AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಶ್ಮಿಕಾಗೆ ಬಾಲಿವುಡ್​ನಲ್ಲಿ ಬೆಂಬಲವಾಗಿ ನಿಂತ ಸಿದ್ಧಾರ್ಥ್ ಮಲ್ಹೋತ್ರ! ಅನುಭವ ಹಂಚಿಕೊಂಡ ಕಿರಿಕ್​ ಬೆಡಗಿ

Mission Majnu | Sidharth Malhotra: ಕನ್ನಡದಿಂದ ಬಣ್ಣದ ಬದುಕು ಆರಂಭಿಸಿ ಈಗ ಬಾಲಿವುಡ್​ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿರುವ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಬಿ-ಟೌನ್​ ನಟ ಸಿದ್ಧಾರ್ಥ್ ಮಲ್ಹೋತ್ರ ಬೆಂಬಲವಾಗಿ ನಿಂತಿದ್ದಾರೆ. ಮಿಷನ್​ ಮಜ್ನು ಸಿನಿಮಾದ ಮೊದಲ ಹಂತದ ಶೂಟಿಂಗ್​ನಲ್ಲಿ ಇಬ್ಬರೂ ಪಾಲ್ಗೊಂಡಿದ್ದಾರೆ.

Rashmika Mandanna: ರಶ್ಮಿಕಾಗೆ ಬಾಲಿವುಡ್​ನಲ್ಲಿ ಬೆಂಬಲವಾಗಿ ನಿಂತ ಸಿದ್ಧಾರ್ಥ್ ಮಲ್ಹೋತ್ರ! ಅನುಭವ ಹಂಚಿಕೊಂಡ ಕಿರಿಕ್​ ಬೆಡಗಿ
ರಶ್ಮಿಕಾ ಮಂದಣ್ಣ - ಸಿದ್ಧಾರ್ಥ್​ ಮಲ್ಹೋತ್ರಾ
ಮದನ್​ ಕುಮಾರ್​
| Edited By: |

Updated on: Apr 10, 2021 | 1:30 PM

Share

ನಟಿ ರಶ್ಮಿಕಾ ಮಂದಣ್ಣ ಅವರು ಬಹುಭಾಷೆಯಲ್ಲಿ ಮಿಂಚುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ಜನಮನ ಗೆದ್ದ ಬಳಿಕ ಅವರು ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟರು. ಅಲ್ಲಿ ಅವರಿಗೆ ಮೊದಲ ಸಿನಿಮಾದಲ್ಲಿ ಸ್ಟಾರ್​ ನಟ ಸಿದ್ಧಾರ್ಥ್​ ಮಲ್ಹೋತ್ರ ಜೊತೆ ತೆರೆಹಂಚಿಕೊಳ್ಳುವ ಅವಕಾಶ ಸಿಕ್ಕಿತು. ಈಗಾಗಲೇ ಒಂದು ಹಂತದ ಶೂಟಿಂಗ್​ನಲ್ಲಿ ಪಾಲ್ಗೊಂಡಿರುವ ರಶ್ಮಿಕಾ ಅವರು ಸಿದ್ಧಾರ್ಥ್​ ಜೊತೆಗಿನ ಶೂಟಿಂಗ್​ ಅನುಭವದ ಬಗ್ಗೆ ಮಾಧ್ಯಮಗಳೊಂದಿಗೆ ಕೆಲವು ಮಾತುಗಳನ್ನು ಹಂಚಿಕೊಂಡಿದ್ದಾರೆ.

ರಶ್ಮಿಕಾ ಮತ್ತು ಸಿದ್ಧಾರ್ಥ್​ ಮಲ್ಹೋತ್ರ ಜೋಡಿಯಾಗಿ ನಟಿಸುತ್ತಿರುವ ಸಿನಿಮಾ ಹೆಸರು ‘ಮಿಷನ್​ ಮಜ್ನು’. ರೆಟ್ರೋ ಕಥೆಯುಳ್ಳ ಈ ಚಿತ್ರಕ್ಕೆ ಲಖನೌನಲ್ಲಿ ಶೂಟಿಂಗ್​ ನಡೆದಿದೆ. 1970ರ ಕಾಲವನ್ನು ಹೋಲುವಂತಹ ಸೆಟ್​ ಹಾಕಿ ಚಿತ್ರೀಕರಣ ಮಾಡಲಾಗಿದೆ. ಆ ಅನುಭವಗಳ ಬಗ್ಗೆ ಹೇಳಿಕೊಂಡಿರುವ ರಶ್ಮಿಕಾ ಮಂದಣ್ಣ ಅವರು ಸಿದ್ಧಾರ್ಥ್​ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದಾರೆ.

‘ಸಿದ್ಧಾರ್ಥ್​ ನನ್ನ ಸೀನಿಯರ್​ ಹಾಗೂ ಅದ್ಭುತ ವ್ಯಕ್ತಿ. ಅವರೊಬ್ಬ ಸ್ಟಾರ್​ ಆಗಿದ್ದರೂ ಕೂಡ ತುಂಬ ವಿನಮ್ರವಾಗಿದ್ದಾರೆ. ಸಹಾಯ ಮಾಡುವ ಗುಣ ಇದೆ. ಸಂಭಾಷಣೆಗಳ ವಿಚಾರದಲ್ಲಿ ಅವರು ನನಗೆ ಮಾರ್ಗದರ್ಶನ ಮಾಡಿದ್ದಾರೆ. ಅಭಿನಯದಲ್ಲೂ ಸಹಾಯ ಮಾಡಿದ್ದಾರೆ. ನಾನು ನಟಿಸುವಾಗ ನನ್ನ ಸಹ ನಟರು ಹೇಗೆ ಫೀಲ್​ ಮಾಡುತ್ತಾರೆ ಎಂಬುದನ್ನು ನಾನು ಗಮನಿಸುತ್ತೇನೆ. ಅವರು ಸರಿಯಾಗಿ ಪ್ರತಿಕ್ರಿಯಿಸಿದರೆ ನಾನು ಪ್ರೇಕ್ಷಕರಿಗೂ ನನ್ನ ಭಾವನೆಗಳನ್ನು ದಾಟಿಸಬಲ್ಲೆ ಎಂಬುದು ಗೊತ್ತಾಗುತ್ತದೆ’ ಎಂದು ರಶ್ಮಿಕಾ ಹೇಳಿದ್ದಾರೆ.

‘ಸಿದ್ಧಾರ್ಥ್​ ನನ್ನ ಪರವಾಗಿ ಯಾವಾಗಲೂ ಇರುತ್ತಾರೆ. ಒಂದು ದೃಶ್ಯದಲ್ಲಿ ಏನು ಮಾಡಬಹುದು ಅಂತ ನಾವು ಚರ್ಚೆ ಮಾಡುತ್ತಲೇ ಇರುತ್ತೇವೆ. ನಾನು ಮೊದಲೇ ತಯಾರಿ ಮಾಡಿಕೊಂಡಿರುತ್ತೇನೆ. ಆದರೂ ನಮ್ಮ ನಡುವಿನ ಚರ್ಚೆಯಿಂದ ಸಹಾಯ ಆಗುತ್ತದೆ. ನಾವು ಬಿಡುವಿಲ್ಲದೇ ಕೆಲಸ ಮಾಡುತ್ತಿದ್ದೇವೆ. ಬೇರೆ ವಿಚಾರಗಳ ಬಗ್ಗೆ ಮಾತನಾಡಲು ತುಂಬ ಕಡಿಮೆ ಸಮಯ ಸಿಗುತ್ತದೆ. ಆಗ ನಾನು ಹಲವು ವಿಷಯಗಳ ಬಗ್ಗೆ ಅವರ ಬಳಿ ಸಲಹೆ ಕೇಳುತ್ತೇನೆ’ ಎಂಬುದು ರಶ್ಮಿಕಾ ಮಾತುಗಳು.

ಈ ಸಿನಿಮಾದ ಕೆಲಸಗಳು ಮುಗಿಯುವ ಮುನ್ನವೇ ರಶ್ಮಿಕಾ ಇನ್ನೊಂದು ಬಾಲಿವುಡ್​ ಚಿತ್ರಕ್ಕೆ ಆಯ್ಕೆ ಆಗಿದ್ದಾರೆ. ಅದರಲ್ಲಿ ಅವರು ಅಮಿತಾಭ್​ ಬಚ್ಚನ್​ಗೆ ಮಗಳಾಗಿ ಕಾಣಿಸಿಕೊಳ್ಳಲಿರುವುದು ವಿಶೇಷ. ಆ ಚಿತ್ರಕ್ಕೆ ‘ಗುಡ್​ ಬೈ’ ಎಂದು ಶೀರ್ಷಿಕೆ ಇಟ್ಟಿದ್ದು, ರಶ್ಮಿಕಾಗೆ ಜೋಡಿಯಾಗಿ ‘ತಪ್ಪಡ್​’ ಖ್ಯಾತಿಯ ನಟಿ ಪಾವೈಲ್​ ಗುಲಾಟಿ ಅಭಿನಯಿಸಲಿದ್ದಾರೆ. ಕೆಲವೇ ದಿನಗಳ ಹಿಂದೆ ಈ ಚಿತ್ರಕ್ಕೆ ಮುಹೂರ್ತ ನೆರವೇರಿದೆ. ಒಟ್ಟಿನಲ್ಲಿ ರಶ್ಮಿಕಾ ಬಾಲಿವುಡ್​ ಪಯಣ ಭರ್ಜರಿಯಾಗಿ ಶುರುವಾಗಿದೆ.

ಇದನ್ನೂ ಓದಿ: ‘ಇದು ನನಗೆ ಚೆನ್ನಾಗಿ ನೆನಪಿದೆ’: ರಕ್ಷಿತ್​ಗೆ ಪ್ರತಿಕ್ರಿಯೆ ಕೊಟ್ಟ ರಶ್ಮಿಕಾ ಮಂದಣ್ಣ!

Rashmika Mandanna: ನ್ಯಾಷನಲ್​ ಕ್ರಶ್​ ರಶ್ಮಿಕಾ ಮಂದಣ್ಣ ಬದುಕು ಬದಲಾಯಿಸಿದ ಐದು ಪ್ರಮುಖ ಘಟನೆಗಳು!​

(Rashmika Mandanna talks about her Mission Majnu co star Sidharth Malhotra)

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ