‘ಪುಷ್ಪ’ ಗೆದ್ದ ಬಳಿಕ ಸಂಭಾವನೆ ಹೆಚ್ಚಿಸಿಕೊಂಡ ರಶ್ಮಿಕಾ; ಮುಂದಿನ ಚಿತ್ರಕ್ಕೆ ಈ ನಟಿ ಪಡೆಯುವ ಸಂಬಳ ಎಷ್ಟು?

Rashmika Mandanna Remuneration: ರಶ್ಮಿಕಾ ಮಂದಣ್ಣ ಈಗ ಗೆಲ್ಲುವ ಕುದುರೆ ಆಗಿದ್ದಾರೆ. ಅವರು ಮುಟ್ಟಿದ್ದೆಲ್ಲವೂ ಚಿನ್ನ ಆಗುತ್ತಿದೆ. ಹಾಗಾಗಿ ಅವರ ಜೊತೆ ಸಿನಿಮಾ ಮಾಡಲು ನಿರ್ಮಾಪಕರು ಮುಗಿಬೀಳುತ್ತಿದ್ದಾರೆ.

‘ಪುಷ್ಪ’ ಗೆದ್ದ ಬಳಿಕ ಸಂಭಾವನೆ ಹೆಚ್ಚಿಸಿಕೊಂಡ ರಶ್ಮಿಕಾ; ಮುಂದಿನ ಚಿತ್ರಕ್ಕೆ ಈ ನಟಿ ಪಡೆಯುವ ಸಂಬಳ ಎಷ್ಟು?
ರಶ್ಮಿಕಾ ಮಂದಣ್ಣ
Follow us
| Updated By: ಮದನ್​ ಕುಮಾರ್​

Updated on: Jan 09, 2022 | 4:27 PM

ಸದ್ಯಕ್ಕಂತೂ ನಟಿ ರಶ್ಮಿಕಾ ಮಂದಣ್ಣ (Rashmika Mandanna ) ಅವರು ಯಶಸ್ಸಿನ ಉತ್ತುಂಗದಲ್ಲಿ ಇದ್ದಾರೆ. ದಕ್ಷಿಣ ಭಾರತದ ಸ್ಟಾರ್​ ನಟರ ಸಿನಿಮಾಗಳಿಗೆ ಅವರೇ ನಾಯಕಿ ಆಗಬೇಕು ಎಂದು ನಿರ್ದೇಶಕರು ಪಟ್ಟು ಹಿಡಿಯುತ್ತಿದ್ದಾರೆ. ಎಷ್ಟು ಖರ್ಚಾದರೂ ಪರವಾಗಿಲ್ಲ ಎಂದು ಕಾಲ್​ಶೀಟ್​ ಪಡೆಯೋಕೆ ನಿರ್ಮಾಪಕರು ಮುಗಿಬೀಳುತ್ತಿದ್ದಾರೆ. ಈಗ ‘ಪುಷ್ಪ’ (Pushpa Movie) ಸಿನಿಮಾದಿಂದ ರಶ್ಮಿಕಾ ಮಂದಣ್ಣ ದೊಡ್ಡ ಗೆಲುವು ಪಡೆದುಕೊಂಡಿದ್ದಾರೆ. ಅದರ ಜೊತೆಗೆ ಅವರು ಸಂಭಾವನೆ (Rashmika Mandanna Remuneration) ಹೆಚ್ಚಿಸಿಕೊಂಡಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಅದೇ ರೀತಿ ನಟ ಅಲ್ಲು ಅರ್ಜುನ್​ (Allu Arjun) ಅವರ ಸಂಭಾವನೆಯಲ್ಲೂ ಏರಿಕೆ ಆಗಿದೆ ಎನ್ನಲಾಗಿದೆ.

ಈಗಾಗಲೇ ತಿಳಿದಿರುವಂತೆ ‘ಪುಷ್ಪ’ ಚಿತ್ರದ ಎರಡನೇ ಪಾರ್ಟ್ ಸಿದ್ಧವಾಗುತ್ತಿದೆ. ಆ ಸಿನಿಮಾದಲ್ಲೂ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಅಭಿನಯಿಸಲಿದ್ದಾರೆ. ಮೊದಲ ಪಾರ್ಟ್​ ಗೆದ್ದ ಬಳಿಕ ಎರಡನೇ ಪಾರ್ಟ್​ಗೆ ರಶ್ಮಿಕಾ ಹೆಚ್ಚು ಸಂಬಳ ಕೇಳುತ್ತಿದ್ದಾರಂತೆ. ಮೊದಲ ಪಾರ್ಟ್​ಗೆ 2 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದ ಅವರು ಈಗ 3 ಕೋಟಿ ರೂ. ಡಿಮ್ಯಾಂಡ್​ ಮಾಡುತ್ತಿದ್ದಾರೆ ಎನ್ನಲಾಗಿದೆ. ಅಂದರೆ, ಅವರು ಶೇ.50ರಷ್ಟು ಸಂಭಾವನೆಯನ್ನು ಹಚ್ಚಿಸಿಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ ಈಗ ಗೆಲ್ಲುವ ಕುದುರೆ ಆಗಿದ್ದಾರೆ. ಅವರು ಮುಟ್ಟಿದ್ದೆಲ್ಲವೂ ಚಿನ್ನ ಆಗುತ್ತಿದೆ. ಹಾಗಾಗಿ ಅವರ ಜೊತೆ ಸಿನಿಮಾ ಮಾಡಲು ನಿರ್ಮಾಪಕರು ಮುಗಿಬೀಳುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ಮಿಂಚಿದ ಬಳಿಕ ಅವರಿಗೆ ಬಾಲಿವುಡ್​ನಿಂದಲೂ ಬುಲಾವ್​ ಬಂದಿದೆ. ಅಮಿತಾಭ್​ ಬಚ್ಚನ್​ ಜೊತೆ ‘ಗುಡ್​ ಬೈ’ ಹಾಗೂ ಸಿದ್ದಾರ್ಥ್​ ಮಲ್ಹೋತ್ರ ಜೊತೆ ‘ಮಿಷನ್​ ಮಜ್ನು’ ಚಿತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ. ಆ ಸಿನಿಮಾಗಳು ತೆರೆಕಂಡ ಬಳಿಕ ರಶ್ಮಿಕಾ ಮಂದಣ್ಣ ಅವರ ಖ್ಯಾತಿ ಇನ್ನಷ್ಟು ಹೆಚ್ಚಲಿದೆ.

ತಪ್ಪಾಗಿದೆ ರಶ್ಮಿಕಾ ಮಂದಣ್ಣ ಹೆಸರು:

‘ಪುಷ್ಪ’ ಸಿನಿಮಾ ಪೂರ್ಣಗೊಂಡ ನಂತರದಲ್ಲಿ ಕೊನೆಯಲ್ಲಿ ಎಲ್ಲಾ ಕಲಾವಿದರ ಫೋಟೋವನ್ನು ಹಾಕಿ ಹೆಸರು ತೋರಿಸಲಾಗಿದೆ. ಅಲ್ಲು ಅರ್ಜುನ್​, ಫಹಾದ್​ ಫಾಸಿಲ್​ ಆದ ಬಳಿಕ ರಶ್ಮಿಕಾ ಅವರ ಹೆಸರು ಬಂದಿದೆ. ಎಲ್ಲಾ ಹೆಸರುಗಳು ಇಂಗ್ಲಿಷ್​ನಲ್ಲಿವೆ. ರಶ್ಮಿಕಾ ಹೆಸರನ್ನು ತಪ್ಪಾಗಿ ಬರೆಯಲಾಗಿದೆ. ರಶ್ಮಿಕಾ ಮಂದಣ್ಣ ಬದಲು, ರಸ್ಮಿಕಾ ಮಡೋನಾ ಎಂದು ಬರೆಯಲಾಗಿದೆ. ಚಿತ್ರತಂಡ ಮಾಡಿದ ಈ ಅಚಾತುರ್ಯಕ್ಕೆ ಅನೇಕರಿಂದ ವಿರೋಧ ವ್ಯಕ್ತವಾಗಿದೆ.

ಇದನ್ನೂ ಓದಿ:

ರಶ್ಮಿಕಾ ಮಂದಣ್ಣ ನಟನೆಗಿಲ್ಲ ಮಹೇಶ್​ ಬಾಬು ಮೆಚ್ಚುಗೆ; ಪ್ರಿನ್ಸ್​ಗೆ ಧನ್ಯವಾದ ಹೇಳಿದ ಅಭಿಮಾನಿಗಳು

ವಿಜಯ್​ ದೇವರಕೊಂಡ ಜತೆ ಗೋವಾದಲ್ಲಿ ಹೊಸ ವರ್ಷ ಆಚರಿಸಿದ ರಶ್ಮಿಕಾ? ಇಲ್ಲಿದೆ ಫೋಟೋ ಸಾಕ್ಷಿ

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ