AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೆ ಕೆಲವೇ ದಿನ ಬಾಕಿ ಇರುವಾಗಲೂ ಶೂಟಿಂಗ್ ನಿಲ್ಲಿಸಿಲ್ಲ ರಶ್ಮಿಕಾ ಮಂದಣ್ಣ

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮದುವೆ ಬಹಳ ಅದ್ದೂರಿಯಾಗಿ ನಡೆಯಲಿದೆ. ಮದುವೆಗೆ ಕೆಲವೇ ದಿನಗಳು ಬಾಕಿ ಇವೆ. ಆದರೂ ಕೂಡ ರಶ್ಮಿಕಾ ಮಂದಣ್ಣ ಶೂಟಿಂಗ್ ಮಾಡುತ್ತಿದ್ದಾರೆ. ‘ಪುಷ್ಪ 2’ ಬಳಿಕ ಅಲ್ಲು ಅರ್ಜುನ್ ಜೊತೆಗಿನ ಹೊಸ ಸಿನಿಮಾಗೆ ಮುಂಬೈನಲ್ಲಿ ಚಿತ್ರೀಕರಣ ನಡೆಯುತ್ತಿದೆ.

ಮದುವೆಗೆ ಕೆಲವೇ ದಿನ ಬಾಕಿ ಇರುವಾಗಲೂ ಶೂಟಿಂಗ್ ನಿಲ್ಲಿಸಿಲ್ಲ ರಶ್ಮಿಕಾ ಮಂದಣ್ಣ
Rashmika
ಮದನ್​ ಕುಮಾರ್​
|

Updated on: Feb 05, 2026 | 3:45 PM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ವಿಜಯ್ ದೇವರಕೊಂಡ ಜೊತೆ ಅವರು ಹಸೆಮಣೆ ಏರಲಿದ್ದಾರೆ. ಮದುವೆಗೆ ಕೆಲವೇ ದಿನಗಳು ಬಾಕಿ ಇವೆ. ಹಾಗಿದ್ದರೂ ಕೂಡ ರಶ್ಮಿಕಾ ಮಂದಣ್ಣ ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅಲ್ಲು ಅರ್ಜುನ್ (Allu Arjun) ಜೊತೆಗಿನ ಹೊಸ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್​ದಾರೆ. ಮುಂಬೈನಲ್ಲಿ ಈ ಚಿತ್ರಕ್ಕೆ ಶೂಟಿಂಗ್ ನಡೆಯುತ್ತಿದೆ. ಅದರಲ್ಲಿ ರಶ್ಮಿಕಾ ಮಂದಣ್ಣ ಅವರು ಭಾಗಿಯಾಗಿದ್ದಾರೆ. ಈ ಸಿನಿಮಾಗೆ ಅಟ್ಲಿ ಅವರು ನಿರ್ದೇಶನ ಮಾಡುತ್ತಿದ್ದಾರೆ.

ಈ ಸಿನಿಮಾಗೆ ಇನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ಸದ್ಯಕ್ಕೆ ಇದನ್ನು ‘AA22xA6’ ಎಂದು ಕರೆಯಲಾಗುತ್ತಿದೆ. ಈ ಸಿನಿಮಾದಲ್ಲಿನ ರಶ್ಮಿಕಾ ಮಂದಣ್ಣ ಅವರ ಪಾತ್ರದ ಬಗ್ಗೆ ಅಚ್ಚರಿಯ ಮಾಹಿತಿ ಕೇಳಿಬರುತ್ತಿದೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಅವರು ನೆಗೆಟಿವ್ ರೋಲ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಆ ಕಾರಣದಿಂದ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಮೂಡಿದೆ.

ಮುಂಬೈನಲ್ಲಿ ‘AA22xA6’ ಚಿತ್ರಕ್ಕೆ ಶೂಟಿಂಗ್ ಮಾಡಲಾಗುತ್ತಿದೆ. ಸದ್ಯಕ್ಕೆ ರಶ್ಮಿಕಾ ಮಾತ್ರ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಈ ಹಂತದ ಶೂಟಿಂಗ್ ಮುಗಿದ ಬಳಿಕ ರಶ್ಮಿಕಾ ಅವರು ಮದುವೆಗಾಗಿ ಬ್ರೇಕ್ ಪಡೆದುಕೊಳ್ಳಲಿದ್ದಾರೆ. ಇನ್ನುಳಿದ ಪಾತ್ರಧಾರಿಗಳಾದ ಅಲ್ಲು ಅರ್ಜುನ್ ಮತ್ತು ಜಾನ್ವಿ ಕಪೂರ್ ಅವರು ಮುಂದಿನ ಹಂತದ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸೆಲೆಬ್ರಿಟಿ ಮದುವೆ ಎಂದರೆ ಬಹಳ ಅದ್ದೂರಿಯಾಗಿ ಇರುತ್ತದೆ. ಅದಕ್ಕೆ ತಯಾರಿ ಕೂಡ ಅಷ್ಟೇ ಜೋರಾಗಿರುತ್ತದೆ. ರಶ್ಮಿಕಾ ಮಂದಣ್ಣ ಅವರು ಪ್ಯಾನ್ ಇಂಡಿಯಾ ಸ್ಟಾರ್. ಅದೇ ರೀತಿ ವಿಜಯ್ ದೇವರಕೊಂಡ ಕೂಡ ಸಖತ್ ಜನಪ್ರಿಯತೆ ಹೊಂದಿದ್ದಾರೆ. ಅವರಿಬ್ಬರ ಮದುವೆ ತಯಾರಿಗೆ ಹೆಚ್ಚು ಸಮಯ ಬೇಕಾಗುತ್ತದೆ. ಹಾಗಿದ್ದರೂ ಕೂಡ ರಶ್ಮಿಕಾ ಮಂದಣ್ಣ ಅವರು ಇನ್ನೂ ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ: ಮದುವೆಗೂ ಮುನ್ನ ಗುಡ್ ನ್ಯೂಸ್ ನೀಡಿದ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ

ಹಲವು ವರ್ಷಗಳಿಂದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಆಪ್ತವಾಗಿದ್ದಾರೆ. ಅವರಿಬ್ಬರ ನಡುವೆ ಪ್ರೀತಿ ಚಿಗುರಿದೆ. ಎರಡೂ ಕುಟುಂಬದ ಒಪ್ಪಿಗೆ ಮೇರೆಗೆ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಆದರೆ ಈ ಬಗ್ಗೆ ಅವರು ಇನ್ನೂ ಸಾರ್ವಜನಿಕವಾಗಿ ಮಾತನಾಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಬಯಲಾಯ್ತು ಕಲಬುರಗಿ ಆರ್​ಟಿಒ ಕಚೇರಿ ಬ್ರಹ್ಮಾಂಡ ಭ್ರಷ್ಟಾಚಾರ
ಬಯಲಾಯ್ತು ಕಲಬುರಗಿ ಆರ್​ಟಿಒ ಕಚೇರಿ ಬ್ರಹ್ಮಾಂಡ ಭ್ರಷ್ಟಾಚಾರ
Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ
ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ!
ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ!
ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್
ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್
ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್​​ ಮುಖಂಡ
ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್​​ ಮುಖಂಡ