‘ನಿಮ್ಮಲ್ಲಿ ತುಂಬ ಜನರಿಗೆ ಇದು ಇಷ್ಟ ಆಗಲ್ಲ’ ಎನ್ನುತ್ತಲೇ ಹೊಸ ಫೋಟೋ ಹಂಚಿಕೊಂಡ ರಶ್ಮಿಕಾ; ಏನಿದು ವಿಷಯ?

Rashmika Mandanna: ಸಿನಿಮಾ ಕಲಾವಿದರು ಫಿಟ್​ ಆಗಿರಬೇಕಾದ್ದು ಅನಿವಾರ್ಯ ಮತ್ತು ಅತ್ಯಗತ್ಯ. ಸಿನಿಮಾ ಕೆಲಸಗಳಲ್ಲಿ ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ವರ್ಕೌಟ್​ ತಪ್ಪಿಸುವಂತಿಲ್ಲ. ಈ ಬಗ್ಗೆ ರಶ್ಮಿಕಾ ಮಂದಣ್ಣ ಒಂದಷ್ಟು ಐಡಿಯಾಗಳನ್ನು ಶೇರ್ ಮಾಡಿಕೊಂಡಿದ್ದಾರೆ.

‘ನಿಮ್ಮಲ್ಲಿ ತುಂಬ ಜನರಿಗೆ ಇದು ಇಷ್ಟ ಆಗಲ್ಲ’ ಎನ್ನುತ್ತಲೇ ಹೊಸ ಫೋಟೋ ಹಂಚಿಕೊಂಡ ರಶ್ಮಿಕಾ; ಏನಿದು ವಿಷಯ?
ರಶ್ಮಿಕಾ ಮಂದಣ್ಣ
Follow us
| Updated By: ಮದನ್​ ಕುಮಾರ್​

Updated on:Mar 26, 2022 | 1:59 PM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಚಿತ್ರರಂಗದಲ್ಲಿ ಸಖತ್​ ಬ್ಯುಸಿ ಆಗಿದ್ದಾರೆ. ಅವರ ಕಾಲ್​ಶೀಟ್​ಗಾಗಿ ದೊಡ್ಡ ದೊಡ್ಡ ಪ್ರೊಡಕ್ಷನ್​ ಕಂಪನಿಗಳು ಕಾದು ಕುಳಿತಿವೆ. ದಕ್ಷಿಣ ಭಾರತದ ಅನೇಕ ಸ್ಟಾರ್​ ಹೀರೋಗಳ ಜೊತೆಯಲ್ಲಿ ರಶ್ಮಿಕಾ ಮಂದಣ್ಣ ಸಿನಿಮಾ (Rashmika Mandanna Movies) ಮಾಡಿದ್ದಾರೆ. ಈಗ ಬಾಲಿವುಡ್​ಗೂ ಕಾಲಿಟ್ಟು ಹವಾ ಮಾಡುತ್ತಿದ್ದಾರೆ. ಸಿದ್ದಾರ್ಥ್ ಮಲ್ಹೋತ್ರಾ, ಅಮಿತಾಭ್​ ಬಚ್ಚನ್​ ಮುಂತಾದ ನಟರ ಜೊತೆಗೆ ತೆರೆಹಂಚಿಕೊಳ್ಳುವ ಅವಕಾಶ ಅವರಿಗೆ ಸಿಕ್ಕಿದೆ. ದಿನದಿಂದ ದಿನಕ್ಕೆ ರಶ್ಮಿಕಾ ಅಭಿಮಾನಿಗಳ (Rashmika Mandanna Fans) ಸಂಖ್ಯೆ ಕೂಡ ಹೆಚ್ಚುತ್ತಿದೆ. ಇಷ್ಟೆಲ್ಲ ಬ್ಯುಸಿ ಆಗಿರುವ ಅವರು ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿರುವುದು ತಪ್ಪಿಸಿಲ್ಲ. ಆಗಾಗ ಏನನ್ನಾದರೂ ಪೋಸ್ಟ್​ ಮಾಡುತ್ತಲೇ ಇರುತ್ತಾರೆ. ರಶ್ಮಿಕಾ ಮಂದಣ್ಣ ಹಂಚಿಕೊಳ್ಳುವ ವಿಡಿಯೋ ಅಥವಾ ಫೋಟೋಗಳಿಗೆ ಅಭಿಮಾನಿಗಳು ಸಹಜವಾಗಿಯೇ​ ಮೆಚ್ಚುಗೆ ಸೂಚಿಸುತ್ತಾರೆ. ಆದರೆ ಈ ವಿಚಾರದಲ್ಲಿ ರಶ್ಮಿಕಾ ಅವರಿಗೆ ಯಾಕೋ ಕೊಂಚ ಅನುಮಾನ ಬಂದಂತಿದೆ. ಆ ಕಾರಣದಿಂದ ಅವರು ಇತ್ತೀಚೆಗೆ ಒಂದು ಫೋಟೋ ಶೇರ್​ ಮಾಡುವಾಗ ‘ನಿಮ್ಮಲ್ಲಿ ತುಂಬ ಜನರಿಗೆ ಇದು ಇಷ್ಟ ಆಗಲ್ಲ’ ಎಂದು ಬರೆದುಕೊಂಡಿದ್ದಾರೆ. ಯಾವುದು ಆ ಫೋಟೋ? ರಶ್ಮಿಕಾ ಅದನ್ನು ಹಂಚಿಕೊಂಡಿದ್ದು ಯಾಕೆ? ಆ ಬಗ್ಗೆ ಇಲ್ಲಿದೆ ಮಾಹಿತಿ..

ರಶ್ಮಿಕಾ ಮಂದಣ್ಣ ಅವರಿಗೆ ಫಿಟ್ನೆಸ್​ ಬಗ್ಗೆ ಹೆಚ್ಚು ಕಾಳಜಿ ಇದೆ. ಬಣ್ಣದ ಲೋಕದಲ್ಲಿ ನಟಿಯರು ಫಿಟ್​ ಆಗಿರಬೇಕಾದ್ದು ಅನಿವಾರ್ಯ ಮತ್ತು ಅತ್ಯಗತ್ಯ. ಸಿನಿಮಾ ಕೆಲಸಗಳಲ್ಲಿ ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ವರ್ಕೌಟ್​ ತಪ್ಪಿಸುವಂತಿಲ್ಲ. ಊಟ-ತಿಂಡಿಯ ಮೇಲೂ ಹಿಡಿತ ಇರಲೇಬೇಕು. ಈ ವಿಚಾರಗಳ ಬಗ್ಗೆಯೇ ರಶ್ಮಿಕಾ ಮಂದಣ್ಣ ಅವರು ಒಂದಷ್ಟು ಐಡಿಯಾಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಅವರ ಫಿಟ್ನೆಸ್​ ರಹಸ್ಯವನ್ನು ಅಭಿಮಾನಿಗಳಿಗೆ ತಿಳಿಸಿದ್ದಾರೆ.

ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹೊಸ ಫೋಟೋ ಹಂಚಿಕೊಂಡಿರುವ ಅವರು ಈ ಕ್ಯಾಪ್ಷನ್​ ಬರೆದಿದ್ದಾರೆ. ‘ಈ ಫೋಟೋವನ್ನು ನಾನು ಪೋಸ್ಟ್​ ಮಾಡಬಹುದೋ ಇಲ್ಲವೋ ಗೊತ್ತಿಲ್ಲ. ನಿಮ್ಮಲ್ಲಿ ತುಂಬ ಜನರು ಇದನ್ನು ಇಷ್ಟಪಡುವುದಿಲ್ಲ. ನಿರಂತರ ಪ್ರಯತ್ನವೇ ನಿಮ್ಮ ಫಿಟ್ನೆಸ್​ ಗೋಲ್​ಗೆ ತುಂಬ ಮುಖ್ಯವಾದ ಅಂಶ. ವರ್ಕೌಟ್​, ಡಯೆಟ್​, ಆಲೋಚನೆಗಳು ಮತ್ತು ಜರ್ನಿ ನಿರಂತರವಾಗಿ ಇರಲಿ ಹಾಗೂ ಅದನ್ನು ಎಂಜಾಯ್ ಮಾಡಿ. ಸ್ವಲ್ಪ ಸಮಯದವರೆಗೆ ಅದು ಖುಷಿ ನೀಡದೇ ಇರಬಹುದು. ಆದರೆ ಅಭ್ಯಾಸವಾದ ಬಳಿಕ ನಿಮಗೆ ಅರ್ಥವಾಗುತ್ತದೆ’ ಎಂದು ರಶ್ಮಿಕಾ ಮಂದಣ್ಣ ಬರೆದುಕೊಂಡಿದ್ದಾರೆ.

ಜಿಮ್​ನಲ್ಲಿ ವರ್ಕೌಟ್​ ಮಾಡುವಾಗ ರಶ್ಮಿಕಾ ಮಂದಣ್ಣ ಅವರು ಈ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಅದರಲ್ಲಿ ಅವರ ಫಿಟ್ನೆಸ್​ ಎದ್ದು ಕಾಣುತ್ತದೆ. ಫಿಟ್ನೆಸ್​ ಪ್ರಿಯರಿಗೆ ಸ್ಫೂರ್ತಿ ನೀಡುವಂತಿರುವ ಈ ಫೋಟೋ ಈಗ ರಶ್ಮಿಕಾ ಮಂದಣ್ಣ ಅವರ ಅಭಿಮಾನಿಗಳ ವಲಯದಲ್ಲಿ ವೈರಲ್​ ಆಗಿದೆ. ಬಾಲಿವುಡ್​ಗೆ ಕಾಲಿಟ್ಟ ಬಳಿಕ ರಶ್ಮಿಕಾ ಅವರು ಫಿಟ್ನೆಸ್​ ಬಗ್ಗೆ ಇನ್ನಷ್ಟು ಕಾಳಜಿ ವಹಿಸುತ್ತಿದ್ದಾರೆ.

ಯೂಟ್ಯೂಬ್​ ಚಾನೆಲ್​ ಆರಂಭಿಸಿದ ರಶ್ಮಿಕಾ ಮಂದಣ್ಣ:

ಎಲ್ಲರಿಗೂ ಯೂಟ್ಯೂಬ್​ ಎಂಬುದು ಹೊಸ ವೇದಿಕೆ ಆಗಿದೆ. ಜನಸಾಮಾನ್ಯರು ಕೂಡ ತಮ್ಮದೇ ಯೂಟ್ಯೂಬ್​ ಚಾನೆಲ್ ಆರಂಭಿಸಿ, ಅದರಿಂದ ಹಣ ಗಳಿಸುತ್ತಾರೆ. ಸೆಲೆಬ್ರಿಟಿಗಳು ಸಹ ಈ ವಿಚಾರದಲ್ಲಿ ಹಿಂದಿ ಬಿದ್ದಿಲ್ಲ. ಅನೇಕ ನಟ-ನಟಿಯರು ತಮ್ಮದೇ ಯೂಟ್ಯೂಬ್​ ಚಾನೆಲ್​ ಹೊಂದಿದ್ದಾರೆ. ಅದರಿಂದಲೂ ಅವರು ಹಣ ಗಳಿಸುತ್ತಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಕೂಡ ಇದೇ ಹಾದಿಯಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ. ಇಷ್ಟು ದಿನ ಕೇವಲ ಇನ್​ಸ್ಟಾಗ್ರಾಮ್​, ಫೇಸ್​ಬುಕ್​, ಟ್ವಿಟರ್​ ಮುಂತಾದ ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದ ರಶ್ಮಿಕಾ ಮಂದಣ್ಣ ಅವರು ಈಗ ಯೂಟ್ಯೂಬ್​ ಲೋಕಕ್ಕೆ ಕಾಲಿಟ್ಟಿದ್ದಾರೆ. ಇಲ್ಲಿಗೆ ಕಾಲಿಡುತ್ತಿದ್ದಂತೆಯೇ ಅವರಿಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಕೆಲವೇ ದಿನಗಳಲ್ಲಿ 47 ಸಾವಿರಕ್ಕೂ ಅಧಿಕ ಮಂದಿ ಚಂದಾದಾರರು ಸಿಕ್ಕಿದ್ದಾರೆ. ‘ರಶ್ಮಿಕಾ ಮಂದಣ್ಣ’ ಎಂಬ ಈ ವೇರಿಫೈಯ್ಡ್​ ಯೂಟ್ಯೂಬ್​ ಚಾನೆಲ್​ನಲ್ಲಿ ತಮ್ಮ ವೈಯಕ್ತಿಕ ಇಷ್ಟ-ಕಷ್ಟಗಳ ಬಗ್ಗೆ ಅವರು ಮಾಹಿತಿ ನೀಡಲಿದ್ದಾರೆ.

ಇದನ್ನೂ ಓದಿ:

​ರಶ್ಮಿಕಾ ಮಂದಣ್ಣ ಕೊಟ್ಟ ಚಮಕ್​ ಕಂಡು ಹೌಹಾರಿದ ವರುಣ್​ ಧವನ್​; ವೈರಲ್​ ಆಗಿದೆ ಈ ವಿಡಿಯೋ

ಶೂಟಿಂಗ್​ ವೇಳೆ ತೆರೆ ಹಿಂದೆ ರಶ್ಮಿಕಾ ಮಂದಣ್ಣ ಮಾಡುವ ತರ್ಲೆ-ತಮಾಷೆಗೆ ಈ ವಿಡಿಯೋ ಸಾಕ್ಷಿ

Published On - 12:19 pm, Sat, 26 March 22

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್