AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಳಪತಿ’ ವಿಜಯ್ 66ನೇ ಚಿತ್ರಕ್ಕೆ ರಶ್ಮಿಕಾ ನಾಯಕಿ? ಬಾಲಿವುಡ್​ ನಟಿಯರನ್ನು ಹಿಂದಿಕ್ಕಿದ ಕೊಡಗಿನ ಹುಡುಗಿ

ವಿಜಯ್​ ಸದ್ಯ ‘ಬೀಸ್ಟ್’ ಸಿನಿಮಾದ ಕೊನೆಯ ಹಂತದ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ.ಈಗ ಅವರ 66ನೇ ಸಿನಿಮಾ ಬಗ್ಗೆ ಟಾಕ್​ ಶುರುವಾಗಿದೆ. ಯುಗಾದಿ ನಿಮಿತ್ತ ಏಪ್ರಿಲ್​ 2ರಂದು ಸಿನಿಮಾ ಸೆಟ್ಟೇರಲಿದೆ.  

‘ದಳಪತಿ’ ವಿಜಯ್ 66ನೇ ಚಿತ್ರಕ್ಕೆ ರಶ್ಮಿಕಾ ನಾಯಕಿ? ಬಾಲಿವುಡ್​ ನಟಿಯರನ್ನು ಹಿಂದಿಕ್ಕಿದ ಕೊಡಗಿನ ಹುಡುಗಿ
ರಶ್ಮಿಕಾ-ವಿಜಯ್
TV9 Web
| Edited By: |

Updated on: Mar 08, 2022 | 8:12 PM

Share

ರಶ್ಮಿಕಾ ಮಂದಣ್ಣ ಅವರು (Rashmika Mandanna) ದಕ್ಷಿಣ ಭಾರತ ಹಾಗೂ ಬಾಲಿವುಡ್​ನಲ್ಲಿ ಸಾಕಷ್ಟು ಬೇಡಿಕೆ ಸೃಷ್ಟಿ ಮಾಡಿಕೊಂಡಿದ್ದಾರೆ. ರಶ್ಮಿಕಾ ಕಾಲ್​ಶೀಟ್​ ಪಡೆಯೋಕೆ ಸ್ಟಾರ್ ನಿರ್ಮಾಪಕರು ಕಾದು ಕೂತಿದ್ದಾರೆ. ಈ ಮಧ್ಯೆ ರಶ್ಮಿಕಾ ಹಲವು ಸ್ಕ್ರಿಪ್ಟ್​ಗಳನ್ನು​ ಕೇಳುತ್ತಿದ್ದಾರೆ. ತುಂಬಾನೇ ಲೆಕ್ಕಾಚಾರ ಹಾಕಿ ಸಿನಿಮಾ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಈಗ ಕಾಲಿವುಡ್ (Kollywood)​ ಅಂಗಳದಿಂದ ಹೊಸ ಸುದ್ದಿಯೊಂದು ಹರಿದಾಡಿದೆ. ದಳಪತಿ ವಿಜಯ್ (Thalapathy Vijay) ನಟನೆಯ 66ನೇ ಚಿತ್ರಕ್ಕೆ ರಶ್ಮಿಕಾ ನಾಯಕಿ ಎನ್ನುವ ವಿಚಾರ ಹರಿದಾಡುತ್ತಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತವಾಗೋದು ಮಾತ್ರ ಬಾಕಿ ಉಳಿದಿದೆ ಎನ್ನಲಾಗಿದೆ.

ವಿಜಯ್​ ಸದ್ಯ ‘ಬೀಸ್ಟ್’ ಸಿನಿಮಾದ ಕೊನೆಯ ಹಂತದ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ನೆಲ್ಸನ್​ ದಿಲೀಪ್​ಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಸನ್​ ಪಿಕ್ಚರ್ಸ್​ ಬಂಡವಾಳ ಹೂಡಿದೆ. ಈ ಸಿನಿಮಾ ಏಪ್ರಿಲ್​ 14ರಂದು ತೆರೆಗೆ ಬರುತ್ತಿದೆ. ಈಗ ಅವರ 66ನೇ ಸಿನಿಮಾ ಬಗ್ಗೆ ಟಾಕ್​ ಶುರುವಾಗಿದೆ. ಯುಗಾದಿ ನಿಮಿತ್ತ ಏಪ್ರಿಲ್​ 2ರಂದು ಸಿನಿಮಾ ಸೆಟ್ಟೇರಲಿದೆ.

‘ದಳಪತಿ 66’ ಚಿತ್ರಕ್ಕೆ ವಂಶಿ ಪೈಡಿಪಲ್ಲಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಖ್ಯಾತ ನಿರ್ಮಾಪಕ ದಿಲ್​ ರಾಜು ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಆರಂಭದಲ್ಲಿ ಪೂಜಾ ಹೆಗ್ಡೆ ಹಾಗೂ ಕಿಯಾರಾ ಅಡ್ವಾಣಿ ಅವರನ್ನು ಚಿತ್ರಕ್ಕೆ ಆಯ್ಕೆ ಮಾಡಿಕೊಳ್ಳುವ ಆಲೋಚನೆ ಚಿತ್ರತಂಡದ್ದಾಗಿತ್ತು. ಕೊನೆಯ ಸಮಯದಲ್ಲಿ ರಶ್ಮಿಕಾ ಅವರನ್ನು ಚಿತ್ರತಂಡಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ ಎನ್ನಲಾಗಿದೆ. ಯುಗಾದಿ ದಿನ ಈ ಬಗ್ಗೆ ಘೋಷಣೆ ಆಗುವ ಸಾಧ್ಯತೆ ಇದೆ.

ರಶ್ಮಿಕಾ ಅವರು ಈ ಮೊದಲಿನಿಂದಲೂ ವಿಜಯ್​ ಅಭಿಮಾನಿಗಳಿಗೆ ಹತ್ತಿರ ಆಗೋಕೆ ಸಾಕಷ್ಟು ಪ್ರಯತ್ನಿಸಿದ್ದರು. ಸಾಕಷ್ಟು ಸಂದರ್ಶನಗಳಲ್ಲಿ ತಾವು ವಿಜಯ್ ಅಭಿಮಾನಿ ಎಂದು ಹೇಳಿಕೊಂಡಿದ್ದರು. ಕೊನೆಗೂ ಅವರ ಆಸೆ ಈಡೇರುತ್ತಿದೆ. ಈ ಸಿನಿಮಾ ತೆಲುಗು ಹಾಗೂ ತಮಿಳು ಎರಡೂ ಭಾಷೆಯಲ್ಲಿ ಸಿದ್ಧವಾಗುತ್ತಿರುವುದರಿಂದ ರಶ್ಮಿಕಾ ಹೆಚ್ಚು ಸಂಭಾವನೆ ಪಡೆದುಕೊಳ್ಳಬಹುದು.

ಹಿಂದಿಯ ‘ಮಿಷನ್​ ಮಜ್ನು’ ಹಾಗೂ ‘ಗುಡ್​ ಬೈ’ ಸಿನಿಮಾ ಕೆಲಸಗಳಲ್ಲಿ ರಶ್ಮಿಕಾ ಬ್ಯುಸಿ ಆಗಿದ್ದಾರೆ. ‘ಪುಷ್ಪ 2’ ಚಿತ್ರದ ಶೂಟಿಂಗ್​ನಲ್ಲೂ ಅವರು ಶೀಘ್ರವೇ ಪಾಲ್ಗೊಳ್ಳಲಿದ್ದಾರೆ. ಇತ್ತೀಚೆಗೆ ರಿಲೀಸ್​ ಆದ ‘ಆಡವಾಳ್ಳು ಮೀಕು ಜೋಹಾರ್ಲು’ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಓಪನಿಂಗ್​ ಪಡೆದುಕೊಂಡಿಲ್ಲ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ತಿರುಮಲ ಕಿಶೋರ್​ ನಿರ್ದೇಶನ ಮಾಡಿರುವ ಈ ಸಿನಿಮಾಗೆ  ಎಸ್​ಎಲ್​ವಿ ಸಿನಿಮಾಸ್​ ಸಂಸ್ಥೆ ಬಂಡವಾಳ ಹೂಡಿದೆ.

ಇದನ್ನೂ ಓದಿ: ‘ನಾನು ಪ್ಯಾನ್​ ಇಂಡಿಯಾ ನಟಿ ಆಗಬೇಕು’; ರಶ್ಮಿಕಾ ಮಂದಣ್ಣ ಹೀಗೆ ಹೇಳಲು ಇದೆ ಒಂದು ಮುಖ್ಯ ಕಾರಣ

ರಶ್ಮಿಕಾ ಮಂದಣ್ಣ, ಪೂಜಾ ಬಳಿಕ ಅಲ್ಲು ಅರ್ಜುನ್​ ಜತೆ ತೆರೆ ಹಂಚಿಕೊಂಡ ಮತ್ತೋರ್ವ ಕನ್ನಡದ ನಟಿ

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!