ಶೂಟಿಂಗ್​ ವೇಳೆ ತೆರೆ ಹಿಂದೆ ರಶ್ಮಿಕಾ ಮಂದಣ್ಣ ಮಾಡುವ ತರ್ಲೆ-ತಮಾಷೆಗೆ ಈ ವಿಡಿಯೋ ಸಾಕ್ಷಿ

ರಶ್ಮಿಕಾ ಮಂದಣ್ಣ ಅವರಿಗೆ ಪ್ರತಿ ಸಿನಿಮಾದ ಗೆಲುವು ತುಂಬ ಮುಖ್ಯ ಆಗಲಿದೆ. ‘ಆಡವಾಳ್ಳು ಮೀಕು ಜೋಹಾರ್ಲು’ ಸಿನಿಮಾದಿಂದ ಅವರ ಅಭಿಮಾನಿಗಳಿಗೆ ಕೊಂಚ ಬೇಸರ ಆಗಿದೆ.

ಶೂಟಿಂಗ್​ ವೇಳೆ ತೆರೆ ಹಿಂದೆ ರಶ್ಮಿಕಾ ಮಂದಣ್ಣ ಮಾಡುವ ತರ್ಲೆ-ತಮಾಷೆಗೆ ಈ ವಿಡಿಯೋ ಸಾಕ್ಷಿ
ರಶ್ಮಿಕಾ ಮಂದಣ್ಣ
Follow us
| Updated By: ಮದನ್​ ಕುಮಾರ್​

Updated on: Mar 06, 2022 | 1:04 PM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ದೇಶಾದ್ಯಂತ ಜನಪ್ರಿಯತೆ ಪಡೆದುಕೊಂಡಿದ್ದಾರೆ. ಅವರ ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳು ರಿಲೀಸ್​ ಆಗುತ್ತಿವೆ. ಹಲವು ಚಿತ್ರಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ತೆಲುಗಿನಲ್ಲಿ ರಶ್ಮಿಕಾ ಮಂದಣ್ಣ ಅವರಿಗೆ ತುಂಬ ಬೇಡಿಕೆ ಇದೆ. ಅದರಲ್ಲೂ ‘ಪುಷ್ಪ’ ಸಿನಿಮಾ ತೆರೆಕಂಡ ಬಳಿಕ ಅವರ ಚಾರ್ಮ್​ ಹೆಚ್ಚಿದೆ. ಟಾಲಿವುಡ್​ ನಟ ಶರ್ವಾನಂದ್​ ಜೊತೆ ಅವರು ಅಭಿನಯಿಸಿರುವ ‘ಆಡವಾಳ್ಳು ಮೀಕು ಜೋಹಾರ್ಲು’ (Aadavallu Meeku Johaarlu) ಸಿನಿಮಾ ಬಿಡುಗಡೆ ಆಗಿದೆ. ಈ ಚಿತ್ರದಲ್ಲಿ ಶರ್ವಾನಂದ್​ (Sharwanand) ಮತ್ತು ರಶ್ಮಿಕಾ ಮಂದಣ್ಣ ಜೋಡಿಯಾಗಿ ಅಭಿನಯಿಸಿದ್ದಾರೆ. ಸೋಶಿಯಲ್​ ಮಿಡಿಯಾದಲ್ಲಿ ಸದಾ ಆ್ಯಕ್ಟೀವ್​ ಆಗಿರುವ ರಶ್ಮಿಕಾ ಮಂದಣ್ಣ ಅವರು ಆ ಮೂಲಕವೂ ಸಿನಿಮಾ ಪ್ರಚಾರ ಮಾಡುತ್ತಾರೆ. ‘ಆಡವಾಳ್ಳು ಮೀಕು ಜೋಹಾರ್ಲು’ ಸಿನಿಮಾದ ಶೂಟಿಂಗ್​ ವೇಳೆ ಕಳೆದ ಕೆಲವು ಖುಷಿಖುಷಿಯ ಕ್ಷಣಗಳನ್ನು ಅವರೀಗ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ಶೂಟಿಂಗ್​ ಸಮಯದಲ್ಲಿ ರಶ್ಮಿಕಾ ಏನೆಲ್ಲ ಮಾಡ್ತಾರೆ ಎನ್ನೋದಕ್ಕೆ ಈ ವಿಡಿಯೋದಲ್ಲಿ ಸಾಕ್ಷಿ ಇದೆ. ಸೆಟ್​ನಲ್ಲಿ ಇರುವ ಎಲ್ಲ ಕಲಾವಿದರು ಮತ್ತು ತಂತ್ರಜ್ಞರ ಜೊತೆ ಅವರು ಸ್ನೇಹಪೂರ್ವಕವಾಗಿ ನಡೆದುಕೊಳ್ಳುತ್ತಾರೆ. ಈ ವಿಡಿಯೋ ನೋಡಿದರೆ ಅದು ತಿಳಿಯುತ್ತದೆ.

‘ಪುಷ್ಪ’ ಚಿತ್ರಕ್ಕೆ ಹೋಲಿಸಿದರೆ ‘ಆಡವಾಳ್ಳು ಮೀಕು ಜೋಹಾರ್ಲು’ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಓಪನಿಂಗ್​ ಪಡೆದುಕೊಂಡಿಲ್ಲ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ತಿರುಮಲ ಕಿಶೋರ್​ ನಿರ್ದೇಶನ ಮಾಡಿರುವ ಈ ಸಿನಿಮಾಗೆ  ಎಸ್​ಎಲ್​ವಿ ಸಿನಿಮಾಸ್​ ಸಂಸ್ಥೆ ಬಂಡವಾಳ ಹೂಡಿದೆ. ಅಂದುಕೊಂಡ ಪ್ರಮಾಣದಲ್ಲಿ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುತ್ತಿಲ್ಲ. ಈ ಸಂದರ್ಭದಲ್ಲಿ ಜನರ ಗಮನ ಸೆಳೆಯಲು ಚಿತ್ರತಂಡ ಪ್ರಯತ್ನಿಸುತ್ತಿದೆ.

‘ಆಡವಾಳ್ಳು ಮೀಕು ಜೋಹಾರ್ಲು’ ಸಿನಿಮಾಗೆ ಜನರಿಂದ ಯಾವ ರೀತಿಯ ಪ್ರತಿಕ್ರಿಯೆ ಸಿಗುತ್ತಿದೆ ಎಂಬುದನ್ನು ನೇರವಾಗಿ ನೋಡಿ ತಿಳಿಯಲು ರಶ್ಮಿಕಾ ಮಂದಣ್ಣ ಅವರು ಹೈದರಾಬಾದ್​ನ ಚಿತ್ರಮಂದಿರಗಳಿಗೆ ಭೇಟಿ ನೀಡಿದ್ದಾರೆ. ಸದಾ ಖುಷಿಯಿಂದ ಕಾಲ ಕಳೆಯಲು ಇಷ್ಟ ಪಡುವ ವ್ಯಕ್ತಿ ರಶ್ಮಿಕಾ ಮಂದಣ್ಣ. ಶೂಟಿಂಗ್​ ಸಂದರ್ಭದಲ್ಲಿಯೂ ಅವರು ಹಾಗೆಯೇ ಇರುತ್ತಾರೆ. ಎಲ್ಲರ ಜೊತೆ ನಗುನಗುತ್ತಾ, ಮಾತನಾಡುತ್ತ, ಕಾಲೆಳೆಯುತ್ತ ಕೆಲಸ ಮಾಡುತ್ತಾರೆ. ಆ ಕ್ಷಣಗಳನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗಿದೆ. ಅದನ್ನೀಗ ಅವರು ಇನ್​ಸ್ಟಾಗ್ರಾಮ್​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ ಅವರಿಗೆ ಪ್ರತಿ ಸಿನಿಮಾದ ಗೆಲವು ಮುಖ್ಯ ಆಗಲಿದೆ. ‘ಆಡವಾಳ್ಳು ಮೀಕು ಜೋಹಾರ್ಲು’ ಸಿನಿಮಾದಿಂದ ಅವರ ಅಭಿಮಾನಿಗಳಿಗೆ ಕೊಂಚ ಬೇಸರ ಆಗಿದೆ. ನಿರೀಕ್ಷಿತ ಮಟ್ಟದಲ್ಲಿ ಈ ಸಿನಿಮಾ ಮೂಡಿಬಂದಿಲ್ಲ ಎಂದು ಪ್ರೇಕ್ಷಕರು ಬೇಸರ ಮಾಡಿಕೊಂಡಿದ್ದಾರೆ. ವಿಮರ್ಶಕರಿಂದಲೂ ಈ ಚಿತ್ರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ.

ದಕ್ಷಿಣ ಭಾರತ ಮಾತ್ರವಲ್ಲದೇ ಬಾಲಿವುಡ್​ನಲ್ಲಿ ಕೂಡ ರಶ್ಮಿಕಾ ಮಂದಣ್ಣ ಬ್ಯುಸಿ ಆಗಿದ್ದಾರೆ. ಹಲವು ಸಿನಿಮಾಗಳಲ್ಲಿ ಅವರ ನಟಿಸುತ್ತಿದ್ದಾರೆ. ಸಿದ್ದಾರ್ಥ್​ ಮಲ್ಹೋತ್ರ ಜೊತೆ ‘ಮಿಷನ್​ ಮಜ್ನು’ ಸಿನಿಮಾದಲ್ಲಿ ರಶ್ಮಿಕಾ ಅಭಿನಯಸಿದ್ದಾರೆ. ಅದು ಅವರ ಮೊದಲ ಬಾಲಿವುಡ್​ ಚಿತ್ರ. ಅದರ ಜೊತೆ ‘ಗುಡ್​ ಬೈ’ ಸಿನಿಮಾದಲ್ಲೂ ರಶ್ಮಿಕಾ ಬಣ್ಣ ಹಚ್ಚಿದ್ದು, ಅದರಲ್ಲಿ ಅಮಿತಾಭ್​ ಬಚ್ಚನ್​ ಜೊತೆ ನಟಿಸುವ ಅವಕಾಶ ಅವರಿಗೆ ಸಿಕ್ಕಿದೆ. ಆ ಸಿನಿಮಾಗಳು ತೆರೆಕಂಡು ಯಶಸ್ವಿ ಆಗಿಬಿಟ್ಟರೆ ಬಾಲಿವುಡ್​ನಲ್ಲಿ ರಶ್ಮಿಕಾ ಅವರು ಭದ್ರವಾಗಿ ನೆಲೆಕಂಡುಕೊಳ್ಳಲು ಸುಲಭ ಆಗುತ್ತದೆ.

ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ ಮದುವೆ ಆಗುತ್ತಾರೆ ಎಂಬ ಗಾಳಿಸುದ್ದಿ ಕೆಲವೇ ದಿನಗಳ ಹಿಂದೆ ಹಬ್ಬಿತ್ತು. ಅದನ್ನು ಇವರಿಬ್ಬರೂ ತಳ್ಳಿ ಹಾಕಿದ್ದಾರೆ. ಮದುವೆ ಬಗ್ಗೆ ತಾವು ಇನ್ನೂ ಆಲೋಚನೆ ಮಾಡಿಲ್ಲ ಎಂದು ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗಿನ ಸಂದರ್ಶನಲ್ಲಿ ಹೇಳಿದ್ದರು.

ಇದನ್ನೂ ಓದಿ:

‘ನಾನು ಪ್ಯಾನ್​ ಇಂಡಿಯಾ ನಟಿ ಆಗಬೇಕು’; ರಶ್ಮಿಕಾ ಮಂದಣ್ಣ ಹೀಗೆ ಹೇಳಲು ಇದೆ ಒಂದು ಮುಖ್ಯ ಕಾರಣ

ರಶ್ಮಿಕಾ ಎಕ್ಸ್​ಪ್ರೆಷನ್​ ಕ್ವೀನ್​ ಎನ್ನಲು ಇದಕ್ಕಿಂತ ಸಾಕ್ಷಿ ಬೇಕಿಲ್ಲ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ