AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ತುರ್ತು ಭೂಸ್ಪರ್ಷ: ಪ್ರಾಣಾಪಾಯದಿಂದ ಪಾರಾದ ನಟಿ ರಶ್ಮಿಕಾ

Rashmika Mandanna: ರಶ್ಮಿಕಾ ಮಂದಣ್ಣ ಮತ್ತು ಶ್ರದ್ಧಾದಾಸ್ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಷ ಮಾಡಿದೆ. ತಾವು ಸ್ವಲ್ಪದರಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾಗಿ ರಶ್ಮಿಕಾ ಹೇಳಿದ್ದಾರೆ.

ವಿಮಾನ ತುರ್ತು ಭೂಸ್ಪರ್ಷ: ಪ್ರಾಣಾಪಾಯದಿಂದ ಪಾರಾದ ನಟಿ ರಶ್ಮಿಕಾ
ಮಂಜುನಾಥ ಸಿ.
|

Updated on:Feb 18, 2024 | 12:34 PM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ನಟಿ ಶ್ರದ್ಧಾ ದಾಸ್ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತುರ್ತು ಭೂಸ್ಪರ್ಷ ಮಾಡಲಾಗಿದೆ. ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ರಶ್ಮಿಕಾ ಮಂದಣ್ಣ ಪ್ರಾಣಾಪಾಯದಿಂದ ಸ್ಪಲ್ಪದರಲ್ಲಿ ಪಾರಾದುದಾಗಿ ಹೇಳಿಕೊಂಡಿದ್ದಾರೆ. ರಶ್ಮಿಕಾ ಹಾಗೂ ಶ್ರದ್ಧಾದಾಸ್ ಅವರುಗಳು ಒಟ್ಟಿಗೆ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ.

ರಶ್ಮಿಕಾ ಮಂದಣ್ಣ ಹಾಗೂ ಶ್ರದ್ಧಾದಾಸ್ ಅವರುಗಳು ಮುಂಬೈ ವಿಮಾನ ನಿಲ್ದಾಣದಿಂದ ಹೈದರಾಬಾದ್​ಗೆ ಪ್ರಯಾಣ ಬೆಳೆಸಿದ್ದರು. ಇಬ್ಬರೂ ಒಟ್ಟಿಗೆ ಪ್ರಯಾಣ ಮಾಡುತ್ತಿದ್ದರು. ವಿಮಾನ ಟೇಕ್ ಆಫ್ ಆದ ಬಳಿಕ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ವಿಮಾನ ನಿಲ್ದಾಣವನ್ನು ತುರ್ತು ಭೂಸ್ಪರ್ಷ ಮಾಡಲಾಗಿದೆ. ತಮ್ಮ ಹಾಗೂ ಶ್ರದ್ಧಾದಾಸ್​ರ ಕೆಲವು ಚಿತ್ರಗಳನ್ನು ರಶ್ಮಿಕಾ ಮಂದಣ್ಣ ಹಂಚಿಕೊಂಡಿದ್ದು, ‘ಇಂದು ಹೀಗೆ ಮಾಡಿ ನಾವು ಪ್ರಾಣಾಪಾಯದಿಂದ ಪಾರಾದೆವು’ ಎಂದಿದ್ದಾರೆ ರಶ್ಮಿಕಾ. ತುರ್ತು ಭೂಸ್ಪರ್ಷದ ವೇಳೆ ವಿಮಾನ ಸಿಬ್ಬಂದಿ ನೀಡಿದ ಸೂಚನೆಯಂತೆ, ರಶ್ಮಿಕಾ ಹಾಗೂ ಶ್ರದ್ಧಾ ತಮ್ಮ ಕಾಲುಗಳಿಂದ ಎದುರಿನ ಸೀಟ್​ನ ಹಿಂಬದಿಯನ್ನು ಜೋರಾಗಿ ಒತ್ತಿ ಹಿಡಿದುಕೊಂಡಿದ್ದಾರೆ. ಈ ಚಿತ್ರವನ್ನು ರಶ್ಮಿಕಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:Rashmika Mandanna: ವ್ಯಾಲೆಂಟೈನ್ಸ್​ ಡೇ ದಿನ ಫ್ಯಾನ್ಸ್ ಎದುರು ಹೊಸ ಕೋರಿಕೆ ಇಟ್ಟ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಫ್ರೀಕ್ವೆಂಟ್ ಟ್ರಾವೆಲರ್ ಆಗಿದ್ದಾರೆ. ಹೈದರಾಬಾದ್, ಮುಂಬೈ, ಚೆನ್ನೈ ಹಾಗೂ ಬೆಂಗಳೂರಿಗೆ ಪದೇ ಪದೇ ಓಡಾಡುತ್ತಲೇ ಇರುತ್ತಾರೆ. ಹೈದರಾಬಾದ್​ನಲ್ಲಿ ಮನೆ ಹೊಂದಿರುವ ರಶ್ಮಿಕಾ, ಬಾಲಿವುಡ್, ಕಾಲಿವುಡ್​ಗಳಲ್ಲಿಯೂ ಕೆಲಸ ಮಾಡುತ್ತಿರುವ ಕಾರಣ ಮುಂಬೈ, ಚೆನ್ನೈಗಳಿಗೆ ಓಡಾಡುತ್ತಿರುತ್ತಾರೆ. ರಶ್ಮಿಕಾ ಮಂದಣ್ಣ ಪ್ರಸ್ತುತ ತೆಲುಗಿನ ‘ಪುಷ್ಪ 2’, ‘ಗರ್ಲ್​ಫ್ರೆಂಡ್’ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಬಾಲಿವುಡ್​ನಲ್ಲಿ ವಿಕ್ಕಿ ಕೌಶಲ್ ಜೊತೆಗೆ ‘ಛಾವಾ’, ಟೈಗರ್ ಶ್ರಾಫ್ ಜೊತೆಗೆ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ಒಂದು ತಮಿಳು ಸಿನಿಮಾವನ್ನು ಸಹ ರಶ್ಮಿಕಾ ಮಂದಣ್ಣ ಒಪ್ಪಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:08 pm, Sun, 18 February 24

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!