Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..

Rashmika Mandanna | Pushpa 2: ‘ಪುಷ್ಪ 2’ ಚಿತ್ರದಲ್ಲಿ ಕಥಾನಾಯಕಿಯ ಪಾತ್ರವನ್ನು ಅಂತ್ಯಗೊಳಿಸಿ, ಬೇರೆ ಏನೋ ಟ್ವಿಸ್ಟ್​ ನೀಡಲು ಪ್ಲ್ಯಾನ್​ ಮಾಡಲಾಗಿದೆ ಎಂಬ ಗಾಸಿಪ್​ ಹಬ್ಬಿತ್ತು. ಅದನ್ನು ನಿರ್ಮಾಪಕರು ತಳ್ಳಿ ಹಾಕಿದ್ದಾರೆ.

Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..
ರಶ್ಮಿಕಾ ಮಂದಣ್ಣ
Follow us
| Updated By: ಮದನ್​ ಕುಮಾರ್​

Updated on:Jun 22, 2022 | 9:56 AM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಬಹುಬೇಡಿಕೆಯ ಹೀರೋಯಿನ್​ ಆಗಿ ಗುರುತಿಸಿಕೊಂಡಿದ್ದಾರೆ. ಅವರ ಬಗ್ಗೆ ಪ್ರತಿದಿನವೂ ಒಂದಿಲ್ಲೊಂದು ಸುದ್ದಿ ಪ್ರಕಟ ಆಗುತ್ತದೆ. ಅದರ ಜೊತೆಗೆ ಕೇಳಿಬರುವ ಗಾಸಿಪ್​ಗಳಿಗೂ ಲೆಕ್ಕವಿಲ್ಲ. ಸದ್ಯ ರಶ್ಮಿಕಾ ಮಂದಣ್ಣ ಕೈಯಲ್ಲಿ ಹಲವು ಸಿನಿಮಾಗಳಿವೆ. ಆ ಪೈಕಿ ‘ಪುಷ್ಪ 2’ ಚಿತ್ರ ಹೆಚ್ಚು ಹೈಪ್​ ಸೃಷ್ಟಿ ಮಾಡಿದೆ. ‘ಪುಷ್ಪ’ (Pushpa) ಚಿತ್ರ ಸೂಪರ್​ ಹಿಟ್​ ಆಗಿದ್ದರಿಂದ ಈಗ ಅದರ ಎರಡನೇ ಪಾರ್ಟ್​ ಮೇಲೆ ನಿರೀಕ್ಷೆ ಮೂಡಿದೆ. ಆದರೆ ಇತ್ತೀಚೆಗೆ ಒಂದು ಸುದ್ದಿ ಹರಿದಾಡಿತ್ತು. ‘ಪುಷ್ಪ 2’ (Pushpa 2) ಸಿನಿಮಾದ ಕಥೆಯ ಆರಂಭದಲ್ಲೇ ರಶ್ಮಿಕಾ ಮಂದಣ್ಣ ಅವರ ಪಾತ್ರ ಸಾಯುತ್ತದೆ ಎಂದು ಗಾಸಿಪ್​ ಹಬ್ಬಿಸಲಾಗಿತ್ತು. ಅದಕ್ಕೆ ಈಗ ಚಿತ್ರತಂಡದ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ಅದನ್ನು ಕೇಳಿ ರಶ್ಮಿಕಾ ಮಂದಣ್ಣ ಅಭಿಮಾನಿಗಳು ಖುಷಿ ಪಟ್ಟಿದ್ದಾರೆ.

ಅಲ್ಲು ಅರ್ಜುನ್​ ನಟನೆಯ ‘ಪುಷ್ಪ 2’ ಸಿನಿಮಾವನ್ನು ದೊಡ್ಡ ಮಟ್ಟದಲ್ಲಿ ಗೆಲ್ಲಿಸಲೇಬೇಕು ಎಂಬ ಒತ್ತಡ ನಿರ್ದೇಶಕ ಸುಕುಮಾರ್​ ಅವರ ಮೇಲಿದೆ. ಅದಕ್ಕಾಗಿ ಅವರು ಕಥೆಯಲ್ಲಿ ಒಂದಷ್ಟು ಮಾರ್ಪಾಡು ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಅದರಿಂದ ಕಥಾನಾಯಕಿಯ ಪಾತ್ರವನ್ನು ಅಂತ್ಯಗೊಳಿಸಿ, ಬೇರೆ ಏನೋ ಟ್ವಿಸ್ಟ್​ ನೀಡಲು ಅವರು ಪ್ಲ್ಯಾನ್​ ಮಾಡಿಕೊಂಡಿದ್ದಾರೆ ಎಂಬ ಗಾಸಿಪ್​ ಹಬ್ಬಿತ್ತು. ಅದನ್ನು ನಿರ್ಮಾಪಕರು ತಳ್ಳಿ ಹಾಕಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಗುಟ್ಟಾಗಿ ‘777 ಚಾರ್ಲಿ’ ನೋಡಿದ್ರಾ? ಜನರ ಅನುಮಾನಕ್ಕೆ ಕಾರಣ ಆಗಿದೆ ಈ ವಿಡಿಯೋ

ಇದನ್ನೂ ಓದಿ
Image
ಪ್ರಶಾಂತ್ ನೀಲ್ ಜತೆ ಸ್ಪರ್ಧೆಗೆ ಇಳಿಯಲಿದ್ದಾರೆ ‘ಪುಷ್ಪ 2’ ನಿರ್ದೇಶಕ ಸುಕುಮಾರ್​; ಗೆಲ್ಲೋದು ಯಾರು?
Image
ಅಬ್ಬಬ್ಬಾ.. ‘ಪುಷ್ಪ 2’ ಸಿನಿಮಾದ ನಿರ್ದೇಶನಕ್ಕೆ ಸುಕುಮಾರ್​ ಪಡೆಯುವ ಸಂಭಾವನೆ ಇಷ್ಟೊಂದಾ?
Image
‘ಕೆಜಿಎಫ್ 2’ ಎಫೆಕ್ಟ್​; ಹೆಚ್ಚಿತು ‘ಪುಷ್ಪ 2’ ಚಿತ್ರದ ಬೇಡಿಕೆ, ಶೂಟಿಂಗ್​ಗೂ​ ಮೊದಲೇ 700 ಕೋಟಿ ರೂಪಾಯಿ ಡೀಲ್
Image
‘ಪುಷ್ಪ 2’ ಚಿತ್ರದ ಬಗ್ಗೆ ಮೂಡಿದೆ ಎರಡು ಅನುಮಾನ; ಇದಕ್ಕೆಲ್ಲ ಕಾರಣ ಅಲ್ಲು ಅರ್ಜುನ್​ ಹೊಸ ಲುಕ್​

‘ಆ ರೀತಿಯ ಎಲ್ಲ ವರದಿಗಳು ಬರೀ ಗಾಸಿಪ್​ ಮಾತ್ರ. ಕೇವಲ ನಾನ್​ ಸೆನ್ಸ್​. ಈ ಸಂದರ್ಭದಲ್ಲಿ ಕಥೆ ಬಗ್ಗೆ ಯಾರಿಗೂ ಏನೂ ತಿಳಿದಿಲ್ಲ. ಹಾಗಾಗಿ ಏನೇ ಬರೆದರೂ ಜನರು ನಂಬುತ್ತಾರೆ. ಆದರೆ ಅದೆಲ್ಲವೂ ಊಹಾಪೋಹ’ ಎಂದು ‘ಪುಷ್ಪ 2’ ಸಿನಿಮಾ ನಿರ್ಮಾಪಕ ವೈ ರವಿಶಂಕರ್​ ಹೇಳಿದ್ದಾರೆ ಎಂದು ‘ಪಿಂಕ್​ವಿಲ್ಲಾ’ ವರದಿ ಮಾಡಿದೆ.

ವಿದೇಶದಲ್ಲಿ ‘ಪುಷ್ಪ 2’ ಶೂಟಿಂಗ್​?

ಮೂಲಗಳ ಪ್ರಕಾರ, ನಿರ್ದೇಶಕ ಸುಕುಮಾರ್​ ಅವರು ‘ಪುಷ್ಪ 2’ ಸಿನಿಮಾದ ಕೆಲವು ದೃಶ್ಯಗಳನ್ನು ವಿದೇಶದಲ್ಲಿ ಚಿತ್ರೀಕರಿಸಲಿದ್ದಾರೆ. ಅದಕ್ಕೆ ಕಾರಣ ಇಷ್ಟೇ.. ರಕ್ತಚಂದನದ ಕಳ್ಳ ಸಾಗಾಣಿಕೆ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ ಕಥಾನಾಯಕ ಪುಷ್ಪರಾಜ್​ ಮುಂದಿನ ದಿನಗಳಲ್ಲಿ ತನ್ನ ವ್ಯಾಪ್ತಿಯನ್ನು ವಿದೇಶಕ್ಕೂ ವಿಸ್ತರಿಸಿಕೊಳ್ಳುತ್ತಾನೆ. ವಿದೇಶದಲ್ಲೂ ಬೆಲೆ ಬಾಳುವ ಮರಗಳ ಸ್ಮಗ್ಲಿಂಗ್​ ಮಾಡುತ್ತಾನೆ. ಹಾಗಾಗಿ ‘ಪುಷ್ಪ 2’ ಸಿನಿಮಾದ ದೃಶ್ಯಗಳು ವಿದೇಶದಲ್ಲಿ ಚಿತ್ರೀಕರಿಸಲ್ಪಡುತ್ತವೆ ಎನ್ನಲಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:56 am, Wed, 22 June 22

ತಾಜಾ ಸುದ್ದಿ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್