AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂದರ್ಶನದಲ್ಲಿ ರಶ್ಮಿಕಾಗೆ ಕಂಗ್ರಾಜ್ಯುಲೇಷನ್ ಹೇಳಿದ ಆ್ಯಂಕರ್; ನಾಚಿ ನೀರಾದ ನಟಿ

ರಶ್ಮಿಕಾ ಮಂದಣ್ಣ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರು ವಿಜಯ್ ದೇವರಕೊಂಡ ಜೊತೆ ಹಲವು ವರ್ಷಗಳಿಂದ ರಿಲೇಶನ್​ಶಿಪ್​ನಲ್ಲಿ ಇದ್ದಾರೆ. ಇವರ ಸಂಬಂಧದ ಮೇಲೆ ಯಾರ ಕಣ್ಣೂ ಬೀಳದಿರಲಿ ಎಂಬುದು ಅನೇಕರ ಕೋರಿಕೆ. ಫೆಬ್ರವರಿ ವೇಳೆಗೆ ರಶ್ಮಿಕಾ ಮಂದಣ್ಣ ಮದುವೆ ಆಗಬಹುದು ಎಂದು ಹೇಳಲಾಗುತ್ತಿದೆ.

ಸಂದರ್ಶನದಲ್ಲಿ ರಶ್ಮಿಕಾಗೆ ಕಂಗ್ರಾಜ್ಯುಲೇಷನ್ ಹೇಳಿದ ಆ್ಯಂಕರ್; ನಾಚಿ ನೀರಾದ ನಟಿ
ರಶ್ಮಿಕಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 17, 2025 | 10:42 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಜೋರಾಗಿದೆ. ಈ ವಿಚಾರದಲ್ಲಿ ಯಾರೊಬ್ಬರೂ ಸ್ಪಷ್ಟನೆ ಕೊಟ್ಟಿಲ್ಲ. ಈ ಮಧ್ಯೆ ರಶ್ಮಿಕಾ ಮಂದಣ್ಣ ಅವರ ಉಂಗುರ ಗಮನ ಸೆಳೆಯುವ ರೀತಿಯಲ್ಲಿ ಇದೆ. ಇದು ಎಂಗೇಜ್​ಮೆಂಟ್ ಗಿಫ್ಟ್ ಎಂದು ಅನೇಕರು ಊಹಿಸಿದ್ದಾರೆ. ಹೀಗಿರುವಾಗಲೇ ಒಂದು ವಿಷಯ ಚರ್ಚೆಗೆ ಕಾರಣ ಆಗಿದೆ. ಅವರಿಗೆ ಸಂದರ್ಶಕ ಕಂಗ್ರಾಜ್ಯುಲೇಷನ್ ಹೇಳಿದರು. ಇದರಿಂದ ರಶ್ಮಿಕಾ ನಾಚಿ ನೀರಾದರು.

ರಶ್ಮಿಕಾ ಸಣ್ಣ ಸಣ್ಣ ವಿಚಾರಕ್ಕೂ ಹೆಚ್ಚು ನಾಚಿಕೊಳ್ಳುತ್ತಾರೆ. ಈಗ ಅವರು ‘ಥಮ’ ಸಿನಿಮಾ ಪ್ರಮೋಷನ್ ಅಲ್ಲಿ ಭಾಗಿ ಆಗುತ್ತಿದ್ದಾರೆ. ಹಲವು ಕಡೆಗಳಲ್ಲಿ ಸಂದರ್ಶನ ನೀಡುತ್ತಾ ಇದ್ದಾರೆ. ಇದೇ ರೀತಿ ಸಂದರ್ಶನ ನೀಡುವಾಗ ‘ರಶ್ಮಿಕಾ ಅವರೇ ಕಂಗ್ರ್ಯಾಜ್ಯಲೇಷನ್’ ಎಂದು ಸಂದರ್ಶಕ ಹೇಳಿದರು. ಆಗ ರಶ್ಮಿಕಾ ಯೋಚಿಸುತ್ತಾ ನಿಂತರು. ‘ಸಿನಿಮಾದಲ್ಲಿ ನಿಮ್ಮ ಪರ್ಫಾರ್ಮೆನ್ಸ್​ಗೆ’ ಎಂದು ಸಂದರ್ಶಕ ಸ್ಪಷ್ಟನೆ ನೀಡಿದರು.

ಇದನ್ನೂ ಓದಿ
Image
ಆಲಿಯಾ ಹೊಸ ಮನೆಯಲ್ಲಿ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿದ ಗಣಪತಿ ಮೂರ್ತಿ
Image
ಸಪ್ತಪದಿ ತುಳಿಯುವಾಗಲೇ ಕರ್ಣನಿಗೆ ಗೊತ್ತಾಯ್ತು ನಿಧಿ ಪ್ರೆಗ್ನೆನ್ಸಿ ವಿಚಾರ
Image
ಬಕ್ರಾ ಮಾಡಲು ಬಂದ ಜಾನ್ವಿ-ಅಶ್ವಿನಿಗೆ ಮಣ್ಣು ಮುಕ್ಕಿಸಿದ ರಕ್ಷಿತಾ ಶೆಟ್ಟಿ
Image
ಬಿಗ್ ಬಾಸ್ ಮನೆಯಲ್ಲಿ ಮಿಡ್ ವೀಕ್ ಎಲಿಮಿನೇಷನ್; ಆ ಇಬ್ಬರು ಔಟ್?

ಇದನ್ನೂ ಓದಿ: ದೈವ vs ದೆವ್ವ: ‘ಕಾಂತಾರ 1’ ನಾಗಾಲೋಟಕ್ಕೆ ಬ್ರೇಕ್ ಹಾಕಲಿದೆಯೇ ರಶ್ಮಿಕಾ ಮಂದಣ್ಣ ಸಿನಿಮಾ

ಆಗ ರಶ್ಮಿಕಾ ಮಂದಣ್ಣ ಅವರು ನಾಚುತ್ತಲೇ, ‘ಧನ್ಯವಾದ’ ಹೇಳಿದರು. ಆಗ ರಶ್ಮಿಕಾಗೆ ಒಂದು ವಿಚಾರವನ್ನು ಸಂದರ್ಶಕರು ಕೇಳಿದರು. ‘ನೀವು ಬೇರೆ ಏನಾದರೂ ಯೋಚಿಸುತ್ತಿದ್ದಿರಾ’ ಎಂದರು. ಆಗ ರಶ್ಮಿಕಾ ಅವರು ಇಲ್ಲ ಎಂಬ ಉತ್ತರ ನೀಡಿದರು. ಇದನ್ನು ವೈರಲ್ ಮಾಡಲಾಗುತ್ತಾ ಇದೆ. ಅನೇಕರು ರಶ್ಮಿಕಾ ನಿಶ್ಚಿತಾರ್ಥ ಮಾಡಿಕೊಂಡಿದ್ದರಿಂದ ಕಂಗ್ರ್ಯಾಜ್ಯುಲೇಷನ್ ಹೇಳಿದಾಗ ಅವರು ಕೊಂಚ ಅಂಜಿದರು ಎಂದು ಅನೇಕರು ಹೇಳುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರು ವಿಜಯ್ ದೇವರಕೊಂಡ ಜೊತೆ ಹಲವು ವರ್ಷಗಳಿಂದ ರಿಲೇಶನ್​ಶಿಪ್​ನಲ್ಲಿ ಇದ್ದಾರೆ. ಇವರ ಸಂಬಂಧದ ಮೇಲೆ ಯಾರ ಕಣ್ಣೂ ಬೀಳದಿರಲಿ ಎಂಬುದು ಅನೇಕರ ಕೋರಿಕೆ. ಫೆಬ್ರವರಿ ವೇಳೆಗೆ ರಶ್ಮಿಕಾ ಮಂದಣ್ಣ ಮದುವೆ ಆಗಬಹುದು ಎಂದು ಹೇಳಲಾಗುತ್ತಿದೆ. ಅವರು ಒಪ್ಪಿಕೊಂಡಿರುವ ಕೆಲಸವು ಸಿನಿಮಾಗಳು ಬಾಕಿ ಇದ್ದು, ಅದರ ಕೆಲಸವನ್ನು ಪೂರ್ಣಗೊಳಿಸಬೇಕಿದೆ. ‘ಪುಷ್ಪ 2’, ‘ಅನಿಮಲ್’ ಮೊದಲಾದ ಸಿನಿಮಾಗಳು ಗೆದ್ದಿವೆ. ಈಗ ‘ಥಮ’ ಮೂಲಕ ಅವರು ಮತ್ತೊಂದು ಗೆಲುವಿಗಾಗಿ ಕಾಯುತ್ತಿದ್ದಾರೆ. ಈ ಚಿತ್ರ ಅಕ್ಟೋಬರ್ 21ರಂದು ರಿಲೀಸ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ