Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನ ಬಿಡುಗಡೆ ಆಗಲಿವೆ ರಶ್ಮಿಕಾ ನಟನೆಯ ಈ ಎರಡು ಬಿಗ್ ಬಜೆಟ್ ಸಿನಿಮಾಗಳು

‘ಪುಷ್ಪ 2’ ಚಿತ್ರ ಆಗಸ್ಟ್ 15ರಂದು ರಿಲೀಸ್ ಆಗಬೇಕಿತ್ತು. ಈಗ ತಂಡ ಹೊಸ ರಿಲೀಸ್ ದಿನಾಂಕವನ್ನು ಘೋಷಣೆ ಮಾಡಿದೆ. ಅದುವೇ ಡಿಸೆಂಬರ್ 6. ಅದೇ ರೀತಿ ರಶ್ಮಿಕಾ ನಟನೆಯ ‘ಛವಾ’ ಕೂಡ ಡಿಸೆಂಬರ್ 6ಕ್ಕೆ ಬಿಡುಗಡೆ ಕಾಣಲಿದೆ ಎಂದು ಹೇಳಲಾಗುತ್ತಿದೆ.

ಒಂದೇ ದಿನ ಬಿಡುಗಡೆ ಆಗಲಿವೆ ರಶ್ಮಿಕಾ ನಟನೆಯ ಈ ಎರಡು ಬಿಗ್ ಬಜೆಟ್ ಸಿನಿಮಾಗಳು
ರಶ್ಮಿಕಾ
Follow us
ರಾಜೇಶ್ ದುಗ್ಗುಮನೆ
|

Updated on: Jul 24, 2024 | 9:04 AM

ರಶ್ಮಿಕಾ ಮಂದಣ್ಣ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರು ಹೊಸ ಸಿನಿಮಾ ಒಪ್ಪಿಕೊಳ್ಳಬೇಕು ಎಂದರೆ ಡೇಟ್ಸ್ ಹೊಂದಾಣಿಕೆ ಸಖತ್ ಕಷ್ಟ ಆಗುತ್ತಿದೆ. ಅಲ್ಲು ಅರ್ಜುನ್ ಜೊತೆ ಅವರು ನಟಿಸುತ್ತಿರುವ ‘ಪುಷ್ಪ 2’ ಸಿನಿಮಾ ಬಗ್ಗೆ ಭರ್ಜರಿ ನಿರೀಕ್ಷೆ ಇದೆ. ಕಾರಣಾಂತರಗಳಿಂದ ಸಿನಿಮಾದ ರಿಲೀಸ್ ದಿನಾಂಕ ಡಿಸೆಂಬರ್ ತಿಂಗಳಿಗೆ ಮುಂದೂಡಲ್ಪಟ್ಟಿದೆ. ಅದೇ ರೀತಿ ಅವರು ‘ಛವಾ’ ಹೆಸರಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈಗ ಒಂದೇ ದಿನ ರಶ್ಮಿಕಾ ಅವರ ಈ ಎರಡು ಸಿನಿಮಾಗಳು ರಿಲೀಸ್ ಆಗೋ ಸಾಧ್ಯತೆ ಗೋಚರವಾಗಿದೆ.

‘ಪುಷ್ಪ 2’ ಸಿನಿಮಾ ಆಗಸ್ಟ್ 15ರಂದು ರಿಲೀಸ್ ಆಗಬೇಕಿತ್ತು. ಆದರೆ, ಈಗ ಸಿನಿಮಾನ ಡಿಸೆಂಬರ್ 6ರಂದು ರಿಲೀಸ್ ಮಾಡೋದಾಗಿ ತಂಡದವರು ಘೋಷಣೆ ಮಾಡಿದ್ದಾರೆ. ಅದೇ ರೀತಿ ರಶ್ಮಿಕಾ ನಟನೆಯ ‘ಛವಾ’ ಕೂಡ ಡಿಸೆಂಬರ್ 6ಕ್ಕೆ ಬಿಡುಗಡೆ ಕಾಣಲಿದೆ ಎಂದು ಹೇಳಲಾಗುತ್ತಿದೆ. ಈ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಅವರು ವಿಲನ್ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾ ಛತ್ರಪತಿ ಶಿವಾಜಿ ಅವರ ಮಗ ಸಂಭಾಜಿ ಬಗ್ಗೆ ಇದೆ.

‘ಛವಾ’ ಈ ಮೊದಲೇ ಡಿಸೆಂಬರ್ 6ರಂದು ರಿಲೀಸ್ ಆಗಲಿದೆ ಎಂದು ಹೇಳಲಾಗಿತ್ತು. ‘ಪುಷ್ಪ 2’ ಘೋಷಣೆ ಆದ ಬಳಿಕ ಈ ಚಿತ್ರದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಬಹುದು ಎಂದು ಅನೇಕರು ಭಾವಿಸಿದ್ದರು. ಆದರೆ ಆ ರೀತಿ ಆಗಿಲ್ಲ. ಈ ಚಿತ್ರ ಕೂಡ ಅಂದುಕೊಂಡಂತೆ ಡಿಸೆಂಬರ್ 6ರಂದು ರಿಲೀಸ್ ಆಗಲಿದೆ ಎಂದು ಹೇಳಲಾಗುತ್ತಿದೆ. ಆಗಸ್ಟ್ 15ರಂದು ಸಿನಿಮಾದ ಮೊದಲ ಗ್ಲಿಂಪ್ಸ್ ರಿಲೀಸ್ ಆಗಲಿದೆ.

‘ಸ್ತ್ರೀ 2’ ಸಿನಿಮಾ ಆಗಸ್ಟ್ 15ರಂದು ಬಿಡುಗಡೆ ಆಗುತ್ತಿದೆ. ಈ ಸಿನಿಮಾದ ಜೊತೆ ‘ಛವಾ’ ಸಿನಿಮಾದ ಗ್ಲಿಂಪ್ಸ್ ಅಟ್ಯಾಚ್ ಆಗಿ ಪ್ರಸಾರ ಕಾಣಲಿದೆ. ಲಕ್ಷ್ಮಣ್ ಉಟೇಕರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ‘ಮಡ್ಯಾಕ್ ಫಿಲ್ಮ್ಸ್’ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.

ಇದನ್ನೂ ಓದಿ: ಸೂಟ್​ಕೇಸ್​ ತುಂಬ ಹಣದ ಕಂತೆ; ಎಲ್ಲವನ್ನೂ ಹೊತ್ತುಕೊಂಡು ಹೋದ ರಶ್ಮಿಕಾ ಮಂದಣ್ಣ

ಈ ಮೊದಲು ಅನೇಕ ಹೀರೋಯಿನ್​ಗಳಿಗೆ ಈ ರೀತಿ ಆಗಿದೆ. ಒಂದೇ ದಿನ ಅವರ ನಟನೆಯ ಎರಡು ಸಿನಿಮಾಗಳು ರಿಲೀಸ್ ಆದ ಉದಾಹರಣೆ ಇದೆ. ಈಗ ‘ಪುಷ್ಪ 2’ ಹಾಗೂ ‘ಛವಾ’ ಒಂದೇ ದಿನ ಬಿಡುಗಡೆ ಆಗಲಿದೆಯೇ ಎನ್ನುವ ಪ್ರಶ್ನೆ ಕಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವೈದ್ಯೆ ನೀರುಪಾಲು.. 20 ಅಡಿ ಎತ್ತರದಿಂದ ಜಿಗಿದ ಭಯಾನಕ ದೃಶ್ಯ!
ವೈದ್ಯೆ ನೀರುಪಾಲು.. 20 ಅಡಿ ಎತ್ತರದಿಂದ ಜಿಗಿದ ಭಯಾನಕ ದೃಶ್ಯ!
ನಾನು ಖರೀದಿಸಿರುವ ಜಮೀನಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿಲ್ಲ: ಕುಮಾರಸ್ವಾಮಿ
ನಾನು ಖರೀದಿಸಿರುವ ಜಮೀನಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿಲ್ಲ: ಕುಮಾರಸ್ವಾಮಿ
ಮೆಟ್ರೋ ದರ ಏರಿಕೆಗೆ: ರಹಸ್ಯ ಬಹಿರಂಗಪಡಿಸಿದ ಶೋಭಾ ಕರಂದ್ಲಾಜೆ
ಮೆಟ್ರೋ ದರ ಏರಿಕೆಗೆ: ರಹಸ್ಯ ಬಹಿರಂಗಪಡಿಸಿದ ಶೋಭಾ ಕರಂದ್ಲಾಜೆ
ಸೊಸೆಯ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ವೈದ್ಯ
ಸೊಸೆಯ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ವೈದ್ಯ
ದೆಹಲಿಯಲ್ಲಿ ಅಗ್ನಿ ಅವಘಡ, ಪ್ರಾಣ ಉಳಿಸಿಕೊಳ್ಳಲು ಎರಡನೇ ಮಹಡಿಯಿಂದ ಜಿಗಿದ ಜನ
ದೆಹಲಿಯಲ್ಲಿ ಅಗ್ನಿ ಅವಘಡ, ಪ್ರಾಣ ಉಳಿಸಿಕೊಳ್ಳಲು ಎರಡನೇ ಮಹಡಿಯಿಂದ ಜಿಗಿದ ಜನ
ಚಾಮರಾಜನಗರ: ಒಂಟಿ ಸಲಗದ ಮುಂದೆ ನಿಂತು ಪ್ರವಾಸಿಗರ ಹುಚ್ಚಾಟ
ಚಾಮರಾಜನಗರ: ಒಂಟಿ ಸಲಗದ ಮುಂದೆ ನಿಂತು ಪ್ರವಾಸಿಗರ ಹುಚ್ಚಾಟ
ಗ್ಯಾರಂಟಿ ಸ್ಕೀಮ್​ ಹಣ ಶೀಘ್ರದಲ್ಲೇ ಫಲಾನುಭವಿಗಳಿಗೆ ನೀಡಲಾಗುವುದು: ಯತೀಂದ್ರ
ಗ್ಯಾರಂಟಿ ಸ್ಕೀಮ್​ ಹಣ ಶೀಘ್ರದಲ್ಲೇ ಫಲಾನುಭವಿಗಳಿಗೆ ನೀಡಲಾಗುವುದು: ಯತೀಂದ್ರ
ನೇಪಾಳಕ್ಕೆ ವಾಪಸ್ ಹೊರಟ ವಿದ್ಯಾರ್ಥಿಗಳಿಗೆ ಆಹಾರ ಕೊಟ್ಟು ನೆರವಾದ ಎಬಿವಿಪಿ
ನೇಪಾಳಕ್ಕೆ ವಾಪಸ್ ಹೊರಟ ವಿದ್ಯಾರ್ಥಿಗಳಿಗೆ ಆಹಾರ ಕೊಟ್ಟು ನೆರವಾದ ಎಬಿವಿಪಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ