AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇವರಕೊಂಡ ಜತೆ ಲಿಪ್​ ಲಾಕ್​ ಮಾಡಿ ಟ್ರೋಲ್​ ಆದಾಗ ಹಗಲು-ರಾತ್ರಿ ಕಣ್ಣೀರು ಸುರಿಸಿದ್ದೆ’: ರಶ್ಮಿಕಾ

Rashmika Mandanna: ಇದನ್ನೆಲ್ಲ ರಶ್ಮಿಕಾ ಮಂದಣ್ಣ ಅವರು ಕುಟುಂಬದವರ ಬಳಿಯೂ ಹೇಳಿಕೊಂಡಿರಲಿಲ್ಲ. ಮನೆಯವರಿಗೆ ತೊಂದರೆ ಕೊಡುವುದು ಬೇಡ ಎಂಬ ಕಾರಣಕ್ಕೆ ಎಲ್ಲ ನೋವನ್ನೂ ತಾವೊಬ್ಬರೇ ಅನುಭವಿಸಿದರು.

‘ದೇವರಕೊಂಡ ಜತೆ ಲಿಪ್​ ಲಾಕ್​ ಮಾಡಿ ಟ್ರೋಲ್​ ಆದಾಗ ಹಗಲು-ರಾತ್ರಿ ಕಣ್ಣೀರು ಸುರಿಸಿದ್ದೆ’: ರಶ್ಮಿಕಾ
ರಶ್ಮಿಕಾ ಮಂದಣ್ಣ
Follow us
TV9 Web
| Updated By: ಮದನ್​ ಕುಮಾರ್​

Updated on:Oct 04, 2022 | 8:42 AM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಈಗ ನ್ಯಾಷನಲ್​ ಕ್ರಶ್​ ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುತ್ತಿದ್ದಾರೆ. ಅವರ ಕಾಲ್​ಶೀಟ್​ ಬೇಕು ಎಂದು ನಿರ್ಮಾಪಕರು ಸಾಲುಗಟ್ಟಿ ನಿಂತಿದ್ದಾರೆ. ದಕ್ಷಿಣ ಭಾರತದಿಂದ ಬಾಲಿವುಡ್​ ತನಕ ಅವರಿಗೆ ಸಖತ್​ ಡಿಮ್ಯಾಂಡ್​ ಇದೆ. ಕೆಲವು ಕಾರಣಗಳಿಂದ ಅವರನ್ನು ನೆಟ್ಟಿಗರು ಟ್ರೋಲ್​ (Troll) ಮಾಡುತ್ತಾರೆ. ಯಾವುದೇ ಟ್ರೋಲ್​ಗಳಿಗೆ ರಶ್ಮಿಕಾ ಈಗ ಜಗ್ಗುವುದಿಲ್ಲ. ಆದರೆ ಒಂದು ಕಾಲದಲ್ಲಿ ಪರಿಸ್ಥಿತಿ ಹೀಗೆ ಇರಲಿಲ್ಲ. ಲಿಪ್​ ಲಾಕ್​ ಕಾರಣಕ್ಕಾಗಿ ಅವರನ್ನು ಹಿಗ್ಗಾಮುಗ್ಗಾ ಟ್ರೋಲ್​ ಮಾಡಿದಾಗ ತುಂಬ ನೊಂದುಕೊಂಡಿದ್ದರು. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಆ ದಿನಗಳ ಕುರಿತು ರಶ್ಮಿಕಾ ಮಂದಣ್ಣ ಮಾತನಾಡಿದ್ದಾರೆ. ಅಂದಿನ ಸ್ಥಿತಿ ಹೇಗಿತ್ತು ಎಂಬುದನ್ನು ವಿವರಿಸಿದ್ದಾರೆ.

ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ ಅವರು ‘ಗೀತಾ ಗೋವಿಂದಂ’ ಹಾಗೂ ‘ಡಿಯರ್​ ಕಾಮ್ರೇಡ್​’ ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿದರು. ಇಬ್ಬರ ನಡುವೆ ಉತ್ತಮ ಬಾಂಧವ್ಯ ಇದೆ. ತೆರೆ ಮೇಲೆ ಅವರಿಬ್ಬರ ಕೆಮಿಸ್ಟ್ರಿ ಅಭಿಮಾನಿಗಳಿಗೆ ಇಷ್ಟ ಆಗಿದೆ. ‘ಡಿಯರ್​ ಕಾಮ್ರೇಡ್​’ ಚಿತ್ರದಲ್ಲಿ ರಶ್ಮಿಕಾ ಹಾಗೂ ವಿಜಯ್​ ದೇವರಕೊಂಡ ಲಿಪ್​ ಲಾಕ್​ ಮಾಡಿದ್ದರು. ಆ ದೃಶ್ಯವನ್ನೇ ಇಟ್ಟುಕೊಂಡು ಸಿಕ್ಕಾಪಟ್ಟೆ ಟ್ರೋಲ್​ ಮಾಡಲಾಗಿತ್ತು.

‘ಅದು ಒಂದು ಸೆಕೆಂಡ್​ನಲ್ಲಿ ನಡೆಯಿತು. ಆದರೆ ಅದನ್ನು ತಿಂಗಳುಗಟ್ಟಲೆ ಟ್ರೋಲ್​ ಮಾಡಲಾಯಿತು. ನೋವಿನ ಅನೇಕ ಸಂಗತಿಗಳು ನಡೆಯುತ್ತಿದ್ದವು. ಬೇಸರ ತರಿಸುವ ಹಲವು ಸುದ್ದಿಗಳನ್ನು ನೋಡುತ್ತಿದ್ದೆ. ಎಲ್ಲರೂ ನನ್ನ ಬಿಟ್ಟು ಹೋದಂತೆ, ನಾನು ಒಂಟಿ ಆದಂತೆ ಕನಸು ಬೀಳುತ್ತಿತ್ತು. ಕಣ್ಣೀರು ಹಾಕುತ್ತಲೇ ಏಳುತ್ತಿದ್ದೆ’ ಎಂದು ರಶ್ಮಿಕಾ ಹೇಳಿದ್ದಾರೆ.

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

ಈ ಎಲ್ಲ ವಿಚಾರಗಳನ್ನು ಅವರು ಕುಟುಂಬದವರ ಬಳಿಯೂ ಹೇಳಿಕೊಂಡಿರಲಿಲ್ಲ. ಮನೆಯವರಿಗೆ ಸುಮ್ಮನೆ ತೊಂದರೆ ಕೊಡುವುದು ಬೇಡ ಎಂಬ ಕಾರಣಕ್ಕೆ ಎಲ್ಲ ನೋವನ್ನೂ ತಾವೊಬ್ಬರೇ ಅನುಭವಿಸಿದರು. ಇಷ್ಟೆಲ್ಲ ಕಷ್ಟಗಳನ್ನು ದಾಟಿಕೊಂಡು ಬಂದಿರುವ ರಶ್ಮಿಕಾ ಈಗ ಬಹುಬೇಡಿಕೆಯ ಹೀರೋಯಿನ್​ ಆಗಿ ಬೆಳೆದಿದ್ದಾರೆ. ಬಾಲಿವುಡ್​ನಲ್ಲೂ ಅವರು ಮಿಂಚುತ್ತಿದ್ದಾರೆ.

‘ಗುಡ್​ಬೈ’ ಸಿನಿಮಾದಲ್ಲಿ ಅಮಿತಾಭ್​ ಬಚ್ಚನ್​ ಜೊತೆಗೆ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಅಂತಹ ಮಹಾನ್​ ಕಲಾವಿದನ ಜೊತೆ ನಟಿಸಿದ್ದಕ್ಕೆ ಅವರಿಗೆ ತುಂಬ ಹೆಮ್ಮೆ ಇದೆ. ಈ ಸಿನಿಮಾ ಅಕ್ಟೋಬರ್​ 7ರಂದು ಬಿಡುಗಡೆ ಆಗಲಿದೆ. ಈಗಾಗಲೇ ಟ್ರೇಲರ್​ ಗಮನ ಸೆಳೆದಿದೆ. ಮೊದಲ ದಿನ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರನ್ನು ತಲುಪಲು ಟಿಕೆಟ್​ ದರವನ್ನು ಕೇವಲ 150 ರೂಪಾಯಿ ನಿಗದಿ ಮಾಡಲಾಗಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:42 am, Tue, 4 October 22

ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ