AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಅಭಿಮಾನಿಗಳಿಗೆ ಗುಡ್​ ನ್ಯೂಸ್​; ಕೊವಿಡ್​ ಮಧ್ಯೆಯೂ ರಿಲೀಸ್​ ಆಗುತ್ತಿದೆ ಹೊಸ ಸಿನಿಮಾ

ಶರ್ವಾನಂದ್ ಹಾಗೂ ರಶ್ಮಿಕಾ ಮಂದಣ್ಣ ‘ಆಡವಾಳ್ಳು ಮೀಕು ಜೋಹಾರ್ಲು'ದಲ್ಲಿ ಒಟ್ಟಾಗಿ ನಟಿಸಿದ್ದಾರೆ. ತಿರುಮಲ ಕಿಶೋರ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ‘ರೆಡ್​’ ಸೇರಿ ಹಲವು ಸಿನಿಮಾಗಳಿಗೆ ಆ್ಯಕ್ಷನ್​ ಕಟ್​ ಹೇಳಿದ ಅನುಭವ ಅವರಿಗೆ ಇದೆ.

ರಶ್ಮಿಕಾ ಅಭಿಮಾನಿಗಳಿಗೆ ಗುಡ್​ ನ್ಯೂಸ್​; ಕೊವಿಡ್​ ಮಧ್ಯೆಯೂ ರಿಲೀಸ್​ ಆಗುತ್ತಿದೆ ಹೊಸ ಸಿನಿಮಾ
ರಶ್ಮಿಕಾ-ಶರ್ವಾನಂದ್
TV9 Web
| Edited By: |

Updated on:Jan 28, 2022 | 7:38 PM

Share

ಕೊರೊನಾ ವೈರಸ್​ ಮೂರನೇ ಅಲೆಯ ಅಬ್ಬರ ಜೋರಾಗಿದೆ. ಆದರೆ, ಸಾವಿನ ಸಂಖ್ಯೆ ಕಡಿಮೆ ಇರುವ ಕಾರಣ ಎಲ್ಲರೂ ನಿಟ್ಟುಸಿರು ಬಿಡುವಂತಾಗಿದೆ. ಹೀಗಾಗಿ, ಎಲ್ಲವೂ ಮೊದಲಿನ ಸ್ಥಿತಿಗೆ ಮರಳುತ್ತಿದೆ. ಚಿತ್ರರಂಗದಲ್ಲೂ ಮೊದಲಿನ ಕಳೆ ನಿಧಾನವಾಗಿ ಮರಳುತ್ತಿದೆ. ದೊಡ್ಡ ಸ್ಟಾರ್​ ನಟರ ಸಿನಿಮಾಗಳು ರಿಲೀಸ್​ ದಿನಾಂಕ ಘೋಷಣೆ ಮಾಡಿಕೊಳ್ಳುತ್ತಿವೆ. ಶೇ.50 ಆಸನಕ್ಕೆ ಮಾತ್ರ ಅವಕಾಶ ಇರುವ ನಿಯಮದ ಹೊರತಾಗಿಯೂ ದೊಡ್ಡದೊಡ್ಡ ಸಿನಿಮಾಗಳು ಅದೃಷ್ಟಪರೀಕ್ಷೆಗೆ ಮುಂದಾಗುತ್ತಿವೆ. ಈಗ ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ಹೊಸ ಸಿನಿಮಾ ರಿಲೀಸ್​ಗೆ ರೆಡಿ ಆಗಿದೆ. ಈ ಬಗ್ಗೆ ಚಿತ್ರತಂಡದಿಂದ ಘೋಷಣೆ ಮಾಡಿದೆ. ಹಾಗಾದರೆ ಯಾವುದು ಆ ಚಿತ್ರ? ‘ಆಡವಾಳ್ಳು ಮೀಕು ಜೋಹಾರ್ಲು’ ಸಿನಿಮಾ (Aadavaallu Meeku Joharlu).

ಶರ್ವಾನಂದ್ ಹಾಗೂ ರಶ್ಮಿಕಾ ಮಂದಣ್ಣ ‘ಆಡವಾಳ್ಳು ಮೀಕು ಜೋಹಾರ್ಲು’ದಲ್ಲಿ ಒಟ್ಟಾಗಿ ನಟಿಸಿದ್ದಾರೆ. ತಿರುಮಲ ಕಿಶೋರ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ‘ರೆಡ್​’ ಸೇರಿ ಹಲವು ಸಿನಿಮಾಗಳಿಗೆ ಆ್ಯಕ್ಷನ್​ ಕಟ್​ ಹೇಳಿದ ಅನುಭವ ಅವರಿಗೆ ಇದೆ. ಅವರು ನಿರ್ದೇಶನ ಮಾಡಿರುವ ‘ಆಡವಾಳ್ಳು ಮೀಕು ಜೋಹಾರ್ಲು’ ಸಿನಿಮಾ ಫೆಬ್ರವರಿ 25ರಂದು ಚಿತ್ರಮಂದಿರದಲ್ಲೇ ತೆರೆಗೆ ಬರುತ್ತಿದೆ.

ಸದ್ಯ, ಕೊರೊನಾ ಪ್ರಕರಣಗಳು ಹೆಚ್ಚಿದ್ದರೂ ಇನ್ನೊಂದು ತಿಂಗಳಲ್ಲಿ ಕೊವಿಡ್​ ನಿಯಂತ್ರಣಕ್ಕೆ ಬರುವ ನಿರೀಕ್ಷೆ ಇದೆ. ಈ ಕಾರಣಕ್ಕೆ ಚಿತ್ರತಂಡ ರಿಲೀಸ್ ಡೇಟ್​ ಘೋಷಣೆ ಮಾಡಿದೆ ಎನ್ನಲಾಗಿದೆ. ರಶ್ಮಿಕಾ ಮಂದಣ್ಣಗೆ ದಕ್ಷಿಣ ಭಾರತದಲ್ಲಿ ಭಾರೀ ಬೇಡಿಕೆ ಇದೆ. ಹೀಗಾಗಿ, ಅವರು ಈ ಚಿತ್ರದಲ್ಲಿ ನಟಿಸಿರುವುದರಿಂದ ಸಿನಿಮಾದ ಮೈಲೇಜ್​ ಹೆಚ್ಚುವ ಸಾಧ್ಯತೆ ಇದೆ.

2020ರ ಅಕ್ಟೋಬರ್ ತಿಂಗಳಲ್ಲಿ ‘ಆಡವಾಳ್ಳು ಮೀಕು ಜೋಹಾರ್ಲು’ ಚಿತ್ರ ಘೋಷಣೆ ಆಗಿತ್ತು. ಕೊವಿಡ್​ ಎರಡನೇ ಅಲೆ ಕಾರಣದಿಂದ ಸಿನಿಮಾ ಕೆಲಸಗಳು ವಿಳಂಬವಾದವು. ಈಗ ಸಿನಿಮಾ ರಿಲೀಸ್​ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದ್ದು, ಈ ಚಿತ್ರದ ಬಗ್ಗೆ ನಿರೀಕ್ಷೆ ಇದೆ. ಈ ಚಿತ್ರಕ್ಕೆ ಪ್ರಚಾರ ಕಾರ್ಯ ಇನ್ನಷ್ಟೇ ಆರಂಭಗೊಳ್ಳಬೇಕಿದೆ.

ಸೀರೆ ವಿಚಾರದಲ್ಲಿ ಸುದ್ದಿಯಾಗಿದ್ದ ರಶ್ಮಿಕಾ:

ಜನವರಿ 22ರಂದು ರಶ್ಮಿಕಾ ಮಂದಣ್ಣ ಅವರು ಎರಡು ಫೋಟೋಗಳನ್ನು ಪೋಸ್ಟ್​ ಮಾಡಿದ್ದರು. ಈ ಫೋಟೋದಲ್ಲಿ ಅವರು ಸೀರೆ ಉಟ್ಟಿದ್ದರು. ಇದರಲ್ಲಿ ಅವರು ಸಖತ್​ ಟ್ರೆಡಿಷನಲ್​ ಆಗಿ ಕಾಣಿಸಿಕೊಂಡಿದ್ದರು. ಈ ಫೋಟೋ ನೋಡಿದ ಅಭಿಮಾನಿಗಳು ಸಾಕಷ್ಟು ಖುಷಿಪಟ್ಟಿದ್ದರು. ಅಚ್ಚರಿ ಎಂದರೆ ಈ ಸೀರೆಯ ಬೆಲೆ ಬರೋಬ್ಬರಿ 31 ಸಾವಿರ ರೂಪಾಯಿ! ಈ ಸೀರೆಯ ಬೆಲೆ ಕೇಳಿ ಅಭಿಮಾನಿಗಳು ನಿಜಕ್ಕೂ ಅಚ್ಚರಿ ಪಟ್ಟಿದ್ದರು. ಇನ್ನೂ ಕೆಲವರು ಈ ಸೀರೆ ಅವರಿಗೆ ಹೊಂದುತ್ತದೆ ಎಂದು ಹೇಳಿದ್ದರು

ನಟಿ ರಶ್ಮಿಕಾ ಮಂದಣ್ಣ ಅವರು ಸ್ಯಾಂಡಲ್​ವುಡ್​ಗಿಂತ ಹೆಚ್ಚು ಪರಭಾಷೆಯಲ್ಲಿ ಬ್ಯುಸಿ ಆಗಿದ್ದಾರೆ. ಟಾಲಿವುಡ್​ ಹಾಗೂ ಬಾಲಿವುಡ್​ನಲ್ಲಿ ಅವರಿಗೆ ದೊಡ್ಡ ಮಟ್ಟದ ಬೇಡಿಕೆ ಇದೆ. ಅವರ ಕಾಲ್​ಶೀಟ್​ ಪಡೆಯೋಕೆ ನಿರ್ಮಾಪಕರು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಆದರೆ, ರಶ್ಮಿಕಾ ಮಂದಣ್ಣ ಹಾಗಲ್ಲ. ತುಂಬಾನೇ ಎಚ್ಚರಿಕೆ ವಹಿಸಿ ಕಥೆ ಒಪ್ಪಿಕೊಳ್ಳುತ್ತಿದ್ದಾರೆ. ಅವರ ಪಾತ್ರಕ್ಕೆ ಸ್ಕೋಪ್​ ಇದೆ ಎಂದಾದರೆ ಮಾತ್ರ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಖ್ಯಾತಿ ಹೆಚ್ಚುತ್ತಿದ್ದಂತೆ ಅವರಿಗೆ ಬರುವ ಜಾಹೀರಾತುಗಳ​ ಸಂಖ್ಯೆ ಕೂಡ ಹೆಚ್ಚಿದೆ.  ಸಾಕಷ್ಟು ಬ್ರ್ಯಾಂಡ್​ಗಳಿಗೆ ರಶ್ಮಿಕಾ ಮಂದಣ್ಣ ರಾಯಭಾರಿ ಆಗಿದ್ದಾರೆ.

ಇದನ್ನೂ ಓದಿ: ಕರಣ್​ ಜೋಹರ್​ ಜತೆ ರಶ್ಮಿಕಾ ಮಂದಣ್ಣ ಸಿನಿಮಾ?

ಟಾಲಿವುಡ್​ನಲ್ಲಿ ಹೆಚ್ಚುತ್ತಿದೆ ಕನ್ನಡತಿ ಶ್ರೀಲೀಲಾ ಹವಾ; ರಶ್ಮಿಕಾ ಮಂದಣ್ಣಗೆ ಎದುರಾಗುತ್ತಾ ಟಫ್​ ಸ್ಪರ್ಧೆ

Published On - 7:29 pm, Fri, 28 January 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ