Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವರು ಏನು ಸೇವಿಸ್ತಾರೋ ಗೊತ್ತಿಲ್ಲ’; ಅನಿಮಲ್ ನಿರ್ದೇಶಕನ ಬಗ್ಗೆ ರಶ್ಮಿಕಾ ಮಂದಣ್ಣ ಮಾತು

‘ಸಂದೀಪ್ ಒಂದು ಕಥೆ ಮಾಡಿಕೊಂಡರೆ ಅದಕ್ಕೆ ಬದ್ಧರಾಗುತ್ತಾರೆ. ಜನಕ್ಕೆ ಹೇಗೆ ಬೆಂಕು ಎಂದು ಕೇಳಿ ಕಥೆ ಬದಲಾಯಿಸುವುದಿಲ್ಲ. ಅದು ನನಗೆ ಇಷ್ಟ. ಅವರು ಯಾವಾಗಲೂ ಹೀಗೆಯೇ ಇರಬೇಕು ಎಂಬುದು ನನ್ನ ಆಸೆ’ ಎಂದಿದ್ದಾರೆ ರಶ್ಮಿಕಾ.  

‘ಅವರು ಏನು ಸೇವಿಸ್ತಾರೋ ಗೊತ್ತಿಲ್ಲ’; ಅನಿಮಲ್ ನಿರ್ದೇಶಕನ ಬಗ್ಗೆ ರಶ್ಮಿಕಾ ಮಂದಣ್ಣ ಮಾತು
ರಶ್ಮಿಕಾ-ಸಂದೀಪ್
Follow us
ರಾಜೇಶ್ ದುಗ್ಗುಮನೆ
|

Updated on: Jan 19, 2024 | 11:11 AM

ರಣಬೀರ್ ಕಪೂರ್ ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಅನಿಮಲ್’ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ನಿರ್ದೇಶಕ ಸಂದೀಪ್ ರೆಡ್ಡಿ ವಂಗ ಅವರು ದೊಡ್ಡ ಗೆಲುವು ಕಂಡಿದ್ದಾರೆ. ಅಷ್ಟೇ ಟೀಕೆಗಳನ್ನು ಕೂಡ ಪಡೆದಿದ್ದಾರೆ. ಸಂದೀಪ್ ಅವರ ಕೆಲಸವನ್ನು ಅನೇಕರು ಟೀಕೆ ಮಾಡಿದ್ದಾರೆ. ಆದರೆ, ಅವರನ್ನು ರಶ್ಮಿಕಾ ಮಂದಣ್ಣ ಬಾಯ್ತುಂಬ ಹೊಗಳಿದ್ದಾರೆ. ಅವರ ಕೆಲಸಕ್ಕೆ ಮೆಚ್ಚುಗೆ ಸಿಕ್ಕಿದೆ.

‘ಅವರು (ಸಂದೀಪ್ ರೆಡ್ಡಿ ವಂಗ) ವಿಭಿನ್ನವಾಗಿ ಕೆಲಸ ಮಾಡುತ್ತಾರೆ. ಅವರು ಹೇಗೆ ಯೋಚಿಸುತ್ತಾರೆ, ಏನು ತಿನ್ನುತ್ತಾರೆ ಅಥವಾ ಏನು ಮಾಡುತ್ತಾರೆ ಎಂದು ನನಗೆ ಗೊತ್ತಿಲ್ಲ. ಆದರೆ, ‘ಅನಿಮಲ್’ ಸಿನಿಮಾ ನೋಡಿದಾಗ ಇಂಥ ಸಿನಿಮಾ ಬೇಕು ಎಂದೆನಿಸುವಂತೆ ಮಾಡಿದ್ದಾರೆ. ‘ಅನಿಮಲ್ ಪಾರ್ಕ್‌’ ಚಿತ್ರದ ಕಥೆ ಹೇಗೆ ಬೇಕಾದರೂ ಇರಬಹುದು. ಈ ವಿಚಾರ ರೋಮಾಂಚನಕಾರಿಯಾಗಿದೆ. ಅವರು ನನಗೆ ಚಿತ್ರದ ಸಣ್ಣ ಎಳೆ ಹೇಳಿದ್ದಾರೆ. ಅನಿಮಲ್ ಪಾರ್ಕ್​ ಮೂಲಕ ದೊಡ್ಡ ಸಕ್ಸಸ್ ಕಾಣೋ ಭರವಸೆಯಲ್ಲಿ ಅವರಿದ್ದಾರೆ’ ಎಂದಿದ್ದಾರೆ ರಶ್ಮಿಕಾ.

‘ಸಂದೀಪ್ ಒಂದು ಕಥೆ ಮಾಡಿಕೊಂಡರೆ ಅದಕ್ಕೆ ಬದ್ಧರಾಗುತ್ತಾರೆ. ಜನಕ್ಕೆ ಹೇಗೆ ಬೇಕು ಎಂದು ಕೇಳಿ ಕಥೆ ಬದಲಾಯಿಸುವುದಿಲ್ಲ. ಅದು ನನಗೆ ಇಷ್ಟ. ಅವರು ಯಾವಾಗಲೂ ಹೀಗೆಯೇ ಇರಬೇಕು ಎಂಬುದು ನನ್ನ ಆಸೆ’ ಎಂದಿದ್ದಾರೆ ರಶ್ಮಿಕಾ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಟು ವಿಜಯ್ ದೇವರಕೊಂಡ; ಈ ಸೆಲೆಬ್ರಿಟಿಗಳ ಕ್ರಶ್ ಯಾರು?

ರಶ್ಮಿಕಾ ಮಂದಣ್ಣ ಅವರ ಖ್ಯಾತಿ ಹೆಚ್ಚುತ್ತಿದೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ರಶ್ಮಿಕಾ ಮಂದಣ್ಣ ಅವರ ಆಸ್ತಿ ಮೌಲ್ಯ ಕೂಡ ಹೆಚ್ಚುತ್ತಿದೆ. ಅವರು ಸದ್ಯ ‘ಪುಷ್ಪ 2’, ‘ರೇನ್​ಬೋ’ ಮೊದಲಾದ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ‘ಅನಿಮಲ್’ ಸಿನಿಮಾ ಗೆದ್ದ ಬಳಿಕ ಅವರಿಗೆ ಬಾಲಿವುಡ್​ನಿಂದ ಸಾಕಷ್ಟು ಆಫರ್ ಬರುತ್ತಿದೆ. ಅಳೆದು ತೂಗಿ ಸಿನಿಮಾ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು