AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಮಿಲಾನ್ ಫ್ಯಾಷನ್​ ವೀಕ್​​ನಲ್ಲಿ ಬಿಟಿಎಸ್​ ನಾಯಕನ ಭೇಟಿ ಮಾಡಲಿದ್ದಾರೆ ರಶ್ಮಿಕಾ ಮಂದಣ್ಣ?

ಬಿಟಿಎಸ್ ಆರ್ಮಿಗೆ ವಿಶ್ವಾದ್ಯಂತ ಫ್ಯಾನ್ಸ್ ಇದ್ದಾರೆ. ರಶ್ಮಿಕಾ ಕೂಡ ಬಿಟಿಎಸ್​ನ ಅಭಿಮಾನಿ. ಈಗ ಕಿಮ್​ ನಾಮ್​ಜೂನ್ ಹಾಗೂ ರಶ್ಮಿಕಾ ಒಂದೇ ವೇದಿಕೆಗೆ ತೆರಳುತ್ತಿರುವುದರಿಂದ ಪರಸ್ಪರ ಇಬ್ಬರ ಭೇಟಿ ಆಗುವ ಸಾಧ್ಯತೆ ಇದೆ.

Rashmika Mandanna: ಮಿಲಾನ್ ಫ್ಯಾಷನ್​ ವೀಕ್​​ನಲ್ಲಿ ಬಿಟಿಎಸ್​ ನಾಯಕನ ಭೇಟಿ ಮಾಡಲಿದ್ದಾರೆ ರಶ್ಮಿಕಾ ಮಂದಣ್ಣ?
ರಶ್ಮಿಕಾ-ಕಿಮ್ ನಾಮ್​ಜೂನ್
ರಾಜೇಶ್ ದುಗ್ಗುಮನೆ
|

Updated on: Feb 24, 2023 | 11:48 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಇದೆ. ಹಲವು ಭಾಷೆಗಳಲ್ಲಿ ರಶ್ಮಿಕಾಗೆ ಅಭಿಮಾನಿಗಳಿದ್ದಾರೆ. ಈಗ ರಶ್ಮಿಕಾ ಮಂದಣ್ಣ ಅವರು ಮಿಲಾನ್ ಫ್ಯಾಷನ್ ವೀಕ್​ಗಾಗಿ ಇಟಲಿಗೆ ತೆರಳಿದ್ದಾರೆ. ಈ ವೇಳೆ ರಶ್ಮಿಕಾ ಮಂದಣ್ಣ ಅವರು ಬಿಟಿಎಸ್​ ನಾಯಕ ಕಿಮ್ ನಾಮ್​ಜೂನ್ (Kim Namjoon) ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಈ ವಿಚಾರದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಈ ಫೋಟೋ ನೋಡೋಕೆ ಫ್ಯಾನ್ಸ್ ಕಾದಿದ್ದಾರೆ.

ಬಿಟಿಎಸ್ ಆರ್ಮಿಗೆ ವಿಶ್ವಾದ್ಯಂತ ಫ್ಯಾನ್ಸ್ ಇದ್ದಾರೆ. ಸಾಕಷ್ಟು ದೊಡ್ಡ ಜನರು ಅವರನ್ನು ಹಿಂಬಾಲಿಸುತ್ತಾರೆ. ರಶ್ಮಿಕಾ ಕೂಡ ಬಿಟಿಎಸ್​ನ ಅಭಿಮಾನಿ. ಈಗ ಕಿಮ್​ ನಾಮ್​ಜೂನ್ ಹಾಗೂ ರಶ್ಮಿಕಾ ಒಂದೇ ವೇದಿಕೆಗೆ ತೆರಳುತ್ತಿರುವುದರಿಂದ ಪರಸ್ಪರ ಇಬ್ಬರ ಭೇಟಿ ಆಗುವ ಸಾಧ್ಯತೆ ಇದೆ. ಈ ಕ್ಷಣದ ಫೋಟೋಗಾಗಿ ರಶ್ಮಿಕಾ ಫ್ಯಾನ್ಸ್ ಕಾದಿದ್ದಾರೆ.

ಕಿಮ್​ ನಾಮ್​ಜೂನ್ ಅವರು ಇಟಲಿಯ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಫ್ಯಾನ್ಸ್ ಕಡೆ ತಿರುಗಿ ಅವರು ಕೈ ಬೀಸಿದ್ದಾರೆ. ರಶ್ಮಿಕಾ ಮಂದಣ್ಣ ಅವರು ಬಿಟಿಎಸ್ ಆರ್ಮಿಯ ದೊಡ್ಡ ಅಭಿಮಾನಿ. ಈ ಮೊದಲು ಅನೇಕ ಕಡೆಗಳಲ್ಲಿ ಇದನ್ನು ಅವರು ಹೇಳಿಕೊಂಡಿದ್ದರು. ದಕ್ಷಿಣ ಕೊರಿಯಾದ ನಟ ಜುಂಗ್ Il-ವೂ ಮೊದಲಾದವರನ್ನು ರಶ್ಮಿಕಾ ಇಟಲಿಯಲ್ಲಿ ಭೇಟಿ ಮಾಡಿದ್ದರು.

ರಶ್ಮಿಕಾ ಮಂದಣ್ಣ ಅವರು ಈ ವರ್ಷದ ಆರಂಭದಲ್ಲೇ ಎರಡು ಯಶಸ್ಸು ಕಂಡಿದ್ದಾರೆ. ‘ವಾರಿಸು’ ಸಿನಿಮಾ ಯಶಸ್ಸು ಕಂಡಿದೆ. ತಮಿಳಿನಲ್ಲಿ ತೆರೆಗೆ ಬಂದ ಈ ಚಿತ್ರದಲ್ಲಿ ದಳಪತಿ ವಿಜಯ್​ಗೆ ಜೊತೆಯಾಗಿ ರಶ್ಮಿಕಾ ಕಾಣಿಸಿಕೊಂಡಿದ್ದಾರೆ. ‘ಮಿಷನ್ ಮಜ್ನು’ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆದುಕೊಂಡಿತು. ‘ಅನಿಮಲ್​’ ಹಾಗೂ ‘ಪುಷ್ಪ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ