ರಶ್ಮಿಕಾ ಮಂದಣ್ಣ ಮುಖಕ್ಕೆ ಮುತ್ತಿಟ್ಟ ಔರಾ; ರಾತ್ರೋರಾತ್ರಿ ವೈರಲ್​ ಆಯ್ತು ಫೋಟೋ

ಸೋಶಿಯಲ್​ ಮೀಡಿಯಾದಲ್ಲಿ ಹೊಸ ಫೋಟೋ ವೈರಲ್​ ಆಗಿದೆ. ಅದರಲ್ಲಿ ರಶ್ಮಿಕಾ ಮಂದಣ್ಣ ಮುಖಕ್ಕೆ ಔರಾ ಮುತ್ತಿಡುತ್ತಿರುವುದನ್ನು ಕಂಡು ಅಭಿಮಾನಿಗಳು ನಾನಾ ಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಮುಖಕ್ಕೆ ಮುತ್ತಿಟ್ಟ ಔರಾ; ರಾತ್ರೋರಾತ್ರಿ ವೈರಲ್​ ಆಯ್ತು ಫೋಟೋ
ರಶ್ಮಿಕಾ ಮಂದಣ್ಣ
Follow us
| Updated By: ಮದನ್​ ಕುಮಾರ್​

Updated on: Jun 19, 2021 | 1:44 PM

ನಟಿ ರಶ್ಮಿಕಾ ಮಂದಣ್ಣ ಹಲವು ಕಾರಣಗಳಿಗಾಗಿ ಆಗಾಗ ಸುದ್ದಿ ಆಗುತ್ತಲೇ ಇರುತ್ತಾರೆ. ಅವರ ಸಿನಿಮಾ ಅಥವಾ ವೈಯಕ್ತಿಕ ಜೀವನದ ಬಗ್ಗೆ ಏನಾದರೊಂದು ನ್ಯೂಸ್​ ವೈರಲ್​ ಆಗುತ್ತಿರುತ್ತದೆ. ಸದ್ಯ ಲಾಕ್​ಡೌನ್​ ಇರುವುದರಿಂದ ರಶ್ಮಿಕಾ ಮಂದಣ್ಣ ಹೊರಗಡೆ ಹೋಗಿ ಹೆಚ್ಚು ಜನರ ಜೊತೆ ಬೆರೆಯಲು ಸಾಧ್ಯವಾಗುತ್ತಿಲ್ಲ. ಹಾಗಂತ ಅವರೀಗ ಒಂಟಿಯಾಗಿಲ್ಲ. ಅವರೊಂದು ಮುದ್ದಾದ ನಾಯಿ ಸಾಕಿದ್ದು, ಅದಕ್ಕೆ ಔರಾ ಎಂದು ಹೆಸರು ಇಟ್ಟಿದ್ದಾರೆ. ರಶ್ಮಿಕಾ ಮುಖಕ್ಕೆ ಔರಾ ಮುತ್ತು ಕೊಡುತ್ತಿರುವ ಫೋಟೋ ವೈರಲ್​ ಆಗಿದೆ.

ರಶ್ಮಿಕಾ ಎಲ್ಲೇ ಹೋದರೂ ಅವರನ್ನು ಔರಾ ಹಿಂಬಾಲಿಸುತ್ತದೆ. ಹಾಗಾಗಿ ಅವರಿಗೆ ಈ ನಾಯಿ ಕಂಡರೆ ಅತಿಯಾದ ಪ್ರೀತಿ. ಈಗಾಗಲೇ ಅವರು ಈ ಬಗ್ಗೆ ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ. ಈಗ ಅವರು ಹೊಸ ಫೋಟೋ ಶೇರ್​ ಮಾಡಿಕೊಂಡಿದ್ದಾರೆ. ಅದರಲ್ಲಿ ರಶ್ಮಿಕಾ ಮುಖಕ್ಕೆ ಔರಾ ಮುತ್ತಿಡುತ್ತಿರುವುದನ್ನು ಕಂಡು ಅಭಿಮಾನಿಗಳು ನಾನಾ ಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ‘ನಾನು ಮತ್ತು ಔರಾ ನಿಮ್ಮ ಫೀಡ್​ನಲ್ಲಿ’ ಎಂದು ಈ ಫೋಟೋಗೆ ರಶ್ಮಿಕಾ ಕ್ಯಾಪ್ಷನ್​ ನೀಡಿದ್ದಾರೆ.

‘ಹೊರ ಜಗತ್ತಿನ ಎಲ್ಲ ಗದ್ದಲದ ನಡುವೆಯೂ ನಾನು ನನ್ನ ಖುಷಿಯ ಕಣಜವನ್ನು ಕಂಡುಕೊಂಡಿದ್ದೇನೆ. ಇದು ಸದಾ ನನ್ನನ್ನು ಖುಷಿಯಾಗಿ ಇಡುತ್ತದೆ. ನಿಮ್ಮೆಲ್ಲರಿಗೂ ನಾನು ಪುಟ್ಟ ಔರಾ ಪರಿಚಯ ಮಾಡಿಕೊಡುತ್ತಿದ್ದೇನೆ. ಮೂರು ಸೆಕೆಂಡ್​ನೊಳಗೆ ಪ್ರೀತಿಯಲ್ಲಿ ಬೀಳಬಹುದು ಎನ್ನುತ್ತಾರೆ. ಆದರೆ ಇವಳು ಕೇವಲ 0.3 ಸೆಕೆಂಡ್​ನಲ್ಲಿ ನನ್ನ ಹೃದಯ ಕದ್ದಳು’ ಎಂದು ಕೆಲವೇ ದಿನಗಳ ಹಿಂದೆ ತಮ್ಮ ಪ್ರೀತಿಯ ಶ್ವಾನವನ್ನು ರಶ್ಮಿಕಾ ಪರಿಚಯ ಮಾಡಿಕೊಟ್ಟಿದ್ದರು.

ರಶ್ಮಿಕಾ ಕೈಯಲ್ಲಿ ಈಗ ಹಲವಾರು ಸಿನಿಮಾಗಳಿವೆ. ದಕ್ಷಿಣದಲ್ಲಿ ಮಿಂಚಿದ ಬಳಿಕ ಅವರು ಬಾಲಿವುಡ್​ಗೂ ಕಾಲಿಟ್ಟಿರುವುದರಿಂದ ಅವರಿಗೆ ದೇಶಾದ್ಯಂತ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಶ್ರೀಲಂಕಾದಿಂದಲೂ ಕೆಲವರು ಅಭಿಮಾನಿಗಳು ಕಮೆಂಟ್​ ಮಾಡಿದ್ದಾರೆ. ಅಮಿತಾಭ್​ ಬಚ್ಚನ್​ ಜೊತೆ ‘ಗುಡ್​ ಬೈ’, ಸಿದ್ಧಾರ್ಥ್​ ಮಲ್ಹೋತ್ರಾ ಜೊತೆ ‘ಮಿಷನ್​ ಮಜ್ನು’ ಸಿನಿಮಾಗಳಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ.

ತೆಲುಗಿನಲ್ಲಿ ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಜೋಡಿಯಾಗಿ ನಟಿಸಿರುವ ‘ಪುಷ್ಪ’ ಚಿತ್ರ ದೊಡ್ಡ ಮಟ್ಟದ ಹೈಪ್ ಸೃಷ್ಟಿ ಮಾಡಿದೆ. ಆ ಸಿನಿಮಾ ಎರಡು ಪಾರ್ಟ್​ಗಳಲ್ಲಿ ಮೂಡಿಬರಲಿದೆ ಎಂಬ ಮಾಹಿತಿ ಕೂಡ ಕೇಳಿ ಬಂದಿದೆ.

ಇದನ್ನೂ ಓದಿ:

ರಶ್ಮಿಕಾ ಬಗ್ಗೆ ಕೆಟ್ಟ ಕಮೆಂಟ್​ಗಳ ಸುರಿಮಳೆ; ರಕ್ಷಿತ್​ ಶೆಟ್ಟಿ ಪ್ರತಿಕ್ರಿಯೆಗೆ ಭೇಷ್​ ಎನ್ನಲೇಬೇಕು

ನಟಿ ರಶ್ಮಿಕಾ ಮಂದಣ್ಣ ಕಾಲೇಜ್​ ದಿನಗಳ ಫೋಟೋ ವೈರಲ್​; ಹೇಗಿದ್ರು ನೋಡಿ ನ್ಯಾಷನಲ್​ ಕ್ರಶ್

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ