Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್’ ಸಿನಿಮಾದಿಂದ ಅಂತರ ಕಾಯ್ದುಕೊಂಡರೇ ರಶ್ಮಿಕಾ? ಕೊಟ್ಟಿದ್ದಾರೆ ಉತ್ತರ

Rashmika Mandanna: ನಟಿ ರಶ್ಮಿಕಾ ಮಂದಣ್ಣ ‘ಅನಿಮಲ್’ ಸಿನಿಮಾದಿಂದ ದೂರ ಉಳಿದಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಸ್ವತಃ ರಶ್ಮಿಕಾ ಮಂದಣ್ಣ ದೀರ್ಘವಾದ ಉತ್ತರ ನೀಡಿದ್ದಾರೆ.

‘ಅನಿಮಲ್’ ಸಿನಿಮಾದಿಂದ ಅಂತರ ಕಾಯ್ದುಕೊಂಡರೇ ರಶ್ಮಿಕಾ? ಕೊಟ್ಟಿದ್ದಾರೆ ಉತ್ತರ
Follow us
ಮಂಜುನಾಥ ಸಿ.
|

Updated on:Feb 25, 2024 | 4:29 PM

ರಣ್​ಬೀರ್ ಕಪೂರ್ (Ranbir Kapoor) ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ನಟಿಸಿರುವ ‘ಅನಿಮಲ್’ ಸಿನಿಮಾ ದೊಡ್ಡ ಹಿಟ್ ಆಗಿದೆ. ಬಾಲಿವುಡ್​ನ ಈ ವರ್ಷದ ಅತಿ ದೊಡ್ಡ ಹಿಟ್ ಎನಿಸಿಕೊಂಡಿದೆ. ರಣ್​ಬೀರ್ ಕಪೂರ್, ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಸೇರಿದಂತೆ ಚಿತ್ರತಂಡವೆಲ್ಲ ಸಿನಿಮಾದ ಯಶಸ್ಸನ್ನು ಅದ್ಧೂರಿಯಾಗಿ ಸಂಭ್ರಮಿಸಿದೆ. ಸರಣಿ ಸಂದರ್ಶನಗಳಲ್ಲಿ ಭಾಗಿಯಾಗಿದೆ. ಸಿನಿಮಾದ ಬಗ್ಗೆ ಮಾತನಾಡಿದೆ, ಸಿನಿಮಾದ ಯಶಸ್ಸಿನ ಬಗ್ಗೆ ಮಾತನಾಡಿದೆ. ಆದರೆ ರಶ್ಮಿಕಾ ಮಂದಣ್ಣ ಮಾತ್ರ ‘ಅನಿಮಲ್’ ಸಿನಿಮಾ ಬಿಡುಗಡೆ ಬಳಿಕ ಸಿನಿಮಾದ ಯಾವುದೇ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿಲ್ಲ. ‘ಅನಿಮಲ್’ ಸಿನಿಮಾದಿಂದ ರಶ್ಮಿಕಾ ಮಂದಣ್ಣ ಅಂತರ ಕಾಯ್ದುಕೊಂಡಿದ್ದಾರೆ ಎಂಬ ಸುದ್ದಿಗಳು ಹರಿದಾಡಲು ಆರಂಭವಾಗಿದ್ದು, ಈ ಬಗ್ಗೆ ಸ್ವತಃ ರಶ್ಮಿಕಾ ಉತ್ತರಿಸಿದ್ದಾರೆ.

ತನ್ನದೇ ಸಿನಿಮಾದ ಯಶಸ್ಸನ್ನು ಸಂಭ್ರಮಿಸುತ್ತಿಲ್ಲ ಎಂಬಿತ್ಯಾದಿ ಮಾತುಗಳು ಕೇಳಿ ಬರುತ್ತಿವೆ, ಆ ಬಗ್ಗೆ ಉತ್ತರಿಸಲೇ ಬೇಕಿದೆ ಎಂದಿರುವ ರಶ್ಮಿಕಾ, ‘ಪ್ರೀತಿ, ಕಾಳಜಿ ಇರುವವರೇ ಇಂಥಹಾ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ ಎಂಬ ಅರಿವು ನನಗೆ ಇದೆ. ನಾವು ಒಂದು ಭರ್ಜರಿ ಹಿಟ್ ಸಿನಿಮಾವನ್ನು ನೀಡಿದ್ದೇವೆ ಮತ್ತು ಜನರು ಅದನ್ನು ಇಷ್ಟಪಟ್ಟಿದ್ದಾರೆ. ನಾವೆಲ್ಲರೂ ಬಯಸಿದಂತೆ ಸಿನಿಮಾದ ಯಶಸ್ಸನ್ನು ಆನಂದಿಸಲು ಸ್ವಲ್ಪ ಸಮಯ ತೆಗೆದುಕೊಳ್ಳಬೇಕೆಂದು ಬಯಸಿದ್ದೆ. ಆದರೆ ನನ್ನ ಚಿತ್ರ ಬಿಡುಗಡೆಯ ಮರುದಿನವೇ ನಾನು ಇನ್ನೊಂದು ಸಿನಿಮಾದ ಶೂಟಿಂಗ್​ ಸೆಟ್‌ಗೆ ಮರಳಿದೆ’ ಎಂದಿದ್ದಾರೆ. ಅಂದಹಾಗೆ ತಮ್ಮ ಪೋಸ್ಟ್​ನಲ್ಲಿ ‘ಅನಿಮಲ್’ ಸಿನಿಮಾದ ಹೆಸರನ್ನು ಸಹ ರಶ್ಮಿಕಾ ತೆಗೆದುಕೊಂಡಿಲ್ಲ ಎಂಬುದು ಗಮನಿಸಬೇಕಾದ ಅಂಶ.

ಇದನ್ನೂ ಓದಿ:ಪ್ರತಿಷ್ಠಿತ ಫೋರ್ಬ್ಸ್ ಪಟ್ಟಿಯಲ್ಲಿ ರಶ್ಮಿಕಾ ಮಂದಣ್ಣ ಹೆಸರು

ಪೋಸ್ಟ್ ಮುಂದುವರೆಸಿರುವ ರಶ್ಮಿಕಾ, ‘ಇದೇ ಕಾರಣಕ್ಕೆ ನಾನು ಸಾಕಷ್ಟು ಸಂದರ್ಶನಗಳಲ್ಲಿ ಅಥವಾ ಸಕ್ಸಸ್ ಪಾರ್ಟಿಗಳಿಗೆ ಹಾಜರಾಗಲು ಸಾಧ್ಯವಾಗಲಿಲ್ಲ. ನಾನು ಕೆಲಸಕ್ಕಾಗಿ ಈ ರಾತ್ರಿಯ ಪ್ರಯಾಣಗಳನ್ನು ಮಾಡಲೇಬೇಕಾಗಿದೆ. ಈಗ ನಾನು ನನ್ನ ವೃತ್ತಿಜೀವನದಲ್ಲಿ ಕೆಲವು ದೊಡ್ಡ ಹಾಗೂ ತೀವ್ರತರವಾದ ವಸ್ತುವುಳ್ಳ ಸಿನಿಮಾಗಳಲ್ಲಿ ನಟಿಸುತ್ತಿದ್ದೇನೆ. ಅಲ್ಲದೆ ನನ್ನ ಸಿನಿಮಾಗಳ ಲುಕ್​ಗಳನ್ನು ನಾನು ಬಹಿರಂಗಪಡಿಸುವುದಿಲ್ಲ. ನಾನು ಸಂದರ್ಶನಗಳಲ್ಲಿ ಭಾಗಿ ಆಗದೇ ಇರುವುದಕ್ಕೆ ಇದು ಸಹ ಕಾರಣ’ ಎಂದಿದ್ದಾರೆ.

ಇನ್ನು ಮುಂದೆ ಹೀಗೆ ಆಗದೇ ಇರುವ ಬಗ್ಗೆ ನಾನು ಮತ್ತು ನಮ್ಮ ತಂಡ ಯೋಜನೆ ಮಾಡುತ್ತಿದ್ದೇವೆ. ಸಿನಿಮಾದ ಯಶಸ್ಸಿನ ಕಾರ್ಯಕ್ರಮದಲ್ಲಿ ಭಾಗಿಯಾಗದ ಮಾತ್ರಕ್ಕೆ ಸಿನಿಮಾದ ಯಶಸ್ಸಿನ ಖುಷಿಯನ್ನು ಅನುಭವಿಸುತ್ತಿಲ್ಲ ಎಂದೇನಿಲ್ಲ. ನಮಗಿಂತಲೂ ನಮ್ಮ ಕೆಲಸ ಹೆಚ್ಚು ಮಾತನಾಡಬೇಕು ಎಂಬುದು ನನ್ನ ನಂಬಿಕೆ. ಸಿನಿಮಾವನ್ನು ನೋಡಿ ಖುಷಿ ಪಟ್ಟ ಪ್ರೇಕ್ಷಕರ ಸಂದೇಶಗಳು ನನಗೆ ತಲುಪುತ್ತಿವೆ. ಅದನ್ನೆಲ್ಲ ನೋಡಿ ನಾನು ಖುಷಿ ಪಡುತ್ತಿದ್ದೇನೆ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:28 pm, Sun, 25 February 24

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್