AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಡಗೆ ಆಗುತ್ತಿದೆ ರಶ್ಮಿಕಾ ಮಂದಣ್ಣ ನಟನೆಯ ಮತ್ತೊಂದು ಸಿನಿಮಾ, ನಿರೀಕ್ಷೆ ದುಪ್ಪಟ್ಟು

Rashmika Mandanna: ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಮುಟ್ಟಿದ್ದೆಲ್ಲ ಚಿನ್ನವಾಗುತ್ತಿದೆ. ಅವರ ನಟನೆಯ ಕಳೆದ ಮೂರು ಸಿನಿಮಾಗಳು ಬ್ಲಾಕ್ ಬಸ್ಟರ್ ಸಿನಿಮಾಗಳಾಗಿವೆ. ಇದೀಗ ರಶ್ಮಿಕಾ ನಟನೆಯ ಹೊಸದೊಂದು ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದ್ದು, ಆ ಸಿನಿಮಾದ ಬಗ್ಗೆಯೂ ದೊಡ್ಡ ಮಟ್ಟದ ನಿರೀಕ್ಷೆಗಳಿವೆ.

ಬಿಡುಡಗೆ ಆಗುತ್ತಿದೆ ರಶ್ಮಿಕಾ ಮಂದಣ್ಣ ನಟನೆಯ ಮತ್ತೊಂದು ಸಿನಿಮಾ, ನಿರೀಕ್ಷೆ ದುಪ್ಪಟ್ಟು
Rashmika Mandanna
ಮಂಜುನಾಥ ಸಿ.
|

Updated on: Feb 27, 2025 | 6:52 PM

Share

ಕೊಡಗಿನ ಚೆಲುವೆ ರಶ್ಮಿಕಾ ಮಂದಣ್ಣ (Rashmika Mandanna) ಮುಟ್ಟಿಗೆದ್ದಲ್ಲ ಚಿನ್ನವಾಗುತ್ತಿದೆ. ರಶ್ಮಿಕಾ ಮಂದಣ್ಣ ನಟಿಸಿ, ಬಿಡುಗಡೆ ಆಗಿರುವ ಕಳೆದ ಮೂರು ಸಿನಿಮಾಗಳು ಸಹ ಬ್ಲಾಕ್ ಬಸ್ಟರ್ ಆಗಿವೆ. ಮೊದಲಿಗೆ ಬಿಡುಗಡೆ ಆದ ‘ಅನಿಮಲ್’ ಸುಮಾರು 1000 ಕೋಟಿ ಗಳಿಕೆ ಮಾಡಿತು. ಅದರ ಬಳಿಕ ಬಿಡುಗಡೆ ಆದ ‘ಪುಷ್ಪ 2’ ಸಿನಿಮಾ ಸುಮಾರು 2000 ಕೋಟಿ ರೂಪಾಯಿ ಗಳಿಕೆ ಮಾಡಿತು. ಇತ್ತೀಚೆಗೆ ಬಿಡುಗಡೆ ಆದ ‘ಛಾವಾ’ ಸಿನಿಮಾ ಸಹ 1000 ಕೋಟಿ ಗಳಿಕೆಯತ್ತ ವೇಗದಿಂದ ಮುನ್ನುಗ್ಗುತ್ತಿದೆ. ಇದರ ನಡುವೆ ರಶ್ಮಿಕಾ ನಟನೆಯ ಮತ್ತೊಂದು ಸಿನಿಮಾ ತೆರೆಗೆ ಬರುತ್ತಿದೆ.

ರಶ್ಮಿಕಾ ಮಂದಣ್ಣ ನಟನೆಯ ಹೊಸ ತಮಿಳು-ತೆಲುಗು ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ. ರಶ್ಮಿಕಾ, ತಮಿಳಿನ ಸ್ಟಾರ್ ನಟ ಧನುಶ್ ಜೊತೆಗೆ ಮೊದಲ ಬಾರಿ ನಟಿಸಿರುವ ‘ಕುಬೇರ’ ಸಿನಿಮಾದ ಬಿಡುಗಡೆ ದಿನಾಂಕ ಇಂದು ಘೋಷಣೆ ಆಗಿದೆ. ‘ಕುಬೇರ’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ, ಧನುಶ್ ಜೊತೆಗೆ ತೆಲುಗಿನ ಸ್ಟಾರ್ ನಟ ನಾಗಾರ್ಜುನ ಸಹ ನಟಿಸಿದ್ದು, ಈ ಸಿನಿಮಾ ಜೂನ್ 20ಕ್ಕೆ ತೆರೆಗೆ ಬರಲಿದೆ.

ರಶ್ಮಿಕಾ, ಧನುಶ್ ನಟಿಸಿರುವ ‘ಕುಬೇರ’ ಸಿನಿಮಾವನ್ನು ತೆಲುಗು ಚಿತ್ರರಂಗದ ಸ್ಟಾರ್ ನಿರ್ದೇಶಕ ಶೇಖರ್ ಕಮ್ಮುಲ ನಿರ್ದೇಶನ ಮಾಡಿದ್ದಾರೆ. ‘ಆನಂದ್’, ‘ಗೋಧಾವರಿ’, ‘ಹ್ಯಾಪಿಡೇಸ್’, ‘ಲೀಡರ್’, ‘ಫಿದಾ’, ‘ಲವ್ ಸ್ಟೋರಿ’ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಇವರು ಇದೀಗ ಮೊದಲ ಬಾರಿಗೆ ದೊಡ್ಡ ಸ್ಟಾರ್ ನಟನ ಸಿನಿಮಾ ಒಂದನ್ನು ನಿರ್ದೇಶನ ಮಾಡುತ್ತಿದ್ದಾರೆ. ಮಾತ್ರವಲ್ಲದೆ ಇದೇ ಮೊದಲ ಬಾರಿಗೆ ಬಹುಭಾಷೆಯಲ್ಲಿ ಸಿನಿಮಾಗಳನ್ನು ನಿರ್ದೇಶಿಸುತ್ತಿದ್ದಾರೆ.

ಇದನ್ನೂ ಓದಿ:ಅಯ್ಯೋ ಪಾಪ, ಮಾಸ್ಟರ್ ಆನಂದ್​ಗೆ ಏನಾಯ್ತು?

ರಶ್ಮಿಕಾ ಮಂದಣ್ಣ ಮುಟ್ಟಿದ್ದೆಲ್ಲ ಚಿನ್ನವಾಗುತ್ತಿರುವ ಸಮಯದಲ್ಲಿ ಪ್ರತಿಭಾವಂತ ನಟರು, ನಿರ್ದೇಶಕರನ್ನು ಒಳಗೊಂಡಿರುವ ‘ಕುಬೇರ’ ಸಿನಿಮಾ ಸಹ ದೊಡ್ಡ ಯಶಸ್ಸನ್ನೇ ಗಳಿಸಲಿದೆ ಎಂಬ ನಿರೀಕ್ಷೆ ಸಿನಿಮಾ ಪ್ರೇಮಿಗಳದ್ದು. ‘ಕುಬೇರ’ ಸಿನಿಮಾದ ಹೊರತಾಗಿ ರಶ್ಮಿಕಾ ಮಂದಣ್ಣ ಸಲ್ಮಾನ್ ಖಾನ್ ಜೊತೆಗೆ ನಟಿಸಿರುವ ‘ಸಿಖಂಧರ್’ ಸಿನಿಮಾದ ಬಿಡುಗಡೆ ದಿನಾಂಕ ಸಹ ಇಂದೇ ಘೋಷಣೆಯಾಗಿದ್ದು, ಆ ಸಿನಿಮಾ ಇದೇ ವರ್ಷದ ಈದ್ ಹಬ್ಬಕ್ಕೆ ಬಿಡುಗಡೆ ಆಗಲಿದೆ.

ಇವುಗಳ ಹೊರತಾಗಿ ರಶ್ಮಿಕಾ ಮಂದಣ್ಣ ಕೈಯಲ್ಲಿ ತೆಲುಗಿನ ‘ಗರ್ಲ್​ಫ್ರೆಂಡ್’, ಹಿಂದಿಯ ಎರಡು ಹೊಸ ಸಿನಿಮಾ, ವಿಜಯ್ ದೇವರಕೊಂಡ ಜೊತೆಗೆ ‘ಗೀತ ಗೋವಿಂದಂ 2’ ಸಿನಿಮಾ ಇನ್ನೂ ಕೆಲ ಸಿನಿಮಾಗಳಿವೆ. ಒಟ್ಟಾರೆ ಈ ವರ್ಷ ಪೂರ್ತಿ ರಶ್ಮಿಕಾ ಮಂದಣ್ಣ ಭಾರಿ ಬ್ಯುಸಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು