ಳುತ್ತಾರೆ. ಆದರೆ, ಶ್ವಾನಗಳ ಬಗ್ಗೆ ಯಾರಾದರೂ ಮಾತನಾಡಿದರೆ ಅವರಿಗೆ ಅದು ಇಷ್ಟ ಆಗುವುದಿಲ್ಲ. ಈ ಮೊದಲು ರಶ್ಮಿಕಾ ಶ್ವಾನದ ಬಗ್ಗೆ ಹೀಗೊಂದು ಸುದ್ದಿ ಹುಟ್ಟಿಕೊಂಡಿತ್ತು. ‘ರಶ್ಮಿಕಾ ತಮ್ಮ ಜೊತೆ ಶ್ವಾನಕ್ಕೂ ಟಿಕೆಟ್ ಬುಕ್ ಮಾಡುವಂತೆ ನಿರ್ಮಾಪಕರ ಬಳಿ ಬೇಡಿಕೆ ಇಡುತ್ತಿದ್ದಾರೆ. ಇದರಿಂದ ನಿರ್ಮಾಪಕರಿಗೆ ಹೊರೆ ಆಗುತ್ತಿದೆ’ ಎಂದು ವರದಿ ಆಗಿತ್ತು. ಇದನ್ನು ರಶ್ಮಿಕಾ ಖಂಡಿಸಿದ್ದರು. ಇದು ಸುಳ್ಳು ಎಂದು ಅವರು ಸ್ಪಷ್ಟನೆ ನೀಡಿದ್ದರು.

ರಶ್ಮಿಕಾ ವಿಡಿಯೋದ ಸ್ಕ್ರೀನ್​ಶಾಟ್

ಇದನ್ನೂ ಓದಿ: ಹೊಸ ಅವತಾರದಲ್ಲಿ ಬಂದ ರಶ್ಮಿಕಾ ಮಂದಣ್ಣ; ಬರ್ತ್​​ಡೇಗೆ ಪೋಸ್ಟರ್ ಗಿಫ್ಟ್

ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆಗೆ ಅವರು ‘ರೇನ್​ಬೋ’, ‘ದಿ ಗರ್ಲ್​ಫ್ರೆಂಡ್’ ಮೊದಲಾದ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಆಗಸ್ಟ್ 15ರಂದು ರಿಲೀಸ್ ಆಗುತ್ತಿದೆ. ಸುಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ