AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ನನ್ನ ಅಪ್ಪ-ಅಮ್ಮನಿಗೂ ಇದನ್ನು ನಂಬಲಾಗಲಿಲ್ಲ; ಹಳೆ ನೆನಪು ಬಿಚ್ಚಿಟ್ಟ ರಶ್ಮಿಕಾ ಮಂದಣ್ಣ

ಅಮಿತಾಭ್​ ಜತೆ ನಟಿಸುತ್ತಿರುವ ಸಿನಿಮಾಗೆ ಗುಡ್​ ಬಾಯ್​ ಎನ್ನುವ ಟೈಟಲ್​ ಇಡಲಾಗಿದೆ. ಈ ಸಿನಿಮಾ ಆಫರ್ ಬಂದಾಗ ಅವರು ತುಂಬಾನೇ ಎಗ್ಸೈಟ್​ ಆಗಿದ್ದರಂತೆ. ಆದರೆ, ಈ ವಿಚಾರವನ್ನು ಅವರ ಮನೆಯವರು ನಂಬಲೇ ಇಲ್ಲವಂತೆ!

Rashmika Mandanna: ನನ್ನ ಅಪ್ಪ-ಅಮ್ಮನಿಗೂ ಇದನ್ನು ನಂಬಲಾಗಲಿಲ್ಲ; ಹಳೆ ನೆನಪು ಬಿಚ್ಚಿಟ್ಟ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಾಜೇಶ್ ದುಗ್ಗುಮನೆ
|

Updated on: Apr 15, 2021 | 5:49 PM

Share

ನಟಿ ರಶ್ಮಿಕಾ ಮಂದಣ್ಣ ಖ್ಯಾತಿ ಈಗ ದಕ್ಷಿಣ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ಕನ್ನಡ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದ ಅವರು ಈಗ ಬಾಲಿವುಡ್​ಗೆ ಹೋಗಿ ನಿಂತಿದ್ದಾರೆ. ಬಾಲಿವುಡ್​ ಬಿಗ್​ ಬಿ ಅಮಿತಾಭ್​ ಬಚ್ಚನ್​ ಜತೆಗೆ ರಶ್ಮಿಕಾ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ವಿಚಾರದ ಬಗ್ಗೆ ರಶ್ಮಿಕಾ ಮಾತನಾಡಿದ್ದಾರೆ. ಅಮಿತಾಭ್​ ಜತೆ ನಟಿಸುತ್ತಿರುವ ಸಿನಿಮಾಗೆ ಗುಡ್​ಬಯ್​​ ಎನ್ನುವ ಟೈಟಲ್​ ಇಡಲಾಗಿದೆ. ಈ ಸಿನಿಮಾ ಆಫರ್ ಬಂದಾಗ ಅವರು ತುಂಬಾನೇ ಎಗ್ಸೈಟ್​ ಆಗಿದ್ದರಂತೆ. ಆದರೆ, ಈ ವಿಚಾರವನ್ನು ಅವರ ಮನೆಯವರು ನಂಬಲೇ ಇಲ್ಲವಂತೆ! ಈ ನೆನಪಿನ ಬಗ್ಗೆ ಅವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ಅಮಿತಾಭ್​ ಓರ್ವ ಸೂಪರ್​ಸ್ಟಾರ್​. ಅವರ ಜತೆ ನಾನು ತೆರೆ ಹಂಚಿಕೊಳ್ಳುತ್ತೇನೆ ಎನ್ನುವ ವಿಚಾರ ಮನೆಯವರಿಗೆ ಗೊತ್ತಾದಾಗ ತುಂಬಾನೇ ಖುಷಿಯಾಗಿದ್ದರು. ಅದಕ್ಕೂ ಮೊದಲು ಅವರಿಗೆ ಈ ವಿಚಾರದ ಮೇಲೆ ನಂಬಿಕೆಯೇ ಬಂದಿರಲಿಲ್ಲ. ನಾನು ಅಮಿತಾಭ್​ ಸಿನಿಮಾ ನೋಡಿ ಬೆಳೆದವಳು. ಈಗ ಅವರ ಜತೆಯೇ ನಟನೆ ಮಾಡುತ್ತಿರುವುದಕ್ಕೆ ಖುಷಿ ಇದೆ ಎಂದಿದ್ದಾರೆ ರಶ್ಮಿಕಾ.

ರಶ್ಮಿಕಾ ಮಂದಣ್ಣ ಇತ್ತೀಚೆಗೆ ಅಮಿತಾಭ್​ ಅವರನ್ನು ಭೇಟಿ ಮಾಡಿದ್ದರು. ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲೂ ಹಂಚಿಕೊಂಡಿದ್ದರು. ಈ ಭೇಟಿ ಬಗ್ಗೆ ಹೇಳಿಕೊಂಡಿರುವ ರಶ್ಮಿಕಾ, ಶಿಕ್ಷಕರು ವಿದ್ಯಾರ್ಥಿಗಳನ್ನು ಟ್ರೀಟ್​ ಮಾಡುವಂತೆ ಅವರು ನನ್ನನ್ನು ಟ್ರೀಟ್​ ಮಾಡಿದ್ದರು. ಒಳ್ಳೊಳ್ಳೆ ಕೆಲಸ ಮಾಡು ಎಂದು ಅವರು ನನಗೆ ಕಿವಿಮಾತು ಹೇಳಿದರು ಎಂದಿದ್ದಾರೆ ರಶ್ಮಿಕಾ.

ಸದ್ಯ, ರಶ್ಮಿಕಾ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಬಾಲಿವುಡ್​ ಸಿನಿಮಾ ಮಿಷನ್​ ಮಜ್ನು ಕೆಲಸದಲ್ಲಿ ಅವರು ಬ್ಯುಸಿಯಾಗಿದ್ದಾರೆ. ಈ ಚಿತ್ರದಲ್ಲಿ ಸಿದ್ಧಾರ್ಥ್​ ಮಲ್ಹೋತ್ರಗೆ ಜೋಡಿ ಆಗಿದ್ದಾರೆ. ಗುಡ್​ಬಯ್​ ರಶ್ಮಿಕಾ ಅವರ ಎರಡನೇ ಹಿಂದಿ ಸಿನಿಮಾ. ವಿಕಾಸ್​  ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ನಟ ಅಲ್ಲು ಅರ್ಜುನ್​ ಹಾಗೂ ನಿರ್ದೇಶಕ ಸುಕುಮಾರ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಪುಷ್ಪ ಚಿತ್ರಕ್ಕೂ ರಶ್ಮಿಕಾ ನಾಯಕಿ.

ಇದನ್ನೂ ಓದಿ: Rashmika Mandanna: ರಶ್ಮಿಕಾಗೆ ಬಾಲಿವುಡ್​ನಲ್ಲಿ ಬೆಂಬಲವಾಗಿ ನಿಂತ ಸಿದ್ಧಾರ್ಥ್ ಮಲ್ಹೋತ್ರ! ಅನುಭವ ಹಂಚಿಕೊಂಡ ಕಿರಿಕ್​ ಬೆಡಗಿ

ಹರಿದ ಜೀನ್ಸ್​ ಪ್ಯಾಂಟ್​ ವಿಚಾರಕ್ಕೆ ಮುಖ್ಯಮಂತ್ರಿಯನ್ನೇ ಎದುರು ಹಾಕಿಕೊಂಡ ಅಮಿತಾಭ್​ ಮೊಮ್ಮಗಳು ನವ್ಯಾ!

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?