AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಅಭಿಮಾನಿಗಳಿಗೆ ಗುಡ್​ ನ್ಯೂಸ್​; ಕೊವಿಡ್​ ಮಧ್ಯೆಯೂ ರಿಲೀಸ್​ ಆಗುತ್ತಿದೆ ಹೊಸ ಸಿನಿಮಾ

ಶರ್ವಾನಂದ್ ಹಾಗೂ ರಶ್ಮಿಕಾ ಮಂದಣ್ಣ ‘ಆಡವಾಳ್ಳು ಮೀಕು ಜೋಹಾರ್ಲು'ದಲ್ಲಿ ಒಟ್ಟಾಗಿ ನಟಿಸಿದ್ದಾರೆ. ತಿರುಮಲ ಕಿಶೋರ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ‘ರೆಡ್​’ ಸೇರಿ ಹಲವು ಸಿನಿಮಾಗಳಿಗೆ ಆ್ಯಕ್ಷನ್​ ಕಟ್​ ಹೇಳಿದ ಅನುಭವ ಅವರಿಗೆ ಇದೆ.

ರಶ್ಮಿಕಾ ಅಭಿಮಾನಿಗಳಿಗೆ ಗುಡ್​ ನ್ಯೂಸ್​; ಕೊವಿಡ್​ ಮಧ್ಯೆಯೂ ರಿಲೀಸ್​ ಆಗುತ್ತಿದೆ ಹೊಸ ಸಿನಿಮಾ
ರಶ್ಮಿಕಾ-ಶರ್ವಾನಂದ್
TV9 Web
| Edited By: |

Updated on:Jan 28, 2022 | 7:38 PM

Share

ಕೊರೊನಾ ವೈರಸ್​ ಮೂರನೇ ಅಲೆಯ ಅಬ್ಬರ ಜೋರಾಗಿದೆ. ಆದರೆ, ಸಾವಿನ ಸಂಖ್ಯೆ ಕಡಿಮೆ ಇರುವ ಕಾರಣ ಎಲ್ಲರೂ ನಿಟ್ಟುಸಿರು ಬಿಡುವಂತಾಗಿದೆ. ಹೀಗಾಗಿ, ಎಲ್ಲವೂ ಮೊದಲಿನ ಸ್ಥಿತಿಗೆ ಮರಳುತ್ತಿದೆ. ಚಿತ್ರರಂಗದಲ್ಲೂ ಮೊದಲಿನ ಕಳೆ ನಿಧಾನವಾಗಿ ಮರಳುತ್ತಿದೆ. ದೊಡ್ಡ ಸ್ಟಾರ್​ ನಟರ ಸಿನಿಮಾಗಳು ರಿಲೀಸ್​ ದಿನಾಂಕ ಘೋಷಣೆ ಮಾಡಿಕೊಳ್ಳುತ್ತಿವೆ. ಶೇ.50 ಆಸನಕ್ಕೆ ಮಾತ್ರ ಅವಕಾಶ ಇರುವ ನಿಯಮದ ಹೊರತಾಗಿಯೂ ದೊಡ್ಡದೊಡ್ಡ ಸಿನಿಮಾಗಳು ಅದೃಷ್ಟಪರೀಕ್ಷೆಗೆ ಮುಂದಾಗುತ್ತಿವೆ. ಈಗ ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ಹೊಸ ಸಿನಿಮಾ ರಿಲೀಸ್​ಗೆ ರೆಡಿ ಆಗಿದೆ. ಈ ಬಗ್ಗೆ ಚಿತ್ರತಂಡದಿಂದ ಘೋಷಣೆ ಮಾಡಿದೆ. ಹಾಗಾದರೆ ಯಾವುದು ಆ ಚಿತ್ರ? ‘ಆಡವಾಳ್ಳು ಮೀಕು ಜೋಹಾರ್ಲು’ ಸಿನಿಮಾ (Aadavaallu Meeku Joharlu).

ಶರ್ವಾನಂದ್ ಹಾಗೂ ರಶ್ಮಿಕಾ ಮಂದಣ್ಣ ‘ಆಡವಾಳ್ಳು ಮೀಕು ಜೋಹಾರ್ಲು’ದಲ್ಲಿ ಒಟ್ಟಾಗಿ ನಟಿಸಿದ್ದಾರೆ. ತಿರುಮಲ ಕಿಶೋರ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ‘ರೆಡ್​’ ಸೇರಿ ಹಲವು ಸಿನಿಮಾಗಳಿಗೆ ಆ್ಯಕ್ಷನ್​ ಕಟ್​ ಹೇಳಿದ ಅನುಭವ ಅವರಿಗೆ ಇದೆ. ಅವರು ನಿರ್ದೇಶನ ಮಾಡಿರುವ ‘ಆಡವಾಳ್ಳು ಮೀಕು ಜೋಹಾರ್ಲು’ ಸಿನಿಮಾ ಫೆಬ್ರವರಿ 25ರಂದು ಚಿತ್ರಮಂದಿರದಲ್ಲೇ ತೆರೆಗೆ ಬರುತ್ತಿದೆ.

ಸದ್ಯ, ಕೊರೊನಾ ಪ್ರಕರಣಗಳು ಹೆಚ್ಚಿದ್ದರೂ ಇನ್ನೊಂದು ತಿಂಗಳಲ್ಲಿ ಕೊವಿಡ್​ ನಿಯಂತ್ರಣಕ್ಕೆ ಬರುವ ನಿರೀಕ್ಷೆ ಇದೆ. ಈ ಕಾರಣಕ್ಕೆ ಚಿತ್ರತಂಡ ರಿಲೀಸ್ ಡೇಟ್​ ಘೋಷಣೆ ಮಾಡಿದೆ ಎನ್ನಲಾಗಿದೆ. ರಶ್ಮಿಕಾ ಮಂದಣ್ಣಗೆ ದಕ್ಷಿಣ ಭಾರತದಲ್ಲಿ ಭಾರೀ ಬೇಡಿಕೆ ಇದೆ. ಹೀಗಾಗಿ, ಅವರು ಈ ಚಿತ್ರದಲ್ಲಿ ನಟಿಸಿರುವುದರಿಂದ ಸಿನಿಮಾದ ಮೈಲೇಜ್​ ಹೆಚ್ಚುವ ಸಾಧ್ಯತೆ ಇದೆ.

2020ರ ಅಕ್ಟೋಬರ್ ತಿಂಗಳಲ್ಲಿ ‘ಆಡವಾಳ್ಳು ಮೀಕು ಜೋಹಾರ್ಲು’ ಚಿತ್ರ ಘೋಷಣೆ ಆಗಿತ್ತು. ಕೊವಿಡ್​ ಎರಡನೇ ಅಲೆ ಕಾರಣದಿಂದ ಸಿನಿಮಾ ಕೆಲಸಗಳು ವಿಳಂಬವಾದವು. ಈಗ ಸಿನಿಮಾ ರಿಲೀಸ್​ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದ್ದು, ಈ ಚಿತ್ರದ ಬಗ್ಗೆ ನಿರೀಕ್ಷೆ ಇದೆ. ಈ ಚಿತ್ರಕ್ಕೆ ಪ್ರಚಾರ ಕಾರ್ಯ ಇನ್ನಷ್ಟೇ ಆರಂಭಗೊಳ್ಳಬೇಕಿದೆ.

ಸೀರೆ ವಿಚಾರದಲ್ಲಿ ಸುದ್ದಿಯಾಗಿದ್ದ ರಶ್ಮಿಕಾ:

ಜನವರಿ 22ರಂದು ರಶ್ಮಿಕಾ ಮಂದಣ್ಣ ಅವರು ಎರಡು ಫೋಟೋಗಳನ್ನು ಪೋಸ್ಟ್​ ಮಾಡಿದ್ದರು. ಈ ಫೋಟೋದಲ್ಲಿ ಅವರು ಸೀರೆ ಉಟ್ಟಿದ್ದರು. ಇದರಲ್ಲಿ ಅವರು ಸಖತ್​ ಟ್ರೆಡಿಷನಲ್​ ಆಗಿ ಕಾಣಿಸಿಕೊಂಡಿದ್ದರು. ಈ ಫೋಟೋ ನೋಡಿದ ಅಭಿಮಾನಿಗಳು ಸಾಕಷ್ಟು ಖುಷಿಪಟ್ಟಿದ್ದರು. ಅಚ್ಚರಿ ಎಂದರೆ ಈ ಸೀರೆಯ ಬೆಲೆ ಬರೋಬ್ಬರಿ 31 ಸಾವಿರ ರೂಪಾಯಿ! ಈ ಸೀರೆಯ ಬೆಲೆ ಕೇಳಿ ಅಭಿಮಾನಿಗಳು ನಿಜಕ್ಕೂ ಅಚ್ಚರಿ ಪಟ್ಟಿದ್ದರು. ಇನ್ನೂ ಕೆಲವರು ಈ ಸೀರೆ ಅವರಿಗೆ ಹೊಂದುತ್ತದೆ ಎಂದು ಹೇಳಿದ್ದರು

ನಟಿ ರಶ್ಮಿಕಾ ಮಂದಣ್ಣ ಅವರು ಸ್ಯಾಂಡಲ್​ವುಡ್​ಗಿಂತ ಹೆಚ್ಚು ಪರಭಾಷೆಯಲ್ಲಿ ಬ್ಯುಸಿ ಆಗಿದ್ದಾರೆ. ಟಾಲಿವುಡ್​ ಹಾಗೂ ಬಾಲಿವುಡ್​ನಲ್ಲಿ ಅವರಿಗೆ ದೊಡ್ಡ ಮಟ್ಟದ ಬೇಡಿಕೆ ಇದೆ. ಅವರ ಕಾಲ್​ಶೀಟ್​ ಪಡೆಯೋಕೆ ನಿರ್ಮಾಪಕರು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಆದರೆ, ರಶ್ಮಿಕಾ ಮಂದಣ್ಣ ಹಾಗಲ್ಲ. ತುಂಬಾನೇ ಎಚ್ಚರಿಕೆ ವಹಿಸಿ ಕಥೆ ಒಪ್ಪಿಕೊಳ್ಳುತ್ತಿದ್ದಾರೆ. ಅವರ ಪಾತ್ರಕ್ಕೆ ಸ್ಕೋಪ್​ ಇದೆ ಎಂದಾದರೆ ಮಾತ್ರ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಖ್ಯಾತಿ ಹೆಚ್ಚುತ್ತಿದ್ದಂತೆ ಅವರಿಗೆ ಬರುವ ಜಾಹೀರಾತುಗಳ​ ಸಂಖ್ಯೆ ಕೂಡ ಹೆಚ್ಚಿದೆ.  ಸಾಕಷ್ಟು ಬ್ರ್ಯಾಂಡ್​ಗಳಿಗೆ ರಶ್ಮಿಕಾ ಮಂದಣ್ಣ ರಾಯಭಾರಿ ಆಗಿದ್ದಾರೆ.

ಇದನ್ನೂ ಓದಿ: ಕರಣ್​ ಜೋಹರ್​ ಜತೆ ರಶ್ಮಿಕಾ ಮಂದಣ್ಣ ಸಿನಿಮಾ?

ಟಾಲಿವುಡ್​ನಲ್ಲಿ ಹೆಚ್ಚುತ್ತಿದೆ ಕನ್ನಡತಿ ಶ್ರೀಲೀಲಾ ಹವಾ; ರಶ್ಮಿಕಾ ಮಂದಣ್ಣಗೆ ಎದುರಾಗುತ್ತಾ ಟಫ್​ ಸ್ಪರ್ಧೆ

Published On - 7:29 pm, Fri, 28 January 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು