Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಮಿಲಾನ್ ಫ್ಯಾಷನ್​ ವೀಕ್​​ನಲ್ಲಿ ಬಿಟಿಎಸ್​ ನಾಯಕನ ಭೇಟಿ ಮಾಡಲಿದ್ದಾರೆ ರಶ್ಮಿಕಾ ಮಂದಣ್ಣ?

ಬಿಟಿಎಸ್ ಆರ್ಮಿಗೆ ವಿಶ್ವಾದ್ಯಂತ ಫ್ಯಾನ್ಸ್ ಇದ್ದಾರೆ. ರಶ್ಮಿಕಾ ಕೂಡ ಬಿಟಿಎಸ್​ನ ಅಭಿಮಾನಿ. ಈಗ ಕಿಮ್​ ನಾಮ್​ಜೂನ್ ಹಾಗೂ ರಶ್ಮಿಕಾ ಒಂದೇ ವೇದಿಕೆಗೆ ತೆರಳುತ್ತಿರುವುದರಿಂದ ಪರಸ್ಪರ ಇಬ್ಬರ ಭೇಟಿ ಆಗುವ ಸಾಧ್ಯತೆ ಇದೆ.

Rashmika Mandanna: ಮಿಲಾನ್ ಫ್ಯಾಷನ್​ ವೀಕ್​​ನಲ್ಲಿ ಬಿಟಿಎಸ್​ ನಾಯಕನ ಭೇಟಿ ಮಾಡಲಿದ್ದಾರೆ ರಶ್ಮಿಕಾ ಮಂದಣ್ಣ?
ರಶ್ಮಿಕಾ-ಕಿಮ್ ನಾಮ್​ಜೂನ್
Follow us
ರಾಜೇಶ್ ದುಗ್ಗುಮನೆ
|

Updated on: Feb 24, 2023 | 11:48 AM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಇದೆ. ಹಲವು ಭಾಷೆಗಳಲ್ಲಿ ರಶ್ಮಿಕಾಗೆ ಅಭಿಮಾನಿಗಳಿದ್ದಾರೆ. ಈಗ ರಶ್ಮಿಕಾ ಮಂದಣ್ಣ ಅವರು ಮಿಲಾನ್ ಫ್ಯಾಷನ್ ವೀಕ್​ಗಾಗಿ ಇಟಲಿಗೆ ತೆರಳಿದ್ದಾರೆ. ಈ ವೇಳೆ ರಶ್ಮಿಕಾ ಮಂದಣ್ಣ ಅವರು ಬಿಟಿಎಸ್​ ನಾಯಕ ಕಿಮ್ ನಾಮ್​ಜೂನ್ (Kim Namjoon) ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಈ ವಿಚಾರದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಈ ಫೋಟೋ ನೋಡೋಕೆ ಫ್ಯಾನ್ಸ್ ಕಾದಿದ್ದಾರೆ.

ಬಿಟಿಎಸ್ ಆರ್ಮಿಗೆ ವಿಶ್ವಾದ್ಯಂತ ಫ್ಯಾನ್ಸ್ ಇದ್ದಾರೆ. ಸಾಕಷ್ಟು ದೊಡ್ಡ ಜನರು ಅವರನ್ನು ಹಿಂಬಾಲಿಸುತ್ತಾರೆ. ರಶ್ಮಿಕಾ ಕೂಡ ಬಿಟಿಎಸ್​ನ ಅಭಿಮಾನಿ. ಈಗ ಕಿಮ್​ ನಾಮ್​ಜೂನ್ ಹಾಗೂ ರಶ್ಮಿಕಾ ಒಂದೇ ವೇದಿಕೆಗೆ ತೆರಳುತ್ತಿರುವುದರಿಂದ ಪರಸ್ಪರ ಇಬ್ಬರ ಭೇಟಿ ಆಗುವ ಸಾಧ್ಯತೆ ಇದೆ. ಈ ಕ್ಷಣದ ಫೋಟೋಗಾಗಿ ರಶ್ಮಿಕಾ ಫ್ಯಾನ್ಸ್ ಕಾದಿದ್ದಾರೆ.

ಕಿಮ್​ ನಾಮ್​ಜೂನ್ ಅವರು ಇಟಲಿಯ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಫ್ಯಾನ್ಸ್ ಕಡೆ ತಿರುಗಿ ಅವರು ಕೈ ಬೀಸಿದ್ದಾರೆ. ರಶ್ಮಿಕಾ ಮಂದಣ್ಣ ಅವರು ಬಿಟಿಎಸ್ ಆರ್ಮಿಯ ದೊಡ್ಡ ಅಭಿಮಾನಿ. ಈ ಮೊದಲು ಅನೇಕ ಕಡೆಗಳಲ್ಲಿ ಇದನ್ನು ಅವರು ಹೇಳಿಕೊಂಡಿದ್ದರು. ದಕ್ಷಿಣ ಕೊರಿಯಾದ ನಟ ಜುಂಗ್ Il-ವೂ ಮೊದಲಾದವರನ್ನು ರಶ್ಮಿಕಾ ಇಟಲಿಯಲ್ಲಿ ಭೇಟಿ ಮಾಡಿದ್ದರು.

ರಶ್ಮಿಕಾ ಮಂದಣ್ಣ ಅವರು ಈ ವರ್ಷದ ಆರಂಭದಲ್ಲೇ ಎರಡು ಯಶಸ್ಸು ಕಂಡಿದ್ದಾರೆ. ‘ವಾರಿಸು’ ಸಿನಿಮಾ ಯಶಸ್ಸು ಕಂಡಿದೆ. ತಮಿಳಿನಲ್ಲಿ ತೆರೆಗೆ ಬಂದ ಈ ಚಿತ್ರದಲ್ಲಿ ದಳಪತಿ ವಿಜಯ್​ಗೆ ಜೊತೆಯಾಗಿ ರಶ್ಮಿಕಾ ಕಾಣಿಸಿಕೊಂಡಿದ್ದಾರೆ. ‘ಮಿಷನ್ ಮಜ್ನು’ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆದುಕೊಂಡಿತು. ‘ಅನಿಮಲ್​’ ಹಾಗೂ ‘ಪುಷ್ಪ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್