AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ನನ್ನ ಅಪ್ಪ-ಅಮ್ಮನಿಗೂ ಇದನ್ನು ನಂಬಲಾಗಲಿಲ್ಲ; ಹಳೆ ನೆನಪು ಬಿಚ್ಚಿಟ್ಟ ರಶ್ಮಿಕಾ ಮಂದಣ್ಣ

ಅಮಿತಾಭ್​ ಜತೆ ನಟಿಸುತ್ತಿರುವ ಸಿನಿಮಾಗೆ ಗುಡ್​ ಬಾಯ್​ ಎನ್ನುವ ಟೈಟಲ್​ ಇಡಲಾಗಿದೆ. ಈ ಸಿನಿಮಾ ಆಫರ್ ಬಂದಾಗ ಅವರು ತುಂಬಾನೇ ಎಗ್ಸೈಟ್​ ಆಗಿದ್ದರಂತೆ. ಆದರೆ, ಈ ವಿಚಾರವನ್ನು ಅವರ ಮನೆಯವರು ನಂಬಲೇ ಇಲ್ಲವಂತೆ!

Rashmika Mandanna: ನನ್ನ ಅಪ್ಪ-ಅಮ್ಮನಿಗೂ ಇದನ್ನು ನಂಬಲಾಗಲಿಲ್ಲ; ಹಳೆ ನೆನಪು ಬಿಚ್ಚಿಟ್ಟ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಾಜೇಶ್ ದುಗ್ಗುಮನೆ
|

Updated on: Apr 15, 2021 | 5:49 PM

Share

ನಟಿ ರಶ್ಮಿಕಾ ಮಂದಣ್ಣ ಖ್ಯಾತಿ ಈಗ ದಕ್ಷಿಣ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ಕನ್ನಡ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದ ಅವರು ಈಗ ಬಾಲಿವುಡ್​ಗೆ ಹೋಗಿ ನಿಂತಿದ್ದಾರೆ. ಬಾಲಿವುಡ್​ ಬಿಗ್​ ಬಿ ಅಮಿತಾಭ್​ ಬಚ್ಚನ್​ ಜತೆಗೆ ರಶ್ಮಿಕಾ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ವಿಚಾರದ ಬಗ್ಗೆ ರಶ್ಮಿಕಾ ಮಾತನಾಡಿದ್ದಾರೆ. ಅಮಿತಾಭ್​ ಜತೆ ನಟಿಸುತ್ತಿರುವ ಸಿನಿಮಾಗೆ ಗುಡ್​ಬಯ್​​ ಎನ್ನುವ ಟೈಟಲ್​ ಇಡಲಾಗಿದೆ. ಈ ಸಿನಿಮಾ ಆಫರ್ ಬಂದಾಗ ಅವರು ತುಂಬಾನೇ ಎಗ್ಸೈಟ್​ ಆಗಿದ್ದರಂತೆ. ಆದರೆ, ಈ ವಿಚಾರವನ್ನು ಅವರ ಮನೆಯವರು ನಂಬಲೇ ಇಲ್ಲವಂತೆ! ಈ ನೆನಪಿನ ಬಗ್ಗೆ ಅವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ಅಮಿತಾಭ್​ ಓರ್ವ ಸೂಪರ್​ಸ್ಟಾರ್​. ಅವರ ಜತೆ ನಾನು ತೆರೆ ಹಂಚಿಕೊಳ್ಳುತ್ತೇನೆ ಎನ್ನುವ ವಿಚಾರ ಮನೆಯವರಿಗೆ ಗೊತ್ತಾದಾಗ ತುಂಬಾನೇ ಖುಷಿಯಾಗಿದ್ದರು. ಅದಕ್ಕೂ ಮೊದಲು ಅವರಿಗೆ ಈ ವಿಚಾರದ ಮೇಲೆ ನಂಬಿಕೆಯೇ ಬಂದಿರಲಿಲ್ಲ. ನಾನು ಅಮಿತಾಭ್​ ಸಿನಿಮಾ ನೋಡಿ ಬೆಳೆದವಳು. ಈಗ ಅವರ ಜತೆಯೇ ನಟನೆ ಮಾಡುತ್ತಿರುವುದಕ್ಕೆ ಖುಷಿ ಇದೆ ಎಂದಿದ್ದಾರೆ ರಶ್ಮಿಕಾ.

ರಶ್ಮಿಕಾ ಮಂದಣ್ಣ ಇತ್ತೀಚೆಗೆ ಅಮಿತಾಭ್​ ಅವರನ್ನು ಭೇಟಿ ಮಾಡಿದ್ದರು. ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲೂ ಹಂಚಿಕೊಂಡಿದ್ದರು. ಈ ಭೇಟಿ ಬಗ್ಗೆ ಹೇಳಿಕೊಂಡಿರುವ ರಶ್ಮಿಕಾ, ಶಿಕ್ಷಕರು ವಿದ್ಯಾರ್ಥಿಗಳನ್ನು ಟ್ರೀಟ್​ ಮಾಡುವಂತೆ ಅವರು ನನ್ನನ್ನು ಟ್ರೀಟ್​ ಮಾಡಿದ್ದರು. ಒಳ್ಳೊಳ್ಳೆ ಕೆಲಸ ಮಾಡು ಎಂದು ಅವರು ನನಗೆ ಕಿವಿಮಾತು ಹೇಳಿದರು ಎಂದಿದ್ದಾರೆ ರಶ್ಮಿಕಾ.

ಸದ್ಯ, ರಶ್ಮಿಕಾ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಬಾಲಿವುಡ್​ ಸಿನಿಮಾ ಮಿಷನ್​ ಮಜ್ನು ಕೆಲಸದಲ್ಲಿ ಅವರು ಬ್ಯುಸಿಯಾಗಿದ್ದಾರೆ. ಈ ಚಿತ್ರದಲ್ಲಿ ಸಿದ್ಧಾರ್ಥ್​ ಮಲ್ಹೋತ್ರಗೆ ಜೋಡಿ ಆಗಿದ್ದಾರೆ. ಗುಡ್​ಬಯ್​ ರಶ್ಮಿಕಾ ಅವರ ಎರಡನೇ ಹಿಂದಿ ಸಿನಿಮಾ. ವಿಕಾಸ್​  ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ನಟ ಅಲ್ಲು ಅರ್ಜುನ್​ ಹಾಗೂ ನಿರ್ದೇಶಕ ಸುಕುಮಾರ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಪುಷ್ಪ ಚಿತ್ರಕ್ಕೂ ರಶ್ಮಿಕಾ ನಾಯಕಿ.

ಇದನ್ನೂ ಓದಿ: Rashmika Mandanna: ರಶ್ಮಿಕಾಗೆ ಬಾಲಿವುಡ್​ನಲ್ಲಿ ಬೆಂಬಲವಾಗಿ ನಿಂತ ಸಿದ್ಧಾರ್ಥ್ ಮಲ್ಹೋತ್ರ! ಅನುಭವ ಹಂಚಿಕೊಂಡ ಕಿರಿಕ್​ ಬೆಡಗಿ

ಹರಿದ ಜೀನ್ಸ್​ ಪ್ಯಾಂಟ್​ ವಿಚಾರಕ್ಕೆ ಮುಖ್ಯಮಂತ್ರಿಯನ್ನೇ ಎದುರು ಹಾಕಿಕೊಂಡ ಅಮಿತಾಭ್​ ಮೊಮ್ಮಗಳು ನವ್ಯಾ!

Follow Us
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ