AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಚಿತ್ರದ ಕಥೆ ಲೀಕ್? ಆರಂಭದಲ್ಲೇ ಕೊನೆಯಾಗಲಿದೆಯಾ ರಶ್ಮಿಕಾ ಮಂದಣ್ಣ ಪಾತ್ರ?

ಎರಡನೇ ಪಾರ್ಟ್​​​ನಲ್ಲಿ ಭನ್ವರ್ ಹಾಗೂ ಪುಷ್ಪ ನಡುವಿನ ಹಗೆತನದ ಕಥೆ ಹೈಲೈಟ್ ಆಗಲಿದೆ ಎನ್ನಲಾಗುತ್ತಿದೆ. ಇದರ ಜತೆ ಈ ಚಿತ್ರದ ಕಥೆ ಲೀಕ್ ಆದ ಬಗ್ಗೆ ವದಂತಿ ಹಬ್ಬಿದೆ.

‘ಪುಷ್ಪ 2’ ಚಿತ್ರದ ಕಥೆ ಲೀಕ್? ಆರಂಭದಲ್ಲೇ ಕೊನೆಯಾಗಲಿದೆಯಾ ರಶ್ಮಿಕಾ ಮಂದಣ್ಣ ಪಾತ್ರ?
ರಶ್ಮಿಕಾ
TV9 Web
| Edited By: |

Updated on: Jun 19, 2022 | 6:08 PM

Share

ನಟಿ ರಶ್ಮಿಕಾ ಮಂದಣ್ಣ ಅವರು (Rashmika Mandanna) ‘ಪುಷ್ಪ’ ಚಿತ್ರದಿಂದ ಸಾಕಷ್ಟು ಜನಪ್ರಿಯತೆ ಗಳಿಸಿಕೊಂಡಿದ್ದಾರೆ. ಅವರು ಮಾಡಿದ ಶ್ರೀವಲ್ಲಿ ಪಾತ್ರಕ್ಕೆ ಅನೇಕರು ಫಿದಾ ಆಗಿದ್ದಾರೆ. ಈ ಚಿತ್ರ ಹಿಂದಿಗೂ ಡಬ್​ ಆಗಿ ತೆರೆಕಂಡಿದ್ದರಿಂದ ಬಾಲಿವುಡ್​ನಲ್ಲೂ (Bollywood) ರಶ್ಮಿಕಾ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಈಗ ‘ಪುಷ್ಪ 2’ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಮಧ್ಯೆ ಫ್ಯಾನ್ಸ್​ಗೆ ಬೇಸರವಾಗುವಂತಹ ವದಂತಿ ಒಂದು ಹುಟ್ಟಿಕೊಂಡಿದೆ. ಆರಂಭದಲ್ಲೇ ಶ್ರೀವಲ್ಲಿ ಪಾತ್ರ ಕೊನೆಯಾಗಲಿದೆ ಎನ್ನುವ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಪುಷ್ಪ ರಾಜ್ (ಅಲ್ಲು ಅರ್ಜುನ್​) ಈಗ ದೊಡ್ಡ ಡಾನ್​ ಆಗಿದ್ದಾನೆ.  ಆತ ಭನ್ವರ್ ಸಿಂಗ್ ಶೇಖಾವತ್​ (ಫಹಾದ್ ಫಾಸಿಲ್​) ಜತೆ ಹಗೆ ಕಟ್ಟಿಕೊಂಡಿದ್ದಾನೆ. ಈ ಮಧ್ಯೆ ಪುಷ್ಪ ಹಾಗೂ ಶ್ರೀವಲ್ಲಿ ಮದುವೆ ಆಗಿದೆ. ಎರಡನೇ ಪಾರ್ಟ್​​​ನಲ್ಲಿ ಭನ್ವರ್ ಹಾಗೂ ಪುಷ್ಪ ನಡುವಿನ ಹಗೆತನದ ಕಥೆ ಹೈಲೈಟ್ ಆಗಲಿದೆ ಎನ್ನಲಾಗುತ್ತಿದೆ. ಇದರ ಜತೆ ಈ ಚಿತ್ರದ ಕಥೆ ಲೀಕ್ ಆದ ಬಗ್ಗೆ ವದಂತಿ ಹಬ್ಬಿದೆ.

ಲೀಕ್ ಆಗಿದೆ ಎನ್ನಲಾದ ಕಥೆಯ ಪ್ರಕಾರ ಶ್ರೀವಲ್ಲಿಯನ್ನು ಭನ್ವರ್ ಆರಂಭದಲ್ಲೇ ಹತ್ಯೆ ಮಾಡುತ್ತಾನೆ. ಇದರಿಂದ ಪುಷ್ಪ ಸಾಕಷ್ಟು ಕುಪಿತಗೊಳ್ಳುತ್ತಾನೆ. ಇಬ್ಬರ ನಡುವೆ ಇರುವ ಹಗೆತನ ಮತ್ತಷ್ಟು ಉಗ್ರ ಸ್ವರೂಪ ಪಡೆದುಕೊಳ್ಳುತ್ತದೆ. ಹೀಗೆ ಕಥೆ ಸಾಗುತ್ತದೆ ಎನ್ನಲಾಗುತ್ತಿದೆ. ಈ ವದಂತಿಯನ್ನು ನಂಬುವುದು ಬಿಡುವುದು ಅಭಿಮಾನಿಗಳ ಪಾಲಿಗೆ ಬಿಟ್ಟ ವಿಚಾರ.

ಇದನ್ನೂ ಓದಿ
Image
ಫ್ಯಾನ್ ಮೇಲೆ ಬಾಡಿಗಾರ್ಡ್​ ರೇಗಾಡಿದ್ದನ್ನು ನೋಡಿ ಸಿಟ್ಟಾದ ರಶ್ಮಿಕಾ ಮಂದಣ್ಣ; ಇಲ್ಲಿದೆ ವಿಡಿಯೋ
Image
ರಣಬೀರ್ ಮಾತ್ರ ಹಾಗೆ ಕರೆಯುತ್ತಾರೆ, ಅದು ನನಗೆ ಕೊಂಚವೂ ಇಷ್ಟವಿಲ್ಲ ಎಂದ ರಶ್ಮಿಕಾ ಮಂದಣ್ಣ
Image
ತೃಪ್ತಿ ಆಗುವಂತೆ ಬೆವರು ಹರಿಸಿ ವರ್ಕೌಟ್​ ಮಾಡಿದ ಬಳಿಕ ಫೋಟೋ ಹಂಚಿಕೊಂಡ ರಶ್ಮಿಕಾ ಮಂದಣ್ಣ
Image
ರಶ್ಮಿಕಾ ಮಂದಣ್ಣಗೆ ಖಂಡಿತಾ ಇಷ್ಟ ಆಗಲಿದೆ ರಕ್ಷಿತ್​ ಶೆಟ್ಟಿಯ ‘777 ಚಾರ್ಲಿ’ ಸಿನಿಮಾ; ಕಾರಣ ಏನು?

ಹೀರೋಯಿನ್ ಹತ್ಯೆ ಮಾಡುವುದು ಅಥವಾ ಹೀರೋಯಿನ್ ಕಿಡ್ನಾಪ್ ಮಾಡೋದು ಭಾರತೀಯ ಸಿನಿಮಾಗಳಲ್ಲಿ ಈ ಮೊದಲಿನಿಂದಲೂ ಬಳಕೆ ಆಗುತ್ತಿರುವ ತಂತ್ರ. ‘ಕೆಜಿಎಫ್ 2’ ಸಿನಿಮಾದಲ್ಲಿ ಇದೇ ರೀತಿಯ ಕಥೆ ಇದೆ. ಈಗ ‘ಪುಷ್ಪ 2’ ಚಿತ್ರದಲ್ಲೂ ಇದೇ ತಂತ್ರ ಬಳಕೆ ಆಗಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ರಣಬೀರ್ ಮಾತ್ರ ಹಾಗೆ ಕರೆಯುತ್ತಾರೆ, ಅದು ನನಗೆ ಕೊಂಚವೂ ಇಷ್ಟವಿಲ್ಲ ಎಂದ ರಶ್ಮಿಕಾ ಮಂದಣ್ಣ

‘ಪುಷ್ಪ’ ತೆರೆಗೆ ಬಂದಿದ್ದು 2021ರ ಡಿಸೆಂಬರ್​ನಲ್ಲಿ. ಎರಡನೇ ಪಾರ್ಟ್ ​ಅನ್ನು 2022ರಲ್ಲಿ ತೆರೆಗೆ ತರಲು ಆಲೋಚನೆ ಮಾಡಲಾಗಿತ್ತು. ಆದರೆ, ಸ್ಕ್ರಿಪ್ಟ್​ನಲ್ಲಿ ನಿರ್ದೇಶಕ ಸುಕುಮಾರ್ ಅವರು ಕೆಲ ಬದಲಾವಣೆ ಮಾಡಿಕೊಂಡಿದ್ದಾರೆ. ಹೀಗಾಗಿ, ಚಿತ್ರದ ಕೆಲಸಗಳು ಆರಂಭಗೊಳ್ಳೋದು ವಿಳಂಬವಾಗಿದೆ. ಈ ಚಿತ್ರದ ಶೂಟಿಂಗ್ ಜುಲೈನಿಂದ ಆರಂಭಗೊಳ್ಳಲಿದೆ. ಈ ಕಾರಣಕ್ಕೆ 2023ರ ಬೇಸಿಗೆಗೆ ಈ ಚಿತ್ರ ತೆರೆಗೆ ಬರುವ ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?