AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವರು ಏನು ಸೇವಿಸ್ತಾರೋ ಗೊತ್ತಿಲ್ಲ’; ಅನಿಮಲ್ ನಿರ್ದೇಶಕನ ಬಗ್ಗೆ ರಶ್ಮಿಕಾ ಮಂದಣ್ಣ ಮಾತು

‘ಸಂದೀಪ್ ಒಂದು ಕಥೆ ಮಾಡಿಕೊಂಡರೆ ಅದಕ್ಕೆ ಬದ್ಧರಾಗುತ್ತಾರೆ. ಜನಕ್ಕೆ ಹೇಗೆ ಬೆಂಕು ಎಂದು ಕೇಳಿ ಕಥೆ ಬದಲಾಯಿಸುವುದಿಲ್ಲ. ಅದು ನನಗೆ ಇಷ್ಟ. ಅವರು ಯಾವಾಗಲೂ ಹೀಗೆಯೇ ಇರಬೇಕು ಎಂಬುದು ನನ್ನ ಆಸೆ’ ಎಂದಿದ್ದಾರೆ ರಶ್ಮಿಕಾ.  

‘ಅವರು ಏನು ಸೇವಿಸ್ತಾರೋ ಗೊತ್ತಿಲ್ಲ’; ಅನಿಮಲ್ ನಿರ್ದೇಶಕನ ಬಗ್ಗೆ ರಶ್ಮಿಕಾ ಮಂದಣ್ಣ ಮಾತು
ರಶ್ಮಿಕಾ-ಸಂದೀಪ್
ರಾಜೇಶ್ ದುಗ್ಗುಮನೆ
|

Updated on: Jan 19, 2024 | 11:11 AM

Share

ರಣಬೀರ್ ಕಪೂರ್ ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಅನಿಮಲ್’ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ನಿರ್ದೇಶಕ ಸಂದೀಪ್ ರೆಡ್ಡಿ ವಂಗ ಅವರು ದೊಡ್ಡ ಗೆಲುವು ಕಂಡಿದ್ದಾರೆ. ಅಷ್ಟೇ ಟೀಕೆಗಳನ್ನು ಕೂಡ ಪಡೆದಿದ್ದಾರೆ. ಸಂದೀಪ್ ಅವರ ಕೆಲಸವನ್ನು ಅನೇಕರು ಟೀಕೆ ಮಾಡಿದ್ದಾರೆ. ಆದರೆ, ಅವರನ್ನು ರಶ್ಮಿಕಾ ಮಂದಣ್ಣ ಬಾಯ್ತುಂಬ ಹೊಗಳಿದ್ದಾರೆ. ಅವರ ಕೆಲಸಕ್ಕೆ ಮೆಚ್ಚುಗೆ ಸಿಕ್ಕಿದೆ.

‘ಅವರು (ಸಂದೀಪ್ ರೆಡ್ಡಿ ವಂಗ) ವಿಭಿನ್ನವಾಗಿ ಕೆಲಸ ಮಾಡುತ್ತಾರೆ. ಅವರು ಹೇಗೆ ಯೋಚಿಸುತ್ತಾರೆ, ಏನು ತಿನ್ನುತ್ತಾರೆ ಅಥವಾ ಏನು ಮಾಡುತ್ತಾರೆ ಎಂದು ನನಗೆ ಗೊತ್ತಿಲ್ಲ. ಆದರೆ, ‘ಅನಿಮಲ್’ ಸಿನಿಮಾ ನೋಡಿದಾಗ ಇಂಥ ಸಿನಿಮಾ ಬೇಕು ಎಂದೆನಿಸುವಂತೆ ಮಾಡಿದ್ದಾರೆ. ‘ಅನಿಮಲ್ ಪಾರ್ಕ್‌’ ಚಿತ್ರದ ಕಥೆ ಹೇಗೆ ಬೇಕಾದರೂ ಇರಬಹುದು. ಈ ವಿಚಾರ ರೋಮಾಂಚನಕಾರಿಯಾಗಿದೆ. ಅವರು ನನಗೆ ಚಿತ್ರದ ಸಣ್ಣ ಎಳೆ ಹೇಳಿದ್ದಾರೆ. ಅನಿಮಲ್ ಪಾರ್ಕ್​ ಮೂಲಕ ದೊಡ್ಡ ಸಕ್ಸಸ್ ಕಾಣೋ ಭರವಸೆಯಲ್ಲಿ ಅವರಿದ್ದಾರೆ’ ಎಂದಿದ್ದಾರೆ ರಶ್ಮಿಕಾ.

‘ಸಂದೀಪ್ ಒಂದು ಕಥೆ ಮಾಡಿಕೊಂಡರೆ ಅದಕ್ಕೆ ಬದ್ಧರಾಗುತ್ತಾರೆ. ಜನಕ್ಕೆ ಹೇಗೆ ಬೇಕು ಎಂದು ಕೇಳಿ ಕಥೆ ಬದಲಾಯಿಸುವುದಿಲ್ಲ. ಅದು ನನಗೆ ಇಷ್ಟ. ಅವರು ಯಾವಾಗಲೂ ಹೀಗೆಯೇ ಇರಬೇಕು ಎಂಬುದು ನನ್ನ ಆಸೆ’ ಎಂದಿದ್ದಾರೆ ರಶ್ಮಿಕಾ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಟು ವಿಜಯ್ ದೇವರಕೊಂಡ; ಈ ಸೆಲೆಬ್ರಿಟಿಗಳ ಕ್ರಶ್ ಯಾರು?

ರಶ್ಮಿಕಾ ಮಂದಣ್ಣ ಅವರ ಖ್ಯಾತಿ ಹೆಚ್ಚುತ್ತಿದೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ರಶ್ಮಿಕಾ ಮಂದಣ್ಣ ಅವರ ಆಸ್ತಿ ಮೌಲ್ಯ ಕೂಡ ಹೆಚ್ಚುತ್ತಿದೆ. ಅವರು ಸದ್ಯ ‘ಪುಷ್ಪ 2’, ‘ರೇನ್​ಬೋ’ ಮೊದಲಾದ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ‘ಅನಿಮಲ್’ ಸಿನಿಮಾ ಗೆದ್ದ ಬಳಿಕ ಅವರಿಗೆ ಬಾಲಿವುಡ್​ನಿಂದ ಸಾಕಷ್ಟು ಆಫರ್ ಬರುತ್ತಿದೆ. ಅಳೆದು ತೂಗಿ ಸಿನಿಮಾ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ