AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಮಿಲಾನ್ ಫ್ಯಾಷನ್​ ವೀಕ್​​ನಲ್ಲಿ ಬಿಟಿಎಸ್​ ನಾಯಕನ ಭೇಟಿ ಮಾಡಲಿದ್ದಾರೆ ರಶ್ಮಿಕಾ ಮಂದಣ್ಣ?

ಬಿಟಿಎಸ್ ಆರ್ಮಿಗೆ ವಿಶ್ವಾದ್ಯಂತ ಫ್ಯಾನ್ಸ್ ಇದ್ದಾರೆ. ರಶ್ಮಿಕಾ ಕೂಡ ಬಿಟಿಎಸ್​ನ ಅಭಿಮಾನಿ. ಈಗ ಕಿಮ್​ ನಾಮ್​ಜೂನ್ ಹಾಗೂ ರಶ್ಮಿಕಾ ಒಂದೇ ವೇದಿಕೆಗೆ ತೆರಳುತ್ತಿರುವುದರಿಂದ ಪರಸ್ಪರ ಇಬ್ಬರ ಭೇಟಿ ಆಗುವ ಸಾಧ್ಯತೆ ಇದೆ.

Rashmika Mandanna: ಮಿಲಾನ್ ಫ್ಯಾಷನ್​ ವೀಕ್​​ನಲ್ಲಿ ಬಿಟಿಎಸ್​ ನಾಯಕನ ಭೇಟಿ ಮಾಡಲಿದ್ದಾರೆ ರಶ್ಮಿಕಾ ಮಂದಣ್ಣ?
ರಶ್ಮಿಕಾ-ಕಿಮ್ ನಾಮ್​ಜೂನ್
ರಾಜೇಶ್ ದುಗ್ಗುಮನೆ
|

Updated on: Feb 24, 2023 | 11:48 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಇದೆ. ಹಲವು ಭಾಷೆಗಳಲ್ಲಿ ರಶ್ಮಿಕಾಗೆ ಅಭಿಮಾನಿಗಳಿದ್ದಾರೆ. ಈಗ ರಶ್ಮಿಕಾ ಮಂದಣ್ಣ ಅವರು ಮಿಲಾನ್ ಫ್ಯಾಷನ್ ವೀಕ್​ಗಾಗಿ ಇಟಲಿಗೆ ತೆರಳಿದ್ದಾರೆ. ಈ ವೇಳೆ ರಶ್ಮಿಕಾ ಮಂದಣ್ಣ ಅವರು ಬಿಟಿಎಸ್​ ನಾಯಕ ಕಿಮ್ ನಾಮ್​ಜೂನ್ (Kim Namjoon) ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಈ ವಿಚಾರದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಈ ಫೋಟೋ ನೋಡೋಕೆ ಫ್ಯಾನ್ಸ್ ಕಾದಿದ್ದಾರೆ.

ಬಿಟಿಎಸ್ ಆರ್ಮಿಗೆ ವಿಶ್ವಾದ್ಯಂತ ಫ್ಯಾನ್ಸ್ ಇದ್ದಾರೆ. ಸಾಕಷ್ಟು ದೊಡ್ಡ ಜನರು ಅವರನ್ನು ಹಿಂಬಾಲಿಸುತ್ತಾರೆ. ರಶ್ಮಿಕಾ ಕೂಡ ಬಿಟಿಎಸ್​ನ ಅಭಿಮಾನಿ. ಈಗ ಕಿಮ್​ ನಾಮ್​ಜೂನ್ ಹಾಗೂ ರಶ್ಮಿಕಾ ಒಂದೇ ವೇದಿಕೆಗೆ ತೆರಳುತ್ತಿರುವುದರಿಂದ ಪರಸ್ಪರ ಇಬ್ಬರ ಭೇಟಿ ಆಗುವ ಸಾಧ್ಯತೆ ಇದೆ. ಈ ಕ್ಷಣದ ಫೋಟೋಗಾಗಿ ರಶ್ಮಿಕಾ ಫ್ಯಾನ್ಸ್ ಕಾದಿದ್ದಾರೆ.

ಕಿಮ್​ ನಾಮ್​ಜೂನ್ ಅವರು ಇಟಲಿಯ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಫ್ಯಾನ್ಸ್ ಕಡೆ ತಿರುಗಿ ಅವರು ಕೈ ಬೀಸಿದ್ದಾರೆ. ರಶ್ಮಿಕಾ ಮಂದಣ್ಣ ಅವರು ಬಿಟಿಎಸ್ ಆರ್ಮಿಯ ದೊಡ್ಡ ಅಭಿಮಾನಿ. ಈ ಮೊದಲು ಅನೇಕ ಕಡೆಗಳಲ್ಲಿ ಇದನ್ನು ಅವರು ಹೇಳಿಕೊಂಡಿದ್ದರು. ದಕ್ಷಿಣ ಕೊರಿಯಾದ ನಟ ಜುಂಗ್ Il-ವೂ ಮೊದಲಾದವರನ್ನು ರಶ್ಮಿಕಾ ಇಟಲಿಯಲ್ಲಿ ಭೇಟಿ ಮಾಡಿದ್ದರು.

ರಶ್ಮಿಕಾ ಮಂದಣ್ಣ ಅವರು ಈ ವರ್ಷದ ಆರಂಭದಲ್ಲೇ ಎರಡು ಯಶಸ್ಸು ಕಂಡಿದ್ದಾರೆ. ‘ವಾರಿಸು’ ಸಿನಿಮಾ ಯಶಸ್ಸು ಕಂಡಿದೆ. ತಮಿಳಿನಲ್ಲಿ ತೆರೆಗೆ ಬಂದ ಈ ಚಿತ್ರದಲ್ಲಿ ದಳಪತಿ ವಿಜಯ್​ಗೆ ಜೊತೆಯಾಗಿ ರಶ್ಮಿಕಾ ಕಾಣಿಸಿಕೊಂಡಿದ್ದಾರೆ. ‘ಮಿಷನ್ ಮಜ್ನು’ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆದುಕೊಂಡಿತು. ‘ಅನಿಮಲ್​’ ಹಾಗೂ ‘ಪುಷ್ಪ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ