AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಸೋಲಿನಿಂದ ರಶ್ಮಿಕಾ ವೃತ್ತಿಜೀವನಕ್ಕೆ ಪೆಟ್ಟು; ‘ಸ್ಪಿರಿಟ್’ ಸಿನಿಮಾದಿಂದ ಔಟ್?

‘ಸ್ಪಿರಿಟ್’ ಸಿನಿಮಾದಲ್ಲಿ ಪ್ರಭಾಸ್ ಮತ್ತು ರಶ್ಮಿಕಾ ಮಂದಣ್ಣ ಜೋಡಿ ಆಗಬಹುದು ಎಂದು ಅನೇಕರು ಊಹಿಸಿದ್ದರು. ಆದರೆ ಈಗ ನಟಿಗೆ ಹಿನ್ನಡೆ ಆದಂತಿದೆ. ‘ಸಿಕಂದರ್’ ಸಿನಿಮಾ ಸೋತಿದ್ದರಿಂದ ರಶ್ಮಿಕಾ ಅವರಿಗೆ ಬೇಡಿಕೆ ಕಡಿಮೆ ಆಗಲಿದೆ ಎಂದು ಸುದ್ದಿ ಹಬ್ಬಿದೆ. ಚಿತ್ರತಂಡದವರು ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ.

ಒಂದೇ ಸೋಲಿನಿಂದ ರಶ್ಮಿಕಾ ವೃತ್ತಿಜೀವನಕ್ಕೆ ಪೆಟ್ಟು; ‘ಸ್ಪಿರಿಟ್’ ಸಿನಿಮಾದಿಂದ ಔಟ್?
Prabhas, Rashmika Mandanna, Sandeep Reddy Vanga
Follow us
ಮದನ್​ ಕುಮಾರ್​
|

Updated on: Apr 09, 2025 | 10:09 PM

ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ಮೂಲಕ ಸೂಪರ್ ಸಕ್ಸಸ್ ಕಂಡ ರಶ್ಮಿಕಾ ಮಂದಣ್ಣ ಅವರು ನಿರ್ಮಾಪಕರ ಫೇವರಿಟ್ ಆಗಿದ್ದಾರೆ. ಅವರಿಗೆ ಸಿಕ್ಕಾಪಟ್ಟೆ ಅವಕಾಶಗಳು ಹರಿದುಬರುತ್ತಿವೆ. ‘ಛಾವ’, ‘ಅನಿಮಲ್’ ಸಿನಿಮಾಗಳ ಯಶಸ್ಸಿನಿಂದ ಬಾಲಿವುಡ್​ನಲ್ಲಿ ಕೂಡ ರಶ್ಮಿಕಾ ಅವರ ಖ್ಯಾತಿ ಡಬಲ್ ಆಯಿತು. ಇನ್ನು, ದಕ್ಷಿಣ ಭಾರತದಲ್ಲಿ ಅವರಿಗೆ ದೊಡ್ಡ ಫ್ಯಾನ್ ಫಾಲೋಯಿಂಗ್ ಇದೆ. ಈ ನಡುವೆ ಪ್ರಭಾಸ್ ನಟನೆಯ ‘ಸ್ಪಿರಿಟ್’ (Spirit) ಸಿನಿಮಾಗೂ ರಶ್ಮಿಕಾ ಮಂದಣ್ಣ ಅವರು ನಾಯಕಿ ಆಗುತ್ತಾರೆ ಎಂದು ಗಾಸಿಪ್ ಹಬ್ಬಿತ್ತು. ಆದರೆ ಈಗ ಬೇರೆ ಸುದ್ದಿ ಕೇಳಿಬರುತ್ತಿದೆ. ರಶ್ಮಿಕಾ ಮಂದಣ್ಣ (Rashmika Mandanna) ಅವರು ಈ ಚಿತ್ರಕ್ಕೆ ಆಯ್ಕೆ ಆಗುವುದು ಅನುಮಾನ ಎನ್ನಲಾಗುತ್ತಿದೆ.

ಖ್ಯಾತ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರು ‘ಸ್ಪಿರಿಟ್’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಲಿದ್ದಾರೆ. ‘ಅರ್ಜುನ್ ರೆಡ್ಡಿ’, ‘ಕಬೀರ್ ಸಿಂಗ್’, ‘ಅನಿಮಲ್’ ಸಿನಿಮಾಗಳ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅವರು ಫೇಮಸ್ ಆಗಿದ್ದಾರೆ. ಪ್ರಭಾಸ್ ಜೊತೆ ‘ಸ್ಪಿರಿಟ್’ ಸಿನಿಮಾ ಮಾಡಲು ಅವರು ಸಕಲ ತಯಾರಿ ಮಾಡಿಕೊಂಡಿದ್ದಾರೆ. ಪಾತ್ರವರ್ಗದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ.

ರಶ್ಮಿಕಾ ಮಂದಣ್ಣ ಮತ್ತು ಸಂದೀಪ್ ರೆಡ್ಡಿ ವಂಗಾ ಅವರು ‘ಅನಿಮಲ್’ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ‘ಸ್ಪಿರಿಟ್’ ಚಿತ್ರಕ್ಕೂ ರಶ್ಮಿಕಾ ಅವರನ್ನು ನಾಯಕಿಯನ್ನಾಗಿ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿತ್ತು. ಆದರೆ ಈಗ ರಶ್ಮಿಕಾ ನಟನೆಯ ‘ಸಿಕಂದರ್’ ಸಿನಿಮಾಗೆ ಸೋಲು ಉಂಟಾಗಿರುವ ಕಾರಣದಿಂದ ಬೇರೆ ನಟಿಯನ್ನು ಆಯ್ಕೆ ಮಾಡಿಕೊಳ್ಳಲು ಚಿತ್ರತಂಡ ತೀರ್ಮಾನಿಸಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ
Image
‘ನನ್ನ ತಂಗಿಗೆ ಸವಲತ್ತು ಸಿಗಬಾರದು’; ರಶ್ಮಿಕಾ ಮಂದಣ್ಣ ಹೀಗೆ ಅಂದಿದ್ಯಾಕೆ?
Image
ರಶ್ಮಿಕಾ ಮಂದಣ್ಣ ಹಿಂಗೆಲ್ಲ ಮಾಡಿದರೂ ಕ್ಯೂಟ್ ಅಂತಾರೆ ಅಭಿಮಾನಿಗಳು
Image
‘ನಾನು ಹೈದರಾಬಾದ್​ನವಳು’ ಎಂದು ಹೆಮ್ಮೆಯಿಂದ ಹೇಳಿದ ರಶ್ಮಿಕಾ
Image
‘ಎಲ್ಲರಿಗೂ ಆ ವಿಚಾರ ಗೊತ್ತಿದೆ’; ಮದುವೆ ಬಗ್ಗೆ ನೇರವಾಗಿ ಮಾತನಾಡಿದ ರಶ್ಮಿಕಾ

‘ಸಿಕಂದರ್’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅವರಿಗೆ ಜೋಡಿಯಾಗಿ ರಶ್ಮಿಕಾ ನಟಿಸಿದರು. ಟ್ರೇಲರ್ ಬಿಡುಗಡೆ ಆದಾಗಲೇ ಈ ಸಿನಿಮಾ ಬಗ್ಗೆ ಟ್ರೋಲ್ ಶುರುವಾಯಿತು. ಬಾಕ್ಸ್ ಆಫೀಸ್​ನಲ್ಲಿ ಈ ಚಿತ್ರಕ್ಕೆ ನಿರೀಕ್ಷಿತ ಪ್ರಮಾಣದ ಕಲೆಕ್ಷನ್ ಆಗಿಲ್ಲ. ರಶ್ಮಿಕಾ ಅವರ ನಟನೆಯನ್ನು ಜನರು ಟೀಕಿಸಿದ್ದಾರೆ. ರಶ್ಮಿಕಾ ಬಗ್ಗೆ ಇಂಥ ನೆಗೆಟಿವ್ ಟಾಕ್ ಶುರುವಾಗಿರುವುದರಿಂದ ‘ಸ್ಪಿರಿಟ್’ ಸಿನಿಮಾಗೆ ಬೇರೆ ನಟಿಯನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಫೋಟೋದಿಂದ ಬಯಲಾಯ್ತು ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ನಡುವಿನ ಗುಟ್ಟು

ಒಂದು ವೇಳೆ ರಶ್ಮಿಕಾ ಮಂದಣ್ಣ ಅವರು ‘ಸ್ಪಿರಿಟ್’ ಚಿತ್ರಕ್ಕೆ ಆಯ್ಕೆಯಾದರೆ ಅದು ಅವರ ಪಾಲಿಗೆ ದೊಡ್ಡ ಪ್ರಾಜೆಕ್ಟ್ ಆಗಲಿದೆ. ಅದಕ್ಕಾಗಿ ಅವರು 4 ಕೋಟಿ ರೂಪಾಯಿ ಸಂಭಾವನೆ ಪಡೆಯುವ ಸಾಧ್ಯತೆ ಇತ್ತು. ಆದರೆ ಈ ಯಾವ ಬೆಳವಣಿಗೆಗಳ ಬಗ್ಗೆಯೂ ಚಿತ್ರತಂಡದಿಂದ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಹಾಗಾಗಿ ಕಾದುನೋಡೋಣ ಎನ್ನುತ್ತಿದ್ದಾರೆ ರಶ್ಮಿಕಾ ಮಂದಣ್ಣ ಅಭಿಮಾನಿಗಳು.

​ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ