AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಕೆಟ್​ನಿಂದ ಟಾಯ್ಲೆಟ್​ವರೆಗೆ ಎಲ್ಲೆಲ್ಲೂ ರಶ್ಮಿಕಾ; ‘ಪುಷ್ಪ’ ಚಿತ್ರದ ಶ್ರೀವಲ್ಲಿ ಗೆಟಪ್​ ಸಿಕ್ಕಾಪಟ್ಟೆ ಟ್ರೋಲ್​​

ರಶ್ಮಿಕಾ ಮಂದಣ್ಣ ಅವರ ಹೊಸ ಪೋಸ್ಟರ್​ ಇಟ್ಟುಕೊಂಡು ಹಲವು ಬಗೆಯಲ್ಲಿ ಮೀಮ್​ಗಳನ್ನು ತಯಾರಿಸಲಾಗಿದೆ. ಇದರಿಂದ ‘ಪುಷ್ಪ’ ಚಿತ್ರಕ್ಕೆ ಭರ್ಜರಿ ಪ್ರಚಾರ ಸಿಗುತ್ತಿದೆ. ಆದರೆ ಈ ರೀತಿ ಟ್ರೋಲ್​ ಆಗುತ್ತಿರುವುದಕ್ಕೆ ರಶ್ಮಿಕಾ ಅಭಿಮಾನಿಗಳು ಬೇಸರ ಮಾಡಿಕೊಳ್ಳುತ್ತಿದ್ದಾರೆ.

ಮಾರ್ಕೆಟ್​ನಿಂದ ಟಾಯ್ಲೆಟ್​ವರೆಗೆ ಎಲ್ಲೆಲ್ಲೂ ರಶ್ಮಿಕಾ; ‘ಪುಷ್ಪ’ ಚಿತ್ರದ ಶ್ರೀವಲ್ಲಿ ಗೆಟಪ್​ ಸಿಕ್ಕಾಪಟ್ಟೆ ಟ್ರೋಲ್​​
ವೈರಲ್​ ಆಗುತ್ತಿರುವ ರಶ್ಮಿಕಾ ಮಂದಣ್ಣ ಮೀಮ್ಸ್​
TV9 Web
| Edited By: |

Updated on: Oct 01, 2021 | 1:28 PM

Share

ರಶ್ಮಿಕಾ ಮಂದಣ್ಣ ಈಗ ಪ್ಯಾನ್​ ಇಂಡಿಯಾ ಹೀರೋಯಿನ್​. ದಕ್ಷಿಣ ಭಾರತದಿಂದ ಬಾಲಿವುಡ್​ವರೆಗೆ ಅವರಿಗೆ ಬೇಡಿಕೆ ಇದೆ. ಬಹುಭಾಷೆಯಲ್ಲಿ ನಟಿಸುತ್ತಿರುವ ಈ ಕೊಡಗಿನ ಕುವರಿ ಪ್ರತಿ ನಿತ್ಯ ಸುದ್ದಿ ಆಗುತ್ತಲೇ ಇರುತ್ತಾರೆ. ರಶ್ಮಿಕಾಗೆ ಸಂಬಂಧಿಸಿದ ಅನೇಕ ವಿಚಾರಗಳನ್ನು ಇಟ್ಟುಕೊಂಡು ಟ್ರೋಲ್​ ಮಾಡುವವರ ಸಂಖ್ಯೆಯೂ ದೊಡ್ಡದಿದೆ. ಬುಧವಾರವಷ್ಟೇ (ಸೆ.29) ‘ಪುಷ್ಪ’ ಚಿತ್ರದಿಂದ ಹೊಸ ಪೋಸ್ಟರ್​ ರಿಲೀಸ್​ ಆಗಿದೆ. ಅದನ್ನು ಇಟ್ಟುಕೊಂಡು ಹಲವು ಬಗೆಯ ಮೀಮ್​ಗಳನ್ನು ಮಾಡಲಾಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ ಅವು ಸಖತ್​ ವೈರಲ್​ ಆಗುತ್ತಿವೆ.

‘ಪುಷ್ಪ’ ಚಿತ್ರದಲ್ಲಿ ಅಲ್ಲು ಅರ್ಜುನ್​ ಜೊತೆ ರಶ್ಮಿಕಾ ಮಂದಣ್ಣ ತೆರೆಹಂಚಿಕೊಂಡಿದ್ದಾರೆ. ಅವರ ಪಾತ್ರದ ಹೆಸರು ಶ್ರೀವಲ್ಲಿ. ಅವರ ಲುಕ್​ ಹೇಗಿದೆ ಎಂಬುದನ್ನು ತಿಳಿಸಲು ಚಿತ್ರತಂಡ ಬಿಡುಗಡೆ ಮಾಡಿರುವ ಈ ಪೋಸ್ಟರ್​ ಕೆಲವರಿಗೆ ಇಷ್ಟ ಆಗಿಲ್ಲ. ಅದನ್ನು ಮೀಮ್​ಗಳ ರೂಪದಲ್ಲಿ ತಿಳಿಸಲಾಗುತ್ತಿದೆ. ಆ ಫೋಟೋವನ್ನು ಹಲವು ಬಗೆಯಲ್ಲಿ ಎಡಿಟ್​ ಮಾಡಿ ಹರಿಬಿಡಲಾಗುತ್ತಿದೆ.

ರಶ್ಮಿಕಾ ಟಾಯ್ಲೆಟ್​ನಲ್ಲಿ ಕುಳಿತಿರುವಂತೆ, ಮಾರ್ಕೆಟ್​ನಲ್ಲಿ ಮೀನು ಮಾರುತ್ತಿರುವಂತೆ, ಹೊಲ ಗದ್ದೆಯಲ್ಲಿ ಕುಳಿತು ಕೆಲಸ ಮಾಡುತ್ತಿರುವಂತೆ, ದುಂಡು ಪಾಳ್ಯ ಸಿನಿಮಾದಲ್ಲಿ ಪೂಜಾ ಗಾಂಧಿಯ ಪಕ್ಕ ಕುಳಿತಿರುವಂತೆ.. ಹೀಗೆ ನಾನಾ ಬಗೆಯಲ್ಲಿ ಮೀಮ್​ಗಳನ್ನು ತಯಾರಿಸಲಾಗಿದೆ. ಇದರಿಂದ ‘ಪುಷ್ಪ’ ಚಿತ್ರಕ್ಕೆ ಭರ್ಜರಿ ಪ್ರಚಾರ ಸಿಗುತ್ತಿದೆ. ಆದರೆ ತಮ್ಮ ನೆಚ್ಚಿನ ನಟಿಯನ್ನು ಈ ರೀತಿ ಟ್ರೋಲ್​ ಮಾಡಲಾಗುತ್ತಿದೆಯಲ್ಲ ಎಂದು ರಶ್ಮಿಕಾ ಅಭಿಮಾನಿಗಳು ಬೇಸರ ಮಾಡಿಕೊಳ್ಳುತ್ತಿದ್ದಾರೆ.

ಈ ಸಿನಿಮಾ ಎರಡು ಪಾರ್ಟ್​ಗಳಲ್ಲಿ ಮೂಡಿಬಂದಿದೆ. ಈ ವರ್ಷ ಡಿಸೆಂಬರ್​ನಲ್ಲಿ ಕ್ರಿಸ್​ಮಸ್​ ಹಬ್ಬದ ಪ್ರಯುಕ್ತ ‘ಪುಷ್ಪ’ ಮೊದಲ ಪಾರ್ಟ್​ ತೆರೆಕಾಣಲಿದೆ. ಕನ್ನಡದ ನಟ ಡಾಲಿ ಧನಂಜಯ ಕೂಡ ಇದರಲ್ಲಿ ಪ್ರಮುಖ ಪಾತ್ರ ಮಾಡಿರುವುದು ವಿಶೇಷ. ಖ್ಯಾತ ನಿರ್ದೇಶಕ ಸುಕುಮಾರ್​ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ.

ಸದ್ಯ ಶ್ರೀವಲ್ಲಿ ಫಸ್ಟ್​ಲುಕ್​ ಟ್ರೋಲ್​ ಆಗುತ್ತಿರುವ ಬಗ್ಗೆ ರಶ್ಮಿಕಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಸಿನಿಮಾದಿಂದ ಅವರ ವೃತ್ತಿಜೀವನಕ್ಕೆ ದೊಡ್ಡ ಮೈಲೇಜ್​ ಸಿಗುವ ನಿರೀಕ್ಷೆ ಇದೆ. ಬಾಲಿವುಡ್​ನಲ್ಲಿ ಅವರು ‘ಮಿಷನ್​ ಮಜ್ನು’ ಸಿನಿಮಾ ಶೂಟಿಂಗ್​ ಮುಗಿಸಿದ್ದಾರೆ. ‘ಗುಡ್​ಬೈ’ ಚಿತ್ರದಲ್ಲಿ ಅಮಿತಾಭ್​ ಬಚ್ಚನ್​ ಜೊತೆ ನಟಿಸುತ್ತಿದ್ದಾರೆ.

ಇದನ್ನೂ ಓದಿ:

ಪುರುಷರ ಒಳಉಡುಪು ಜಾಹೀರಾತಿನಲ್ಲಿ ರಶ್ಮಿಕಾ ಮಂದಣ್ಣ; ಇದರ ಕಾನ್ಸೆಪ್ಟ್​ ನೋಡಿ ಹೆಣ್ಮಕ್ಕಳು ಸಹಿಸ್ತಾರಾ?

ರಶ್ಮಿಕಾ ಮುಂಬೈಗೆ ಹೋದ್ಮೇಲೆ ಪ್ರಚಾರಕ್ಕಾಗಿ ಮಾಡಿದ ಕೆಲಸ ಏನು? ಬಾಲಿವುಡ್​ನಲ್ಲಿ ಇದು ಕಾಮನ್​

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ