‘ದಳಪತಿ’ ವಿಜಯ್ 66ನೇ ಚಿತ್ರಕ್ಕೆ ರಶ್ಮಿಕಾ ನಾಯಕಿ? ಬಾಲಿವುಡ್​ ನಟಿಯರನ್ನು ಹಿಂದಿಕ್ಕಿದ ಕೊಡಗಿನ ಹುಡುಗಿ

ವಿಜಯ್​ ಸದ್ಯ ‘ಬೀಸ್ಟ್’ ಸಿನಿಮಾದ ಕೊನೆಯ ಹಂತದ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ.ಈಗ ಅವರ 66ನೇ ಸಿನಿಮಾ ಬಗ್ಗೆ ಟಾಕ್​ ಶುರುವಾಗಿದೆ. ಯುಗಾದಿ ನಿಮಿತ್ತ ಏಪ್ರಿಲ್​ 2ರಂದು ಸಿನಿಮಾ ಸೆಟ್ಟೇರಲಿದೆ.  

‘ದಳಪತಿ’ ವಿಜಯ್ 66ನೇ ಚಿತ್ರಕ್ಕೆ ರಶ್ಮಿಕಾ ನಾಯಕಿ? ಬಾಲಿವುಡ್​ ನಟಿಯರನ್ನು ಹಿಂದಿಕ್ಕಿದ ಕೊಡಗಿನ ಹುಡುಗಿ
ರಶ್ಮಿಕಾ-ವಿಜಯ್
Follow us
| Updated By: ರಾಜೇಶ್ ದುಗ್ಗುಮನೆ

Updated on: Mar 08, 2022 | 8:12 PM

ರಶ್ಮಿಕಾ ಮಂದಣ್ಣ ಅವರು (Rashmika Mandanna) ದಕ್ಷಿಣ ಭಾರತ ಹಾಗೂ ಬಾಲಿವುಡ್​ನಲ್ಲಿ ಸಾಕಷ್ಟು ಬೇಡಿಕೆ ಸೃಷ್ಟಿ ಮಾಡಿಕೊಂಡಿದ್ದಾರೆ. ರಶ್ಮಿಕಾ ಕಾಲ್​ಶೀಟ್​ ಪಡೆಯೋಕೆ ಸ್ಟಾರ್ ನಿರ್ಮಾಪಕರು ಕಾದು ಕೂತಿದ್ದಾರೆ. ಈ ಮಧ್ಯೆ ರಶ್ಮಿಕಾ ಹಲವು ಸ್ಕ್ರಿಪ್ಟ್​ಗಳನ್ನು​ ಕೇಳುತ್ತಿದ್ದಾರೆ. ತುಂಬಾನೇ ಲೆಕ್ಕಾಚಾರ ಹಾಕಿ ಸಿನಿಮಾ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಈಗ ಕಾಲಿವುಡ್ (Kollywood)​ ಅಂಗಳದಿಂದ ಹೊಸ ಸುದ್ದಿಯೊಂದು ಹರಿದಾಡಿದೆ. ದಳಪತಿ ವಿಜಯ್ (Thalapathy Vijay) ನಟನೆಯ 66ನೇ ಚಿತ್ರಕ್ಕೆ ರಶ್ಮಿಕಾ ನಾಯಕಿ ಎನ್ನುವ ವಿಚಾರ ಹರಿದಾಡುತ್ತಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತವಾಗೋದು ಮಾತ್ರ ಬಾಕಿ ಉಳಿದಿದೆ ಎನ್ನಲಾಗಿದೆ.

ವಿಜಯ್​ ಸದ್ಯ ‘ಬೀಸ್ಟ್’ ಸಿನಿಮಾದ ಕೊನೆಯ ಹಂತದ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ನೆಲ್ಸನ್​ ದಿಲೀಪ್​ಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಸನ್​ ಪಿಕ್ಚರ್ಸ್​ ಬಂಡವಾಳ ಹೂಡಿದೆ. ಈ ಸಿನಿಮಾ ಏಪ್ರಿಲ್​ 14ರಂದು ತೆರೆಗೆ ಬರುತ್ತಿದೆ. ಈಗ ಅವರ 66ನೇ ಸಿನಿಮಾ ಬಗ್ಗೆ ಟಾಕ್​ ಶುರುವಾಗಿದೆ. ಯುಗಾದಿ ನಿಮಿತ್ತ ಏಪ್ರಿಲ್​ 2ರಂದು ಸಿನಿಮಾ ಸೆಟ್ಟೇರಲಿದೆ.

‘ದಳಪತಿ 66’ ಚಿತ್ರಕ್ಕೆ ವಂಶಿ ಪೈಡಿಪಲ್ಲಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಖ್ಯಾತ ನಿರ್ಮಾಪಕ ದಿಲ್​ ರಾಜು ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಆರಂಭದಲ್ಲಿ ಪೂಜಾ ಹೆಗ್ಡೆ ಹಾಗೂ ಕಿಯಾರಾ ಅಡ್ವಾಣಿ ಅವರನ್ನು ಚಿತ್ರಕ್ಕೆ ಆಯ್ಕೆ ಮಾಡಿಕೊಳ್ಳುವ ಆಲೋಚನೆ ಚಿತ್ರತಂಡದ್ದಾಗಿತ್ತು. ಕೊನೆಯ ಸಮಯದಲ್ಲಿ ರಶ್ಮಿಕಾ ಅವರನ್ನು ಚಿತ್ರತಂಡಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ ಎನ್ನಲಾಗಿದೆ. ಯುಗಾದಿ ದಿನ ಈ ಬಗ್ಗೆ ಘೋಷಣೆ ಆಗುವ ಸಾಧ್ಯತೆ ಇದೆ.

ರಶ್ಮಿಕಾ ಅವರು ಈ ಮೊದಲಿನಿಂದಲೂ ವಿಜಯ್​ ಅಭಿಮಾನಿಗಳಿಗೆ ಹತ್ತಿರ ಆಗೋಕೆ ಸಾಕಷ್ಟು ಪ್ರಯತ್ನಿಸಿದ್ದರು. ಸಾಕಷ್ಟು ಸಂದರ್ಶನಗಳಲ್ಲಿ ತಾವು ವಿಜಯ್ ಅಭಿಮಾನಿ ಎಂದು ಹೇಳಿಕೊಂಡಿದ್ದರು. ಕೊನೆಗೂ ಅವರ ಆಸೆ ಈಡೇರುತ್ತಿದೆ. ಈ ಸಿನಿಮಾ ತೆಲುಗು ಹಾಗೂ ತಮಿಳು ಎರಡೂ ಭಾಷೆಯಲ್ಲಿ ಸಿದ್ಧವಾಗುತ್ತಿರುವುದರಿಂದ ರಶ್ಮಿಕಾ ಹೆಚ್ಚು ಸಂಭಾವನೆ ಪಡೆದುಕೊಳ್ಳಬಹುದು.

ಹಿಂದಿಯ ‘ಮಿಷನ್​ ಮಜ್ನು’ ಹಾಗೂ ‘ಗುಡ್​ ಬೈ’ ಸಿನಿಮಾ ಕೆಲಸಗಳಲ್ಲಿ ರಶ್ಮಿಕಾ ಬ್ಯುಸಿ ಆಗಿದ್ದಾರೆ. ‘ಪುಷ್ಪ 2’ ಚಿತ್ರದ ಶೂಟಿಂಗ್​ನಲ್ಲೂ ಅವರು ಶೀಘ್ರವೇ ಪಾಲ್ಗೊಳ್ಳಲಿದ್ದಾರೆ. ಇತ್ತೀಚೆಗೆ ರಿಲೀಸ್​ ಆದ ‘ಆಡವಾಳ್ಳು ಮೀಕು ಜೋಹಾರ್ಲು’ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಓಪನಿಂಗ್​ ಪಡೆದುಕೊಂಡಿಲ್ಲ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ತಿರುಮಲ ಕಿಶೋರ್​ ನಿರ್ದೇಶನ ಮಾಡಿರುವ ಈ ಸಿನಿಮಾಗೆ  ಎಸ್​ಎಲ್​ವಿ ಸಿನಿಮಾಸ್​ ಸಂಸ್ಥೆ ಬಂಡವಾಳ ಹೂಡಿದೆ.

ಇದನ್ನೂ ಓದಿ: ‘ನಾನು ಪ್ಯಾನ್​ ಇಂಡಿಯಾ ನಟಿ ಆಗಬೇಕು’; ರಶ್ಮಿಕಾ ಮಂದಣ್ಣ ಹೀಗೆ ಹೇಳಲು ಇದೆ ಒಂದು ಮುಖ್ಯ ಕಾರಣ

ರಶ್ಮಿಕಾ ಮಂದಣ್ಣ, ಪೂಜಾ ಬಳಿಕ ಅಲ್ಲು ಅರ್ಜುನ್​ ಜತೆ ತೆರೆ ಹಂಚಿಕೊಂಡ ಮತ್ತೋರ್ವ ಕನ್ನಡದ ನಟಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ