AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಗೊಂಡರೂ ಶೂಟಿಂಗ್‌ಗೆ ಮರಳಲು ರಶ್ಮಿಕಾ ಮಂದಣ್ಣ ಉತ್ಸುಕ: ‘ರಣಬಾಲಿ’ ಚಿತ್ರತಂಡಕ್ಕೆ ಆಸರೆ

ತೀವ್ರ ಗಾಯದ ನಡುವೆಯೂ ನಟಿ ರಶ್ಮಿಕಾ ಮಂದಣ್ಣ ತಮ್ಮ ಬಹುನಿರೀಕ್ಷಿತ 'ರಣಬಲಿ' ಚಿತ್ರದ ಶೂಟಿಂಗ್‌ಗೆ ಮರಳಲು ಸಿದ್ಧರಾಗಿದ್ದಾರೆ. ವೈದ್ಯರ ಸಲಹೆಯಂತೆ ಚೇತರಿಸಿಕೊಳ್ಳುತ್ತಿರುವ ಅವರು, ಅಕ್ಟೋಬರ್ 30 ರಂದು ಸಿನಿಮಾ ಬಿಡುಗಡೆಯಾಗಲಿರುವ ಹಿನ್ನೆಲೆಯಲ್ಲಿ ತಮ್ಮ ಭಾಗದ ಚಿತ್ರೀಕರಣವನ್ನು ನಿಗದಿತ ಸಮಯಕ್ಕೆ ಪೂರ್ಣಗೊಳಿಸಲು ನಿರ್ಧರಿಸಿದ್ದಾರೆ.

ಗಾಯಗೊಂಡರೂ ಶೂಟಿಂಗ್‌ಗೆ ಮರಳಲು ರಶ್ಮಿಕಾ ಮಂದಣ್ಣ ಉತ್ಸುಕ: 'ರಣಬಾಲಿ' ಚಿತ್ರತಂಡಕ್ಕೆ ಆಸರೆ
ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Aug 11, 2026 | 7:05 AM

Share

ಮುಖ್ಯಾಂಶಗಳು

  • ಗಾಯಗೊಂಡರೂ ರಶ್ಮಿಕಾಗೆ ಶೂಟಿಂಗ್ ಮಾಡುವ ಆಸಕ್ತಿ
  • ರಣಬಲಿ ರಿಲೀಸ್ ಡೇಟ್ ಫಿಕ್ಸ್
  • ವಿಜಯ್ ದೇವರಕೊಂಡಗೆ ಮುಖ್ಯವಾದ ಚಿತ್ರ

ಚಿತ್ರೀಕರಣದ ವೇಳೆ ಗಂಭೀರವಾಗಿ ಗಾಯಗೊಂಡಿದ್ದರೂ, ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ತಮ್ಮ ವೃತ್ತಿಪರತೆಗೆ ಸಾಟಿಯಿಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ತೀವ್ರ ಗಾಯದ ನಡುವೆಯೂ ತಮ್ಮ ಬಹುನಿರೀಕ್ಷಿತ ‘ರಣಬಾಲಿ’ ಸಿನಿಮಾದ ಶೂಟಿಂಗ್ ಸೆಟ್‌ಗೆ ಬೇಗನೇ ಮರಳಿ, ಬಾಕಿ ಇರುವ ದೃಶ್ಯಗಳ ಚಿತ್ರೀಕರಣವನ್ನು ಪೂರ್ಣಗೊಳಿಸಲು ಅವರು ತೀವ್ರ ಆಸಕ್ತಿ ತೋರಿದ್ದಾರೆ. ಈ ಮೂಲಕ ಅಂದುಕೊಂಡ ದಿನಾಂಕದಂದು ಸಿನಿಮಾ ರಿಲೀಸ್​​ ಮಾಡಲು ಮುಂದಾಗಿದ್ದಾರೆ.

ರಶ್ಮಿಕಾಗೆ ಗಾಯ

ಇತ್ತೀಚೆಗೆ ಅವರು ಚಿತ್ರ ‘ಮೈಸಾ’ ಶೂಟಿಂಗ್‌ನಲ್ಲಿ ನಿರತರಾಗಿದ್ದಾಗ ರಶ್ಮಿಕಾ ತೀವ್ರ ಸ್ವರೂಪದ ಅಪಘಾತಕ್ಕೆ ಈಡಾಗಿದ್ದರು. ಡ್ಯಾನ್ಸ್ ದೃಶ್ಯದ ಚಿತ್ರೀಕರಣದ ವೇಳೆ ಅವರ ಬಲ ಸೊಂಟದ ಸ್ನಾಯುಖಂಡಕ್ಕೆ ಗಾಯವಾಗಿತ್ತು. ವೈದ್ಯರು ಅವರಿಗೆ ಸುಮಾರು ಆರು ವಾರಗಳ ಕಾಲ ಸಂಪೂರ್ಣ ವಿಶ್ರಾಂತಿ ಮತ್ತು ಫಿಸಿಯೋಥೆರಪಿ ಚಿಕಿತ್ಸೆ ಪಡೆಯುವಂತೆ ಕಟ್ಟುನಿಟ್ಟಿನ ಸಲಹೆ ನೀಡಿದ್ದಾರೆ. ಈ ಆಕಸ್ಮಿಕ ಗಾಯದಿಂದಾಗಿ ‘ಮೈಸಾ’ ಹಾಗೂ ‘ರಣಬಾಲಿ’ ಎರಡೂ ದೊಡ್ಡ ಬಜೆಟ್ ಚಿತ್ರಗಳ ಶೂಟಿಂಗ್ ವೇಳಾಪಟ್ಟಿಗೆ ತಾತ್ಕಾಲಿಕವಾಗಿ ತಡೆ ಬಿದ್ದಿತ್ತು.

ಶೂಟಿಂಗ್ ಮಾಡಲು ಪಣ

ಪ್ರಸ್ತುತ ರಶ್ಮಿಕಾ ಅವರ ಚೇತರಿಕೆ ವೇಗವಾಗಿ ಮತ್ತು ಉತ್ತಮವಾಗಿ ಸಾಗುತ್ತಿದ್ದು, ಚಿತ್ರತಂಡದಲ್ಲಿ ಹೊಸ ಭರವಸೆ ಮೂಡಿದೆ. ಇತ್ತ ‘ರಣಬಾಲಿ’ ನಿರ್ಮಾಪಕರು ಚಿತ್ರವನ್ನು ಅಕ್ಟೋಬರ್ 30ರಂದು ಅದ್ಧೂರಿಯಾಗಿ ಪ್ರದರ್ಶನಕ್ಕೆ ತರಲು ಯೋಜನೆ ರೂಪಿಸಿದ್ದಾರೆ. ಸಿನಿಮಾ ಬಿಡುಗಡೆಯ ದಿನಾಂಕ ಹತ್ತಿರವಾಗುತ್ತಿರುವುದರಿಂದ, ಯಾವುದೇ ವಿಳಂಬವಿಲ್ಲದೆ ತಮಗೆ ನಿಗದಿಪಡಿಸಿದ ಭಾಗದ ಶೂಟಿಂಗ್ ಮುಗಿಸಿಕೊಡಲು ರಶ್ಮಿಕಾ ಪಣ ತೊಟ್ಟಿದ್ದಾರೆ. ವಿಜಯ್​ಗೆ ಮುಖ್ಯ

‘ರಣಬಾಲಿ’ ಸಿನಿಮಾ ನಟ ವಿಜಯ್ ದೇವರಕೊಂಡ ಅವರಿಗೆ ಅತ್ಯಂತ ನಿರ್ಣಾಯಕವಾಗಿದೆ. ಇತ್ತೀಚಿನ ಅವರ ಕೆಲವು ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಹಿನ್ನೆಲೆಯಲ್ಲಿ ಈ ಚಿತ್ರದ ಮೇಲೆ ಭಾರಿ ನಿರೀಕ್ಷೆಯಿದೆ. ಜೊತೆಗೆ, ಪತಿ ವಿಜಯ್ ದೇವರಕೊಂಡ ನಾಯಕನಾಗಿ ನಟಿಸುತ್ತಿರುವ ಚಿತ್ರವಾದ್ದರಿಂದ ರಶ್ಮಿಕಾ ಅವರಿಗೂ ಇದು ಭಾವನಾತ್ಮಕವಾಗಿ ಅತ್ಯಂತ ವಿಶೇಷವಾದ ಯೋಜನೆಯಾಗಿದೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಸೊಂಟಕ್ಕೆ ಪೆಟ್ಟಾಗಿದ್ದು ಹೇಗೆ? ಎಲ್ಲವನ್ನೂ ವಿವರಿಸಿದ ನಟಿ

ಗಾಯದ ನೋವಿದ್ದರೂ ರಶ್ಮಿಕಾ ತೋರಿಸುತ್ತಿರುವ ಈ ಕಮಿಟ್‌ಮೆಂಟ್ ಕಂಡು ‘ರಣಬಾಲಿ’ ಚಿತ್ರತಂಡ ಅಚ್ಚರಿಗೊಂಡಿದ್ದು, ಯೋಜಿಸಿದಂತೆ ಶೂಟಿಂಗ್ ಪೂರ್ಣಗೊಳಿಸಿ ಅಕ್ಟೋಬರ್ 30ಕ್ಕೆ ತೆರೆಗೆ ತರಲು ಭರದ ಸಿದ್ಧತೆ ನಡೆಸುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ
ಬೆಂಗಳೂರಲ್ಲಿ ಅಬ್ಬರಿಸಿದ ವರುಣ: ಕೆರೆಗಳಂತಾದ ರಸ್ತೆಗಳು; ಸವಾರರು ಪರದಾಟ
ಬೆಂಗಳೂರಲ್ಲಿ ಅಬ್ಬರಿಸಿದ ವರುಣ: ಕೆರೆಗಳಂತಾದ ರಸ್ತೆಗಳು; ಸವಾರರು ಪರದಾಟ
ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ