Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಮಿಲಾನ್ ಫ್ಯಾಷನ್​ ವೀಕ್​​ನಲ್ಲಿ ಬಿಟಿಎಸ್​ ನಾಯಕನ ಭೇಟಿ ಮಾಡಲಿದ್ದಾರೆ ರಶ್ಮಿಕಾ ಮಂದಣ್ಣ?

ಬಿಟಿಎಸ್ ಆರ್ಮಿಗೆ ವಿಶ್ವಾದ್ಯಂತ ಫ್ಯಾನ್ಸ್ ಇದ್ದಾರೆ. ರಶ್ಮಿಕಾ ಕೂಡ ಬಿಟಿಎಸ್​ನ ಅಭಿಮಾನಿ. ಈಗ ಕಿಮ್​ ನಾಮ್​ಜೂನ್ ಹಾಗೂ ರಶ್ಮಿಕಾ ಒಂದೇ ವೇದಿಕೆಗೆ ತೆರಳುತ್ತಿರುವುದರಿಂದ ಪರಸ್ಪರ ಇಬ್ಬರ ಭೇಟಿ ಆಗುವ ಸಾಧ್ಯತೆ ಇದೆ.

Rashmika Mandanna: ಮಿಲಾನ್ ಫ್ಯಾಷನ್​ ವೀಕ್​​ನಲ್ಲಿ ಬಿಟಿಎಸ್​ ನಾಯಕನ ಭೇಟಿ ಮಾಡಲಿದ್ದಾರೆ ರಶ್ಮಿಕಾ ಮಂದಣ್ಣ?
ರಶ್ಮಿಕಾ-ಕಿಮ್ ನಾಮ್​ಜೂನ್
Follow us
ರಾಜೇಶ್ ದುಗ್ಗುಮನೆ
|

Updated on: Feb 24, 2023 | 11:48 AM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಇದೆ. ಹಲವು ಭಾಷೆಗಳಲ್ಲಿ ರಶ್ಮಿಕಾಗೆ ಅಭಿಮಾನಿಗಳಿದ್ದಾರೆ. ಈಗ ರಶ್ಮಿಕಾ ಮಂದಣ್ಣ ಅವರು ಮಿಲಾನ್ ಫ್ಯಾಷನ್ ವೀಕ್​ಗಾಗಿ ಇಟಲಿಗೆ ತೆರಳಿದ್ದಾರೆ. ಈ ವೇಳೆ ರಶ್ಮಿಕಾ ಮಂದಣ್ಣ ಅವರು ಬಿಟಿಎಸ್​ ನಾಯಕ ಕಿಮ್ ನಾಮ್​ಜೂನ್ (Kim Namjoon) ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಈ ವಿಚಾರದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಈ ಫೋಟೋ ನೋಡೋಕೆ ಫ್ಯಾನ್ಸ್ ಕಾದಿದ್ದಾರೆ.

ಬಿಟಿಎಸ್ ಆರ್ಮಿಗೆ ವಿಶ್ವಾದ್ಯಂತ ಫ್ಯಾನ್ಸ್ ಇದ್ದಾರೆ. ಸಾಕಷ್ಟು ದೊಡ್ಡ ಜನರು ಅವರನ್ನು ಹಿಂಬಾಲಿಸುತ್ತಾರೆ. ರಶ್ಮಿಕಾ ಕೂಡ ಬಿಟಿಎಸ್​ನ ಅಭಿಮಾನಿ. ಈಗ ಕಿಮ್​ ನಾಮ್​ಜೂನ್ ಹಾಗೂ ರಶ್ಮಿಕಾ ಒಂದೇ ವೇದಿಕೆಗೆ ತೆರಳುತ್ತಿರುವುದರಿಂದ ಪರಸ್ಪರ ಇಬ್ಬರ ಭೇಟಿ ಆಗುವ ಸಾಧ್ಯತೆ ಇದೆ. ಈ ಕ್ಷಣದ ಫೋಟೋಗಾಗಿ ರಶ್ಮಿಕಾ ಫ್ಯಾನ್ಸ್ ಕಾದಿದ್ದಾರೆ.

ಕಿಮ್​ ನಾಮ್​ಜೂನ್ ಅವರು ಇಟಲಿಯ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಫ್ಯಾನ್ಸ್ ಕಡೆ ತಿರುಗಿ ಅವರು ಕೈ ಬೀಸಿದ್ದಾರೆ. ರಶ್ಮಿಕಾ ಮಂದಣ್ಣ ಅವರು ಬಿಟಿಎಸ್ ಆರ್ಮಿಯ ದೊಡ್ಡ ಅಭಿಮಾನಿ. ಈ ಮೊದಲು ಅನೇಕ ಕಡೆಗಳಲ್ಲಿ ಇದನ್ನು ಅವರು ಹೇಳಿಕೊಂಡಿದ್ದರು. ದಕ್ಷಿಣ ಕೊರಿಯಾದ ನಟ ಜುಂಗ್ Il-ವೂ ಮೊದಲಾದವರನ್ನು ರಶ್ಮಿಕಾ ಇಟಲಿಯಲ್ಲಿ ಭೇಟಿ ಮಾಡಿದ್ದರು.

ರಶ್ಮಿಕಾ ಮಂದಣ್ಣ ಅವರು ಈ ವರ್ಷದ ಆರಂಭದಲ್ಲೇ ಎರಡು ಯಶಸ್ಸು ಕಂಡಿದ್ದಾರೆ. ‘ವಾರಿಸು’ ಸಿನಿಮಾ ಯಶಸ್ಸು ಕಂಡಿದೆ. ತಮಿಳಿನಲ್ಲಿ ತೆರೆಗೆ ಬಂದ ಈ ಚಿತ್ರದಲ್ಲಿ ದಳಪತಿ ವಿಜಯ್​ಗೆ ಜೊತೆಯಾಗಿ ರಶ್ಮಿಕಾ ಕಾಣಿಸಿಕೊಂಡಿದ್ದಾರೆ. ‘ಮಿಷನ್ ಮಜ್ನು’ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆದುಕೊಂಡಿತು. ‘ಅನಿಮಲ್​’ ಹಾಗೂ ‘ಪುಷ್ಪ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?