AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್’ ಸಿನಿಮಾದಿಂದ ಅಂತರ ಕಾಯ್ದುಕೊಂಡರೇ ರಶ್ಮಿಕಾ? ಕೊಟ್ಟಿದ್ದಾರೆ ಉತ್ತರ

Rashmika Mandanna: ನಟಿ ರಶ್ಮಿಕಾ ಮಂದಣ್ಣ ‘ಅನಿಮಲ್’ ಸಿನಿಮಾದಿಂದ ದೂರ ಉಳಿದಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಸ್ವತಃ ರಶ್ಮಿಕಾ ಮಂದಣ್ಣ ದೀರ್ಘವಾದ ಉತ್ತರ ನೀಡಿದ್ದಾರೆ.

‘ಅನಿಮಲ್’ ಸಿನಿಮಾದಿಂದ ಅಂತರ ಕಾಯ್ದುಕೊಂಡರೇ ರಶ್ಮಿಕಾ? ಕೊಟ್ಟಿದ್ದಾರೆ ಉತ್ತರ
ಮಂಜುನಾಥ ಸಿ.
|

Updated on:Feb 25, 2024 | 4:29 PM

Share

ರಣ್​ಬೀರ್ ಕಪೂರ್ (Ranbir Kapoor) ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ನಟಿಸಿರುವ ‘ಅನಿಮಲ್’ ಸಿನಿಮಾ ದೊಡ್ಡ ಹಿಟ್ ಆಗಿದೆ. ಬಾಲಿವುಡ್​ನ ಈ ವರ್ಷದ ಅತಿ ದೊಡ್ಡ ಹಿಟ್ ಎನಿಸಿಕೊಂಡಿದೆ. ರಣ್​ಬೀರ್ ಕಪೂರ್, ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಸೇರಿದಂತೆ ಚಿತ್ರತಂಡವೆಲ್ಲ ಸಿನಿಮಾದ ಯಶಸ್ಸನ್ನು ಅದ್ಧೂರಿಯಾಗಿ ಸಂಭ್ರಮಿಸಿದೆ. ಸರಣಿ ಸಂದರ್ಶನಗಳಲ್ಲಿ ಭಾಗಿಯಾಗಿದೆ. ಸಿನಿಮಾದ ಬಗ್ಗೆ ಮಾತನಾಡಿದೆ, ಸಿನಿಮಾದ ಯಶಸ್ಸಿನ ಬಗ್ಗೆ ಮಾತನಾಡಿದೆ. ಆದರೆ ರಶ್ಮಿಕಾ ಮಂದಣ್ಣ ಮಾತ್ರ ‘ಅನಿಮಲ್’ ಸಿನಿಮಾ ಬಿಡುಗಡೆ ಬಳಿಕ ಸಿನಿಮಾದ ಯಾವುದೇ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿಲ್ಲ. ‘ಅನಿಮಲ್’ ಸಿನಿಮಾದಿಂದ ರಶ್ಮಿಕಾ ಮಂದಣ್ಣ ಅಂತರ ಕಾಯ್ದುಕೊಂಡಿದ್ದಾರೆ ಎಂಬ ಸುದ್ದಿಗಳು ಹರಿದಾಡಲು ಆರಂಭವಾಗಿದ್ದು, ಈ ಬಗ್ಗೆ ಸ್ವತಃ ರಶ್ಮಿಕಾ ಉತ್ತರಿಸಿದ್ದಾರೆ.

ತನ್ನದೇ ಸಿನಿಮಾದ ಯಶಸ್ಸನ್ನು ಸಂಭ್ರಮಿಸುತ್ತಿಲ್ಲ ಎಂಬಿತ್ಯಾದಿ ಮಾತುಗಳು ಕೇಳಿ ಬರುತ್ತಿವೆ, ಆ ಬಗ್ಗೆ ಉತ್ತರಿಸಲೇ ಬೇಕಿದೆ ಎಂದಿರುವ ರಶ್ಮಿಕಾ, ‘ಪ್ರೀತಿ, ಕಾಳಜಿ ಇರುವವರೇ ಇಂಥಹಾ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ ಎಂಬ ಅರಿವು ನನಗೆ ಇದೆ. ನಾವು ಒಂದು ಭರ್ಜರಿ ಹಿಟ್ ಸಿನಿಮಾವನ್ನು ನೀಡಿದ್ದೇವೆ ಮತ್ತು ಜನರು ಅದನ್ನು ಇಷ್ಟಪಟ್ಟಿದ್ದಾರೆ. ನಾವೆಲ್ಲರೂ ಬಯಸಿದಂತೆ ಸಿನಿಮಾದ ಯಶಸ್ಸನ್ನು ಆನಂದಿಸಲು ಸ್ವಲ್ಪ ಸಮಯ ತೆಗೆದುಕೊಳ್ಳಬೇಕೆಂದು ಬಯಸಿದ್ದೆ. ಆದರೆ ನನ್ನ ಚಿತ್ರ ಬಿಡುಗಡೆಯ ಮರುದಿನವೇ ನಾನು ಇನ್ನೊಂದು ಸಿನಿಮಾದ ಶೂಟಿಂಗ್​ ಸೆಟ್‌ಗೆ ಮರಳಿದೆ’ ಎಂದಿದ್ದಾರೆ. ಅಂದಹಾಗೆ ತಮ್ಮ ಪೋಸ್ಟ್​ನಲ್ಲಿ ‘ಅನಿಮಲ್’ ಸಿನಿಮಾದ ಹೆಸರನ್ನು ಸಹ ರಶ್ಮಿಕಾ ತೆಗೆದುಕೊಂಡಿಲ್ಲ ಎಂಬುದು ಗಮನಿಸಬೇಕಾದ ಅಂಶ.

ಇದನ್ನೂ ಓದಿ:ಪ್ರತಿಷ್ಠಿತ ಫೋರ್ಬ್ಸ್ ಪಟ್ಟಿಯಲ್ಲಿ ರಶ್ಮಿಕಾ ಮಂದಣ್ಣ ಹೆಸರು

ಪೋಸ್ಟ್ ಮುಂದುವರೆಸಿರುವ ರಶ್ಮಿಕಾ, ‘ಇದೇ ಕಾರಣಕ್ಕೆ ನಾನು ಸಾಕಷ್ಟು ಸಂದರ್ಶನಗಳಲ್ಲಿ ಅಥವಾ ಸಕ್ಸಸ್ ಪಾರ್ಟಿಗಳಿಗೆ ಹಾಜರಾಗಲು ಸಾಧ್ಯವಾಗಲಿಲ್ಲ. ನಾನು ಕೆಲಸಕ್ಕಾಗಿ ಈ ರಾತ್ರಿಯ ಪ್ರಯಾಣಗಳನ್ನು ಮಾಡಲೇಬೇಕಾಗಿದೆ. ಈಗ ನಾನು ನನ್ನ ವೃತ್ತಿಜೀವನದಲ್ಲಿ ಕೆಲವು ದೊಡ್ಡ ಹಾಗೂ ತೀವ್ರತರವಾದ ವಸ್ತುವುಳ್ಳ ಸಿನಿಮಾಗಳಲ್ಲಿ ನಟಿಸುತ್ತಿದ್ದೇನೆ. ಅಲ್ಲದೆ ನನ್ನ ಸಿನಿಮಾಗಳ ಲುಕ್​ಗಳನ್ನು ನಾನು ಬಹಿರಂಗಪಡಿಸುವುದಿಲ್ಲ. ನಾನು ಸಂದರ್ಶನಗಳಲ್ಲಿ ಭಾಗಿ ಆಗದೇ ಇರುವುದಕ್ಕೆ ಇದು ಸಹ ಕಾರಣ’ ಎಂದಿದ್ದಾರೆ.

ಇನ್ನು ಮುಂದೆ ಹೀಗೆ ಆಗದೇ ಇರುವ ಬಗ್ಗೆ ನಾನು ಮತ್ತು ನಮ್ಮ ತಂಡ ಯೋಜನೆ ಮಾಡುತ್ತಿದ್ದೇವೆ. ಸಿನಿಮಾದ ಯಶಸ್ಸಿನ ಕಾರ್ಯಕ್ರಮದಲ್ಲಿ ಭಾಗಿಯಾಗದ ಮಾತ್ರಕ್ಕೆ ಸಿನಿಮಾದ ಯಶಸ್ಸಿನ ಖುಷಿಯನ್ನು ಅನುಭವಿಸುತ್ತಿಲ್ಲ ಎಂದೇನಿಲ್ಲ. ನಮಗಿಂತಲೂ ನಮ್ಮ ಕೆಲಸ ಹೆಚ್ಚು ಮಾತನಾಡಬೇಕು ಎಂಬುದು ನನ್ನ ನಂಬಿಕೆ. ಸಿನಿಮಾವನ್ನು ನೋಡಿ ಖುಷಿ ಪಟ್ಟ ಪ್ರೇಕ್ಷಕರ ಸಂದೇಶಗಳು ನನಗೆ ತಲುಪುತ್ತಿವೆ. ಅದನ್ನೆಲ್ಲ ನೋಡಿ ನಾನು ಖುಷಿ ಪಡುತ್ತಿದ್ದೇನೆ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:28 pm, Sun, 25 February 24

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ