AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..

Rashmika Mandanna | Pushpa 2: ‘ಪುಷ್ಪ 2’ ಚಿತ್ರದಲ್ಲಿ ಕಥಾನಾಯಕಿಯ ಪಾತ್ರವನ್ನು ಅಂತ್ಯಗೊಳಿಸಿ, ಬೇರೆ ಏನೋ ಟ್ವಿಸ್ಟ್​ ನೀಡಲು ಪ್ಲ್ಯಾನ್​ ಮಾಡಲಾಗಿದೆ ಎಂಬ ಗಾಸಿಪ್​ ಹಬ್ಬಿತ್ತು. ಅದನ್ನು ನಿರ್ಮಾಪಕರು ತಳ್ಳಿ ಹಾಕಿದ್ದಾರೆ.

Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..
ರಶ್ಮಿಕಾ ಮಂದಣ್ಣ
Follow us
TV9 Web
| Updated By: ಮದನ್​ ಕುಮಾರ್​

Updated on:Jun 22, 2022 | 9:56 AM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಬಹುಬೇಡಿಕೆಯ ಹೀರೋಯಿನ್​ ಆಗಿ ಗುರುತಿಸಿಕೊಂಡಿದ್ದಾರೆ. ಅವರ ಬಗ್ಗೆ ಪ್ರತಿದಿನವೂ ಒಂದಿಲ್ಲೊಂದು ಸುದ್ದಿ ಪ್ರಕಟ ಆಗುತ್ತದೆ. ಅದರ ಜೊತೆಗೆ ಕೇಳಿಬರುವ ಗಾಸಿಪ್​ಗಳಿಗೂ ಲೆಕ್ಕವಿಲ್ಲ. ಸದ್ಯ ರಶ್ಮಿಕಾ ಮಂದಣ್ಣ ಕೈಯಲ್ಲಿ ಹಲವು ಸಿನಿಮಾಗಳಿವೆ. ಆ ಪೈಕಿ ‘ಪುಷ್ಪ 2’ ಚಿತ್ರ ಹೆಚ್ಚು ಹೈಪ್​ ಸೃಷ್ಟಿ ಮಾಡಿದೆ. ‘ಪುಷ್ಪ’ (Pushpa) ಚಿತ್ರ ಸೂಪರ್​ ಹಿಟ್​ ಆಗಿದ್ದರಿಂದ ಈಗ ಅದರ ಎರಡನೇ ಪಾರ್ಟ್​ ಮೇಲೆ ನಿರೀಕ್ಷೆ ಮೂಡಿದೆ. ಆದರೆ ಇತ್ತೀಚೆಗೆ ಒಂದು ಸುದ್ದಿ ಹರಿದಾಡಿತ್ತು. ‘ಪುಷ್ಪ 2’ (Pushpa 2) ಸಿನಿಮಾದ ಕಥೆಯ ಆರಂಭದಲ್ಲೇ ರಶ್ಮಿಕಾ ಮಂದಣ್ಣ ಅವರ ಪಾತ್ರ ಸಾಯುತ್ತದೆ ಎಂದು ಗಾಸಿಪ್​ ಹಬ್ಬಿಸಲಾಗಿತ್ತು. ಅದಕ್ಕೆ ಈಗ ಚಿತ್ರತಂಡದ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ಅದನ್ನು ಕೇಳಿ ರಶ್ಮಿಕಾ ಮಂದಣ್ಣ ಅಭಿಮಾನಿಗಳು ಖುಷಿ ಪಟ್ಟಿದ್ದಾರೆ.

ಅಲ್ಲು ಅರ್ಜುನ್​ ನಟನೆಯ ‘ಪುಷ್ಪ 2’ ಸಿನಿಮಾವನ್ನು ದೊಡ್ಡ ಮಟ್ಟದಲ್ಲಿ ಗೆಲ್ಲಿಸಲೇಬೇಕು ಎಂಬ ಒತ್ತಡ ನಿರ್ದೇಶಕ ಸುಕುಮಾರ್​ ಅವರ ಮೇಲಿದೆ. ಅದಕ್ಕಾಗಿ ಅವರು ಕಥೆಯಲ್ಲಿ ಒಂದಷ್ಟು ಮಾರ್ಪಾಡು ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಅದರಿಂದ ಕಥಾನಾಯಕಿಯ ಪಾತ್ರವನ್ನು ಅಂತ್ಯಗೊಳಿಸಿ, ಬೇರೆ ಏನೋ ಟ್ವಿಸ್ಟ್​ ನೀಡಲು ಅವರು ಪ್ಲ್ಯಾನ್​ ಮಾಡಿಕೊಂಡಿದ್ದಾರೆ ಎಂಬ ಗಾಸಿಪ್​ ಹಬ್ಬಿತ್ತು. ಅದನ್ನು ನಿರ್ಮಾಪಕರು ತಳ್ಳಿ ಹಾಕಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಗುಟ್ಟಾಗಿ ‘777 ಚಾರ್ಲಿ’ ನೋಡಿದ್ರಾ? ಜನರ ಅನುಮಾನಕ್ಕೆ ಕಾರಣ ಆಗಿದೆ ಈ ವಿಡಿಯೋ

ಇದನ್ನೂ ಓದಿ
Image
ಪ್ರಶಾಂತ್ ನೀಲ್ ಜತೆ ಸ್ಪರ್ಧೆಗೆ ಇಳಿಯಲಿದ್ದಾರೆ ‘ಪುಷ್ಪ 2’ ನಿರ್ದೇಶಕ ಸುಕುಮಾರ್​; ಗೆಲ್ಲೋದು ಯಾರು?
Image
ಅಬ್ಬಬ್ಬಾ.. ‘ಪುಷ್ಪ 2’ ಸಿನಿಮಾದ ನಿರ್ದೇಶನಕ್ಕೆ ಸುಕುಮಾರ್​ ಪಡೆಯುವ ಸಂಭಾವನೆ ಇಷ್ಟೊಂದಾ?
Image
‘ಕೆಜಿಎಫ್ 2’ ಎಫೆಕ್ಟ್​; ಹೆಚ್ಚಿತು ‘ಪುಷ್ಪ 2’ ಚಿತ್ರದ ಬೇಡಿಕೆ, ಶೂಟಿಂಗ್​ಗೂ​ ಮೊದಲೇ 700 ಕೋಟಿ ರೂಪಾಯಿ ಡೀಲ್
Image
‘ಪುಷ್ಪ 2’ ಚಿತ್ರದ ಬಗ್ಗೆ ಮೂಡಿದೆ ಎರಡು ಅನುಮಾನ; ಇದಕ್ಕೆಲ್ಲ ಕಾರಣ ಅಲ್ಲು ಅರ್ಜುನ್​ ಹೊಸ ಲುಕ್​

‘ಆ ರೀತಿಯ ಎಲ್ಲ ವರದಿಗಳು ಬರೀ ಗಾಸಿಪ್​ ಮಾತ್ರ. ಕೇವಲ ನಾನ್​ ಸೆನ್ಸ್​. ಈ ಸಂದರ್ಭದಲ್ಲಿ ಕಥೆ ಬಗ್ಗೆ ಯಾರಿಗೂ ಏನೂ ತಿಳಿದಿಲ್ಲ. ಹಾಗಾಗಿ ಏನೇ ಬರೆದರೂ ಜನರು ನಂಬುತ್ತಾರೆ. ಆದರೆ ಅದೆಲ್ಲವೂ ಊಹಾಪೋಹ’ ಎಂದು ‘ಪುಷ್ಪ 2’ ಸಿನಿಮಾ ನಿರ್ಮಾಪಕ ವೈ ರವಿಶಂಕರ್​ ಹೇಳಿದ್ದಾರೆ ಎಂದು ‘ಪಿಂಕ್​ವಿಲ್ಲಾ’ ವರದಿ ಮಾಡಿದೆ.

ವಿದೇಶದಲ್ಲಿ ‘ಪುಷ್ಪ 2’ ಶೂಟಿಂಗ್​?

ಮೂಲಗಳ ಪ್ರಕಾರ, ನಿರ್ದೇಶಕ ಸುಕುಮಾರ್​ ಅವರು ‘ಪುಷ್ಪ 2’ ಸಿನಿಮಾದ ಕೆಲವು ದೃಶ್ಯಗಳನ್ನು ವಿದೇಶದಲ್ಲಿ ಚಿತ್ರೀಕರಿಸಲಿದ್ದಾರೆ. ಅದಕ್ಕೆ ಕಾರಣ ಇಷ್ಟೇ.. ರಕ್ತಚಂದನದ ಕಳ್ಳ ಸಾಗಾಣಿಕೆ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ ಕಥಾನಾಯಕ ಪುಷ್ಪರಾಜ್​ ಮುಂದಿನ ದಿನಗಳಲ್ಲಿ ತನ್ನ ವ್ಯಾಪ್ತಿಯನ್ನು ವಿದೇಶಕ್ಕೂ ವಿಸ್ತರಿಸಿಕೊಳ್ಳುತ್ತಾನೆ. ವಿದೇಶದಲ್ಲೂ ಬೆಲೆ ಬಾಳುವ ಮರಗಳ ಸ್ಮಗ್ಲಿಂಗ್​ ಮಾಡುತ್ತಾನೆ. ಹಾಗಾಗಿ ‘ಪುಷ್ಪ 2’ ಸಿನಿಮಾದ ದೃಶ್ಯಗಳು ವಿದೇಶದಲ್ಲಿ ಚಿತ್ರೀಕರಿಸಲ್ಪಡುತ್ತವೆ ಎನ್ನಲಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:56 am, Wed, 22 June 22

ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ